ಕುಂದಾಪುರ (ಡಿ. 4): ಟೀಚರ್ ಟ್ರೈನಿಂಗ್ ಅಕಾಡೆಮಿ, ಕುಂದಾಪುರ ಇಲ್ಲಿನ ಶಿಕ್ಷಕ ವಿದ್ಯಾರ್ಥಿಗಳಿಗೆ “ಸೈನ್ಸ್ ಟೀಚಿಂಗ್ ಸ್ಕಿಲ್ಸ್” ಕುರಿತ ವಿಶೇಷ ತರಬೇತಿ ಕಾರ್ಯಾಗಾರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕವಿತಾ ಭಟ್ ಮತ್ತು ರವಿಚಂದ್ರರು ಪಾಲ್ಗೊಂಡು ತಮ್ಮ ಅನುಭವನ್ನು ಹಂಚಿಕೊಂಡರು. ಪ್ರೀಸ್ಕೂಲ್ ಶಿಕ್ಷಕರಿಗೆ ಮಕ್ಕಳಿಗೆ ವಿಜ್ಞಾನ ಕಲಿಸುವುದು ಹೇಗೆ ಸರಳ ಮತ್ತು ಆಕರ್ಷಕವಾಗಿರಬಹುದು ಎಂಬುದರ ಬಗ್ಗೆ ತರಬೇತಿ ನೀಡುವುದರ ಮೂಲಕ ತಮ್ಮ ಪ್ರಸ್ತುತಿಯಲ್ಲಿ, “ಚಿಕ್ಕ ಮಕ್ಕಳಿಗೆ ಕಲಿಕೆ […]
Category: ಈಗಿನ ಸುದ್ದಿ
ಸುದ್ದಿ ಸಮಾಚಾರ — > ಈಗಿನ ಸುದ್ದಿ
ವಿಭಾಗಿಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ : ಕಾರ್ಕಳ ಜ್ಞಾನಸುಧಾದ ಇಬ್ಬರು ರಾಜ್ಯಮಟ್ಟಕ್ಕೆ
ಉಡುಪಿ(ಡಿ.11) : ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಹಾಗೂ ಕ್ರಿಯೆಟಿವ್ ಪಿ.ಯು.ಕಾಲೇಜು ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ 2024-25ನೇ ಸಾಲಿನಲ್ಲಿ ನಡೆಸಲಾದ ಪದವಿ ಪೂರ್ವ ಕಾಲೇಜುಗಳ ಮೈಸೂರು ವಿಭಾಗೀಯ ಮಟ್ಟದ ವತಿಯಿಂದ ಡಿಸೆಂಬರ್ 9ರಂದು ನಡೆದ 2024-25ನೇ ಸಾಲಿನ ಉಡುಪಿ ಜಿಲ್ಲಾಮಟ್ಟದ ಸಾಂಸ್ಕೃತಿಕ ಸ್ಪರ್ಧೆಯ ಇಂಗ್ಲಿಷ್ ಪ್ರಬಂಧದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಮಯೂರ್.ಎಂ.ಗೌಡ ದ್ವಿತೀಯ […]
ಧನ್ವಿ ಮರವಂತೆ ಅಂತಾರಾಷ್ಟ್ರೀಯ ಯೋಗ ಚಾಂಪಿಯನ್ ಶಿಫ್ ಸ್ಪರ್ಧೆಗೆ ಆಯ್ಕೆ
ಹೆಮ್ಮಾಡಿ( ಡಿ .9): ಥಾಯ್ಲೆಂಡ್ ನಲ್ಲಿ ನೆಡೆಯುವ ಅಂತರಾಷ್ಟ್ರೀಯ ಮಟ್ಟದ ವರ್ಷಿಣಿ ಯೋಗ ಎಜ್ಯುಕೇಶ ನ್ ಆಂಡ್ ಕಲ್ಚರಲ್ ಸ್ಪೋರ್ಟ್ಸ್ ಟ್ರಸ್ಟ್. ರಿ.ಶಿವಮೊಗ್ಗ ಇವರ ವತಿಯಿಂದ ಆಯೋಜಿಸಿದ್ದ ಅಂತರಾಷ್ಟ್ರೀಯ ಯೋಗ ಚಾಂಪಿಯನ್ ಶಿಫ್ ಸ್ಪರ್ಧೆಗೆ ಜನತಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಧನ್ವಿ ಪೂಜಾರಿ ಮರವಂತೆ ಆಯ್ಕೆಯಾಗಿರುತ್ತಾಳೆ. ಆಯ್ಕೆಯಾದ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಜನತಾ ಪಿ. ಯು ಕಾಲೇಜಿನ ವಿದ್ಯಾರ್ಥಿನಿ ಶ್ರುತಿಕಾ ಶೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆ
