ಕುಂದಾಪುರ (ಆ,20): ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕುಂದಾಪುರದ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್ಸಿಸಿ ಘಟಕದ ವತಿಯಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಕುಂದಾಪುರದ ಯೋಧ ಪ್ರದೀಪ್ ಖಾರ್ವಿ ಯವರನ್ನು ಸಂಸ್ಥೆಯ ಸಂಸ್ಥಾಪಕರು ಮತ್ತು ಬೈಂದೂರು ಶಾಸಕರಾದ ಬಿ.ಎಂ.ಸುಕುಮಾರ ಶೆಟ್ಟಿಯವರು ಸನ್ಮಾನಿಸಿ ಗೌರವಿಸಿದರು. ನಂತರ ಮಾತನಾಡಿದ ಅವರು ಪ್ರದೀಪ್ ಖಾರ್ವಿಯವರು ಯುವ ಸಮುದಾಯಕ್ಕೆ ಪ್ರೇರಣೆ, ನಮ್ಮ ಭಾಗದಲ್ಲಿ ಇನ್ನಷ್ಟು ಸಂಖ್ಯೆಯ ಯುವಕ ಯುವತಿಯರು ಸೈನ್ಯಕ್ಕೆ ಸೇರುವಂತಾಗಲಿ […]
Category: ಗ್ರಾಮೀಣ ಸುದ್ದಿ
ಸುದ್ದಿ ಸಮಾಚಾರ — > ಗ್ರಾಮೀಣ ಸುದ್ದಿ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಕೊಲ್ಲೂರು ವಲಯದ ಒಕ್ಕೂಟ ಅಧ್ಯಕ್ಷರ ಹಾಗೂ ಸೇವಾಪ್ರತಿನಿಧಿ ಸಭೆ
ಕೊಲ್ಲೂರು (ಆ,18): ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಲ್ಲೂರು ವಲಯದ ಒಕ್ಕೂಟ ಅಧ್ಯಕ್ಷರ ಹಾಗೂ ಸೇವಾಪ್ರತಿನಿಧಿ ಸಭೆ ಆಗಸ್ಟ್,18ರಂದು ಬೀಸಿನಪಾರೆ ಸಭಾ ಭವನದಲ್ಲಿ ನಡೆಯಿತು. ವಲಯಾಧ್ಯಕ್ಷರಾದ ಜಯರಾಮ್ ಪೂಜಾರಿ ಚಕ್ರಮೈದಾನ ರವರು ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ತಾಲೂಕು ಯೋಜನಾಧಿಕಾರಿ ಶ್ರೀಮತಿ ಶಶಿರೇಖಾರವರು ದೀಪ ಬೆಳಗಿಸುವುದ ಮೂಲಕ ಕಾರ್ಯಕ್ರಮ ಉದ್ಘಾಟಿಸಿ, ವಲಯ ಹಾಗೂ ಒಕ್ಕೂಟಗಳ ಪ್ರಗತಿ ಪರಿಶೀಲನೆ ಮಾಡಿದರು. ಅಲ್ಲದೆ 24/8/21 ರಂದು ನಡೆಯುವ ಪ್ರಾದೇಶಿಕ ನಿರ್ದೇಶಕರ ಜೊತೆಗೆ ಪ್ರಗತಿ […]
ಹರೀಶ್ ಬಂಗೇರ ತಾಯ್ನಾಡಿಗೆ ಆಗಮನ: ಭಾವುಕ ಕ್ಷಣಕ್ಕೆ ಸಾಕ್ಷಿಯಾಯಿತು ಬೆಂಗಳೂರು ಏರ್ಪೋರ್ಟ್
ಬೆಂಗಳೂರು (ಆ,18): ಸೌದಿ ಅರೇಬಿಯಾದಲ್ಲಿ ಬಂಧನಕ್ಕೊಳಪಟ್ಟಿದ್ದ ಕುಂದಾಪುರ ಮೂಲದ ಹರೀಶ್ ಬಂಗೇರ ಬೆಂಗಳೂರು ಏರ್ಪೋರ್ಟ್ ತಲುಪಿದ್ದಾರೆ. ಸೌದಿ ದೊರೆಯ ವಿರುದ್ಧ ಫೇಸ್ಬುಕ್ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದರೆಂದು ಆರೋಪ ಎದುರಿಸಿರುವ ಹರೀಶ್ ನಿರಪರಾಧಿ ಎಂದು ತಿಳಿದ ಮೇಲೆ ಸೌದಿ ಅರೇಬಿಯಾ ಸರಕಾರ ಇವರನ್ನು ಬಿಡುಗಡೆಗೊಳಿಸಿದ್ದು,ಇದೀಗ ಕುಂದಾಪುರ ಪರಿಸರದ ಜನತೆಗೆ ಸಂತೋಷ ತಂದಿದೆ. ಬೆಂಗಳೂರಿಗೆ ಆಗಮಿಸಿದ ಹರೀಶ್ ಬಂಗೇರರನ್ನು ಲೋಕೇಶ್ ಅಂಕದಕಟ್ಟೆ ಮತ್ತು ತಂಡ ಬೆಂಗಳೂರಿನ ಏರ್ಪೋರ್ಟ್ನಲ್ಲಿ ಬರಮಾಡಿಕೊಂಡರು.
