ಕುಂದಾಪುರ(ಮಾ.13)ಕುಂದಾಪುರದ ಪುರಾಣ ಪ್ರಸಿದ್ದ ದೇವಾಲಯವಾದ ಚಿಕ್ಕಮ್ಮನ ಸಾಲು ರಸ್ತೆ ಶ್ರೀ ಚಿಕ್ಕಮ್ಮ ದೇವಿ ದೇವಸ್ಥಾನಕ್ಕೆ ಅವಧೂತ ಶ್ರೀ ವಿನಯ್ ಗುರೂಜಿಯವರು ಭೇಟಿ ನೀಡಿ ದೇವಿಯ ದರ್ಶನ ಪಡೆದರು.ಈ ಸಂದರ್ಭದಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು ಹಾಗೂ ಆನಗಳ್ಳಿ ಶ್ರೀ ದತ್ತಾಶ್ರಮದ ಪ್ರವರ್ತಕರಾದ ಶ್ರೀಮತಿ ಮತ್ತು ಶ್ರೀ ಸುಭಾಷ್ ಪೂಜಾರಿ ಸಂಗಮ್, ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ನಾಗೇಶ್ ಪುತ್ರನ್ ಐತಾಳ್ ಬೆಟ್ಟು ಮತ್ತು ಸಂಗಮ್ ಫ್ರೆಂಡ್ಸ್ ಸದಸ್ಯರು ಉಪಸ್ಥಿತರಿದ್ದರು.
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಸುದೀಪ್ ಶೆಟ್ಟಿ ಆಜ್ರಿ ಆಯ್ಕೆ
ಕುಂದಾಪುರ (ಮಾ.13) ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಇದರ 2020 -21ನೇ ಸಾಲಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಸುದೀಪ್ ಶೆಟ್ಟಿ ಆಜ್ರಿಯವರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಅಜಿತ್ ಶೆಟ್ಟಿ ಹಾಗೂ ಭರತ್ ಶೆಟ್ಟಿ ಪ್ರಧಾನ ಕಾರ್ಯದರ್ಶಿಯಾಗಿ ದೀಪಾ ಪೂಜಾರಿ, ಸಂಘಟನಾ ಕಾರ್ಯದರ್ಶಿಯಾಗಿ ಪ್ರೆಸಿಲ್ಲಾ, ಜೊತೆ ಕಾರ್ಯದರ್ಶಿಗಳಾಗಿ ಆಶಾ ಶೆಟ್ಟಿ ಹಾಗೂ ಸ್ವಸ್ತಿ ಶೆಟ್ಟಿ , ಕೋಶಾಧಿಕಾರಿಯಾಗಿ ಯೋಗೀಶ್ ಶ್ಯಾನುಭಾಗ್ ಆಯ್ಕೆಯಾಗಿದ್ದಾರೆ. ಕಾಲೇಜಿನ ಸಭಾಂಗಣದಲ್ಲಿ ಮಾರ್ಚ್ 13 ರಂದು ನಡೆದ […]
ಕ್ರೀಡೆಗೆ ಶಿಸ್ತು ಮತ್ತು ನಿರಂತರ ಪರಿಶ್ರಮ ಮುಖ್ಯ : ಮನೀಷ್ ಪೂಜಾರಿ
ಕುಂದಾಪುರ, ಮಾ.(10) : ಅತ್ಯಂತ ಕಿರು ಅವಧಿಯಲ್ಲಿ ಕ್ರೀಡೆಯಲ್ಲಿ ಉತ್ಕ್ರಷ್ಟ ಸಾಧನೆ ಮಾಡುವ ಮೂಲಕ ಮಂಗಳೂರು ವಿಶ್ವವಿದ್ಯಾನಿಲಯದ ಗಮನ ಸೆಳೆದ ಸಂಸ್ಥೆ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆಕಾಲೇಜು. ವಿದ್ಯಾರ್ಥಿದೆಸೆಯಲ್ಲಿ ನನ್ನ ಕ್ರೀಡಾಪ್ರತಿಭೆಯನ್ನು ಗುರುತಿಸಿದ ಈ ಸಂಸ್ಥೆಗೆ ನಾನು ಅಭಾರಿಯಾಗಿದ್ದೇನೆ. ಕ್ರೀಡಾಪಟುಗಳು ಕ್ರೀಡಾಕ್ಷೇತ್ರದಲ್ಲಿ ಸಾಧನೆ ಮಾಡಬೇಕಾದರೆ ಶಿಸ್ತು ಮತ್ತು ನಿರಂತರ ಪರಿಶ್ರಮ ಮುಖ್ಯ ಎಂದು ಖಾಸಗಿ ಕಂಪೆನಿ ಉದ್ಯೋಗಿ ಕಾಲೇಜಿನ ಪೂರ್ವ ವಿದ್ಯಾರ್ಥಿ ಮನೀಷ್ ಪೂಜಾರಿ ಹೇಳಿದರು.ಅವರು ನಗರದ […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು : ವಾರ್ಷಿಕ ಕ್ರೀಡಾಕೂಟ ಸಂಪನ್ನ
