ಮೌನ ಮನೆ ಮಾಡಿದೆ. ಹೊರಗೆ ಮೊದಲ ಮುಂಗಾರು ಮಳೆ. ಸಿಡಿಲು, ಗುಡುಗಿನ ಜೊತೆಗೆ ಅ ನಿಮಿತ್ತ ಕೆ.ಇ.ಬಿ. ಯವ ಕರೆಂಟ್ ಬೇರೆ ತೆಗೆದಿದ್ದ. ಮಾತಿಲ್ಲ ಕತೆಯಿಲ್ಲ, ಮಳೆ ಆರ್ಭಟ ಬಿಟ್ಟು ಮಳೆಯನ್ನೇ ನೋಡುತ್ತಾ ಕುಳಿತ ನನಗೆ ಮಧ್ಯಾಹ್ನ ವಿಕಾಸ್ ಹೇಳಿದ ಮಾತು ತಲೆಯಲ್ಲಿ ಕೊರೆಯುತ್ತಾ ಇತ್ತು. ವಿಕಾಸ್ ಯಾರು ಅಂತ ನಿಮಗೆ ಹೇಳಲಿಲ್ಲ! ವಿಕಾಸ್ ಬೆಂಗಳೂರನಲ್ಲಿ ಪರಿಚಯವಾದ ನಟನೆಯಲ್ಲಿ ಆಸಕ್ತಿ ಇರುವ ಹುಡುಗ. ಸಮಾನ ಅಭಿರುಚಿ ಇರುವುದರಿಂದ ಬೇಗನೆ ಗೆಳೆತನವಾಯಿತು. […]
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಭವಿಷ್ಯದ ನಿರೀಕ್ಷೆಯಲ್ಲಿರುವ ಕಂದಮ್ಮಳಿಗೆ ಆಸರೆಯಾಗಿ ನಿಂತ ಸಾಮಾಜಿಕ ಕಳಕಳಿಯ ಸಮಾನ ಮನಸ್ಕರ ಸೇವಾ ತಂಡ
ಉಡುಪಿ (ಜೂ, 06) : ಕಾಡೂರು ಗ್ರಾಮದ ಮುಂಡಾಡಿ ಬಡಾಬೆಟ್ಟು ನಿವಾಸಿ ಚಂದ್ರಾವತಿ ಶೆಟ್ಟಿ ಯವರ ಮಗಳು 10 ವರ್ಷ ಪ್ರಾಯದ ಬಾಲಕಿ ಯುಕ್ತಿ ಶೆಟ್ಟಿ ಬ್ರೈನ್ ಟ್ಯೂಮರ್ ರೋಗದಿಂದ ಬಳಲುತ್ತಿದ್ದು, ಖಾಯಿಲೆಯ ಅರಿವೂ ಇಲ್ಲದ ಈ ಮಗುವಿನ ನೆರವಿಗಾಗಿ ಕೊಕ್ಕರ್ಣೆ – ಕಾಡೂರು ಸ್ಥಳೀಯ ಪರಿಸರದ ಸಂತೋಷ್ ಶೆಟ್ಟಿ ಮುಂಡಾಡಿ ಅವರ ನೇತೃತ್ವದಲ್ಲಿ ಹಾಗೂ ಅವರ ಆಪ್ತ ಸ್ನೇಹಿತ ವರ್ಗದವರಾದ ಅಶೋಕ್ ಕುಂದರ್ ಮಂದಾರ್ತಿ, ವಸಂತ್ ಕುಮಾರ್ ನುಕ್ಕೂರು, […]
ಕರೋನಾದ ಕಾರ್ಮೋಡದಲ್ಲಿ ಕಾಲೇಜಿನ ಆ ದಿನಗಳು
ಸುಂದರ ಪ್ರಪಂಚದಲ್ಲಿ ರೆಕ್ಕೆ ಬಲಿತ ಹಕ್ಕಿಯಂತೆ ಹಾರಾಡುತ್ತಿದ್ದ ನಾವುಗಳು ಕರೋನ ಮಹಾಮಾರಿಗೆ ಸಿಲುಕಿ ನೆಲೆ ಇಲ್ಲದ ನಡುಗಾಟದ ಜೀವನಕ್ಕೆ ವಿಲವಿಲ ಒದ್ದಾಡುವಂತಹ ಪರಿಸ್ಥಿತಿ. ಅತ್ತ ಕಾಲೇಜಿನ ಸವಿ-ಸಡಗರ ಇಲ್ಲ, ಇತ್ತ ಮುಂದಿನ ಜೀವನದ ಸ್ಪಷ್ಟತೆ ಕಣ್ಣೆದುರಿಗಿಲ್ಲ. ಎಲ್ಲವೂ ಸರಿ ಇದ್ದಿದ್ದರೆ ಅಂತಿಮ ವರ್ಷದ ಪದವಿ ಮುಗಿಸಿ ಎಲ್ಲೋ ಒಂದು ಕಡೆ ನೆಲೆ ಕಂಡುಕೊಳ್ಳುತ್ತಾ ಇದ್ದೇವು. ಆದರೆ ಈ ಕಾಣದ ಕರೋನ ನಮ್ಮ ಬದುಕಿನ ದಿಕ್ಕನ್ನೇ ಬದಲಿಸಿ ಬಿಟ್ಟಿದೆ. ತರಗತಿ ಗೋಡೆಗಳ […]