ಬಿಜೆಪಿ ಯುವಮೋರ್ಚಾ ಕುಂದಾಪುರ ಮಂಡಲ : ಯುವ ತಿರಂಗಾ ಯಾತ್ರಾ ಸೈಕಲ್ ಜಾಥಾ
ಕುಂದಾಪುರ (ಆ, 16) : ದೇಶದ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಬಿಜೆಪಿ ಯುವಮೋರ್ಚಾ ಕುಂದಾಪುರ ಮಂಡಲ ವತಿಯಿಂದ ಆಗಸ್ಟ್15 ರಂದು ಯುವ ತಿರಂಗಾ ಯಾತ್ರಾ ಸೈಕಲ್ ಜಾಥಾ ನಡೆಯಿತು. ಕುಂದಾಪುರ ಶಾಸ್ತ್ರೀ ವೃತ್ತದಿಂದ ಹೊರಟು ಹೆದ್ದಾರಿ ಮಾರ್ಗವಾಗಿ ಕೋಟೇಶ್ವರ ಪೇಟೆಯ ಮೂಲಕ ತಿರುವು ಪಡೆದು ಕುಂದಾಪುರ ಪೇಟೆಯಯತ್ತ ಸಾಗಿದ ಜಾಥಾ ನಂತರ ಶಾಸ್ತ್ರೀ ವೃತ್ತದಲ್ಲಿ ಪೂರ್ಣಗೊಳಿಸಲಾಯಿತು. ಸೈಕಲ್ ಜಾಥಕ್ಕೆ ಮಂಡಲ ಅಧ್ಯಕ್ಷರಾದ ಶಂಕರ ಅಂಕದಕಟ್ಟೆ ಚಾಲನೆ ನೀಡಿದರು. […]
ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ ಮಹಿಳಾ ಮೋರ್ಚಾ : ಯೋಧರಿಗೆ ಸನ್ಮಾನ
ಕುಂದಾಪುರ (ಆ, 16) : ದೇಶದ 75ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ನಮ್ಮ ಮಾತ್ರಭೂಮಿಯ ರಕ್ಷಣೆಗಾಗಿ ಹೋರಾಡಿದ ಯೋಧರನ್ನು ಗೌರವಿಸುವ ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ ಮಹಿಳಾ ಮೋರ್ಚಾದ ನೇತ್ರತ್ವದಲ್ಲಿ ಆಗಸ್ಟ್ 15 ರಂದು ಯೋಧರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ನಿವೃತ್ತ ಯೋಧರಾದ ಶ್ರೀವಿಶ್ವನಾಥ ಹಂದೆ ಕುಂಭಾಶಿ ಹಾಗೂ ಕೋಟ ಪಡುಕರೆಯ ಯೋಧ ಶ್ರೀ ಲೋಹಿತ್ ಪೂಜಾರಿ ಯವರನ್ನು ಅತ್ಯಂತ ಗೌರವ ಪೂರ್ವಕವಾಗಿ ಅವರ […]
ಬಡಾಬಾಳು : ಅಟಲ್ ಜೀ ಬಸ್ ತಂಗುದಾಣ ಉದ್ಘಾಸಿದ ಶಾಸಕ ಬಿ. ಎಮ್. ಸುಕುಮಾರ ಶೆಟ್ಟಿ
