ಕುಂದಾಪುರ (ಜು, 26) : ತರೆಮರೆಯ ಪ್ರತಿಭೆಗಳನ್ನು ಮುಖ್ಯವಾಹಿನಿಗೆ ತರುವುದರ ಜೊತೆಗೆ ನಮ್ಮ ಸುತ್ತಮುತ್ತಲಿರುವ ಪ್ರತಿಭೆಗಳನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸುವ ಸದುದ್ದೇಶದಿಂದ ಹುಟ್ಟಕೊಂಡಿರುವ ದಿ ಅನಿಸಿಕೆ ಹೌಸ್ ಇನ್ಸ್ಟಾಗ್ರಾಮ್ ಪೇಜ್ ನ ಯುಟ್ಯೂಬ್ ಚಾನೆಲ್ ನ್ನು ಹೆಸರಾಂತ ಸಂಗೀತ ನಿರ್ದೇಶಕ ರವಿ ಬಸ್ರೂರ್ ರವರು ಜುಲೈ, 25 ರಂದು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ತಂಡದ ಮುಖ್ಯ ಸದಸ್ಯರಾದ ಸಂಪತ್ ಶೆಟ್ಟಿ, ಸಂಜಯ್ ಶೆಟ್ಟಿ, ಸಾಮ್ಯೂಲ್ ಹಾಗೂ ಇತರರು ಉಪಸ್ಥಿತರಿದ್ದರು. “The […]
Category: ಗ್ರಾಮೀಣ ಸುದ್ದಿ
ಸುದ್ದಿ ಸಮಾಚಾರ — > ಗ್ರಾಮೀಣ ಸುದ್ದಿ
ಸರಸ್ವತಿ ವಿದ್ಯಾಲಯದಲ್ಲಿ ನೀಟ್, ಸಿಇಟಿ ಮತ್ತು ಜೆಇಇ ತರಬೇತಿ ಕಾರ್ಯಕ್ರಮ
ಗಂಗೊಳ್ಳಿ (ಜು, 26) : ಇಲ್ಲಿನ ಜಿ .ಎಸ್ .ವಿ .ಎಸ್ ಅಸೋಸಿಯೇಷನ್ ವತಿಯಿಂದ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಈ ಸಾಲಿನ ಶೈಕ್ಷಣಿಕ ವರ್ಷದ ಸಿಇಟಿ, ನೀಟ್ ಮತ್ತು ಜೆಇಇ ಪರೀಕ್ಷಾ ತರಬೇತಿ ಕಾರ್ಯಕ್ರಮ ಗಂಗೊಳ್ಳಿಯ ಗುಜ್ಜಾಡಿ ಗೋಪಾಲ ನಾಯಕ ರೋಟರಿ ಇಂಡೋರ್ ಸ್ಟೇಡಿಯಂನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಕಳದ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ರಸಾಯನಶಾಸ್ತ್ರ ಉಪನ್ಯಾಸಕರಾದ ರಾಘವೇಂದ್ರ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳು ಇಲಾಖಾ ಪರೀಕ್ಷೆಗಳ […]
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ BC ಟ್ರಸ್ಟ್ ಬೈಂದೂರು : ಕೊಲ್ಲೂರು ವಲಯ ಮೆಕ್ಕೆ ಒಕ್ಕೂಟದ ಸಂಘದ ಸದಸ್ಯರಿಗೆ 9 ಲಕ್ಷ ರೂ, ಲಾಭಾಂಶ ಮೊತ್ತ ವಿತರಣೆ
ಹೆಮ್ಮಾಡಿ (ಜು, 25): ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೈಂದೂರು ಇದರ ಕೊಲ್ಲೂರು ವಲಯದ ಮೆಕ್ಕೆ ಒಕ್ಕೂಟದ ಸಂಘದ ಸದಸ್ಯರಿಗೆ ರೂ,9 ಲಕ್ಷಕ್ಕೂ ಹೆಚ್ಚಿನ ಲಾಭಾಂಶದ ಮೊತ್ತವನ್ನು ವಿತರಣೆ ಮಾಡಲಾಯಿತು. ಮೆಕ್ಕೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಲಾಭಾಂಶ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷರಾದ ಎಂ ಜೆ. ಬೇಬಿರವರು ವಹಿಸಿದ್ದರು. ಯೋಜನೆಯ ತಾಲೂಕು ಲೆಕ್ಕಪರಿಶೋಧಕರಾದ ರಾಘವೇಂದ್ರರವರು ಸದಸ್ಯರಿಗೆ ಮಾಹಿತಿ ನೀಡಿದರು. ಸೇವಾಪ್ರತಿನಿಧಿ ರಾಮ […]
ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಗಂಗೊಳ್ಳಿ :ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ
ಗಂಗೊಳ್ಳಿ: (ಜು,24): ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 182 ವಿದ್ಯಾರ್ಥಿಗಳಲ್ಲಿ 31 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 106 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಮತ್ತು 45 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಪ್ರಸನ್ನಾ ಪೈ 600ಕ್ಕೆ 600 ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ರಿಫ್ಜಾ (597) ಮತ್ತು […]
ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯ ಪ್ರಯುಕ್ತ ಪದವಿ ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕುಂದಾಪ್ರ ಕನ್ನಡದಲ್ಲಿ ಭಾಷಣ ಸ್ಪರ್ಧೆ
ಕುಂದಾಪುರ (ಜು, 22) : ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಇದರ ಕನ್ನಡ ವಿಭಾಗ ಹಾಗೂ ಕುಂದವಾಹಿನಿ ಅಂತರ್ಜಾಲ ಸುದ್ದಿತಾಣದ ಜಂಟಿ ಆಯೋಜನೆಯಲ್ಲಿ ‘ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯ ಪ್ರಯುಕ್ತ ಪದವಿ ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ‘ಕುಂದಾಪ್ರ ಕನ್ನಡದಲ್ಲಿ “ಕುಂದಗನ್ನಡ ಭಾಷಿ ಮತ್ತು ಬದ್ಕ್” ಎನ್ನುವ ವಿಷಯದ ಕುರಿತು ಭಾಷಣ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಮೂರು […]
ಉಪ್ಪುಂದ : ಸಂಸ್ಥೆಯ ಸಿಬ್ಬಂದಿಗಳಿಗೆ 1 ಲಕ್ಷ ಮೌಲ್ಯದ ಹೆಲ್ತ್ ಕಾರ್ಡ್ ವಿತರಿಸಿದ ಕೊಡುಗೈದಾನಿ ಶ್ರೀ ಗೋವಿಂದ ಬಾಬು ಪೂಜಾರಿ
ಉಪ್ಪುಂದ (ಜು,22):ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ) ಉಪ್ಪುಂದ ಇದರ ಅಧ್ಯಕ್ಷರಾದ ಕೊಡುಗೈದಾನಿ ಶ್ರೀ ಗೋವಿಂದ ಬಾಬು ಪೂಜಾರಿಯವರು ವರಲಕ್ಷ್ಮೀ ಕೋ -ಆಪರೇಟಿವ್ ಸೊಸೈಟಿಯ ನೌಕರರಿಗೆ, ನಿರ್ದೇಶಕರಿಗೆ ಹಾಗೂ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ನ ಸದಸ್ಯರಿಗೆ ತನ್ನ ಸ್ವಂತ ಹಣದಲ್ಲಿ ಸುಮಾರು 1 ಲಕ್ಷ ರೂ, ಮೌಲ್ಯದ ಹೆಲ್ತ್ ಕಾರ್ಡ್ ನ್ನು ವಿತರಿಸಿದರು. ತಮ್ಮ ಸಂಸ್ಥೆಯಲ್ಲಿ ದುಡಿಯುವ ಸಿಬ್ಬಂದಿಗಳಿಗೆ ಆರೋಗ್ಯ ತುರ್ತು ಸಂದರ್ಭದಲ್ಲಿ ಈ ಹೆಲ್ತ್ ಕಾರ್ಡ್ ಬಳಸಿ […]
ಆನಗಳ್ಳಿ ಶ್ರೀದತ್ತಾಶ್ರಮ : ಜು, 24 ರಂದು ಗುರು ಪೂರ್ಣಿಮೆ ಪ್ರಯುಕ್ತ ವಿಶೇಷ ಕಾರ್ಯಕ್ರಮ
ಕುಂದಾಪುರ (ಜು, 21): ಕುಂದಾಪುರದ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಆನಗಳ್ಳಿಯ ಶ್ರೀ ದತ್ತಾಶ್ರಮದಲ್ಲಿ ಜುಲೈ, 24 ರಂದು ಗುರು ಪೂರ್ಣಿಮೆಯ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ ತುಳಸಿ ಅರ್ಚನೆ, ಮಹಾಮಂಗಳಾರತಿ ಹಾಗೂ ಸಂಜೆ ದತ್ತ ಹೋಮ, ಭಜನಾ ಕೀರ್ತನೆ, ಸಾಧು-ಸಂತರಿಗೆ ಕಾಣಿಕೆ ಸಮರ್ಪಣೆ , ವಸ್ತ್ರ ವಿತರಣೆ , ಮಹಾಮಂಗಳಾರತಿ ಹಾಗೂ ಪ್ರಸಾದ ವಿತರಣೆ ನೆರವೇರಲಿದ್ದು ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೆ ಭಕ್ತರು ಆಗಮಿಸಬೇಕೆಂದು ಆನಗಳ್ಳಿ ಶ್ರೀ […]