ಸೈಬರ್ ಸುರಕ್ಷತೆ ಸುದ್ದಿ ಪತ್ರದ ಮೊದಲನೇ ಆವೃತ್ತಿಯಾದ “ಸೈಬರ್ ವಾರ್ತಿಕಾ” ಬಿಡುಗಡೆ
ಬೆಂಗಳೂರು (ಜೂ. 06): CySecK ಸೈಬರ್ ಸೆಕ್ಯೂರಿಟಿ ಕರ್ನಾಟಕ ಇದು ಸೈಬರ್ ಶಿಕ್ಷಣವನ್ನು ಕರ್ನಾಟಕದಲ್ಲಿ ಒಂದು ಜನಾಂದೋಲನ ಕಾರ್ಯಕ್ರಮವಾಗಿ ರೂಪಿಸುತ್ತಿದ್ದು, ಇದು ತನ್ನ ದ್ವಿಭಾಷಾ ಸೈಬರ್ ಸುರಕ್ಷತೆ ಸುದ್ದಿಪತ್ರದ ಮೊದಲನೇ ಆವೃತ್ತಿಯಾದ “ಸೈಬರ್ ವಾರ್ತಿಕಾ” ವನ್ನು ನಿಮ್ಮೊಂದಿಗೆ ಹಂಚಿಕೊಂಡಿದೆ. ಈ ಸುದ್ದಿ ಪತ್ರದಲ್ಲಿ ಸೈಬರ್ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸುವ ಉಪಕ್ರಮಗಳಿಗೆ ಆದ್ಯತೆ ನೀಡಲಾಗುತ್ತದೆ. ಸುದ್ದಿಪತ್ರವು ಆಸಕ್ತಿದಾಯಕ ಮಾಹಿತಿಗಳನ್ನು ಒಳಗೊಂಡಿದ್ದು, “ರಕ್ಷಕ ಮತ್ತು ಭಕ್ಷಕ” ಸೈಬರ್ ಮ್ಯಾಸ್ಕಾಟ್ಗಳ ಮಾರ್ಗದರ್ಶನಗಳನ್ನು ಇದು […]
ಬಾ ಮಳೆಯೇ…, ಬಾ…
ಬಾ ಮಳೆಯೇ…, ಬಾಭಾನು ಅಳುತಿದೆಕತ್ತಲಗೂಡಿನೊಳಗೆಕರಿಮೋಡಗಳ ತಿಕ್ಕಾಟಕೆ ಸಿಕ್ಕಿಕಣ್ಣೀರ ಧಾರೆಗಳು ಮಳೆಯಾಗಿ ಭೂಮಿಗೆ ಸೇರುವ ತವಕದಲಿಗಗನದಲಿ ಮಳೆ ಮೋಡಗಳ ಕದನಭೂಮಿಗೆ ಮಳೆಯ ತಂಪಾದ ನರ್ತನಯಾರಿಗೋ ನೋವಿನ ಅನುಭವ ಇನ್ನೂ ಯಾರಿಗೋ ಸುಖದ ತಾಂಡವಹಾಗಂತ ನೀ ಸುರಿಯದಿರ ಬೇಡನೀ ಚೆಲ್ಲಿದ ಹನಿಯ ಅಮೃತಧಾರೆಗಳುಕಾದ ಭೂಮಿಗೆ ಅದು ಪ್ರೀತಿ ಸಿಂಚನ ನಿರಂತರ ನಿನ್ನ ಪ್ರೇಮ ಹನಿ ಸುರಿಸುತ್ತಿರುಭೂಮಿಯ ಒಡಲು ಒಣಗಿದೆ ನಿನ್ನ ನಿರೀಕ್ಷೆಯಲಿ ಸಾಕು ಪರೀಕ್ಷೆ ಸುರಿಸಿ ಬೀಡು ಇಳೆಗೆ ಮಳೆಯಾಗಿನಿನಗೆ ನೋವು ಆದರೂ […]
