ಶಿರ್ವ (ಜೂ, 02): ಸೇಂಟ್ ಮೇರಿಸ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗ ಹಾಗೂ ಡಾಟಾ ಸ್ಪೇಸ್ ಸೆಕ್ಯುರಿಟಿ ಪ್ರೈವೇಟ್ ಲಿಮಿಟೆಡ್ ಸಹಯೋಗದೊಂದಿಗೆ ಎಥಿಕಲ್ ಹ್ಯಾಕಿಂಗ್ ಮತ್ತು ಸೈಬರ್ ಸೆಕ್ಯುರಿಟಿ ಕುರಿತು ವರ್ಚುವಲ್ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಮೊದಲ ಅಧಿವೇಶನದಲ್ಲಿ ಎಥಿಕಲ್ ಹ್ಯಾಕಿಂಗ್ನಲ್ಲಿ ಡಾಟಾ ಸ್ಪೇಸ್ ಸೆಕ್ಯುರಿಟಿ ಎಕ್ಸ್ಪರ್ಟ್ನ ಸಂಸ್ಥಾಪಕರಾದ ಶ್ರೀ ಸಮಿರನ್ ಸಾಂತ್ರಾ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದರು. ಸೈಬರ್ ಸುರಕ್ಷತೆಯ ಬಗ್ಗೆ ಅವರು ಮಾತನಾಡುತ್ತಾ ಇದು ಸಮಯದ ತುರ್ತು ಅವಶ್ಯಕತೆಯಾಗಿದೆ ಮತ್ತು […]
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ) ವತಿಯಿಂದ ರಾಷ್ಟ್ರೀಯ ಸೇವಾಭಾರತಿ ಸಂಸ್ಥೆಯ ಸೇವಾ ಕಾರ್ಯಕ್ಕೆ ದೇಣಿಗೆ ಹಸ್ತಾಂತರ
ಕೋಟೇಶ್ವರ (ಜೂ, 01): ಕರೋನಾ ಲಾಕ್ಡೌನ್ ಸಂದರ್ಭದಲ್ಲಿ ನಿರಂತರವಾಗಿ ಸೇವಾ ಕಾರ್ಯದಲ್ಲಿ ತೊಡಗಿರುವ ರಾಷ್ಟ್ರೀಯ ಸೇವಾಭಾರತಿ ಸಂಸ್ಥೆಗೆ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್(ರಿ) ಅಂಬಲಪಾಡಿ, ಉಡುಪಿ ವತಿಯಿಂದ 50 ಸಾವಿರ ರೂ ದೇಣಿಗೆಯ ಚೆಕ್ ನ್ನು ಮೊಗವೀರ ಸಂಘಟನೆ (ರಿ) ಉಡುಪಿ ಇದರ ಕೋಟೇಶ್ವರ ಘಟಕದ ಮೂಲಕ ಸೇವಾಭಾರತಿ ಪ್ರಮುಖರಿಗೆ ಹಸ್ತಾಂತರಿಸಲಾಯಿತು. ಮೊಗವೀರ ಯುವ ಸಂಘಟನೆ(ರಿ) ಉಡುಪಿ ಇದರ ಜಿಲ್ಲಾ ಮಾಜಿ ಅಧ್ಯಕ್ಷ ಸತೀಶ್ ಎಂ. ನಾಯ್ಕ್ ಚೆಕ್ ನ್ನು […]
ಎಕ್ಸಲೆಂಟ್ ಕುಂದಾಪುರ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಮೂಡಬಿದ್ರೆ ನೇತೃತ್ವ : ಪ್ರತಿಭಾನ್ವಿತ ವಿದ್ಯಾರ್ಥಿಗಳ ಪಾಲಿಗೆ ಸುವರ್ಣಾವಕಾಶ – ಪ್ರೊ ಬಾಲಕೃಷ್ಣ ಶೆಟ್ಟಿ