ಕುಂದಾಪುರ, (ಮಾ. 10) : ನಗರದ ಗಾಂಧಿ ಮೈದಾನದಲ್ಲಿ ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭ ಮಾರ್ಚ್ 10ರಂದು ನಡೆಯಿತು.ಕಾಲೇಜು ಪೂರ್ವ ವಿದ್ಯಾರ್ಥಿ ಉದ್ಯಮಿ ಶ್ರೀಧರ್ ಶೆಟ್ಟಿ ಕೆರಾಡಿ, ಯುವಜನ ಸೇವಾ ವಿಭಾಗದ ಕ್ರೀಡಾಧಿಕಾರಿ ಶ್ರೀ ಕುಸುಮಾಕರ ಶೆಟ್ಟಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಕಾಲೇಜು ಆಡಳಿತ ಮಂಡಳಿಯ ಕಾರ್ಯದರ್ಶಿಯಾದ ಶ್ರೀ ಸೀತಾರಾಮ ನಕೃತ್ತಾಯ ಅಧ್ಯಕ್ಷತೆ ವಹಿಸಿದ್ದರು. ಕಾಲೇಜನ ಪ್ರಾಂಶುಪಾಲರಾದ ಪ್ರೊ| […]
ಶ್ರೀಧವಲಾ ಕಾಲೇಜು : ಕಲಾ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
ಶ್ರೀಧವಲಾ ಕಾಲೇಜಿನ ಕಲಾ ಸಂಘದ 2020-21ನೇ ಸಾಲಿನ ಚಟುವಟಿಗಳ ಉದ್ಘಾಟನೆಯು ಮಾರ್ಚ್ 6 ರಂದು ಜರುಗಿತು. ಶ್ರೀ ಭುವನೇಂದ್ರ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಅರುಣ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಕಲಾ ವಿದ್ಯಾರ್ಥಿಗಳ ಮುಂದಿನ ಹೆಜ್ಜೆ ಮತ್ತು ಹಾದಿ ಈ ವಿಷಯದ ಕುರಿತು ಮಾತನಾಡಿದರು.
ಆಫ್ರಿಕಾ ಖಂಡದ ಕಾಂಗೂ ದಲ್ಲಿ ಚಿನ್ನದ ನಿಕ್ಷೇಪದ ಗಣಿ ಪತ್ತೆಯಾಗಿದ್ದು ಚಿನ್ನವನ್ನು ಬಾಚಿಕೊಳ್ಳಲು ಮುಂದಾಗಿರುವ ಜನತೆಯ ವಿಡಿಯೋ ವೈರಲ್ ವೈರಲ್
ಮೇಲ್ನೋಟಕ್ಕೆ ಕೆಂಪು ಮಣ್ಣಿನ ಬೆಟ್ಟದಂತೆ ಕಾಣುವ ಮಣ್ಣಿನಲ್ಲಿ ಅಪಾರ ಪ್ರಾಮಾಣದ ಚಿನ್ನದ ಅಂಶ ಇದೆಯಂತೆ. ಈ ವಿಷಯ ತಿಳಿಯುತ್ತಿದ್ದಂತೆ ಜನಸಾಗರವೇ ಸೇರಿದೆ. ಹಾರೆ, ಪಿಕಾಸೆಯಿಂದ ಅಲ್ಲಿದ್ದ ಮಣ್ಣನ್ನು ಅಗೆದು ಚೀಲದಲ್ಲಿ ತುಂಬಿಕೊಂಡು ಮನೆಗೆ ತೆಗೆದುಕೊಂಡು ಹೋಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಶ್ರೀ ಶಾರದಾ ಕಾಲೇಜು ಬಸ್ರೂರು : ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ
ಕುಂದಾಪುರ (ಮಾ. 10) ಶ್ರೀ ಶಾರದಾ ಕಾಲೇಜಿನ ಮಹಿಳಾ ವೇದಿಕೆ ಮತ್ತು ರೋವರ್ ಹಾಗೂ ರೇಂಜರ್ ಘಟಕದ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾರಣೆ ಜರುಗಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ಅಂತರಾಷ್ಟ್ರೀಯ ಮಹಿಳಾ ದಿನ ಒಂದು ವಿಶೇಷ ದಿನವಾಗಿದ್ದು, ಮಹಿಳೆ ಒಂದು ಕುಟುಂಬದ ಆಧಾರ ಸ್ತಂಭವಾಗಿ ಆರ್ಥಿಕ, ಸಾಂಸ್ಕೃತಿಕ, ರಾಜಕೀಯ, ವಿಜ್ಞಾನ, ಕ್ರೀಡಾ ಕ್ಷೇತ್ರಗಳಲ್ಲಿ ಮಾಡಿದ ಸಾಧನೆಯನ್ನು ನೆನೆಯುವ ದಿನವಾಗಿದೆ. ಮಹಿಳೆಯರ ಸಾಧನೆಗೆ ಪ್ರೋತ್ಸಾಹ […]
ಡಾ| ಬಿ.ಬಿ ಹೆಗ್ಡೆ ಕಾಲೇಜು : ಲಯನ್ಸ್ ಕ್ಲಬ್ ಕುಂದಾಪುರ ವತಿಯಿಂದ ವಾಟರ್ ಕೂಲರ್ ಹಸ್ತಾಂತರ
ಒಂದು ಜಿಲ್ಲೆ ಒಂದು ಯೋಜನೆಯಡಿ ಲಯನ್ಸ್ ಕ್ಲಬ್ ಕುಂದಾಪುರದ ಅಧ್ಯಕ್ಷರಾಗಿರುವ ಲಯನ್ ಕೆ. ಚಂದ್ರಶೇಖರ್ ರವರು ಡಾ. ಬಿ. ಬಿ. ಹೆಗ್ಡೆ ಕಾಲೇಜಿಗೆ ಕೊಡುಗೆಯಾಗಿ ನೀಡಿದ ವಾಟರ್ ಕೂಲರ್ ನ್ನು ಲಯನ್ಸ್ ಕ್ಲಬ್ ಇದರ ಜಿಲ್ಲಾ ಗವರ್ನರ್ Ln. ಎನ್.ಎಮ್ ಹೆಗ್ಡೆ ಹಾಗೂ ಮಾಜಿ ಜಿಲ್ಲಾ ಗವರ್ನರ್ ಪ್ರಕಾಶ್.ಟಿ.ಸೋನ್ಸ್ ಉದ್ಘಾಟಿಸಿದರು.
ಮಾರ್ಚ್ 11 ರಿಂದ 13 ರ ವರೆಗೆ ಪಡುಗುಡ್ಡೆ ಶ್ರೀ ಸರ್ವೇಶ್ವರ ದೇವಸ್ಥಾನದ 25 ನೇ ವರ್ಧಂತ್ಯುತ್ಸವ
ಉಡುಪಿ (ಮಾ. 10) ಉಡುಪಿ ಜಿಲ್ಲೆ, ಮಲ್ಪೆಯ ಬಾಪುತೋಟ ಪಡುಗುಡ್ಡೆ ಶ್ರೀ ಸರ್ವೇಶ್ವರ ದೇವಸ್ಥಾನದ 25 ನೇ ವರ್ಧಂತ್ಯುತ್ಸವ ಇದೇ ಮಾರ್ಚ್ 11 ರಿಂದ 13 ರ ವರೆಗೆ ನಡೆಯಲಿದೆ. ಮಾರ್ಚ್ 11 ರ ಗುರುವಾರ ಬೆಳಿಗ್ಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು ಮಧ್ಯಾಹ್ನ 12 ಗಂಟೆಗೆ ತುಲಾಭಾರ ಸೇವೆ, ಸಂಜೆ ರಂಗ ಪೂಜೆ ಹಾಗೂ ರಾತ್ರಿ ಸ್ಥಳೀಯ ಪುಟಾಣಿಗಳಿಂದ ಮನೋರಂಜನೆ ಕಾರ್ಯಕ್ರಮ ಮತ್ತು ಶ್ರೀ ಶಕ್ತಿ ಮಹಿಳಾ […]
ಬಜೆಟ್ – 2021 ರ ಕುರಿತು ಡಾ| ಶ್ರೀಪತಿ ಕಲ್ಲೂರಾಯರಿಂದ ವಿಶೇಷ ಉಪನ್ಯಾಸ
ಕುಂದಾಪುರ (ಮಾ. 9) : ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಇದರ ಅರ್ಥಶಾಸ್ತ್ರ ವಿಭಾಗದ ಆಶ್ರಯದಲ್ಲಿ “ಬಜೆಟ್ 2021 ಕುರಿತು ಚರ್ಚೆ” ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು. ಯುನಿಯನ್ ಬಜೆಟ್ 2021ರ ಪ್ರಮುಖ ಮುಖ್ಯಾಂಶಗಳಾದ ಆರೋಗ್ಯ ಮತ್ತು ಯೋಗಕ್ಷೇಮ, ಭೌತಿಕ ಮತ್ತು ಆರ್ಥಿಕ ಬಂಡವಾಳ ಮತ್ತು ಮೂಲ ಸೌಕರ್ಯ, ಮಹತ್ವಾಕಾಂಕ್ಷೆಯ ಭಾರತ ಕ್ಕೆ ಅಂತರ್ಗತ ಅಭಿವೃದ್ಧಿ, ಮಾನವ ಬಂಡವಾಳವನ್ನು ಉತ್ತೇಜಿಸುವ ,ನಾವೀನ್ಯತೆ ಮತ್ತು ಸಂಶೋಧನೆ […]










