ಉಡುಪಿ (ಏ, 7) : ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಹಳೆ ವಿದ್ಯಾರ್ಥಿಗಳು “ಯಕ್ಷಸಿರಿ ಶಾಶ್ವತ ಬಳಗ” ಎಂಬ ಹೆಸರಿನಲ್ಲಿ ಸಂಘಟನೆಯನ್ನು ಹುಟ್ಟು ಹಾಕಿದ್ದು, ಇದರ ವತಿಯಿಂದ ಶ್ರೀ ಕೃಷ್ಣ ಲೀಲಾರ್ಣವ’ ಎಂಬ ಯಕ್ಷಗಾನ ಬಯಲಾಟ ಕಾರ್ಯಕ್ರಮವನ್ನು ಎರ್ಮಾಳಿನ ಶ್ರೀ ಲಕ್ಷ್ಮೀ ಜನಾರ್ಧನ ದೇವಾಲಯದ ಆವರಣದಲ್ಲಿ ಆಯೋಜಿಸಲಾಗಿತ್ತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿಯ ಶ್ರೀ ಸೋದೆ ವಾದಿರಾಜ ಮಠದ ಶ್ರೀ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ವಹಿಸಿದ್ದರು. […]
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಶ್ರೀ ನಾಗ ದೇವಸ್ಥಾನ ಬೆಣ್ಗೆರೆ -ಗುಜ್ಜಾಡಿ 46ನೇ ನಾಗಮಂಡಲೋತ್ಸವ & ಅಷ್ಟಬಂಧ ಪ್ರತಿಷ್ಠಾಪನಾ ವರ್ಧಂತ್ಯುತ್ಸವ
ಗಂಗೊಳ್ಳಿ (ಏ, 10): ಕುಂದಾಪುರ ತಾಲ್ಲೂಕಿನ ಗುಜ್ಜಾಡಿ ಸಮೀಪದ ಬೆಣ್ಗೆರೆ ಶ್ರೀ ನಾಗ ದೇವಸ್ಥಾನದಲ್ಲಿ ಅಷ್ಟಬಂಧ ಪ್ರತಿಷ್ಠಾಪನಾ ವರ್ಧಂತ್ಯುತ್ಸವದ ಪ್ರಯುಕ್ತ ಏಪ್ರಿಲ್12 ರಿಂದ 15 ರ ತನಕ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ವರ್ಷಂಪ್ರತಿಯಂತೆ ಈ ವರ್ಷವೂ ಮೇಸ್ತ ಸಮುದಾಯದವರು ಊರ ಜನತೆಯ ಸಹಕಾರದೊಂದಿಗೆ ನಾಗಮಂಡಲೋತ್ಸವವನ್ನು ಆಚರಿಸುತ್ತಿದ್ದು, ಈ ಬಾರಿ 46 ನೇ ನಾಗಮಂಡಲೋತ್ಸವವು ಇದೇ ಎಪ್ರಿಲ್ 14 14 ರಂದು ನಡೆಯಲಿದೆ . ಎಪ್ರಿಲ್ 14 […]
ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (KSET) ಮೂಂದೂಡಿಕೆ
ಮೈಸೂರು (ಏ, 10): ಮೈಸೂರು ವಿಶ್ವವಿದ್ಯಾನಿಲಯವು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಎಸ್.ಇ.ಟಿ.) ಯನ್ನು ಎಪ್ರಿಲ್ 11 ರ ಭಾನುವಾರದಂದು ನಡೆಸಲು ಪೂರ್ವಸಿದ್ಧತೆಗಳನ್ನು ಮಾಡಿಕೊಂಡಿತ್ತು. ಆದರೆ ಕಾರಣಾಂತರಗಳಿಂದ ಕೆ.ಎಸ್.ಇ.ಟಿ. (KSET) ಪರೀಕ್ಷೆಯನ್ನು ಮುಂದೂಡಲು ನಿರ್ಧರಸಿದೆ. ಕೆ.ಎಸ್.ಇ.ಟಿ. ನ ಮುಂದಿನ ಪರೀಕ್ಷಾ ದಿನಾಂಕವನ್ನು ಶೀಘ್ರದಲ್ಲಿ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು. ಎಲ್ಲಾ ನೊಂದಾಯಿತ ಅಭ್ಯರ್ಥಿಗಳು ಕೆಸೆಟ್ 2021 ಪರೀಕ್ಷೆಗೆ ಸಂಬಂಧಿಸಿದಂತೆ ಕೆಸೆಟ್ ವೆಬ್ಸೈಟ್ನಲ್ಲಿ http://kset.uni-mysore.ac.in/ ಆಗಿಂದಾಗ್ಗೆ ಹೊರಡಿಸುವ ವಿಷಯಗಳನ್ನು ಗಮನಿಸಬೇಕೆಂದು ಎಂದು […]