ಕುಂದಾಪುರ (ಮೇ, 30) : ಜೀವನದಲ್ಲಿ ನಾನೊಬ್ಬ ಶ್ರೇಷ್ಠ ವೈದ್ಯ ನಾಗಬೇಕು, ಒಳ್ಳೆಯ ಐಐಟಿ ಕಾಲೇಜಿನಲ್ಲಿ ಇಂಜಿನಿಯರ್ ಆಗಬೇಕು ಇಲ್ಲ ಲೆಕ್ಕಪರಿಶೋಧಕನಾಗಬೇಕು,ಕಂಪನಿ ಸೆಕ್ರೆಟರಿ ಆಗಬೇಕು ಎನ್ನುವ ಕನಸನ್ನು ಕಾಣುತ್ತಿರುವ ಅದೆಷ್ಟು ವಿದ್ಯಾರ್ಥಿಗಳಿಗೆ ಡಾ. ರಮೇಶ್ ಶೆಟ್ಟಿ ನೇತೃತ್ವದ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ನ ತಂಡ ಕುಂದಾಪುರದ ಎಕ್ಸಲೆಂಟ್ ಕಾಲೇಜಿನ ಸಂಪೂರ್ಣ ಆಡಳಿತ ವಹಿಸಿಕೊಂಡಿರುವುದು ಸುವರ್ಣ ಅವಕಾಶವಾಗಲಿದೆ. ಪ್ರತಿಭಾನ್ವಿತ ವಿದ್ಯಾರ್ಥಿಗಳ ಉಜ್ವಲ ಭವಿಷ್ಯದ ಕನಸು ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಮೂಡುಬಿದಿರೆಯ ಮೂಲಕ […]
ಕುಂದಾಪುರದ ಕೋವಿಡ್ ಆಸ್ಪತ್ರೆಯನ್ನು ಸ್ವಚ್ಚಗೊಳಿಸಿದ ವಿಶ್ವಹಿಂದೂ ಪರಿಷತ್ ಹಾಗೂ ಭಜರಂಗದಳ ಕುಂದಾಪುರ ಪ್ರಖಂಡದ ಕಾರ್ಯಕರ್ತರು
ಕುಂದಾಪುರ (ಮೇ, 30): ಕರೋನಾ ಎರಡನೆಯ ಅಲೆಯಿಂದಾಗಿ ಮುಂಬರುವ ದಿನಗಳಲ್ಲಿ ತಾಲೂಕಿನ ಆಸ್ಪತ್ರೆಗಳಲ್ಲಿ ಎದುರಾಗಬಹುದಾದ ಚಿಕಿತ್ಸೆ ಹಾಗೂ ಹಾಸಿಗೆಗಳ ಅಭಾವದ ಸಮಸ್ಯೆಗಳನ್ನು ನೀಗಿಸುವ ನಿಟ್ಟಿನಲ್ಲಿ ಸರ್ಕಾರದ ನಿರ್ದೇಶನದಂತೆ “ವಿಶ್ವಹಿಂದೂ ಪರಿಷತ್ ಹಾಗೂ ಭಜರಂಗದಳ ಕುಂದಾಪುರ ಪ್ರಖಂಡ” ಇದರ ಕಾರ್ಯಕರ್ತರು ಕುಂದಾಪುರ ನಗರದ ಕಳೆದ ವರ್ಷ ಕೋವಿಡ್ ಆಸ್ಪತ್ರೆಯಾಗಿ ಕಾರ್ಯನಿರ್ವಹಿಸಿದ ಹಳೆ ಆದರ್ಶ ಆಸ್ಪತ್ರೆಯನ್ನು ಮೇ 30 ರಂದು ಸ್ವಚ್ಛಗೊಳಸಿ ವೈದ್ಯಕೀಯ ಸೇವೆಗಾಗಿ ಸಜ್ಜುಗೊಳಿಸಿದರು. ಇವರಿಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಸಾಥ್ […]
ಕುಂದಾಪುರ : ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಯಶಸ್ವಿ 7ನೇ ವರ್ಷಾಚರಣೆ – ರಕ್ತದಾನ ಶಿಬಿರ
ಕುಂದಾಪುರ (ಮೇ, 30): ದೇಶದ ಪ್ರಧಾನಿ ಶ್ರೀ ನರೇಂದ್ರ ಮೋದಿ ಯವರ ನೇತೃತ್ವದ ಕೇಂದ್ರ ಸರಕಾರ ಯಶಸ್ವಿ 7 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚಾ ಕುಂದಾಪುರ ವಿಧಾನಸಭಾ ಕ್ಷೇತ್ರ ಇವರ ನೇತೃತ್ವದಲ್ಲಿ ಮೇ 30 ರಂದು ಕುಂದಾಪುರದ ರೆಡ್ ಕ್ರಾಸ್ ಸಂಸ್ಥೆಯಲ್ಲಿ ರಕ್ತದಾನ ಶಿಬಿರವನ್ನು ಏರ್ಪಡಿಸಲಾಯಿತು. ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ರಕ್ತದಾನ ಶಿಬಿರವನ್ನು ಉದ್ಘಾಟಿಸಿದರು. ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ […]
