ಕುಂಭಾಶಿ: ಜನವರಿ 16 ರಂದು ಮನ್ಮಹಾರಥೋತ್ಸವ – ಪುರಾಣ ಪ್ರಸಿದ್ಧ ಕುಂಭಾಶಿಯ ಶ್ರೀ ಮಹಾಲಿಂಗೇಶ್ವರ (ಹರಿಹರ) ದೇವಸ್ಥಾನದ ಮನ್ಮಹಾರಥೋತ್ಸವವು ಇದೇ ಜನವರಿ 16 ರ ಬೆಳಿಗ್ಗೆ 11:30 ಕ್ಕೆ ನಡೆಯಲಿದ್ದು ತದನಂತರ ಮಧ್ಯಾಹ್ನ ಅನ್ನ ಸಂತರ್ಪಣೆ ಹಾಗೂ ಸಂಜೆ 5 ಗಂಟೆಗೆ ಧಾರ್ಮಿಕ ಪ್ರವಚನದ ಜೊತೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ .
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಸರಸ್ವತಿ ವಿದ್ಯಾಲಯದಲ್ಲಿ ವಿವೇಕಾನಂದ ಜಯಂತಿ ಮತ್ತು ಜಿ.ಎಸ್.ವಿ.ಎಸ್ ಅಸೋಸಿಯೇಷನ್ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ
ಗಂಗೊಳ್ಳಿ : ಗಂಗೊಳ್ಳಿಯ ಜಿ.ಎಸ್.ವಿ.ಎಸ್ ಅಸೋಷಿಯೇಷನ್ , ಸರಸ್ವತಿ ವಿದ್ಯಾಲಯ ಸಮೂಹ ಸಂಸ್ಥೆಗಳು ಮತ್ತು ಬಾಲಚಂದ್ರ ನಾಯ್ಕನಕಟ್ಟೆ ಟ್ರಸ್ಟ್ ಬೆಂಗಳೂರಿನ ಉದಯ್ ಉಳ್ಳಾಲ್ ಪ್ರಾಯೋಜಕತ್ವದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಮತ್ತು ಜಿ.ಎಸ್.ವಿ.ಎಸ್ ಅಸೋಷಿಯೇಷನ್ ವತಿಯಿಂದ ಕೊಡಲ್ಪಡುವ ವಿದ್ಯಾರ್ಥಿ ವೇತನಾ ವಿತರಣಾ ಕಾರ್ಯಕ್ರಮವು ಕಳೆದ ಬುಧವಾರ ಇಲ್ಲಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಒಳ ಸಭಾಂಗಣದಲ್ಲಿ ನಡೆಯಿತು.
ಕುಂದವಾಹಿನಿ ಅಂತರ್ಜಾಲ ಸುದ್ದಿ ತಾಣ ಉದ್ಘಾಟನೆ
ಕುಂದವಾಹಿನಿ ಅಂತರ್ಜಾಲ ಸುದ್ದಿ ತಾಣ ಉದ್ಘಾಟನೆ ಸುದ್ದಿ ಮಾಧ್ಯಮಗಳು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಮಾಹಿತಿ ತಂತ್ರಜ್ಞಾನದ ಪ್ರಸ್ತುತ ಯುಗದಲ್ಲಿ ಸುದ್ದಿಗಳು ಸಮಾಜದ ಎಲ್ಲಾ ವರ್ಗದ ಜನರಿಗೆ ತಲುಪಿಸುವ ಕೆಲಸ ಸುದ್ದಿ ತಾಣದಿಂದಾಗಬೇಕಿದೆ. ಆ ನಿಟ್ಟಿನಲ್ಲಿ ಕುಂದವಾಹಿನಿ ಉತ್ಕೃಷ್ಟ ಗುಣಮಟ್ಟದ ಅಂತರ್ಜಾಲ ಸುದ್ದಿತಾಣವಾಗಿ ಮೂಡಿಬರಲಿ ಎಂದು ಬೈಂದೂರಿನ ಶಾಸಕ ಶ್ರೀ ಬಿ.ಎಂ ಸುಕುಮಾರ ಶೆಟ್ಟಿ ಯವರು ಹೇಳಿದರು. ಅವರು ಕುಂದವಾಹಿನಿ ಅಂತರ್ಜಾಲ ಸುದ್ದಿ ತಾಣವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ […]