ನಿರುಪಯುಕ್ತ ಪ್ಲಾಸ್ಟಿಕ್ ಬಾಟಲ್ ಗಳನ್ನು ಬಳಸಿ ಸುಂದರ ಕೈದೋಟ ನಿರ್ಮಿಸಿದ ಯತೀಶ್ ಕಿದಿಯೂರು ಮನೆಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಭೇಟಿ
ಉಡುಪಿ (ಜು, 20) : ನಿರುಪಯುಕ್ತ ಪ್ಲಾಸ್ಟಿಕ್ ಬಾಟಲಿಗಳನ್ನು ಹಾಗೂ ಹಾಲಿನ ಪ್ಯಾಕೆಟ್ ಗಳನ್ನು ಬಳಸಿ ಮನೆಯ ಸುತ್ತಮುತ್ತಲೂ ಸುಂದರ ಕೈದೋಟ ನಿರ್ಮಿಸಿ ಸಾರ್ವಜನಿಕರ ಗಮನ ಸೆಳೆದ ಉಡುಪಿಯ ಯತೀಶ್ ಕಿದಿಯೂರು ಮನೆಗೆ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಕುಟಂಬದೊಂದಿಗೆ ಭೇಟಿ ನೀಡಿದರು. ಸಹೋದ್ಯೋಗಿ ಯತೀಶ್ ಕಿದಿಯೂರು ರವರ ಪರಿಸರ ಪ್ರೇಮ ಮತ್ತು ಸ್ರಜನಶಿಲತೆಗೆ ಜಿಲ್ಲಾಧಿಕಾರಿಯವರು ಮೆಚ್ಚುಗೆ ವ್ಯಕ್ತಪಡಿಸಿದರು. ಉಡುಪಿ ಜಿಲ್ಲಾಧಿಕಾರಿ ಕಛೇರಿಯಲ್ಲಿ ಸೇವೆ ಸಲ್ಲಿಸುತ್ತಿರುವ ಯತೀಶ್ ಕಿದಿಯೂರು ಬಿಡುವಿನ ಸಮಯದಲ್ಲಿ […]
ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಗಂಗೊಳ್ಳಿ ಮೂಲದ ಪರಮಪೂಜ್ಯ ಶ್ರೀಮದ್ ವಿದ್ಯಾಧಿರಾಜ ತೀರ್ಥ ಸ್ವಾಮಿ ದೈವೈಕ್ಯ
ಕುಂದಾಪುರ (ಜು, 19): ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಪ್ರಮುಖ ಪೀಠವಾದ ಪರ್ತಗಾಳಿ ಜೀವೋತ್ತಮ ಮಠದ ಸ್ವಾಮಿಗಳಾದ ಪರಮಪೂಜ್ಯ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಮಹಾಸ್ವಾಮಿಗಳು(76) ಜುಲೈ 19 ರಂದು ಹೃದಯಾಘಾತದಿಂದ ದೈವೈಕ್ಯರಾಗಿದ್ದಾರೆ. ಮೂಲತಃ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿಯ ಸೇನಾಪುರ ಆಚಾರ್ಯ ಮನೆತನದವರಾದ ಅವರು ಗಂಗೊಳ್ಳಿಯ ವೆಂಕಟರಮಣ ದೇವಾಲಯದ ಅರ್ಚಕ ಮನೆತನದವರು.ದ್ವಾರಕಾನಾಥ ತೀರ್ಥ ಸ್ವಾಮೀಜಿ ಅವರಿಂದ 1967ರ ಫೆಬ್ರುವರಿ 26ರಂದು ಸನ್ಯಾಸ ದೀಕ್ಷೆ ಸ್ವೀಕರಿಸಿ, 1973ರ […]
ಹಟ್ಟಿಯಂಗಡಿ ಪಂಚಾಯತ್ ವ್ಯಾಪ್ತಿಯ ಚೀನಿಬೆಟ್ಟು ರಸ್ತೆ ಕೆಸರುಮಯ – ಸಾರ್ವಜನಿಕ ಸಂಚಾರಕ್ಕೆ ಅಡಚಣೆ
ತಲ್ಲೂರು (ಜು, 19): ಕುಂದಾಪುರ ತಾಲೂಕಿನ ಹಟ್ಟಿಯಂಗಡಿ ಪಂಚಾಯತ್ ವ್ಯಾಪ್ತಿಯ ಚೀನಿಬೆಟ್ಟು ರಸ್ತೆ ಅತಿಯಾಗಿ ಸುರಿದ ಮಳೆಯ ಕಾರಣದಿಂದಾಗಿ ಕೆಸರುಮಯವಾಗಿದ್ದು ಸಾರ್ವಜನಿಕರಿಗೆ ಓಡಾಡಲು ಕಷ್ಟಕರವಾಗಿದೆ. ವಾಹನ ಸವಾರರು ಈ ರಸ್ತೆಯಲ್ಲಿ ಸಂಚರಿಸಲು ಹರಸಾಹಸ ಪಡುತ್ತಿದ್ದು ,ಸ್ವಲ್ಪ ಹೆಚ್ಚು ಕಡಿಮೆಯಾದರೆ ಕೈ ಕಾಲು ಮುರಿದುಕೊಳ್ಳವ ಭೀತಿಯಲ್ಲಿದ್ದಾರೆ. ಗ್ರಾಮ ಪಂಚಾಯತ್ ಈ ಕುರಿತು ಗಮನ ಹರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿ ಕೂಡ ಬೇಕೆಂದು ಸಾರ್ವಜನಿಕರು ಮನವಿ ಸಲ್ಲಿಸಿದ್ದಾರೆ.