ಕೋಟೇಶ್ವರ : ಕೋವಿಡ್ ಲಸಿಕಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಜಿ. ಜಗದೀಶ್ ಭೇಟಿ
ಕೋಟೇಶ್ವರ (ಜೂ, 05): ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಕೋಟೇಶ್ವರ ಸರಕಾರಿ ಪ್ರಾಥಮಿಕ ಶಾಲೆಯ ವಠಾರದಲ್ಲಿ ನಡೆಯುತ್ತಿರುವ ಲಸಿಕಾ ಕೇಂದ್ರಕ್ಕೆ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಕೋಟೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ ಡಾ. ಪೂರ್ಣಿಮಾ ಶೇಟ್, ಕೇಂದ್ರದ ನಿರ್ವಾಹಕ ಸುಹಾಸ್ ಪೈ ಜಿಲ್ಲಾಧಿಕಾರಿಗಳಿಗೆ ಲಸಿಕಾ ಕೇಂದ್ರದ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಸೇವಾ ಭಾರತಿಯ ಸ್ವಯಂಸೇವಕರು ಉಪಸ್ಥಿತರಿದ್ದರು.
ಸಂತ ಮೇರಿ ಮಹಾವಿದ್ಯಾಲಯ, ಶಿರ್ವ : ವಿಶ್ವ ಪರಿಸರ ದಿನಾಚರಣೆ
ಶಿರ್ವ(ಜೂ, 5): ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದ ಎನ್ಸಿಸಿ ಘಟಕದ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಘಟಕದ ಸ್ವಯಂಸೇವಕರ ಮನೆಯ ಅಂಗಳಗಳಲ್ಲಿ ಗಿಡ ನೆಡುವ ಮೂಲಕ ಆಚರಿಸಲಾಯಿತು. ಕಾಲೇಜಿನ ಎನ್ಸಿಸಿ ಅಧಿಕಾರಿ ಲೆಫ್ಟಿನೆಂಟ್ ಕೆ. ಪ್ರವೀಣ್ ಕುಮಾರ್ ಅವರು ಔಷಧ ಗಿಡಗಳನ್ನು ಸಾಂಕೇತಿಕವಾಗಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ,ಯುವಕರನ್ನು ಪ್ರೇರೇಪಿಸಿದರು. ಕಾಲೇಜಿನ ಪ್ರಾಂಶುಪಾಲರು ಡಾ|ಹೆರಾಲ್ಡ್ ಐವನ್ ಮೋನಿಸ್ ರವರು ಎಲ್ಲರಿಗೂ ಶುಭಹಾರೈಸಿದರು. ಎನ್ಸಿಸಿ ಘಟಕದ ಸಹ ಸಂಯೋಜಕಿ ಯಶೋಧಾ […]
ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ : ಎನ್. ಎಸ್. ಎಸ್. ಘಟಕದ ವತಿಯಿಂದ ಹಸಿರೇ ಉಸಿರು ಅಭಿಯಾನಕ್ಕೆ ಚಾಲನೆ