ಸಿದ್ದಾಪುರ (ಆ, 17) : ಸಿದ್ದಾಪುರ ಗ್ರಾಮ ಪಂಚಾಯತ್ ಬಡಾಬಾಳುವಿನಲ್ಲಿ ದೇಶದ ಮಾಜಿ ಪ್ರಧಾನಿ, ಧೀಮಂತ ನಾಯಕ, ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿಯವರ ಹೆಸರಿನಲ್ಲಿ ಅಟಲ್ ಜೀ ಬಸ್ ತಂಗುದಾಣ ವನ್ನು ಬೈಂದೂರು ಶಾಸಕ ಬಿ.ಎಮ್.ಸುಕುಮಾರ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗೆಳೆಯರ ಬಳಗ ಬಡಾಬಾಳು ಇದರ ಸದಸ್ಯರು, ಬಿಜೆಪಿ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಗಂಗೊಳ್ಳಿ: ಸರಸ್ವತಿ ವಿದ್ಯಾಲಯದಲ್ಲಿ 75ನೇ ಸ್ವಾತಂತ್ರ್ಯೋತ್ಸವ
ಗಂಗೊಳ್ಳಿ (ಆ,15): ಇಲ್ಲಿನ ಸರಸ್ವತಿ ವಿದ್ಯಾಲಯದ ಪದವಿಪೂರ್ವ ಕಾಲೇಜು, ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಪ್ರೌಢಶಾಲೆ ಮತ್ತು ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವತಿಯಿಂದ ಭಾರತದ 75ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕರಾದ ನಾಗರಾಜ ಶೆಟ್ಟಿ ಧ್ವಜಾರೋಹಣವನ್ನು ನೆರವೇರಿಸಿದರು. ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಪ್ರೌಢಶಾಲೆಯ ಉಪಪ್ರಾಂಶುಪಾಲ ಉಮೇಶ್ ಕರ್ಣಿಕ್, ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್, ಶಿಕ್ಷಕರು ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಮೊಗವೀರ ಯುವ ಸಂಘಟನೆ( ರಿ) ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ: ಕಾವೇರಿ ಮೊಗವೀರ್ತಿ ಯವರಿಗೆನೂತನ ಮನೆಯ ಕೀಲಿ ಕೈ ಹಸ್ತಾಂತರ ಕಾರ್ಯಕ್ರಮ
ಬೈಂದೂರು (ಆ,15): ಮೊಗವೀರ ಯುವ ಸಂಘಟನೆ( ರಿ) ಉಡುಪಿ ಜಿಲ್ಲೆ ಇದರ ಹೆಮ್ಮಾಡಿ ಘಟಕದ ವತಿಯಿಂದ ಕಾವೇರಿ ಮೊಗವೀರ್ತಿ ಯವರಿಗೆ ನೂತನ ಮನೆಯನ್ನು ನಿರ್ಮಿಸಿ ಕೊಡುವುದರ ಜೊತೆಗೆ ,ಮನೆಯ ಕೀಲಿ ಕೈ ಹಸ್ತಾಂತರ ಕಾರ್ಯಕ್ರಮ ಆಗಸ್ಟ್15 ರಂದು ಜರುಗಿತು. ಜಿಲ್ಲಾ ಸಂಘಟನೆ ಯ ಅಧ್ಯಕ್ಷರು ಶಿವರಾಮ್ ಕೋಟ, ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿಯ ಕುಂದಾಪುರ ಶಾಖಾ ಅಧ್ಯಕ್ಷರಾದ ಕೆ .