ಹೆಮ್ಮಾಡಿ (ಜು, 19 ): ಕಟ್ಟ್ ಬೆಲ್ತೂರು ಗ್ರಾಮ ಪಂಚಾಯತ್ ವತಿಯಿಂದ ಕರೋನಾ ವಿರುದ್ದ ಲಸಿಕಾಕರಣವನ್ನು ಜುಲೈ 19 ರಂದು ಸುಳ್ಸೆ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಯಿತು. ಆಟೋ ರಿಕ್ಷಾ ಚಾಲಕರಿಗೆ, ಹೋಟೆಲ್ ಕಾರ್ಮಿಕರಿಗೆ, ಪರ ಊರುಗಳಲ್ಲಿ ಉದ್ಯೋಗಕ್ಕೆ ತೆರಳುವವರಿಗೆ ಆದ್ಯತೆಯ ಮೇರೆಗೆ ಹಾಗೂ 18ರಿಂದ 45 ಪ್ರಾಯದವರಿಗೆ ಲಸಿಕೆ ನೀಡಲಾಯಿತು. ಈ ಸಂದರ್ಭದಲ್ಲಿ ಕಟ್ ಬೆಲ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಾಗರಾಜ್ ಪುತ್ರನ್ ಮತ್ತು ಉಪಾಧ್ಯಕ್ಷೆ ಶ್ವೇತಾ ಉಪಸ್ಥಿತರಿದ್ದರು. […]
Category: ಗ್ರಾಮೀಣ ಸುದ್ದಿ
ಸುದ್ದಿ ಸಮಾಚಾರ — > ಗ್ರಾಮೀಣ ಸುದ್ದಿ
ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು : ವಿಶಾಲಾಕ್ಷಿ ಬಿ. ಹೆಗ್ಡೆಯವರ ಸಂಸ್ಮರಣೆ
ಕುಂದಾಪುರ (ಜು, 19) : ಡಾ|ಬಸ್ರೂರು ಭುಜಂಗ ಹೆಗ್ಡೆಯವರ ನೆನಪಿನಲ್ಲಿ ಡಾ|ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜನ್ನು ನಿರ್ಮಿಸಲು ಸ್ಥಳದಾನ ಮಾಡಿದ ಸೌಕೂರು ಸೇರ್ವೆಗಾರ್ ಮನೆತನದ ವಿಶಾಲಾಕ್ಷಿ ಬಿ.ಹೆಗ್ಡೆಯವರ ಸಂಸ್ಮರಣಾ ಕಾರ್ಯಕ್ರಮವನ್ನು ಕಾಲೇಜಿನ ಕನ್ನಡ ವಿಭಾಗದ ವತಿಯಿಂದ ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಪ್ರಾಂಶುಪಾಲ ಪ್ರೊ.ಕೆ .ಉಮೇಶ್ ಶೆಟ್ಟಿ ಸಂಸ್ಮರಣಾ ಮಾತುಗಳನ್ನಾಡಿದರು. ಕಾಲೇಜಿನ ಉಪ ಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿಯವರು ಪ್ರಾಸ್ತಾವಿಕ ನುಡಿಗಳನ್ನಾಡಿದರು.ಇಂಗ್ಲಿಷ್ ಉಪನ್ಯಾಸಕಿ ಶ್ರೀಮತಿ ದೀಪಿಕಾ ರಾಘವೇಂದ್ರ ಮತ್ತು ಭೌತಶಾಸ್ತ್ರ […]
ಉಪ್ಪಿನ ಕುದ್ರು: ಪಂಚಗಂಗಾವಳಿ ನದಿ ತೀರದಲ್ಲಿ ಗಂಗಾವತಿಯ ಸೋನಾ ಮಸೂರಿ ಭತ್ತದ ತಳಿ ನಾಟಿ ಕಾರ್ಯಕ್ರಮ