ಕಪಟ ಜ್ಯೋತಿಷಿ
ಜ್ಯೋತಿಷ್ಯದ ಕುರಿತಾದ ಹುಚ್ಚು ಕುತೂಹಲ ಯಾರಿಗಿಲ್ಲಾ ಹೇಳಿ.! ಕೆಲವರು ಅಪಾರವಾಗಿ ನಂಬಿದರೆ, ಇನ್ನೂ ಕೆಲವರು ಅದೊಂದು ಮೂಡನಂಬಿಕೆ ಅಂದುಕೊಂಡು ಸಮ್ಮನಾಗುತ್ತಾರೆ.ಇನ್ನೂ ಕೆಲವರು ಕುತೂಹಲಕ್ಕಾಗಿ ಆಗಾಗ ಜ್ಯೋತಿಷಿಯ ಬಳಿ ಹೋಗುವುದುಂಟು !. ಜ್ಯೋತಿಷ್ಯ ಶಾಸ್ತ್ರಕ್ಕೆ ನಮ್ಮ ದೇಶದಲ್ಲಿ ಅದರದ್ದೆ ಆದ ಪೌರಾಣಿಕ ಮಹತ್ವ ಇದೆ.ಆದರೆ ಜ್ಯೋತಿಷ್ಯವನ್ನೇ ಅಸ್ತ್ರವಾಗಿರಿಸಿಕೊಂಡು ಜನರನ್ನು ಮೋಸಮಾಡುವವರ ನಡುವೆ ಪ್ರಾಮಾಣಿಕತೆಯಿಂದ ಜ್ಯೋತಿಷ್ಯ ಹೇಳುವವರು ಮೂಲೆಗುಂಪಾಗಿರುವುದು ವಿಪರ್ಯಾಸವೇ ಸರಿ.ಅದೇನೇ ಇರಲಿ ! ಆ ನಾಲ್ಕು ಜನ ಯುವಕರು ಜ್ಯೋತಿಷ್ಯದ ಕುರಿತಾದ […]
ಜೈ ಕುಂದಾಪ್ರ ಸೇವಾ ಟ್ರಸ್ಟ್ ವತಿಯಿಂದ ಸಮಾಜಸೇವಕ ಗೋವಿಂದ ಬಾಬು ಪೂಜಾರಿಯವರಿಗೆ ಸನ್ಮಾನ
ಬೈಂದೂರು (ಮೇ, 29): ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ) ಉಪ್ಪುಂದ ಇದರ ಪ್ರವರ್ತಕರು, ಕೊಡುಗೈ ದಾನಿ ಹಾಗೂ ಸಮಾಜಸೇವಕರು ಆಗಿರುವ ಗೋವಿಂದ ಬಾಬು ಪೂಜಾರಿಯವರನ್ನು ಜೈ ಕುಂದಾಪ್ರ ಸೇವಾ ಟ್ರಸ್ಟ್(ರಿ) ಕುಂದಾಪುರದ ವತಿಯಿಂದ ಸನ್ಮಾನಿಸಲಾಯಿತು. ಯಾವುದೇ ಜಾತಿ-ಮತ, ಧರ್ಮ ತಾರತಮ್ಯವಿಲ್ಲದೆ ಸಮಾಜದಲ್ಲಿರುವ ಅಶಕ್ತರನ್ನು ಗುರುತಿಸಿ ನಿರಂತರ ಸಮಾಜಸೇವೆ ಗೈಯುತ್ತಿರುವ ಗೋವಿಂದ ಬಾಬು ಪೂಜಾರಿ ಯವರು ಜೈ ಕುಂದಾಪ್ರ ಸೇವಾ ಟ್ರಸ್ಟ್(ರಿ) ಇದರ ಗೌರವ ಅಧ್ಯಕ್ಷರಾಗಿ ಆಯ್ಕೆಗೊಂಡ ಹಿನ್ನೆಲೆಯಲ್ಲಿ ಟ್ರಸ್ಟ್ ವತಿಯಿಂದ […]
ಜೈ ಕುಂದಾಪ್ರ ಸೇವಾ ಟ್ರಸ್ಟ್(ರಿ.) ಕುಂದಾಪುರ : ಕರೋನಾ ಲಾಕ್ ಡೌನ್ ಸಂಕಷ್ಟಕ್ಕೆ ಸಿಲುಕಿದವರಿಗೆ ಅನ್ನ ದಾಸೋಹ