ಕುಂದಾಪುರ (ಜೂ, 5): ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಹಸಿರೇ ಉಸಿರು (ಉಸಿರನಿತ್ತ ಪ್ರಕೃತಿಯನ್ನು ಹಸಿರಾಗಿಸೋಣ) ಎನ್ನುವ ಗಿಡ ನೆಡುವ ಅಭಿಯಾನಕ್ಕೆ ಜೂನ್ 5ರಂದು ಸಾಂಕೇತಿಕವಾಗಿ ಚಾಲನೆ ನೀಡಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೋ.ಕೆ.ಉಮೇಶ್ ಶೆಟ್ಟಿ ಹಾಗೂ ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೊವಾಡಿಯವರ ಮಾರ್ಗದರ್ಶನದೊಂದಿಗೆ ಕಾಲೇಜಿನ ರಾಷ್ಟ್ರೀಯ […]
ಕರಾವಳಿ – ಮೂಡಣದಿ ಹಿತವಾಗಿ ಆರಂಭಗೊಂಡ ಮುಂಗಾರು ಮಳೆ
ಕರಾವಳಿ ಹಾಗೂ ಮೂಡಣ( ಪಶ್ಚಿಮಘಟ್ಟ) ಭಾಗದಲ್ಲಿ ಮುಂಗಾರು ಮಳೆ ಆರಂಭಗೊಂಡು ಹಿತವಾಗಿ ಸುರಿದಿದೆ. ಹವಾಮಾನ ವರದಿಯ ದಿನದಂತೆ ಬಂದು ತನ್ನ ಆಗಮನವನ್ನು ತೋರಿಸಿ ಜನರಲ್ಲಿ ಖುಷಿಯನ್ನು ಮೂಡಿಸಿತು. ಭಾರತದಲ್ಲಿ ಮುಂಗಾರು ಮಳೆಗೆ ಹೆಚ್ಚಿನ ಮಹತ್ವ ಇದೆ. ಈ ಮಳೆ ಈ ವರುಷ ನಮ್ಮ ಜಿಲ್ಲೆಗೆ ಸಮಯಕ್ಕೆ ಸರಿಯಾಗಿ ಬಂದಿರುವುದು ವಿಶೇಷ. ಜೂನ್ 3 ರೊಳಗೆ ರಾಜ್ಯಕ್ಕೆ ಮುಂಗಾರು ಪ್ರವೇಶಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿತ್ತು. ಮಳೆಯ ಜೊತೆ ಅನ್ನದಾತ […]
ಇಂದು ವಿಶ್ವ ಪರಿಸರ ದಿನ
ಬಂಧುಗಳೆ,ಇಂದು ವಿಶ್ವ ಪರಿಸರ ದಿನ. ಅದರ ನೆನಪಿಗಾಗಿ ಮತ್ತು ನಮ್ಮ ಉಳಿವಿಗಾಗಿ ಎಲ್ಲರೂ ಒಂದೊಂದು ಗಿಡ ನೆಡೋಣ. 138 ಕೊಟಿ ಜನ ಒಂದೊಂದು ಗಿಡ ಎಂದರೆ 138 ಕೋಟಿ ಆಕ್ಸಿಜನ್ ಸಿಲಿಂಡರ್ಗಳು ಎಂದರ್ಥ. ಅದರಲ್ಲಿ 38 ಕೋಟಿ ತೆಗೆದರೂ 100 ಕೋಟಿ ಜನ ಮನಸ್ಸು ಮಾಡಿ ಒಂದೊಂದು ಗಿಡ ನೆಟ್ಟರೂ ನೂರು ಕೋಟಿ ಆಕ್ಸಿಜನ್ ಸಿಲಿಂಡರ್ ಲೆಕ್ಕ ಆಗುತ್ತದೆ. ಆದ್ದರಿಂದ ಬಂಧುಗಳೇ, ಮರೆಯದೆ ಪ್ರತಿಯೊಬ್ಬರು ಒಂದೊಂದು ಅಥವಾ ನಿಮ್ಮ ಕೈಲಾದಷ್ಟು […]










