ಕುಂದಾಪುರ (ಜೂ,14): ವಿಶ್ವ ರಕ್ತದಾನ ದಿನಾಚರಣೆ ಅಂಗವಾಗಿ ಜೆಸಿಐ ಕುಂದಾಪುರ ಸಿಟಿ ಯ ಸದ್ಯಸ್ಯರುಕುಂದಾಪುರದ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ಯಲ್ಲಿ ರಕ್ತದಾನ ಮಾಡುವುದರ ಮೂಲಕ ರಕ್ತದಾನ ಶ್ರೇಷ್ಠದಾನ ಎನ್ನುವ ಸಂದೇಶವನ್ನು ಸಾರಿದರು. ಈ ಸಂದರ್ಭದಲ್ಲಿ ಜೆಸಿಐ ಕುಂದಾಪುರ ಸಿಟಿಯ ಅಧ್ಯಕ್ಷ ವಿಜಯ ಭಂಡಾರಿ, ಸ್ಥಾಪಕಾಧ್ಯಕ್ಷ ಹುಸೇನ್ ಹೈಕಾಡಿ, ಪೂರ್ವಾಧ್ಯಕ್ಷರಾದ ರಾಘವೇಂದ್ರ ಚರಣ್ ನಾವಡ, ಪ್ರಶಾಂತ್ ಹವಾಲ್ದಾರ್ , ಜಯಚಂದ್ರ ಶೆಟ್ಟಿ ಜೇಸಿರೇಟ್ ಅಧ್ಯಕ್ಷೆ ಡಾ|ಸೋನಿ ಹಾಗೂ ಇಂಡಿಯನ್ ರೆಡ್ […]
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಕರೋನಾದಿಂದ ಮೃತಪಟ್ಟ ಬಿಪಿಎಲ್ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಣೆ
ಬೆಂಗಳೂರು (ಜೂ, 14): ಕೋವಿಡ್ 19 ಗೆ ತುತ್ತಾಗಿ ಮೃತಪಟ್ಟ ಬಿಪಿಎಲ್ ಕಾರ್ಡ್ ಹೊಂದಿರುವ ವ್ಯಕ್ತಿಯ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ಧನವನ್ನು ನೀಡುವುದಾಗಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಘೋಷಣೆ ಮಾಡಿದರು.ಇದು ಕೋವಿಡ್-19 ಕ್ಕೆ ತುತ್ತಾಗಿ ಮೃತಪಟ್ಟಿರುವ ಕುಟುಂಬದ ಓರ್ವ ಸದಸ್ಯನಿಗೆ ಮಾತ್ರ ಅನ್ವಯಿಸುತ್ತದೆ.
ಚಿತ್ರದುರ್ಗ ರೆಡ್ ಕ್ರಾಸ್ : ಕೋವಿಡ್ ಸಂಧರ್ಬದಲ್ಲಿನ ವೈದ್ಯಕೀಯ ಉಪಕರಣಗಳ ಹಸ್ತಾಂತರ ಕಾರ್ಯಕ್ರಮ
ಚಿತ್ರದುರ್ಗ (ಜೂನ್ , 13) : ಕೋವಿಡ್ ಸಂಧರ್ಬದಲ್ಲಿನ ವೈದ್ಯಕೀಯ ಉಪಕರಣಗಳ ಹಸ್ತಾಂತರ ಕಾರ್ಯಕ್ರಮ ಅಂಗವಾಗಿ ಚಿತ್ರದುರ್ಗ ನಗರದ ಮೆದೆಹಳ್ಳಿ ರಸ್ತೆಯಲ್ಲಿರುವ ಶ್ರೀ ಶಾಂತ ರಾಮತೀರ್ಥ ಆಶ್ರಮದ ಶ್ರೀ ಶ್ರೀ ಶ್ರೀ ಪ್ರಹಲ್ಲಾದ್ ಗುರೂಜಿ ರವರನ್ನು ಜೂನ್ 13 ರಂದು ಭೇಟಿ ಮಾಡಿ ಪಲ್ಸ ಓಕ್ಸಿಮೀಟರನ್ನು ರೆಡ್ ಕ್ರಾಸ್ ವತಿಯಿಂದ ನೀಡಲಾಯಿತು. ಈ ಸಂದರ್ಭದಲ್ಲಿ ರೆಡ್ ಕ್ರಾಸ್ ಕಾರ್ಯದರ್ಶಿ ಮಜಹರ್ ಉಲ್ಲಾ ಮತ್ತು ನಿರ್ದೇಶಕರಾದ ಗಿರೀಶ್ ರವರು ಉಪಸ್ಥಿತರಿದ್ದರು.
