ಉಪ್ರಳ್ಳಿ ದೇವಸ್ಥಾನ ಕೂಡುವಿಕೆಗೆ ಸಂಬಂಧಪಟ್ಟ ವಿಶ್ವಕರ್ಮ ಸಮಾಜ ಬಾಂಧವರ ಅರ್ಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉಪ್ರಳ್ಳಿ ಕಾಳಿಕಾಂಬಾ ಎಜುಕೇಶನಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಉಡುಪಿ ಜಿಲ್ಲೆ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ಅಧ್ಯಕ್ಷರಾಗಿ ಶ್ರೀಮತಿ ಫಿಲೋಮಿನಾ ಆಯ್ಕೆ
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಂಘದ ಅಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸುತ್ತಿದ್ದ ರಾಜ್ಯ ಪ್ರಶಸ್ತಿ ಪುರಸ್ಕ್ರತ ಶ್ರೀಮತಿ ಫಿಲೋಮಿನಾ ರವರು ಉಡುಪಿ ಜಿಲ್ಲೆ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ 2014 – 15 ನೇ ಸಾಲಿನಲ್ಲಿ ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆ ಎಂದು ಗುರುತಿಸಿದ ಕರ್ನಾಟಕ ಸರ್ಕಾರ ಇವರಿಗೆ ರಾಜ್ಯ ಪ್ರಶಸ್ತಿಯನ್ನು ನೀಡಿರುತ್ತದೆ. ಅಂಗನವಾಡಿ ಕಾರ್ಯಕರ್ತೆಯಾಗಿ 26 ವರ್ಷಗಳಿಂದ […]
ಮಂಗಳೂರು ವಿ. ವಿ. ಅಂತರ್ ಕಾಲೇಜು ರಸಪ್ರಶ್ನೆ ಸ್ಪರ್ಧೆ : ಡಾ. ಬಿ. ಬಿ. ಹೆಗ್ಡೆ ಕಾಲೇಜು ಪ್ರಥಮ ಸ್ಥಾನ
ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದಕ್ಷಿಣ ಕನ್ನಡ ಜಿಲ್ಲಾ ಶಾಖೆ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಉಡುಪಿ ಜಿಲ್ಲೆ ಶಾಖೆ. ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕೊಡಗು ಜಿಲ್ಲಾ ಶಾಖೆಯ ಸಹಯೋಗದೊಂದಿಗೆ ಯೂಥ್ ರೆಡ್ ಕ್ರಾಸ್ ಮಂಗಳೂರು ವಿಶ್ವವಿದ್ಯಾನಿಲಯವು ಸ್ವಾಮಿ ವಿವೇಕಾನಂದರ 158 ನೇ ಜನ್ಮ ದಿನದ ಪ್ರಯುಕ್ತ ಜನವರಿ 12 ರಂದು ರವೀಂದ್ರ ಕಲಾಭವನ, ವಿಶ್ವವಿದ್ಯಾನಿಲಯ ಕಾಲೇಜು, ಹಂಪನ ಕಟ್ಟೆ, ಮಂಗಳೂರು ಇಲ್ಲಿ ನಡೆಸಿದ “ನ್ಯಾಷನಲ್ ಯೂಥ್ ಡೇ” […]
ಮಂಗಳೂರು ವಿಶ್ವವಿದ್ಯಾನಿಲಯ : ಫೆಬ್ರವರಿ 12 ಮತ್ತು 13 ರಂದು ವಿಶೇಷ ಕಾರ್ಯಗಾರ
ಮಂಗಳೂರು ವಿಶ್ವವಿದ್ಯಾನಿಲಯದ ಇನ್ ಕ್ಯೂಬೇಶನ್ ಸೆಂಟರ್ ಇವರ ಆಶ್ರಯದಲ್ಲಿ “ಫೆಬ್ರವರಿ 12 ಮತ್ತು 13 ರಂದು “Recent Trends in Artificial intelligence & Machine Learning using Python” ಎನ್ನುವ ವಿಷಯದ ಕುರಿತು ಎರಡು ದಿನಗಳ ವಿಶೇಷ ಕಾರ್ಯಗಾರ.
ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುವತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 2020-21 ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಫೆಬ್ರವರಿ 10 ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಫೆಬ್ರವರಿ 12 ರ ಒಳಗೆ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಕಾಲೇಜಿನ ಪ್ರಾಂಶುಪಾಲರ ದೃಢೀಕರಣದೊಂದಿಗೆ ಸಂಬಂಧಪಟ್ಟ ತಾಲೂಕು ಹಿಂದುಳಿದ ವರ್ಗಗಳ ಕಚೇರಿಗೆ ಸಲ್ಲಿಸಲು ಇಲಾಖೆಯಿಂದ ತಿಳಿಸಲಾಗಿದೆ.
ಇ. ಸಿ. ಆರ್ ಗ್ರೂಪ್ ಆಫ್ ಇನ್ಸ್ಟಿಟ್ಯೂಶನ್ಸ್ : 72 ನೇ ಗಣರಾಜ್ಯೋತ್ಸವ
ಇ. ಸಿ. ಆರ್ ಗ್ರೂಪ್ ಆಫ್ ಇನ್ಸ್ಟಿಟ್ಯೂಶನ್ಸ್ ವತಿಯಿಂದ ಜನವರಿ 26 ರಂದು ಕಾಲೇಜಿನ ಆವರಣದಲ್ಲಿ 72 ನೇ ಗಣತಂತ್ರ ದಿನವನ್ನು ಆಚರಿಸಲಾಯಿತು.
ಇ. ಸಿ. ಆರ್ ಗ್ರೂಪ್ ಆಫ್ ಇನ್ಸ್ಟಿಟ್ಯೂಶನ್ಸ್ : ಆನ್ಲೈನ್ ಭಾಷಣ ಸ್ಪರ್ಧೆ
ಮಧುವನ: ಇ. ಸಿ. ಆರ್ ಗ್ರೂಪ್ ಆಫ್ ಇನ್ಸ್ಟಿಟ್ಯೂಶನ್ಸ್ ವತಿಯಿಂದ 72ನೇ ಗಣರಾಜ್ಯೋತ್ಸವದ ಪ್ರಯುಕ್ತ, “ನನ್ನ ಮೆಚ್ಚಿನ ರಾಷ್ಟ್ರೀಯ ಸ್ವಾತಂತ್ರ ಹೋರಾಟಗಾರ” ಎಂಬ ವಿಷಯದ ಬಗ್ಗೆ ಅಂತರ್ ಕಾಲೇಜು ಮಟ್ಟದ ಆನ್ಲೈನ್ ಭಾಷಣ ಸ್ಪರ್ಧೆಯನ್ನು ದಿನಾಂಕ ೨೨-೦೧-೨೦೨೧ ರಂದು ಆಯೋಜಿಸಲಾಗಿತ್ತು. ಗಣತಂತ್ರ ದಿನದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶ್ರೀ ಮಲ್ಯಾಡಿ ಶಿವರಾಮ ಶೆಟ್ಟಿ ಅಧ್ಯಕ್ಷರು ಭೂ ಅಭಿವೃದ್ಧಿ ಬ್ಯಾಂಕ್ ಕುಂದಾಪುರ, ಮಾಜಿ ಅಧ್ಯಕ್ಷರು ಬ್ಲಾಕ್ ಕಾಂಗ್ರೆಸ್ ಕುಂದಾಪುರ ಹಾಗೂ […]
ಫೆಬ್ರವರಿ 2 ರಿಂದ 5 ಗಂಗೊಳ್ಳಿ ಮಾರಿಜಾತ್ರೆ