ವೀಳ್ಯ ಶಾಸ್ತ್ರ ಹಾಗೂ ವಧು-ವರರಿಗೆ ಉಡುಗೆ ತೊಡುಗೆಗಳ ವಿತರಣಾ ಕಾರ್ಯಕ್ರಮ
ಕೋಟೇಶ್ವರ (ಏ, 8): ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ) ಅಂಬಲಪಾಡಿ ಹಾಗೂ ಮೊಗವೀರ ಯುವ ಸಂಘಟನೆ(ರಿ) ಉಡುಪಿ ಜಿಲ್ಲೆ ಇವರ ಜಂಟಿ ಆಶ್ರಯದಲ್ಲಿ ಮೇ 2 ರಂದು ನಡೆಯಲಿರುವ 25 ಜೋಡಿಗಳ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದ ಪೂರ್ವಭಾವಿಯಾಗಿ ಸಾಮೂಹಿಕ ವೀಳ್ಯ ಶಾಸ್ತ್ರ ಕಾರ್ಯಕ್ರಮ ಹಾಗೂ ವಧು- ವರರಿಗೆ ಉಡುಗೆ ತೊಡುಗೆಗಳ ವಿತರಣಾ ಕಾರ್ಯಕ್ರಮ ಹಾಲಾಡಿಯ ಶ್ರೀಮತಿ ಶಾಲಿನಿ ಜಿ. ಶಂಕರ್ ಕನ್ವೆನ್ಷನ್ ಸೆಂಟರ್ ನಲ್ಲಿ ಏಪ್ರಿಲ್ 8 […]
ನಕ್ಸಲೀಯರಿಂದ ಅಪಹರಿಸಲ್ಪಟ್ಟ ಕೋಬ್ರಾ ಕಮಾಂಡೋ ಯೋಧ ರಾಕೇಶ್ವರ್ ಸಿಂಗ್ ಮನ್ಹಾಸ್ ಬಿಡುಗಡೆ
ಬಿಜಾಪುರ (ಏ. 9): ಇತ್ತೀಚೆಗೆ ಛತ್ತೀಸ್ ಗಡ್ ನಲ್ಲಿ ನಕ್ಸಲರು ನಡೆಸಿದ ರಕ್ತಪಾತದಿಂದಾಗಿ 22 ಯೋಧರು ಹುತಾತ್ಮರಾಗಿದ್ದು ಜೊತೆಗೆ ಕೋಬ್ರಾ ಕಮಾಂಡೋ ಯೋಧನ ರಾಕೇಶ್ವರ್ ಸಿಂಗ್ ಮನ್ಹಾಸ್ ರನ್ನು ನಕ್ಸಲ್ ರು ಅಪಹರಣ ಮಾಡಿ ತಮ್ಮ ವಶದಲ್ಲಿರಿಸಿಕೊಂಡಿದ್ದರು. ಛತ್ತೀಸ್ ಗಡ್ ಸರ್ಕಾರ ಅಪಹರಣಕ್ಕೀಡಾದ ಯೋಧರನ್ನು 5 ದಿನಗಳ ಬಳಿಕ ನಕ್ಸಲರ ಜೊತೆ ಮಾತುಕತೆ ನಡೆಸಿದ ಫಲವಾಗಿ ಯೋಧನನ್ನು ನಕ್ಸಲರು ಎಪ್ರಿಲ್ 8 ರಂದು ಬಿಡುಗಡೆ ಮಾಡಿದ್ದಾರೆ.
ಡಾ|ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಾದ ದೀಪಾ ಹಾಗೂ ಜ್ಯೋತಿ ಯವರಿಗೆ ಚಿನ್ನದ ಪದಕ
ಕುಂದಾಪುರ (ಏ, 8): ಮಂಗಳೂರು ವಿಶ್ವವಿದ್ಯಾನಿಲಯವು ಸೆಪ್ಟೆಂಬರ್ 2020ರಲ್ಲಿ ನಡೆಸಿದ ಅಂತಿಮ ಬಿ.ಕಾಂ ಪರೀಕ್ಷೆಯಲ್ಲಿ ಐದನೇ ಹಾಗೂ ಆರನೇ ಸೆಮಿಸ್ಟರ್ಗಳ ‘ಪೈನಾನ್ಶಿಯಲ್ ಎಕೌಂಟಿಗ್’ ವಿಷಯದಲ್ಲಿ ಕಾಲೇಜಿನ ದೀಪಾ ದೇವಾಡಿಗ ಮತ್ತು ಜ್ಯೋತಿ ಇವರು 300 ರಲ್ಲಿ 300 ಅಂಕ ಗಳಿಸಿ ICAI ನೀಡುವ ಚಿನ್ನದ ಪದಕಗಳನ್ನು ಪಡೆದು ಕಾಲೇಜಿಗೆ ಕೀರ್ತಿ ತಂದಿರುತ್ತಾರೆ. ಇವರನ್ನು ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಬಿ. ಎಂ. ಸುಕುಮಾರ […]