ನರೇಂದ್ರ ಎಸ್ ಗಂಗೊಳ್ಳಿಗೆ ಶಿಕ್ಷಕ ರತ್ನ ಗೌರವ
ಗಂಗೊಳ್ಳಿ ( ಜೂ, 13): ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಉಪನ್ಯಾಸಕ, ಯುವ ಸಾಹಿತಿ ಹಾಗೂ ಅಂಕಣಕಾರರೂ ಆಗಿರುವ ಶ್ರೀ ನರೇಂದ್ರ ಎಸ್ ಗಂಗೊಳ್ಳಿ ಅವರ ವಿವಿಧ ಕ್ಷೇತ್ರಗಳಲ್ಲಿನ ಬಹುಮುಖ ಪ್ರತಿಭೆಯನ್ನು ಪರಿಗಣಿಸಿ ಮ್ಯಾಕ್ಸ್ ಲೈಫ್ ಇನ್ಶುರೆನ್ಸ್ ಮಂಗಳೂರು ವಿಭಾಗದ ವತಿಯಿಂದ ಶಿಕ್ಷಕ ರತ್ನ ಗೌರವವನ್ನು ನೀಡಿ ಪುರಸ್ಕರಿಸಲಾಗಿದೆ.
ಎಲ್ಲಿರುವೆ ಮನವ ಕಾಡುವ ರೂಪಸಿಯೇ
ದೂರ ಇದ್ದರೂ, ಹತ್ತಿರವೇ ಇದ್ದಂತೆಅನಿಸುತಿದೆ ಮನದೊಳಗೆ…ನೀ ಮನದೊಳಗೆ…. ನೀ ಮರೆಯಲಿ…ಎಲ್ಲೋ ನಿಂತು ನೋಡುತ್ತಿರುವಂತೆಎಲ್ಲಿರುವೆ ನೀನು …..? ಮನದ ಮೂಲೆಯಲಿಎಲ್ಲೋ ಸುಪ್ತವಾಗಿ ಕುಳಿತ ಸವಿ ನೆನಪುಗಳುಗೂಡು ಕಟ್ಟಿ ಹಾರಲು ಕಾಯುತಿದೆಎಲ್ಲಿರುವೆ ನೀನು …..? ಬಯಕೆಗಳ ಭಾಗ್ಯವಿಧಾತೆಬಾಳಿನ ಪ್ರೇಮದೇವತೆಯೇನನ್ನ ಕನಸುಗಳ ಕನಸುಗಾರ್ತಿಯೇಎಲ್ಲಿರುವೆ ನೀನು……..? ನೆನಪಾಗಿ ಕಾಡುವ ಭಾವನಾಮನಸಿನ ಕದ ತಟ್ಟುವ ಕವನಮನದೊಳಗೆ ನೆನಪುಗಳ ಕದನಎಲ್ಲಿರುವೆ ನೀನು, ….? ರೂಪಸಿಯೇ …ಕನಸುಗಾರ್ತಿಯೇಕವನದ ಒಡತಿಯೇಕಾಮನೆಯು ಹೆಪ್ಪುಗಟ್ಟಿಲು ಕಾಯುತಿದೆ ನಿನಗಾಗಿಎಲ್ಲಿರುವೆ ನೀನು….? ಮನವ ಕಾಡುವ ರೂಪಸಿಯೇ……ಎಲ್ಲಿರುವೆ ನೀನು….? […]
ಕುಮಟಾದ ದಿಶಾ ಭಾಗವತ್ ಅಮೆರಿಕದ ಕ್ಯಾಲಿಫೋರ್ನಿಯಾ ಬಾರ್ ಕೌನ್ಸಿಲ್ನಲ್ಲಿ ಅಟಾರ್ನಿಯಾಗಿ ಪ್ರಮಾಣ ವಚನ ಸ್ವೀಕಾರ
ಕುಮಟಾ (ಜೂ,13): ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಡೆಕೋಡಿಯ ಕು. ದಿಶಾ ಭಾಗವತ ಅಮೇರಿಕಾದ ಕ್ಯಾಲಿಫೋರ್ನಿಯ ಬಾರ್ ಕೌನ್ಸಿಲ್ ನಲ್ಲಿ ಅಟಾರ್ನಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡುವ ಮೂಲಕ ಉತ್ತರಕನ್ನಡ ಜಿಲ್ಲೆ, ರಾಜ್ಯ ಹಾಗೂ ದೇಶದ ಕೀರ್ತಿ ಪತಾಕೆಯನ್ನು ಉತ್ತುಂಗಕ್ಕೆರಿಸಿದ್ದಾರೆ.ಬೆಂಗಳೂರಿನ ಪ್ರತಿಷ್ಠಿತ ಕ್ರೈಸ್ಟ್ ಕಾಲೇಜಿನಲ್ಲಿ ಕಾನೂನು ಪದವಿ ಮುಗಿಸಿ ನಂತರ ಅಮೆರಿಕದಲ್ಲಿ ಯುಎಸ್ಸಿ ಮಾಸ್ಟರ್ ಡಿಗ್ರಿ ಪಡೆದಿರುತ್ತಾರೆ. ಇವರು ಬಹುಮುಖ ಪ್ರತಿಭೆಯಾಗಿದ್ದು, ಉದ್ಯಮಿ ಮಂಜುನಾಥ ಭಾಗವತ್ ಹಾಗೂ ಲಲಿತಾ ಭಾಗವತ್ […]