ಕೆ ಕಾಂಚನ, ಸತೀಶ್ ನಾಯಕ್ ನಾಡ ಪಡುಕೋಣೆ, […]
ವರಲಕ್ಷೀ ಚಾರಿಟೇಬಲ್ ಟ್ರಸ್ಟ್(ರಿ) ಉಪ್ಪುಂದ : ಸ್ವಾತಂತ್ಯ್ರೋತ್ಸವ ದಿನದಂದು ಶ್ರೀ ಗೋವಿಂದ ಬಾಬು ಪೂಜಾರಿಯವರಿಂದ ಬಡ ಕುಟುಂಬಕ್ಕೆ ಮನೆ ಹಸ್ತಾಂತರ
ತ್ರಾಸಿ (ಆ,15): ತ್ರಾಸಿ ಸಮೀಪದ ಕಂಚುಗೋಡು ಭಗತ್ ನಗರದ ಶ್ರೀಮತಿ ಪುಷ್ಪಾ ಉಲ್ಲಾಸ್ ದಂಪತಿಗೆ ಅಗಸ್ಟ್ 15 ರಂದು ನೂತನ ಮನೆಯನ್ನು ಉದ್ಯಮಿ ,ಕೊಡುಗೈದಾನಿ ಶ್ರೀ ಗೋವಿಂದ ಬಾಬು ಪೂಜಾರಿಯವರು ತಮ್ಮಕುಟಂಬದ ಸದಸ್ಯರು, ಅಭಿಮಾನಿಗಳು , ಸೇವಾ ಸಂಕಲ್ಪ ಸಂಸ್ಥೆಯ ಸದಸ್ಯರು ಹಾಗೂ ಊರ ಜನತೆಗಳ ಉಪಸ್ಥಿತಿಯಲ್ಲಿ ಶ್ರೀಮತಿ ಪುಷ್ಪಾ ಉಲ್ಲಾಸ್ ದಂಪತಿಗೆ ಮನೆಯ ಕೀ ನೀಡುವುದರ ಮೂಲಕ ಹಸ್ತಾಂತರಿಸಿದರು. ಹಲವು ಬಡ ಕುಟುಂಬಗಳಿಗೆ ಆಶ್ರಯದಾತರಾಗಿರುವ ಶ್ರೀ ಗೋವಿಂದ ಬಾಬು ಪೂಜಾರಿಯವರು ಮಾಧ್ಯಮ […]
ಮಲ್ಪೆ : ಬೋಟ್ ದುರಂತ ತಪ್ಪಿಸಿದ ಈಶ್ವರ್ ಮಲ್ಪೆ ತಂಡ
ಮಲ್ಪೆ (ಆ, 14) : ಮಲ್ಪೆ ಬಂದರಿನಲ್ಲಿ ಲಂಗರು ಹಾಕಿದ್ದ ಎರಡು ಬೋಟುಗಳ ಹಗ್ಗ ತುಂಡಾಗಿ ನೀರಿನ ರಭಸಕ್ಕೆ ಸೈಂಟ್ ಮೇರಿಸ್ ಐಲ್ಯಾಂಡ್ ಕಲ್ಲಿನ ಬಳಿ ಬೋಟ್ ಗಳು ಸಮುದ್ರ ಪಾಲಾಗುವ ಸ್ಥಿತಿಯಲ್ಲಿದ್ದುದ್ದನ್ನು ಗಮನಿಸಿದ ಗಾಳ ಹಾಕುವವರು ಫೋನ್ ಕರೆಯ ಮುಖಾಂತರ ಆಪತ್ಭಾಂಧವ ಈಶ್ವರ್ ಮಲ್ಪೆರವರಿಗೆ ತಿಳಿಸಿದ್ದಾರೆ. ವಿಷಯ ತಿಳಿದ ಕೂಡಲೇ ಈಶ್ವರ್ ಮಲ್ಪೆ ಮತ್ತು ಜಮೀರ್ ಕಲ್ಮಾಡಿ ಸಮುದ್ರದಲ್ಲಿನ ಕಲ್ಲಿನ ಬಳಿ ತೆರಳಿ ಸಮುದ್ರ ಪಾಲಾಗುತ್ತಿದ್ದ ಎರಡು ಬೋಟುಗಳನ್ನು […]










