ಮಧುವನ (ಏ, 7): ಇಲ್ಲಿನ ನರ್ಸಿಂಗ್ ಕಾಲೇಜಿನಲ್ಲಿ ಎಪ್ರಿಲ್ 7 ರಂದು ವಿಶ್ವ ಆರೋಗ್ಯ ದಿನಾಚರಣೆಯನ್ನು ಆಚರಿಸಲಾಯಿತು. ಸಂಸ್ಥೆಯ ಮುಖ್ಯಸ್ಥರಾದ ಶ್ರೀ ಮಧು ಟಿ. ಭಾಸ್ಕರನ್ ರವರು ಕಾರ್ಯಕ್ರಮವನ್ನುಉದ್ಘಾಟಿಸುವುದರ ಜೊತೆಗೆ ಅಧ್ಯಕ್ಷೀಯ ನೆಲೆಯ ಮಾತುಗಳನ್ನಾಡಿದರು. ಇಂದಿನ ದಿನಗಳಲ್ಲಿ ಆರೋಗ್ಯದ ಸಮಸ್ಯೆ ಒಬ್ಬರ ಸಮಸ್ಯೆಯಾಗಿರದೆ ವಿಶ್ವದ ಸಮಸ್ಯೆಯಾಗಿದೆ ಆದ್ದರಿಂದ ಎಲ್ಲಕ್ಕಿಂತ ಹೆಚ್ಚಾಗಿ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹಳ ಮುಖ್ಯ ಎಂದು ಹೇಳಿದರು. ಕಾರ್ಯಕ್ರಮದ ಸಂಯೋಜಕರು ಪ್ರಾಂಶುಪಾಲರಾದ ಪ್ರೊ. ನಟರಾಜ್ ಕೆ, ಮಾತನಾಡಿ ಆರೋಗ್ಯದ […]
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಡಾ. ಮಹಾಂತೇಶ ಏಳಮ್ಮಿ ರವರಿಗೆ ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ
ಬೆಳಗಾವಿ (ಏ, 7): ಬೆಳಗಾವಿಯ ಜೈನ್ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಸಂಶೋಧನೆ ಮಹಾವಿದ್ಯಾಲಯದ ಗಣಕಯಂತ್ರ-ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಡಾ. ಮಹಾಂತೇಶ ಏಳಮ್ಮಿ ರವರಿಗೆ ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿಯನ್ನು ನೀಡಿದೆ. ಬಾಗಲಕೋಟೆ ಜಿಲ್ಲೆಯ ನಿವಾಸಿಯಾದ ಡಾ.ಮಹಾಂತೇಶ ಏಳಮ್ಮಿ ಯವರು ಡಾ. ಬಸವರಾಜ್ ಅನಾಮಿ ರವರ ಮಾರ್ಗದರ್ಶನದಲ್ಲಿ ಮಂಡಿಸಿದ “CHARACTERIZATION AND CLASSIFICATION OF COMMON FABRIC MATERIALS AND THEIR DEFECTS” ಎನ್ನುವ ವಿಷಯಕ್ಕೆ ಪಿ.ಎಚ್.ಡಿ […]
ಏಪ್ರಿಲ್ 8 ರಿಂದ 10 ರ ತನಕ ನಡೆಯ ಬೇಕಿದ್ದ ಮಂಗಳೂರು ವಿ. ವಿ. ಪದವಿ ಸೆಮಿಸ್ಟರ್ ಪರೀಕ್ಷೆ ಮುಂಡೂಡಿಕೆ
ಮಂಗಳೂರು (ಏ, 7): ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಿಬ್ಬಂದಿಗಳ ಮುಷ್ಕರ ಆನಿರ್ದಿಷ್ಟಾವಧಿಗೆ ಮುಂದುವರೆದಿರುವುದರಿಂದ ಮಂಗಳೂರು ವಿಶ್ವವಿದ್ಯಾನಿಲಯವು ದಿನಾಂಕ 08-04-2021 ರಿಂದ 10-04-2021ರ ವರೆಗೆ ನಿಗದಿಪಡಿಸಿದ್ದ ಎಲ್ಲಾ ಪದವಿ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಿದೆ. ಮುಂದೂಡಿದ ಪರೀಕ್ಷೆಗಳ ಪರಿಷ್ಕೃತ ದಿನಾಂಕವನ್ನು ನಿಗದಿ ಪಡಿಸಿ ಶೀಘ್ರದಲ್ಲಿ ಮುಂದೆ ತಿಳಿಸಲಾಗುವುದು,ಉಳಿದ ಪರೀಕ್ಷೆಗಳು ಈ ಹಿಂದೆ ಪ್ರಕಟಿಸಿದ ವೇಳಾಪಟ್ಟಿಯಂತೆ ನಡೆಯುತ್ತದೆ ಅದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ, ಈ ಕುರಿತು ಕೂಡಲೇ ವಿದ್ಯಾರ್ಥಿಗಳ ಗಮನಕ್ಕೆ ತರಲಾಗುವುದು ಎಂದು […]
ಕೋವಿಡ್ ಲಸಿಕೆ ಅಭಿಯಾನಕ್ಕೆ ಗೋಪಾಡಿ ಗ್ರಾಮ ಪಂಚಾಯತ್ ಹಾಗೂ ವಿವಿಧ ಸಂಘಟನೆಗಳ ಸಹಕಾರ
ಕೋಟೇಶ್ವರ (ಏ, 7): ಪಡು ಗೋಪಾಡಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 75ಕ್ಕೂ ಮಿಕ್ಕಿ ಗ್ರಾಮಸ್ಥರು ಕೋವಿಡ್ ಲಸಿಕೆಯನ್ನು ಹಾಕಿಸಿಕೊಂಡರು. ಈ ಸಂದರ್ಭದಲ್ಲಿ ಗೋಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸರೋಜ,ಪಂಚಾಯತ್ ನ ಹಿರಿಯ ಸದ್ಯಸರಾದ ಶ್ರೀ ಸುರೇಶ್ ಶೆಟ್ಟಿ ಗೋಪಾಡಿ, ಸದ್ಯಸರಾದ ಪ್ರಕಾಶ್ ಗೋಪಾಡಿ, ಶ್ರೀಮತಿ ನೇತ್ರಾವತಿ ಮಡಿವಾಳ, ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಶ್ರೀನಿವಾಸ್ ಶೆಟ್ಟಿ, ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಸುರೇಂದ್ರ ಸಂಗಮ್, ಗೋಪಾಡಿ, ಗೋಮಾತಾ ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ […]
ಕೆಎಸ್ಇಟಿ (KSET) ಪರೀಕ್ಷಾ ಕೇಂದ್ರಗಳ ವಿವರ ವೆಬ್ ಸೈಟ್ ನಲ್ಲಿ ಲಭ್ಯ
ಉಡುಪಿ (ಏ, 7): ಮೈಸೂರು ವಿಶ್ವವಿದ್ಯಾಲಯ ನಡೆಸುವ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ ಕೆ.ಎಸ್.ಇ.ಟಿ. (KSET) ಇದೇ ಎಪ್ರಿಲ್ 11 ರಂದು ನಡೆಯಲಿದ್ದು, ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು ತಮಗೆ ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳ ವಿವರವನ್ನು ಮೈಸೂರು ವಿಶ್ವವಿದ್ಯಾಲಯ ವೆಬ್ ಸೈಟ್ ನಲ್ಲಿ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ kset.uni-mysore.ac.in ಗೆ ಭೇಟಿ ನೀಡಬೇಕೆಂದು ಸೂಚಿಸಲಾಗಿದೆ.