ಯೆನೆಪೋಯ ಇಂಜಿನಿಯರಿಂಗ್ ಕಾಲೇಜು : ಅಧ್ಯಾಪಕರ ಕೌಶಲ್ಯಾಭಿವೃದ್ಧಿ ಕಾರ್ಯಾಗಾರ
ಮೂಡುಬಿದ್ರಿ (ಏ, 8): ಇಲ್ಲಿನ ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ಇಂಜಿನಿಯರಿಂಗ್ ವಿಭಾಗ ಆಯೋಜಿಸಿದ್ದ ಅಧ್ಯಾಪಕರ ಕೌಶಲ್ಯಾಭಿವೃದ್ಧಿ ಕಾರ್ಯಾಗಾರದ ಉದ್ಘಾಟನೆ ಏ. 8 ರಂದು ನಡೆಯಿತು. ‘ಪೈಥಾನ್ ಬಳಸಿ ಕೃತಕ ಬುದ್ಧಿಮತ್ತೆಯ ಉಪಯೋಗಗಳು’ (Applications of Artificial Intelligence using Python) ಎಂಬ ವಿಷಯದಲ್ಲಿ ನಡೆದ ಈ ಕಾರ್ಯಾಗಾರವನ್ನು ಪ್ರಾಂಶುಪಾಲ ಡಾ.ಆರ್.ಜಿ. ಡಿ’ಸೋಜಾ ರವರು ಉದ್ಘಾಟಿಸಿದರು. ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಶನ್ (ಐಎಸ್ಟಿಇ) ಸಹಯೋಗದೊಂದಿಗೆ […]
ಹೀಂಗೇ ನೆನ್ಪ್ ಆಯ್ ಬಿಡ್ತ್ ಕಾಣೀ ನಮ್ ಬಾಲ್ಯದ ಬದ್ಕ್ ….
ಸಣ್ಣತಿನ್ ಪ್ರಾಯವೇ ಹಾಂಗೆ ಎಷ್ಟ್ ಚಂದದ ಬದ್ಕ್. ನಮ್ದ್ ಅಂದ್ ಒಂದ್ ಮಂಡಿಬಿಸಿ ಇಲ್ದೆ ಯಾರ್ ಮಾತಿಗೂ ಹೆಚ್ ಅಲೋಚ್ನಿ ಮಾಡ್ದೇ ಆ ಹೊತ್ತಿಗ್ ಏನ್ ಬೇಕ್ ಅದನ್ ಪಡ್ಕಂಡ್ ನಮ್ದೇ ಆದ್ ಒಂದ್ ದಾರಿಯಂಗ್ ಸಣ್ ಸಣ್ ಕನ್ಸನ್ ಗೆದ್ಕಂಡ್ ಖುಷಿ ಪಟ್ ಗಳ್ಗಿ ಅಂಬುದ್ ಮತ್ ಪಡುಕ್ ಆತಿಲ್ಲ. ಆದ್ರೇ ಆ ನೆನ್ಪ್ ಹಾಂಗೆ ಕಣ್ ಎದ್ರ್ ಬಂದ್ ಹ್ವಾಪತಿಗ್ ನೆನ್ಪ್ ಮಾಡ್ಕಂಡಷ್ಟ್ಕು ಸಾಕಾತಿಲ್ಲ. ಆದ್ರೆ ಈ […]
ಸಂಸ್ಕಾರ – ಸಂಸ್ಕ್ರತಿ
ಹೌದು ಸ್ನೇಹಿತರೇ,ಗಾಳಿಬಂದ ಕಡೆಯಲ್ಲಿ ತೂರಿಕೊಂಡು ಅತೀ ಧಾವಂತದಲ್ಲಿ ಮುನ್ನೆಡೆಯುತ್ತಿರುವ ನಾವು ಹಾಗೂ ನಮ್ಮ ಯುವ ಪೀಳಿಗೆ ಸಂಸ್ಕಾರವನ್ನು ಮರೆಯುವತ್ತ ಹೆಜ್ಜೆಗಳನ್ನಿಡುತ್ತಿದ್ದೇವೆ.. ಇಲ್ಲಿವೆ ನೋಡಿ ಸಂಸ್ಕಾರದ ಪಾಠಕೈಯಲ್ಲಿ ಕೋಟಿ ಇದ್ದರು ಗುರು ಹಿರಿಯರನ್ನು ಕಂಡೊಡನೆ ಕಾಲಿಗೆ ಬೀಳೋದು ಸಂಸ್ಕಾರ..! ಎಷ್ಟೇ ಆಧುನಿಕತೆ ಬಂದರು ಹಣೆಯ ಮೇಲಿನ ಬೊಟ್ಟು ಸಂಸ್ಕಾರ..! ಎಷ್ಟೇ ಆಧುನಿಕತೆಯ ಗಾಳಿ ಬೀಸಿದರು ಜಡೆಯ ತುಂಬ ಹೂವು ಸಂಸ್ಕಾರ..! ಡಿಗ್ರಿ ಮೇಲೆ ಡಿಗ್ರಿ ಪಡೆದರು ಗುರು ಕಂಡೊಡನೆ ತೋರಿಸುವ ಭಯ […]










