ಬೈಂದೂರು(ಜ. 07): ಬೈಂದೂರಿನಲ್ಲಿ ಇತ್ತೀಚೆಗೆ ನಡೆದ ಅಂತಾರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್ -2025 ನಲ್ಲಿ ಅರ್ನೋನ್ ಡಿ ಅಲ್ಮೆಡ್ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟ ವಿಭಾಗದಲ್ಲಿ ಬೆಳ್ಳಿಯ ಪದಕ ಪಡೆದಿರುತ್ತಾರೆ. ಈತ ಎಚ್ ಎಮ್ ಎಮ್ ಶಾಲೆಯ 5 ನೇ ತರಗತಿಯ ವಿದ್ಯಾರ್ಥಿಯಾಗಿದ್ದು ,ಕುಂದಾಪುರದ ಕೆ.ಡಿ.ಎಫ್. ಕರಾಟೆ ಶಾಲೆಯ ಕಿಯೋಷಿ ಕಿರಣ್ ಕುಂದಾಪುರ, ಶಿಹಾನ್ ಸಂದೀಪ್ ವಿ.ಕೆ., ಶಿಹಾನ್ ಕೀರ್ತಿ ಜಿ.ಕೆ., ಸೇನ್ ಸಾಯಿ […]
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ಕ್ರಿಯೇಟಿವ್ ನುಡಿಹಬ್ಬ ಮತ್ತು ವಾರ್ಷಿಕೋತ್ಸವ- ಕ್ರಿಯೇಟಿವ್ ಆವಿರ್ಭವ
ಕಾರ್ಕಳ ( ಜ .6): ಇಲ್ಲಿನ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಕ್ರಿಯೇಟಿವ್ ನುಡಿಹಬ್ಬ ಮತ್ತು ವಾರ್ಷಿಕೋತ್ಸವ ಸಮಾರಂಭ ಕ್ರಿಯೇಟಿವ್ ಆವಿರ್ಭವವು ” ವಿವಿಧತೆಯಲ್ಲಿ ಏಕತೆ ” ಎಂಬ ಪರಿಕಲ್ಪನೆಯೊಂದಿಗೆ ಜನವರಿ 04 ರಂದು ವೈಭವಪೂರ್ಣವಾಗಿ ನಡೆಯಿತು. ಪ್ರೇಮಕವಿ ಎಂದೇ ಕರೆಯಲ್ಪಡುವ ಖ್ಯಾತ ಸಾಹಿತಿಗಳಾದ ಬಿ ಆರ್ ಲಕ್ಷ್ಮಣರಾವ್ ಹಾಗೂ ನಡೆದಾಡುವ ಗ್ರಂಥಾಲಯ ಎಂದೇ ಪ್ರಸಿದ್ಧರಾದ ಡಾ. ನಾ ಸೋಮೇಶ್ವರ ರವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು. ವಿದ್ಯಾರ್ಥಿಗಳ ಸಮ್ಮುಖದಲ್ಲಿ ಎರಡು ಹಂತಗಳಲ್ಲಿ […]
ಜ.14 ಮತ್ತು 15 ರಂದು ಶ್ರೀ ಹಾಡಿಗರಡಿ ದೈವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ
ಕುಂದಾಪುರ (ಜ. 03): ತಾಲೂಕಿನ ನಾಡದ ಶ್ರೀ ಹಾಡಿಗರಡಿ ದೈವಸ್ಥಾನದ ವಾರ್ಷಿಕ ವಾರ್ಷಿಕ ಜಾತ್ರಾ ಮಹೋತ್ಸವವು 2025 ರ ಜನವರಿ 14 ಮತ್ತು 15ರಂದು ನಡೆಯಲಿದೆ. ಜ.14 ಮಂಗಳವಾರ ಬೆಳಿಗ್ಗೆ 12ಕ್ಕೆ ಮಂಗಳಾರತಿ, ಮಹಾಪೂಜೆ, ಮಧ್ಯಾಹ್ನ 12.30ಕ್ಕೆ ಅನ್ನಸಂತರ್ಪಣೆ, ಸಂಜೆ 4 ಗಂಟೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ , 7.30ಕ್ಕೆ ದೈವದರ್ಶನ, ಗೆಂಡಸೇವೆ, 8 ಗಂಟೆಗೆ ಪ್ರಸಾದ ವಿತರಣೆ, ಮಹಾಅನ್ನಸಂತರ್ಪಣೆ, 9.30ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ, ಪ್ರತಿಭಾವಂತ […]
ಎಚ್. ಎಮ್. ಎಮ್. ವಿ.ಕೆ.ಆರ್ ನ ಕಂಚಿನ ಹುಡುಗ- ಅಥರ್ವಖಾರ್ವಿ
ಕುಂದಾಪುರ (ದಿ.30): ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ವಿಭಾಗದ 6ನೇ ತರಗತಿಯ ವಿಧ್ಯಾರ್ಥಿ ಅಥರ್ವ ಖಾರ್ವಿ ನವದೆಹಲಿಯಲ್ಲಿ ಜರುಗಿದ ಆಲ್ ಇಂಡಿಯಾ ಸಬ್ ಜೂನಿಯರ್ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸಿ, ಕಂಚಿನ ಪದಕವನ್ನು ಗಳಿಸಿರುತ್ತಾನೆ. ಕಂಚಿನ ಪದಕ ವಿಜೇತ ಕರಾಟೆ ಪಟುವನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು ಅಭಿನಂದಿಸಿದರು.