ತಲ್ಲೂರು (ಜು, 18) : ಕುಂದಾಪುರ ಕರಾವಳಿಯ ಪಂಚಗಂಗಾವಳಿ ನದಿತೀರದಲ್ಲಿ ಗಂಗಾವತಿಯ ಸೋನಾ ಮಸೂರಿ ಭತ್ತದ ತಳಿ ನಾಟಿ ಕೃಷಿಗೆ ಉತ್ತೇಜನ ನೀಡುವ ಉದ್ದೇಶದಿಂದ ಕುಂದಾಪುರ ರೋಟರಿ ಕ್ಲಬ್ ಕೃಷಿಮಿತ್ರ ಯೋಜನೆಯಡಿಯಲ್ಲಿ ಉಪ್ಪಿನಕುದ್ರು ಗ್ರಾಮದಲ್ಲಿ ಪ್ರಯೋಗಿಕವಾಗಿ 1 ಎಕರೆ ಕೃಷಿ ಭೂಮಿಯಲ್ಲಿ ಪ್ರಾಯೋಗಿಕವಾಗಿ ನಾಟಿ ಮಾಡಿದ್ದೇವೆ ಎಂದು ಕುಂದಾಪುರ ರೋಟರಿ ಕ್ಲಬ್ ನೂತನ ಅಧ್ಯಕ್ಷರಾದ ಶ್ರೀ ಶಶಿಧರ್ ಹೆಗ್ಡೆ ಹೇಳಿದರು. ಅವರು ಕುಂದಾಪುರದ ರೋಟರಿ ಕ್ಲಬ್ ಹಾಗೂ ಯುವ ಸ್ಪಂದನ […]
ಬಿಜೂರು : ಗ್ರಾಮ ಪಂಚಾಯತ್ ನೂತನ ಕಟ್ಟಡ & ಅಂಗನವಾಡಿ ಕೇಂದ್ರ ಉದ್ಘಾಸಿದ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ
ಉಪ್ಪುಂದ (ಜು, 18) : ಬಿಜೂರು ಗ್ರಾಮ ಪಂಚಾಯತ್ ನ ನೂತನ ಕಟ್ಟಡ ಹಾಗೂ ಹೊಳೆತೋಟ ಅಂಗನವಾಡಿ ಕಟ್ಟಡವನ್ನು ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಉದ್ಘಾಟಿಸಿದರು. ಉದ್ಘಾಟನೆಯ ಬಳಿಕ ಮಾತನಾಡಿದ ಶಾಸಕರು ಸ್ಥಳೀಯಾಡಳಿತದ ಜವಾಬ್ದಾರಿಯ ಕುರಿತು ತಿಳಿಸಿದರು. ಬಿಜೂರು ಶಾಲೆ ರಸ್ತೆಗೆ ಅನುದಾನ ಮಂಜೂರಾಗಿದ್ದು ಶೀಘ್ರದಲ್ಲಿ ಕಾಮಗಾರಿ ನಡೆಸುವುದರ ಜೊತೆಗೆ ಬಾಕಿ ಇರುವ 94ಸಿ ಸಮಸ್ಯೆಯನ್ನು ಬಗೆಹರಿಸುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದರು. ಬಿಜೂರು ಗ್ರಾ.ಪಂ. ಅಧ್ಯಕ್ಷ ರಮೇಶ ವಿ.ದೇವಾಡಿಗ […]
ಜುಲೈ, 20 ರಂದು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ
ಬೆಂಗಳೂರು (ಜು, 18) : ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಜು. 20ಕ್ಕೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟವಾಗಲಿದೆ ಎಂದು ಪಿ.ಯು ಶಿಕ್ಷಣ ಇಲಾಖೆಯ ನಿರ್ದೇಶಕರ ಕಛೇರಿಯಿಂದ ಪ್ರಕಟಣೆ ಹೊರಬಿದ್ದಿದೆ. 2020-21ನೇ ಸಾಲಿನ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ ಹೊಸ ಮತ್ತು ಪುನರಾವರ್ತಿತ ವಿದ್ಯಾರ್ಥಿಗಳು ಫಲಿತಾಂಶವನ್ನು ವೀಕ್ಷಿಸುವ ಸಲುವಾಗಿ ನೋಂದಣಿ ಸಂಖ್ಯೆ ನೀಡಲಾಗುತ್ತಿದೆ.ಫಲಿತಾಂಶ ಪ್ರಕಟಗೊಳಿಸುವ ವಿಚಾರದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ […]
ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ) ಉಪ್ಪುಂದ : ‘ಶ್ರೀ ವರಲಕ್ಷ್ಮೀ ನಿಲಯ’ ಪ್ರವೇಶೋತ್ಸವ
ಬೈಂದೂರು (ಜು, 12): ಕೊಡುಗೈದಾನಿ ಶ್ರೀ ಗೋವಿಂದ ಬಾಬು ಪೂಜಾರಿಯವರ ಪುತ್ರ ಮಾಸ್ಟರ್ ಪ್ರಜ್ವಲ್ ಜಿ. ಪೂಜಾರಿ ಯವರ ಜನ್ಮದಿನದ ಶುಭ ಸಂದರ್ಭದಲ್ಲಿ ಕೊಡೇರಿಯ ರವಳುಮನೆ ನಾಗಮ್ಮ ಎನ್ನುವ ಬಡ ಮಹಿಳೆಯ ಕುಟುಂಬಕ್ಕೆ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ) ನ ಅಧ್ಯಕ್ಷರಾದ ಶ್ರೀ ಗೋವಿಂದ ಬಾಬು ಪೂಜಾರಿಯವರು ನೂತನ ಗ್ರಹ ನಿರ್ಮಿಸಿ ಜುಲೈ 16 ರಂದು ಪ್ರವೇಶೋತ್ಸವದ ಜೊತೆಗೆ ಮನೆಯ ಕೀ ಯನ್ನು ರವಳುಮನೆ ನಾಗಮ್ಮ ರವರಿಗೆ ಹಸ್ತಾಂತರಿಸಿದರು. […]
ಬಗ್ವಾಡಿ:ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಮೊಗವೀರರ ಮನೆ ನಿರ್ಮಾಣಕ್ಕೆ ಶ್ರೀ ಗೋವಿಂದ ಬಾಬು ಪೂಜಾರಿ ನೆರವು
ಬಗ್ವಾಡಿ (ಜು, 15) : ಮಾರಣಕಟ್ಟೆ ಮೇಳದ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಮೊಗವೀರ ಬಗ್ವಾಡಿ ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಗಾಯಗೊಂಡು ಆರ್ಥಿಕ ಸಂಕಷ್ಟದ ಸ್ಥಿತಿಯಲ್ಲಿರುವುದರ ಜೊತೆಗೆ ವಾಸಯೋಗ್ಯ ಮನೆಇಲ್ಲದೆ ತೀರ ಕಷ್ಟದಲ್ಲಿರುವುದನ್ನು ಗಮನಿಸಿದ ಕೊಡುಗೈದಾನಿ ಶ್ರೀ ಗೋವಿಂದ ಬಾಬು ಪೂಜಾರಿಯವರು ಸ್ವತಃ ಕಲಾವಿದ ಸುಬ್ರಹ್ಮಣ್ಯನ ಮನೆಗೆ ಭೇಟಿ ನೀಡಿ ನೂತನ ಮನೆ ನಿರ್ಮಾಣಕ್ಕೆ 50,000 ರೂಪಾಯಿ ಚೆಕ್ ಹಸ್ತಾಂತರಿಸಿದರು. ಅಮ್ಮಾ ವೇದಿಕೆಯ ಸದಸ್ಯರ ಜೊತೆ ಸೇರಿ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ […]
ಕೋಟೇಶ್ವರ : ಸಹಾಯಹಸ್ತ ಅಂಕದಕಟ್ಟೆ ಹಾಗೂ ಕಟ್ಟೆ ಫ್ರೆಂಡ್ಸ್ ಅಂಕದಕಟ್ಟೆ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಗೌರವ ಸಮರ್ಪಣೆ