ಕುಂದಾಪುರ (ಮೇ, 28): ಕರೋನಾ ಲಾಕ್ಡೌನ್ ನ ಪ್ರಾರಂಭದ ದಿನಗಳಿಂದಲೂ ಅಶಕ್ತರಿಗೆ ವೈದ್ಯಕೀಯ ನೆರವು, ತುರ್ತು ಸಂದರ್ಭದಲ್ಲಿ ರಕ್ತದಾನ ಹಾಗೂ ಆಹಾರ ಸಾಮಗ್ರಿಗಳ ಕಿಟ್ ವಿತರಿಸಿದ ಕುಂದಾಪುರದ ಜೈ ಕುಂದಾಪ್ರ ಸೇವಾ ಟ್ರಸ್ಟ್(ರಿ.) ಇದೀಗ ಮಧ್ಯಾಹ್ನದ ಅನ್ನದಾಸೋಹ ಯೋಜನೆಯನ್ನು ಹಾಕಿಕೊಂಡು ಅಶಕ್ತರಿಗೆ ನೆರವಾಗಲು ಮುಂದಾಗಿದೆ. ಕೊರೊನ ಲಾಕ್ ಡೌನ್ ಸಮಯದಲ್ಲಿ ಅಶಕ್ತ ಬಡ ದಿನಗೂಲಿ ಕಾರ್ಮಿಕರಿಗೆ ಹಾಗೂ ನಿರ್ಗತಿಕರಿಗೆ ಜೈ ಕುಂದಾಪ್ರ ಸೇವಾ ಟ್ರಸ್ಟ್ (ರಿ.) ವತಿಯಿಂದ ಮಧ್ಯಾಹ್ನದ ಊಟದ […]
ಬ್ಲ್ಯಾಕ್ ಫಂಗಸ್ ಕಾಯಿಲೆಗೆ ಔಷಧಿ ಕಂಡು ಹಿಡಿದ ಗಂಗೊಳ್ಳಿಯ ಬಿ. ಶ್ರೀಕಾಂತ ಪೈಯವರ ಮನದಾಳದ ಮಾತು
ಲಿಪೊಸೊಮನ್ ಆ್ಯಂಪೊಟೆರಿಸಿನ್ ಬಿ’ ಔಷಧಿಯನ್ನು ಕಂಡು ಹಿಡಿಯಲು ಶ್ರಮ ಪಟ್ಟಿರುವ ಭಾರತ ಸೀರಮ್ ಎಂಡ್ ವ್ಯಾಕ್ಸಿನ್ಸ್ ಲಿಮಿಟೆಡ್ ಕಂಪೆನಿಯ ಸಂಶೋಧಕ ತಂಡದ ನೇತೃತ್ವ ವಹಿಸಿದವರು ಕರಾವಳಿಯ ಕನ್ನಡಿಗರಾದ ಬಾಂಡ್ಯ ಶ್ರೀಕಾಂತ ಪೈ. ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ಗಂಗೊಳ್ಳಿ ಮೂಲದ ದಿವಂಗತ ಬಾಂಡ್ಯ ಅಣ್ಣಪ್ಪ ಪೈ ಅವರ ಪುತ್ರ ಬಾಂಡ್ಯ ಶ್ರೀಕಾಂತ ಪೈ. ಶ್ರೀಕಾಂತ ಪೈ ಯವರು ತಮ್ಮ ಈ ಸಾಧನೆಯ ಅನುಭವಗಳನ್ನು, ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ. ಕೋವಿಡ್ ನಂತರವೂ […]
ಗಂಗೊಳ್ಳಿ : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅರ್ಹ ಕುಟುಂಬಗಳಿಗೆ ಮೀನುಗಾರಿಕಾ ಸವಲತ್ತುಗಳನ್ನು ವಿತರಿಸಿದ ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ
ಗಂಗೊಳ್ಳಿ (ಮೇ, 26): ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಏಳು ಅರ್ಹ ಕುಟುಂಬಗಳಿಗೆ ತಲಾ 3.90 ಲಕ್ಷ ರೂಪಾಯಿ ಮೌಲ್ಯದ ದೋಣಿ ಮತ್ತಿತರ ಮೀನುಗಾರಿಕಾ ಸಲಕರಣೆಗಳನ್ನು ಬೈಂದೂರಿನ ಶಾಸಕರಾದ ಬಿ. ಎಂ. ಸುಕುಮಾರ ಶೆಟ್ಟಿ ವಿತರಿಸಿದರು.ಮೀನುಗಾರರು ನೆಮ್ಮದಿಯ ಜೀವನ ನಡೆಸುವಂತಾಗಬೇಕು ಎಂಬ ಆಶಯದೊಂದಿಗೆ ಮೀನುಗಾರಿಕೆ ದೋಣಿ, ಇಂಜಿನ್, ಬಲೆ, ಲೈಫ್ ಜಾಕೆಟ್, ಶಾಖ ನಿರೋಧಕ ಪೆಟ್ಟಿಗೆ ಹಸ್ತಾಂತರಿಸಲಾಗಿದೆ ಎಂದು ಶಾಸಕರು […]