ಬಿ. ಬಿ. ಹೆಗ್ಡೆ ಕಾಲೇಜಿನ ಸಾಂಸ್ಕೃತಿಕ ತಂಡದ ವಿದ್ಯಾರ್ಥಿಗಳ ಸಾಧನೆ
ಕುಂದಾಪುರ (ಡಿ.30): ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ದಾವಣಗೆರೆಯಲ್ಲಿ ನಡೆಯುವ ರಾಜ್ಯಮಟ್ಟದ ಯುವಜನೋತ್ಸವದಲ್ಲಿ ಜನಪದ ಗೀತೆ (ಗುಂಪು ವಿಭಾಗ) ಸ್ಪರ್ಧೆಗೆ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಲಿರುವ ಕಾಲೇಜಿನ ವಿದ್ಯಾರ್ಥಿಗಳಿಗೆ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಬಿ. ಎಮ್. ಸುಕುಮಾರ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಸಾಂಸ್ಕೃತಿಕ ತಂಡದ ಸಂಯೋಜಕರಾದ ಶ್ರೀಮತಿ ದೀಪಿಕಾ ಜಿ., ಬೋಧಕ-ಬೋಧಕೇತರ ವರ್ಗದವರು, ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
ಗಂಗೊಳ್ಳಿ : ಸರಸ್ವತಿ ವಿದ್ಯಾಲಯದಲ್ಲಿ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ
ಗಂಗೊಳ್ಳಿ(ಡಿ.31): ಮಾನವೀಯತೆಗಿಂತ ಮಿಗಿಲಾದ ಧರ್ಮ ಯಾವುದೂ ಇಲ್ಲ. ನಾವು ಬೆಳೆದು ಉಳಿದವರನ್ನು ಕೂಡ ಬೆಳೆಸುತ್ತಾ ಸಾಗುವಲ್ಲಿ ಜೀವನದ ನಿಜವಾದ ಸಾರ್ಥಕತೆ ಅಡಗಿದೆ ಎಂದು ಉದ್ಯಮಿ ಮೌಲಾನ ಇಬ್ರಾಹಿಂ ಹೇಳಿದರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಜಿ.ಎಸ್.ವಿ.ಎಸ್ ಅಸೋಸಿಯೇಷನ್ ವತಿಯಿಂದ ನಡೆದ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿ ಸ್ಥಾನದಿಂದ ಮಾತನಾಡಿದರು. ಬದುಕಿನಲ್ಲಿ ಏರಿಳಿತಗಳು ಸಾಮಾನ್ಯ.. ಆದರೆ ಯಾವುದೇ ಪರಿಸ್ಥಿತಿಯಲ್ಲಿಯೂ ಧೃತಿ ಗೆಡದೆ ನಮ್ಮ […]
ಬಿ. ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿನಿ ಶೃದ್ಧಾ ಆರ್ .ಸಾಧನೆ
ಕುಂದಾಪುರ ಡಿ.30: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ದಾವಣಗೆರೆಯಲ್ಲಿ ನಡೆಯುವ ರಾಜ್ಯಮಟ್ಟದ ಯುವಜನೋತ್ಸವದಲ್ಲಿ ‘ಘೋಷಣೆ’ ಸ್ಪರ್ಧೆಗೆ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಲಿರುವ ಕಾಲೇಜಿನ ವಿದ್ಯಾರ್ಥಿನಿ ಶೃದ್ಧಾ ಆರ್., ಅಂತಿಮ ಬಿಬಿಎ ಇವರಿಗೆ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಬಿ. ಎಮ್. ಸುಕುಮಾರ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಸಾಂಸ್ಕೃತಿಕ ತಂಡದ ಸಂಯೋಜಕರಾದ ಶ್ರೀಮತಿ ದೀಪಿಕಾ ಜಿ., ಬೋಧಕ-ಬೋಧಕೇತರ ವರ್ಗದವರು, ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