ಮೂಡ್ಲಕಟ್ಟೆ ಎಂ.ಐ .ಟಿ. ಕಾಲೇಜಿನ ಶಶಾಂಕ್ ಮಾಸಡಿ ಉಡುಪಿ ಜಿಲ್ಲೆಗೆ ಪ್ರಥಮ
ಕುಂದಾಪುರ (ಏ, 6): ಸೈಬರ್ ಸೆಕ್ಯೂರಿಟಿ ಉತ್ಕೃಷ್ಟತೆಯ ಕೇಂದ್ರ, ಕರ್ನಾಟಕ ಮತ್ತು ರಾಷ್ಟ್ರೀಯ ಸಾಫ್ಟ್ ವೇರ್ & ಸರ್ವಿಸ್ ಕಂಪನಿಗಳ ಅಸೋಸಿಯೇಷನ್ ವತಿಯಿಂದ ನಡೆಸಲ್ಪಟ್ಟ ‘ಮಾರ್ಚ್ ಫಾರ್ ಸೆಕ್ಯೂರ್ ಕೋಡ್’ ಎಂಬ ಅತೀ ಬೇಗ ಕೋರ್ಸ್ ಮುಗಿಸುವ ಸ್ಪರ್ಧೆಯಲ್ಲಿ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿ ಶಶಾಂಕ್ 10,000 ರೂ ನಗದು ಬಹುಮಾನದೊಂದಿಗೆ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಯ […]
ಮೇ 1ರಿಂದ 10 – ಟಾರ್ಪಡೋಸ್ ಸ್ಪೋರ್ಟ್ಸ್ ಕ್ಲಬ್ ಆಯೋಜನೆಯಲ್ಲಿ ಕ್ರೀಡಾ ಹಬ್ಬ
ಕುಂದಾಪುರ (ಏ, 6): ರಾಜ್ಯದ ಪ್ರತಿಷ್ಠಿತ ಸ್ಪೋರ್ಟ್ ಕ್ಲಬ್ ಗಳಲ್ಲಿ ಒಂದಾದ ಟಾರ್ಪಡೋಸ್ ಸ್ಪೋರ್ಟ್ಸ್ ಕ್ಲಬ್ ಆಯೋಜನೆಯಲ್ಲಿ ಮೇ 01 ರಿಂದ 10ರ ವರೆಗೆ ಕುಂದಾಪುರ ಹಾಗೂ ಮಂಗಳೂರಿನ ವಿವಿಧೆಡೆಗಳಲ್ಲಿ ಟಾರ್ಪಡೋಸ್ ಕ್ರೀಡಾ (ಸ್ಪೋರ್ಟ್ಸ್ ಕಾರ್ನಿವಲ್) ಹಬ್ಬ ನಡೆಯಲಿದೆ ಎಂದು ಪ್ರತಿಷ್ಠಿತ ಟಾರ್ಪಡೋಸ್ ಕ್ಲಬ್ನ ಗೌತಮ್ ಶೆಟ್ಟಿ ತಿಳಿಸಿದ್ದಾರೆ. ಸರಿ ಸುಮಾರು 1 ಕೋ. ರೂ. ವೆಚ್ಚದಲ್ಲಿ ಈ ಕ್ರೀಡಾ ಹಬ್ಬವನ್ನು ಆಯೋಜಿಸಲಾಗಿತ್ತಿದ್ದು, ಟೆನಿಸ್ ಹಾಗೂ ಲೆದರ್ ಬಾಲ್ ಕ್ರಿಕೆಟ್ […]
ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾದ “ಗೆಲುವಿನ ಹೆಜ್ಜೆ” ಪುಸ್ತಕ ಬಿಡುಗಡೆ
ಉಡುಪಿ (ಏ, 5): ಕರೋನಾ ಕಾರಣದಿಂದಾಗಿ ಎಸ್.ಎಸ್.ಎಲ್.ಸಿ ತರಗತಿಗಳು 7 ತಿಂಗಳು ವಿಳಂಬವಾಗಿ ಆರಂಭವಾದ ಹಿನ್ನೆಲೆಯಲ್ಲಿ ಪಠ್ಯಕ್ರಮಕ್ಕೆ ಸಂಭಂಧಪಟ್ಟಂತೆ ಎಲ್ಲಾ ವಿಷಯಗಳಿಗೆ ಸರಳ ಅಧ್ಯಯನ ಕ್ರಮ ಅನುಸರಿಸಿ ವಿದ್ಯಾರ್ಥಿಗಳಿಗೆ ಕಲಿಕೆಗೆ ಪೂರಕವಾಗುವ ಅದರಲ್ಲೂ ವಿಶೇಷವಾಗಿ ನಿಧಾನಗತಿಯ ಕಲಿಕೆಯ ವಿದ್ಯಾರ್ಥಿಗಳು ಓದಿ ಕಲಿತು ಪರೀಕ್ಷೆ ಪಾಸಾಗಲು ಯೋಗ್ಯವಾಗಿರುವ 280 