ಹೆಮ್ಮಾಡಿ ( ಡಿ.09): ಮದ್ಭಗವದ್ಗೀತಾ ಅಭಿಯಾನ 2024 ಈ ಪ್ರಯುಕ್ತ ಆಚರಣಾ ಸಮಿತಿಯವರು ಆಯೋಜಿಸಿದ ಜಿಲ್ಲಾ ಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ. ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಬಿ.ಬಿ. ಹೆಗ್ಡೆ ಕಾಲೇಜು : ರಕ್ಷಕ – ಶಿಕ್ಷಕರ ಸಭೆ
ಕುಂದಾಪುರ (ನ.30): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ಮತ್ತು ತೃತೀಯ ವರ್ಷದ ಪದವಿ ವಿದ್ಯಾರ್ಥಿಗಳಿಗಾಗಿ ರಕ್ಷಕ-ಶಿಕ್ಷಕ ಸಭೆ ನಡೆಯಿತು ಶೈಕ್ಷಣಿಕ, ಸಾಂಸ್ಕೃತಿಕ, ಸಾಹಿತ್ಯಿಕ, ಕ್ರೀಡೆ ಮತ್ತು ಇನ್ನಿತರ ವಿಸ್ತರಣಾ ಚಟುವಟಿಕೆಗಳಲ್ಲಿ ಕಾಲೇಜು ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡುತ್ತಿರುವುದು ಉಲ್ಲೇಖನೀಯ. ಇದರಲ್ಲಿ ತಮ್ಮೆಲ್ಲರ ಸಹಕಾರ ಮಹತ್ವದ್ದು, ಕಾಲೇಜಿನ ಶೈಕ್ಷಣಿಕ ವಾತಾವರಣದಲ್ಲಿ ವಿದ್ಯಾರ್ಥಿಗಳು ಶಿಸ್ತುಬದ್ಧವಾಗಿ ಬೆಳೆಯುವುದರ ಜೊತೆU,ೆ ಮನೆಯಲ್ಲಿ ಹೆತ್ತವರ-ಪೋಷಕರ ಮಾರ್ಗದರ್ಶನದಲ್ಲಿ ಸಂಸ್ಕಾರಯುತವಾಗಿ […]
ವಿದ್ಯಾರ್ಥಿಗಳ ಸರ್ವಾಂಗಿಣ ಅಭಿವೃದ್ಧಿ ಶಿಕ್ಷಣ ಮತ್ತು ಕ್ರೀಡೆಯಿಂದ ಸಾಧ್ಯ – ಶ್ರೀ ಕುಸುಮಾಕರ್ ಶೆಟ್ಟಿ
ಕುಂದಾಪುರ( ಡಿ 3): ಇಂದಿನ ವಿದ್ಯಾರ್ಥಿಗಳಿಗೆ ಓದು ಎಷ್ಟು ಮುಖ್ಯವೋ ಅಷ್ಟೇ ದೈಹಿಕ ಚಟುವಟಿಕೆಗಳು ಮುಖ್ಯ. ಮಕ್ಕಳ ಆರೋಗ್ಯ ಸ್ಥಿತಿ ಮತ್ತು ಶಕ್ತಿ ಸಾಮರ್ಥ್ಯ ತುಂಬಾ ಕಡಿಮೆ ಮಟ್ಟದಲ್ಲಿದೆ. ಅದನ್ನು ಕ್ರೀಡೆಯಿಂದ ಮಾತ್ರ ಉತ್ತಮಪಡಿಸಿಕೊಳ್ಳಲು ಸಾಧ್ಯ. ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿ ಶಿಕ್ಷಣ ಮತ್ತು ಆರೋಗ್ಯದಿಂದ ಮಾತ್ರ ಸಾಧ್ಯ ಎಂದು ಯುವ ಸಬಲೀಕರಣ ಕ್ರೀಡಾ ಸಂಸ್ಥೆಯ ಅಧಿಕಾರಿ ಶ್ರೀ ಕುಸುಮಾಕರ್ ಶೆಟ್ಟಿ ಹೇಳಿದರು. ಅವರು ಕುಂದಾಪುರ ಎಜುಕೇಶನ್ ಸೊಸೈಟಿ(ರಿ.) ಪ್ರವರ್ತಿತ ಎಚ್. […]
ಅಬಾಕಸ್ನಲ್ಲಿ ಸಾಧನೆಗೈದ ಎಚ್.ಎಮ್.ಎಮ್, ವಿ.ಕೆ.ಆರ್ ಶಾಲೆಯ ವಿದ್ಯಾರ್ಥಿಗಳು
ಕುಂದಾಪುರ (ನ.28) : ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ,ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ಶಿವಮೊಗ್ಗದಲ್ಲಿ ಜರುಗಿದ 19ನೇ ಕರ್ನಾಟಕ ರಾಜ್ಯ ಮಟ್ಟದ ಅಬಾಕಸ್ ಅಂಡ್ ಮೆಂಟಲ್ ಅರಿಥ್ಮೆಟಿಕ್ ಕಾಂಪಿಟೀಶನ್ 2024ರಲ್ಲಿ ಭಾಗವಹಿಸಿ, ಪ್ರಥ್ವಿನ್, ಪ್ರಣವ್.ವಿ.ಶೇಟ್ ಮತ್ತು ಶ್ರೇಯಸ್.ಎಸ್.ರಾವ್ ವಿಜೇತರಾಗಿರುತ್ತಾರೆ. ವಿಜೇತ ವಿದ್ಯಾರ್ಥಿಗಳನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು ಅಭಿನಂದಿಸಿದರು.