ಚೆಸ್ನಲ್ಲಿ ಎಚ್. ಎಮ್. ಎಮ್ ನ ಶ್ರೀನಿತ್ಗೆ ದ್ವಿತೀಯ ಸ್ಥಾನ
ಕುಂದಾಪುರ (ಡಿ.31): ಶ್ರೀ ಸಿದ್ಧಿವಿನಾಯಕ ಚೆಸ್ ಅಕಾಡೆಮಿ(ರಿ.) ಉಪ್ಪುಂದ ಇದರ ವತಿಯಿಂದ ಬ್ರಹ್ಮಾವರದಲ್ಲಿ ಡಿ.22 ರಂದು ನಡೆದ ಶ್ರೀ ಸಿದ್ಧಿವಿನಾಯಕ ಟ್ರೋಫಿ 2024 ರ ಚೆಸ್ ಪಂದ್ಯಾಟದಲ್ಲಿ ಕುಂದಾಪುರದ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಶಾಲೆಗಳ ಪ್ರಾಥಮಿಕ ವಿಭಾಗದ ಎರಡನೇ ತರಗತಿ ವಿದ್ಯಾರ್ಥಿ ಶ್ರೀನಿತ್ ಶೇಟ್ 7ರ ವಯೋಮಾನದ ವಿಭಾಗದಲ್ಲಿ ಸ್ಪರ್ಧಿಸಿ 6 ರೌಂಡ್ಸ್ ಗಳಲ್ಲಿ 5 ಪಾಯಿಂಟ್ಸ್ ಗಳನ್ನು ಗಳಿಸಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾನೆ. ಈ ವಿಜೇತ ವಿದ್ಯಾರ್ಥಿಯನ್ನು ಸಂಸ್ಥೆಯ […]
ಕಲ್ ತೋಡ್ಮಿ ಮನೆ ಕುಟುಂಬದವರ ಮೂಲ ನಾಗಬನದ ಚತುಃಪವಿತ್ರ ನಾಗಮಂಡಲೋತ್ಸವ ಸಂಪನ್ನ
ಕುಂದಾಪುರ(ಡಿ.31): ತಾಲೂಕು ಅಂಪಾರು ಗ್ರಾಮದ ಬಲಾಡಿ ಕಲ್ ತೋಡ್ಮಿ ಮನೆಯ ಕುಟುಂಬದವರ ಮೂಲ ನಾಗಬನದಲ್ಲಿ ಚತುಃಪವಿತ್ರ ನಾಗಮಂಡಲೋತ್ಸವ ಡಿಸೆಂಬರ್ 26 ರಂದು ವಿಜೃಂಭಣೆಯಿಂದ ನಡೆಯಿತು. ಶ್ರೀ ದೇವರಿಗೆ ಬೆಳಿಗ್ಗೆ ಗುರು ಗಣಪತಿ ಪೂಜೆ, ಸ್ವಸ್ತಿ ಪುಣ್ಯಾಹ ವಾಚನ, ನಾಂದಿ, ಸಮಾರಾಧನೆ, ಕೃಚ್ಚಾಚರಣೆ, ಮಹಾಸಂಕಲ್ಪ, ಮಹಾಗಣಪತಿ ಹೋಮ, ನವಗ್ರಹ ಹೋಮ, ಪ್ರಾಯಶ್ಚಿತ್ತ ಅಯುತ ಸಂಖ್ಯಾತಿಲಹೋಮ, ಕೂಷ್ಮಾಂಡ ಹೋಮ, ಪವಮಾನ ಹೋಮ, ತತ್ವ ಕಲಶ ಸ್ಥಾಪನೆ, ತತ್ವಹೋಮ, ಸರ್ಪಸೂಕ್ತ ಹೋಮ, ಸುಬ್ರಹ್ಮಣ್ಯ ಹೋಮ, […]
ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರ ದಿನಾಚರಣೆ – ವಿದ್ಯಾರ್ಥಿವೇತನ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ
ಕಾರ್ಕಳ(ಡಿ .28): ಜ್ಞಾನಸುಧಾ ಕಾರ್ಕಳದ ಆಸ್ತಿಯಾಗಿದ್ದು, ಸಂಸ್ಕಾರ, ಸದ್ವಿಚಾರದ ಅಡಿಪಾಯವನ್ನು ಶಿಕ್ಷಣದ ಜೊತೆಗೆ ನೀಡುತ್ತಿರುವ ಇಲ್ಲಿನ ಕಾರ್ಯ ಶ್ಲಾಘನೀಯ. ಡಾ.ಸುಧಾಕರ್ ಶೆಟ್ಟಿಯವರ ತಂಡದ ಸಂಘಟಿತ ಪ್ರಯತ್ನ ಪ್ರಶಂಸನೀಯ. ವಿದ್ಯಾರ್ಥಿಗಳು ನವಭಾರತವನ್ನು ನಿರ್ಮಿಸುವುದಕ್ಕಾಗಿ ಸಂಕಲ್ಪತೊಡಬೇಕು ಎಂದು ಕ್ಷೇತ್ರದ ಶಾಸಕರಾದ ಶ್ರೀ.ವಿ.ಸುನಿಲ್ ಕುಮಾರ್ ನುಡಿದರು. ಅವರು ಗಣಿತನಗರದ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಕ್ರೀಡಾಂಗಣದಲ್ಲಿ ಡಿಸೆಂಬರ್ 22, 2024ರಂದು ನಡೆದ ಜ್ಞಾನಸುಧ ಸಂಸ್ಥಾಪಕರ ಹಾಗೂ ರಾಷ್ಟ್ರೀಯ ಗಣಿತ ದಿನಾಚರಣೆ ಮತ್ತು ಸಾಧಕ ವಿದ್ಯಾರ್ಥಿಳಿಗೆ ಗೌರವ […]










