ಮಧುವನ(ಫೆ.24) ಇ .ಸಿ .ಆರ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ನ 2020-21 ಶೈಕ್ಷಣಿಕ ಸಾಲಿನ ರೆಡ್ಕ್ರಾಸ್ ಘಟಕದ ಕಾರ್ಯ ಚಟುವಟಿಕೆ ಫೆಬ್ರವರಿ 23 ರಂದು ಉದ್ಘಾಟನೆಗೊಂಡಿತು. ಪ್ರಥಮ ಚಿಕಿತ್ಸಾ ಪೆಟ್ಟಿಗೆಗಳನ್ನು ವಿವಿಧ ವಿಭಾಗಗಳಿಗೆ ಹಸ್ತಾಂತರಿಸುವ ಮೂಲಕ ಕಾರ್ಯ ಚಟುವಟಿಕೆ ಗಳನ್ನು ಪ್ರಾರಂಭಿಸಲಾಯಿತು. ಘಟಕದ ಯೋಜನಾಧಿಕಾರಿಗಳಾದ ಕುಮಾರಿ ಶ್ರೀನಿಧಿ ಹೆಗ್ಡೆ ಹಾಗೂ ಶ್ರೀಮತಿ ಕುಸುಮಾವತಿ ಪ್ರಥಮ ಚಿಕಿತ್ಸಾ ಪೆಟ್ಟಿಗೆಗಳನ್ನು ಪುರುಷ ವಸತಿ ನಿಲಯ ಹಾಗೂ ಮಹಿಳಾ ವಸತಿ ನಿಲಯದ ಮೇಲ್ವಿಚಾರಕರಿಗೆ , […]
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಅಂತರ್ಕಾಲೇಜು ಮಹಿಳೆಯರ ತ್ರೋಬಾಲ್ ಪಂದ್ಯಕೂಟ- ಸಮಾರೋಪ ಸಮಾರಂಭ
ಕುಂದಾಪುರ(ಫೆ.25): ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಜಂಟಿ ಆಶ್ರಯದಲ್ಲಿ ಆಯೋಜಿಸಿದ್ದ ಮಂಗಳೂರು ವಿ. ವಿ. ಕುಂದಾಪುರ ವಲಯ ಮಟ್ಟದ ಅಂತರ್ಕಾಲೇಜು ಮಹಿಳಾ ತ್ರೋಬಾಲ್ ಪಂದ್ಯಕೂಟದ ಸಮಾರೋಪ ಸಮಾರಂಭ ಫೆ. 24ರ ಸಂಜೆ 4.30ಕ್ಕೆ ಕಾಲೇಜಿನ ಬಿ.ಎಂ.ಎಸ್. ಕ್ರೀಡಾಂಗಣದಲ್ಲಿ ನಡೆಯಿತು. ತ್ರೋಬಾಲ್ ಪಂದ್ಯಕೂಟದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಇದರ ಕಾರ್ಯದರ್ಶಿಗಳಾದ ಶ್ರೀ ಸೀತಾರಾಮ ನಕ್ಕತ್ತಾಯ ವಹಿಸಿದ್ದರು. ಮುಖ್ಯ […]
ರಾಷ್ಟ್ರೀಯ ಮೀನುಗಾರರ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ಯೋಗಿಶ್ ಶಿರೂರು ಆಯ್ಕೆ
ರಾಷ್ಟ್ರೀಯ ಮೀನುಗಾರರ ಸಂಘ ನವದೆಹಲಿ ಇದರ ರಾಜ್ಯ ಉಪಾಧ್ಯಕ್ಷರಾಗಿ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವ ನಾಯಕ ಯೋಗಿಶ್ ಶಿರೂರು ಆಯ್ಕೆಯಾಗಿದ್ದಾರೆ.