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಮಾರ್ಡಿ ಕೊಡ್ಲಾಡಿ : 2021-22 ನೇ ಶೈಕ್ಷಣಿಕ ಸಾಲಿನ ದಾಖಲಾತಿ ಆರಂಭ
ವಂಡ್ಸೆ (ಜೂ, 13): ಕೊಡ್ಲಾಡಿ -ಮಾರ್ಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2021-22ನೇ ಶೈಕ್ಷಣಿಕ ವರ್ಷದ ದಾಖಲಾತಿ ಪ್ರಕ್ರಿಯೆ ಜೂನ್, 15 ರಿಂದ ಆರಂಭವಾಗಲಿದೆ. ಜುಲೈ ,1 ರಿಂದ ಬೋಧನಾ ಹಾಗೂ ಕಲಿಕಾ ಪ್ರಕ್ರಿಯೆಗಳು ಆರಂಭವಾಗಲಿದ್ದು ಇದಕ್ಕೆ ಸಂಬಂಧಪಟ್ಟಂತೆ ಪೂರ್ವ ಸಿದ್ಧತೆಗಳನ್ನು ಶಿಕ್ಷಣ ಇಲಾಖೆಯ ಮಾರ್ಗಸೂಚಿಯಂತೆ ಕೈಗೊಳ್ಳಲಾಗುತ್ತಿದೆ. Covid-19ನ ಪ್ರಸ್ತುತ ಪರಿಸ್ಥಿತಿಯನ್ನು ಅವಲೋಕಿಸಿದಾಗ ಬಹುತೇಕ ಸೆಪ್ಟಂಬರ್ ವರೆಗೆ ಆಫ್ಲೈನ್ (ವಿದ್ಯಾರ್ಥಿಗೆ ನೇರ ಬೋಧನೆ) ತರಗತಿಗಳನ್ನು ನಡೆಸುವುದು ಕಷ್ಟ ಸಾಧ್ಯವಾಗಿರುತ್ತದೆ. ಆದ್ದರಿಂದ […]
ಗಂಗೊಳ್ಳಿ: ಬೈಂದೂರು ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ ಭೇಟಿ – ಕರೋನಾ ನಿಯಂತ್ರಣ ಕ್ರಮಗಳ ಕುರಿತು ಪರಿಶೀಲನೆ
ಗಂಗೊಳ್ಳಿ (ಜೂ, 12): ಬೈಂದೂರು ಶಾಸಕ ಶ್ರೀ. ಬಿ.ಎಂ.ಸುಕುಮಾರ್ ಶೆಟ್ಟಿ ಗಂಗೊಳ್ಳಿ ಗ್ರಾಮಕ್ಕೆ ಗ ಭೇಟಿ ನೀಡಿ ಕೋವಿಡ್ ನಿಯಂತ್ರಣಕ್ಕೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೈಗೊಳ್ಳಲಾದ ಕ್ರಮಗಳನ್ನು ಪರಿಶೀಲಿಸಿ ಮಾಹಿತಿಯನ್ನು ಪಡೆದುಕೊಂಡರು. ಕೋವಿಡ್ ನಿಯಂತ್ರಣಕ್ಕೆ 50 ಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ಇರುವ ಗಂಗೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರದೇಶವನ್ನು ಜೂ.10 ರಿಂದ ಸಂಪೂರ್ಣ ಲಾಕ್ಡೌನ್ ಮಾಡಲಾಗಿದ್ದು, ಉತ್ತಮ ರೀತಿಯಲ್ಲಿ ಲಾಕ್ಡೌನ್ ವ್ಯವಸ್ಥೆ ಮಾಡಿರುವುದಕ್ಕೆ ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು. ಕರೋನಾ […]