ಸ್ನೇಹಿತರ ಬಳಗದಿಂದ ಭಾಸ್ಕರ್ ಶೆಟ್ಟಿ ಅವರಿಗೆ ಅಭಿಮಾನದ ಸನ್ಮಾನ
ಗಂಗೊಳ್ಳಿ( ಡಿ .3) : ಉತ್ತಮ ಸ್ನೇಹಿತರನ್ನು ಹೊಂದುವುದು ಜೀವನದಲ್ಲಿ ನಾವು ಮಾಡುವ ಅತಿ ದೊಡ್ಡ ಆಸ್ತಿ. ಉತ್ತಮ ಸ್ನೇಹಿತರನ್ನು ಪಡೆದುಕೊಳ್ಳುವಂತಹ ವ್ಯಕ್ತಿತ್ವವನ್ನು ನಾವು ನಮ್ಮದಾಗಿಸಿಕೊಳ್ಳಬೇಕು ಎಂದು ಕುಂದಾಪುರದ ಚಿನ್ಮಯಿ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ. ಉಮೇಶ್ ಪುತ್ರನ್ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯಲ್ಲಿ ಸ್ನೇಹಿತರ ಬಳಗ ಹಮ್ಮಿಕೊಂಡಿದ್ದ ಸರಸ್ವತಿ ವಿದ್ಯಾಲಯದ ನಿವೃತ್ತ ಇತಿಹಾಸ ಉಪನ್ಯಾಸಕ ಹೆಚ್ ಭಾಸ್ಕರ್ ಶೆಟ್ಟಿ ಅವರ ಅಭಿಮಾನದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ […]
ಡಿ. 07 ರಂದು ಕುಂದಾಪುರದಲ್ಲಿ ಮೊಗವೀರರ ಸಾಂಸ್ಕೃತಿಕ ಸಿಂಚನ -“ಹೆಜ್ಜೆ ಗೆಜ್ಜೆ ” ಸಾಂಸ್ಕೃತಿಕ ಸ್ವರ್ಧೆ
ಕುಂದಾಪುರ (ಡಿ. 03): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್(ರಿ.) ಅಂಬಲಪಾಡಿ, ಉಡುಪಿ ಹಾಗೂ ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ವ್ಯಾಪ್ತಿಯ ಅಂತರ್ ಘಟಕಗಳ ಸಾಂಸ್ಕೃತಿಕ ಸ್ಪರ್ಧೆ “ಹೆಜ್ಜೆ -ಗೆಜ್ಜೆ” -ಮೊಗವೀರ ಸಾಂಸ್ಕೃತಿಕ ಸಿಂಚನವು ಡಿಸೆಂಬರ್ 07 ರಂದು ಕುಂದಾಪುರದ ಮೊಗವೀರ ಭವನದಲ್ಲಿ ನಡೆಯಲಿದೆ. ನಾಡೋಜ ಡಾ. ಜಿ ಶಂಕರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮೊಗವೀರ ಯುವ […]
ಕೋಡಿ ಬ್ಯಾರೀಸ್: 37 ನೇ ‘ಸ್ವಚ್ಛ ಕಡಲತೀರ – ಹಸಿರುಕೋಡಿ’ ಅಭಿಯಾನ
ಕೋಡಿ ( ಡಿ .02): ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳು ಕೋಡಿ, ಇದರ 37 ನೇ ‘ಸ್ವಚ್ಛ ಕಡಲತೀರ – ಹಸಿರು ಕೋಡಿ’ ಅಭಿಯಾನ ಡಿ.01 ರಂದು ಯಶಸ್ವಿಯಾಗಿ ನಡೆಯಿತು. ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಸೈಯದ್ ಮೊಹಮ್ಮದ್ ಬ್ಯಾರಿ ಇವರು ಅಭಿಯಾನವನ್ನುದ್ದೇಶಿಸಿ “ಭಗವಂತನಿಗೆ ಪ್ರೀತಿಪೂರ್ವಕವಾದ ಈ ಕಾಯಕವು ನಿರಂತರವಾಗಿ ಸಾಗಬೇಕಾದದ್ದು ಮಾತ್ರವಲ್ಲದೆ, ಮಾಡುವ ಕೆಲಸದಲ್ಲೂ ಪರಿವರ್ತನೆಯಾಗಬೇಕು: ಪ್ರಸಾದ ನೀಡುವ ಅರ್ಚಕನಿಗಿಂತ, ಪ್ರಸಾದ ಸ್ವೀಕರಿಸುವ ಭಕ್ತನಿಗೆ ಹೇಗೆ ಪ್ರಸಾಧದ […]