ಆಜ್ರಿ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಸುದೀಪ್ ಶೆಟ್ಟಿ ಆಯ್ಕೆ
ಕುಂದಾಪುರ(ಫೆ- 24) :ಸಿದ್ದಾಪುರ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಆಜ್ರಿ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಸುದೀಪ್ ಶೆಟ್ಟಿ ಆಜ್ರಿ ಆಯ್ಕೆಯಾಗಿದ್ದಾರೆ. ಬಿ.ಜೆ.ಪಿ ಬೈಂದೂರು ಮಂಡಲದ ಅಧ್ಯಕ್ಷರಾಗಿರುವ ದೀಪಕ್ ಶೆಟ್ಟಿಯವರ ಸಲಹೆ ಮೆರೆಗೆ ಸಿದ್ದಾಪುರ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿರುವ ಪ್ರವೀಣ್ ಶೆಟ್ಟಿ ಕೊಡ್ಲಾಡಿಯವರು ಆಜ್ರಿ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಸುದೀಪ್ ಶೆಟ್ಟಿ ಆಜ್ರಿಯವರನ್ನು ಆಯ್ಕೆ ಮಾಡಿದ್ದಾರೆ.
ಇ ಸಿ ಆರ್ ಕಾಲೇಜು: ಎನ್.ಎಸ್.ಎಸ್ ಘಟಕ ಉದ್ಘಾಟನೆ
ಮಧುವನ (ಫೆ-24): ಇ ಸಿ ಆರ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ನ 2020-21ರ ಸಾಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಉದ್ಘಾಟನಾ ಸಮಾರಂಭ ದಿನಾಂಕ 19-02-2021ರಂದು ನಡೆಯಿತು.ಲಕ್ಷ್ಮಿಸೋಮಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಪಡುಕೆರೆ ಕೋಟ ಇದರ ಪ್ರಾಂಶುಪಾಲರಾದ ಪ್ರೋ.ನಿತ್ಯಾನಂದ ಗಾಂವರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಸೇವಾ ಯೋಜನೆಯ ಮಹತ್ವವನ್ನು ವಿವರಿಸುವುದರ ಜೊತೆಗೆ ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ಯುವ ಪೀಳಿಗೆಯ ಕರ್ತವ್ಯದ ಬಗ್ಗೆ ಅವರು ತಿಳಿಸಿದರು. ಮುಖ್ಯ ಅತಿಥಿಯಾಗಿ […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ – ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಅಂತರ್ಕಾಲೇಜು ಮಹಿಳೆಯರ ತ್ರೋಬಾಲ್ ಪಂದ್ಯಾಟ ಉದ್ಘಾಟನೆ
ಕ್ರೀಡೆಯಿಂದ ಅದೆಷ್ಟೋ ಯುವಜನತೆ ಭವಿಷ್ಯವನ್ನು ರೂಪಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳು ಕ್ರೀಡಾಸ್ಫೂರ್ತಿಯನ್ನು ಮೆರೆಯುವುದರ ಜೊತೆಗೆ ತಮ್ಮ ವ್ಯಕ್ತಿತ್ವ ಮತ್ತು ಬದುಕನ್ನು ಕಟ್ಟಿಕೊಳ್ಳಬೇಕು ಎಂದು ಲೆಕ್ಕಪರಿಶೋಧಕರು ಹಾಗೂ ತರಿಗೆ ಸಲಹೆಗಾರರಾದ ಶ್ರೀ ಗಣೇಶ್ ಶೆಟ್ಟಿ ಮೊಳಹಳ್ಳಿ ಹೇಳಿದರು.