ಕನ್ನಡ ಕರಾವಳಿಯ ಕುಂದಾಪುರ ತಾಲೂಕಿನ ಪ್ರಸಿದ್ಧ ಕ್ಷೇತ್ರವಾದ ಶ್ರೀ ಮಹಾಂಕಾಳಿ ಅಮ್ಮನವರ ದೇವಸ್ಥಾನ ಖಾರ್ವಿಕೇರಿ ಗಂಗೊಳ್ಳಿ ಇದರ ವಾರ್ಷಿಕ ಮಾರಿಜಾತ್ರೆ ಇದೇ ಫೆಬ್ರವರಿ 2 ರಿಂದ 5 ನೇ ತಾರಿಕಿನ ತನಕ ನಡೆಯಲಿದ್ದು ಜಾತ್ರೆಯ ಪ್ರಯುಕ್ತ ವಿಶೇಷ ವಾರ್ಷಿಕ ರಂಗಪೂಜೆ, ಗೆಂಡಸೇವೆ ಧಕ್ಕೆಬಲಿ, ಪಲ್ಲಕ್ಕಿ ಉತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿರುತ್ತದೆ
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ರಕ್ಷಕ-ಶಿಕ್ಷಕ ಸಭೆ
ಕುಂದಾಪುರ, ಜನವರಿ 28 : ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಎಷ್ಟು ಮುಖ್ಯವೋಅದಕ್ಕಿಂತ ಹೆಚ್ಚಿನ ಜವಾಬ್ದಾರಿ ಹೆತ್ತವರ ಮೇಲಿದೆ ಎಂದು ಡಾ.ಅತುಲ್ ಕುಮಾರ್ ಶೆಟ್ಟಿ ಹೇಳಿದರು.ಅವರು ಡಾ.ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಜನವರಿ 28ರಂದು ನಡೆದ ರಕ್ಷಕ-ಶಿಕ್ಷಕ ಸಂಘದ ಸಭೆಯಲ್ಲಿ ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ. ಉಮೇಶ್ ಶೆಟ್ಟಿ ಮಾತನಾಡಿ, ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿರುವ […]
ಶ್ರೀ ಶಾರದ ಕಾಲೇಜು ಬಸ್ರೂರು: ಹೊಸ ಸರ್ಟಿಫಿಕೇಟ್ ಕೋರ್ಸುಗಳ ಉದ್ಘಾಟನೆ
ಕುಂದಾಪುರ: ಶ್ರೀ ಶಾರದ ಕಾಲೇಜು ಬಸ್ರೂರು ಇದರ ಐಕ್ಯೂಎಸಿ ,ಇತಿಹಾಸ ವಿಭಾಗ ಹಾಗೂ ಕನ್ನಡ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಪ್ರಾರಂಭಗೊಳ್ಳಲಿರುವ ಪುರಾತತ್ವ ದಾಖಲೀಕರಣ ಮತ್ತು ಅಧ್ಯಯನ ಕೇಂದ್ರ ಹಾಗೂ ಕನ್ನಡ ಪ್ರಾತಿನಿಧಿಕ ಸರ್ಟಿಫಿಕೇಟ್ ಕೋರ್ಸುಗಳನ್ನು ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ. ಬಿ. ಜಗದೀಶ ಶೆಟ್ಟಿ ಉದ್ಘಾಟಿಸಿದರು. ಅವರು ಜನವರಿ 27ರಂದು ಕಾಲೇಜಿನಲ್ಲಿ ಆಯೋಜಿಸಿದ್ದ ಸರ್ಟಿಫಿಕೇಟ್ ಕೋರ್ಸುಗಳನ್ನು ಉದ್ಘಾಟಿಸಿ ಬಸ್ರೂರಿನ ಮಹತ್ವದ ಬಗ್ಗೆ ತಿಳಿಸಿದರು.ಬಸ್ರೂರು ಐತಿಹಾಸಿಕವಾಗಿ ಮಹತ್ವ ಪಡೆದುಕೊಂಡ […]