ಪುಟಗಳ” ಗೆಲುವಿನ ಹೆಜ್ಜೆ “ಪುಸ್ತಕವನ್ನು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅನಾವರಣಗೊಳಿಸಿದರು. ಅವರುಉಡುಪಿ ಸಾರ್ವಜನಿಕ ಶಿಕ್ಷಣ ಇಲಾಖೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ಸಿದ್ಧಪಡಿಸಿದ “ಗೆಲುವಿನ ಹೆಜ್ಜೆ” […]
ಸರ್ಕಾರಿ ಬಸ್ಸ್ ನೌಕರರ ಮುಷ್ಕರ ಹಿನ್ನೆಲೆ ಎಪ್ರಿಲ್ 7 ರಂದು ನಡೆಯ ಬೇಕಿದ್ದ ಮಂಗಳೂರು ವಿ.ವಿ. ಪದವಿ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ
ಮಂಗಳೂರು (ಏ, 6): ವೇತನ ಹೆಚ್ಚಳ ಸಂಬಂಧಿಸಿದಂತೆ ರಾಜ್ಯ ಸಾರಿಗೆ ಇಲಾಖೆಯ ನೌಕರರು ಎಪ್ರಿಲ್ 7 ರಂದು ಕರೆ ನೀಡಿದ ಅನಿರ್ದಿಷ್ಟಾವಧಿ ಮುಷ್ಕರದಿಂದಾಗಿ ಎಪ್ರಿಲ್ 7 ರ ಬುಧವಾರ ನಡೆಯಬೇಕಿದ್ದ ಮಂಗಳೂರು ವಿ.ವಿ. ಪದವಿ ಸೆಮಿಸ್ಟರ್ ಪರೀಕ್ಷೆಗಳನ್ನು ಅನಿವಾರ್ಯವಾಗಿ ಮುಂದೂಡಲಾಗಿದೆ ಎಂದು ಮಂಗಳೂರು ವಿ.ವಿ ಪರೀಕ್ಷಾಂಗ ಕುಲಸಚಿವರಾದ ಪ್ರೊ ಪಿ.ಎಲ್ ಧರ್ಮ ರವರು ತಿಳಿಸಿರುತ್ತಾರೆ.ಹಾಗೆಯೇ ಎಪ್ರಿಲ್ 7 ರಂದು ನಡೆಯ ಬೇಕಿದ್ದ ಪರೀಕ್ಷೆಯ ಮುಂದೂಡಲ್ಪಟ್ಟ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು […]
ಶ್ರೀ ಜಯ ಸಿ. ಕೋಟ್ಯಾನ್ ರವರಿಗೆ ಸನ್ಮಾನ
ಹೆಮ್ಮಾಡಿ (ಎ. 4): ಕರ್ನಾಟಕ ಕರಾವಳಿಯ ಮೀನುಗಾರರ ಕ್ರಿಯಾ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ(ರಿ) ಉಚ್ಚಿಲ ಇದರ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್ ಇವರನ್ನು ಮೊಗವೀರ ಮಹಾಜನ ಸೇವಾ ಸಂಘ (ಬಗ್ವಾಡಿ ಹೋಬಳಿ 1941) ಇದರ ಕುಂದಾಪುರ ಶಾಖೆಯ ವತಿಯಿಂದ ಸನ್ಮಾನಿಸಲಾಯಿತು. ಎಪ್ರಿಲ್, 4 ರಂದು ಬಗ್ವಾಡಿಯ ಶ್ರೀ ಮಹಿಷಾಸುರಮರ್ದಿನಿ ಸಭಾಭವನದಲ್ಲಿ ಆಯೋಜಿಸಿದ್ದ ಗುರಿಕಾರರ ಸಭೆ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ಇವರನ್ನು ಸನ್ಮಾನಿಸಲಾಯಿತು. […]