ಕರಾವಳಿಯಲ್ಲಿ ಕವಿರತ್ನ..!! ಇದು ಸವಿ ಸಂಜೆಯ ಕರೆಯೋಲೆ…
ಇವರು ಪೆನ್ನನೊಮ್ನೆ ಹಿಡಿದರೆ ಕಡಲ ಅಲೆಗಳ ನೀನಾದಕ್ಕು ಅಕ್ಷರಗಳಲ್ಲೆ ಹೊಂಬಣ್ಣ ಹೊದಿಸಬಲ್ಲರು, ಆಡುನುಡಿಗಳನ್ನೆ ಬಿಲ್ಲು ಮಾಡಿಕೊಂಡು ಹೂಬಾಣದಂತೆ ಎದೆಗೆ ನೂಗ್ಗ ಬಲ್ಲದು ಇವರ ಬತ್ತಳಕೆಯ ಅಕ್ಷರಾಸ್ತ್ರ…! D ಬಾಸ್ ಇಂಟ್ರೂಡಕ್ಷನ್ನು ,ರಾಕಿ ಬಾಯ್ಗೆ ಸಲಾಮು, ಕಿಚ್ಚನ ಸ್ಟೈಲು, ಅಪ್ಪು ಡ್ಯಾನ್ಸು ಇದೆಲ್ಲವಕ್ಕು ಇವರ ಸಾಲುಗಳೆ ಮಾಸು… ಪ್ರೀತಿ ಕಳೆದುಕೊಂಡವರಿಗೆ, ಪ್ರಣಯದಲ್ಲಿ ಬಿದ್ದೊರಿಗೆ ಇವರ ಹಾಡುಗಳೆ ಕ್ಲಾಸು…ಆಸ್ತಿಕರಿಗು, ನಾಸ್ತಿಕರಿಗೂ ಇವರು ಬರೆದಿರೊ ಹಾಡೇ ಫೆವರೇಟು.. ಕ್ವಾರ್ಟರ್ ಹಾಕೊಂಡು ಜೂಮಲ್ಲಿರುವವರ ಮೊಬೈಲ್ ಗ್ಯಾಲರಿಯಲ್ಲು […]
ಫೆಬ್ರವರಿ, 27 ರಂದು ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್ (ನಿ) ಅಮೃತ ಮಹೋತ್ಸವ
ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್(ನಿ) ಇದರ ಅಮೃತ ಮಹೋತ್ಸವ ಇದೇ ಫೆಬ್ರವರಿ 27 ರ ಶನಿವಾರ ಬೆಳಿಗ್ಗೆ 10 ಗಂಟೆಗೆ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಠಾರದಲ್ಲಿ ನಡೆಯಲಿದೆ.
ಮೂಡ್ಲಕಟ್ಟೆ ಎಂ.ಐ.ಟಿ : ತಾಂತ್ರಿಕ ಕಾರ್ಯಾಗಾರ
ಕುಂದಾಪುರ(ಫೆ.23) : ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ” ಡೆವಲಪ್ಮೆಂಟ್ ಆಫ್ ಸಿಗ್ನಲ್ಸ್ ಆಂಡ್ ಸಿಸ್ಟಮ್ಸ್ ಯುಸಿಂಗ್ ಮ್ಯಾಟ್ ಲ್ಯಾಬ್” ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ನಿಟ್ಟೆ ವಿಶ್ವವಿದ್ಯಾಲಯದ ಇಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕಿ ಡಾ| ಉಷಾ ದೆಸಾಯಿ ರವರು ಆಗಮಿಸಿದ್ದರು. ಡಾ| ಉಷಾ ದೆಸಾಯಿ ರವರು ಕಾರ್ಯಾಗಾರವನ್ನು ಉದ್ಘಾಟಿಸಿ ನಮ್ಮ ದಿನ ನಿತ್ಯದ ಜೀವನದಲ್ಲಿ ಸಿಗ್ನಲ್ಸ್ ಹೇಗೆ ಅವಿಭಾಜ್ಯ ಅಂಗವಾಗಿದೆ […]
ಪವರ್ ಲಿಫ್ಟಿಂಗ್ ದಾಖಲೆಯ ವೀರ ವಿಶ್ವನಾಥ ಗಾಣಿಗರಿಗೆ ಮೂರು ಸ್ವರ್ಣ ಪದಕ
ಕುಂದಾಪುರ (ಫೆ-22): ಅಂತರ್ ರಾಷ್ಟ್ರೀಯ ಹಾಗೂ ರಾಷ್ಟ್ರೀಯ ಪವರ್ ಲಿಫ್ಟಿಂಗ್ ನಲ್ಲಿ ದಾಖಲೆ ನಿರ್ಮಿಸಿರುವ ಕುಂದಾಪುರದ ಬಾಳಿಕೆರೆಯ ವಿಶ್ವನಾಥ್ ಗಾಣಿಗ ರವರು ಮತ್ತೊಮ್ಮೆ ಸಾಧನೆಯನ್ನು ಮಾಡಿದ್ದಾರೆ. ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ಸೀನಿಯರ್ ನ್ಯಾಷನಲ್ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್- 2021 ರಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿ, 93 ಕೆಜಿ ವಿಭಾಗದಲ್ಲಿ ಮೂರು ಚಿನ್ನದ ಪದಕಗಳನ್ನು ಗಳಿಸಿದ್ದಾರೆ.