ಜೆಸಿಐ ಕುಂದಾಪುರ ಸಿಟಿ : 46 ನೇ ದಿನದ ಅನ್ನದಾಸೋಹ ಕಾರ್ಯಕ್ರಮ
ಕುಂದಾಪುರ (ಜೂ, 12): ಕೋವಿಡ್ 19 ಲಾಕ್ ಡೌನ್ ಸಂದರ್ಭದಲ್ಲಿ ಸತತ 46 ದಿನಗಳಿಂದ ಕುಂದಾಪುರ ಪರಿಸರದಲ್ಲಿನ ಸುಮಾರು 230 ಕ್ಕಿಂತಲೂ ಹೆಚ್ಚು ವೃದ್ದರಿಗೆ, ಕೂಲಿ ಕಾರ್ಮಿಕರಿಗೆ, ವಿವಿಧ ಕಚೇರಿಗಳಲ್ಲಿ ಕೆಲಸ ಮಾಡುವರಿಗೆ, ಆಸ್ಪತ್ರೆಯಲ್ಲಿನ ರೋಗಿಗಳಿಗೆ ಜೆಸಿಐ ಕುಂದಾಪುರ ಸಿಟಿ ವತಿಯಿಂದ ಊಟದ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಜೂನ್ 12 ರಂದು ನಡೆದ 46 ನೇ ದಿನದ ಅನ್ನದಾಸೋಹ ಕಾರ್ಯಕ್ರಮದಲ್ಲಿ ಜೆಸಿಐ ಕುಂದಾಪುರ ಸಿಟಿ ಯ ಅಧ್ಯಕ್ಷ ವಿಜಯ ಭಂಡಾರಿ, ಸ್ಥಾಪಕಾಧ್ಯಕ್ಷ […]
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಪದವಿ ಆಸೆ ಪೂರೈಸುವ ಆಶಯದಿಂದ ರೂಪು ತಳೆದ ಸಂಸ್ಥೆ ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ.
ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಪ್ರತಿಷ್ಠಿತ ಪದವಿ ಕಾಲೇಜುಗಳಲ್ಲಿ ವಿಶೇಷ ಸಾಲಿನಲ್ಲಿ ಗುರುತಿಸಿಕೊಂಡ ಸಂಸ್ಥೆ ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ. ‘ಸಮಾಜದ ಕಟ್ಟಕಡೆಯ ಮಗು ವಿದ್ಯಾವಂತನಾಗಬೇಕು’ ಎಂಬುದು ಕಾಲೇಜಿನ ಅಧ್ಯಕ್ಷರು ಮತ್ತು ಬೈಂದೂರು ಶಾಸಕರಾದ ಶ್ರೀ. ಬಿ. ಎಂ. ಸುಕುಮಾರ ಶೆಟ್ಟಿಯವರ ಧ್ಯೇಯ. ಅಧ್ಯಕ್ಷರ ಧ್ಯೇಯ ವಾಕ್ಯವನ್ನು ಸಾರ್ಥಕಗೊಳಿಸುವ ಪಯಣದೊಂದಿಗೆ ಸಂಸ್ಥೆಯು 2021-22ರ ಸಾಲಿನ ಪ್ರವೇಶ ಪ್ರಕ್ರಿಯೆಯನ್ನು ಆರಂಭಗೊಳಿಸಿದೆ. 130 ವಿದ್ಯಾರ್ಥಿಗಳೊಂದಿಗೆ ಹನ್ನೊಂದು ವರ್ಷಗಳ ಹಿಂದೆ […]