ಕೋಟೇಶ್ವರ (ಜು,13) : ಕರೋನಾ ಮೊದಲ ಅಲೆಯ ದಿನಗಳಿಂದ ಇಲ್ಲಿಯವರೆಗೂ ಮತ್ತು ಕರೋನಾ ನಿರ್ನಾಮವಾಗುವವರೆಗೂ ಮುಂದಿನ ಸರತಿಯಲ್ಲಿ ನಿಂತು ಕರೋನಾ ವಿರುದ್ದ ಹೋರಾಡುವುದರ ಜೊತೆಗೆ ಯಾವುದೇ ಪ್ರತಿಫಲಾಪೇಕ್ಷೆ ಬಯಸದೆ ನಿಸ್ವಾರ್ಥವಾಗಿ ಸೇವೆಗೈಯುತ್ತಿರುವ ಆಶಾ ಕಾರ್ಯಕರ್ತರ ಸೇವೆಗೆ ಈ ಸಮಾಜದ ಋಣ ಸಾಗರದಷ್ಟಿದೆ. ಆ ದಿಸೆಯಲ್ಲಿ ಸಾಸಿವೆಯಷ್ಟಾದರು ಋಣ ತೀರಿಸುವ ಶಕ್ತಿ ಭಗವಂತ ನಮ್ಮ ಬಳಗಕ್ಕೆ ನೀಡಿದ್ದಾನೆ ಎಂಬ ಆಶಯದೊಂದಿಗೆ ಜುಲೈ 13 ರಂದು ಕೋಟೇಶ್ವರ ಸಮೀಪದ ಅಂಕದಕಟ್ಟೆಯಲ್ಲಿ ಸಹೃದಯಿ ದಾನಿಗಳ […]
ಗಂಗೊಳ್ಳಿ : ಸತೀಶ್ ಜಂಟ್ಸ್ & ಲೇಡೀಸ್ ಫಿಟ್ನೆಸ್ ಜಿಮ್ ಉದ್ಘಾಟನೆ
ಗಂಗೊಳ್ಳಿ (ಜು, 12) : ಸಾಧಕ ಹರೀಶ್ ಖಾರ್ವಿ ಮಾಲಿಕತ್ವದ ಸತೀಶ್ ಜಂಟ್ಸ್ & ಲೇಡೀಸ್ ಫಿಟ್ನೆಸ್ ಜಿಮ್ ಜುಲೈ 11 ರಂದು ಗಂಗೊಳ್ಳಿಯ ಮುಖ್ಯರಸ್ತೆಯ ತತ್ವಮಸಿ ಕಾಂಪ್ಲೆಕ್ಸ್ ನಲ್ಲಿ ಉದ್ಘಾಟನೆಗೊಂಡಿತು. ಆಧುನಿಕ ಶೈಲಿಯ ಸುಸಜ್ಜಿತವಾದ ಈ ಜಿಮ್ ನ್ನು ಮಿಸ್ಟರ್ ಕರ್ನಾಟಕ ಖ್ಯಾತಿಯ ದೇಹದಾಡ್ಯಪಟು ಶ್ರೀನಿವಾಸ ಶೆಟ್ಟಿ ಉದ್ಘಾಟಿಸಿ ಶುಭಹಾರೈಸಿದರು. ಮಿಸ್ಟರ್ ಕರ್ನಾಟಕ ಖ್ಯಾತಿಯ ದೇಹದಾಡ್ಯಪಟು ಸೋಮಶೇಖರ್ ಖಾರ್ವಿ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀನಿವಾಸ ಖಾರ್ವಿ, ಗಂಗೊಳ್ಳಿ ಪ್ರಾಥಮಿಕ […]
ಡಾ. ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ
ಕುಂದಾಪುರ (ಜು, 12) : ಕುಂದಾಪುರದ ಡಾ.ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರೈಸಿದ ವಿದ್ಯಾರ್ಥಿಗಳಿಗೆ ಜ್ಯೇಷ್ಠ ಇನ್ಫೋಟೆಕ್ ಸಂಸ್ಥೆ ಜುಲೈ 10ರಂದು ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ ಏರ್ಪಡಿಸಿತ್ತು . ಸಂದರ್ಶನದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಲ್ಲಿ 05 ವಿದ್ಯಾರ್ಥಿಗಳು ಉದ್ಯೋಗಕ್ಕೆ ಆಯ್ಕೆಯಾಗಿರುತ್ತಾರೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಂಶುಪಾಲರಾದ ಪ್ರೋ.ಕೆ. ಉಮೇಶ್ ಶೆಟ್ಟಿಯವರು ನೇಮಕಾತಿ ಪತ್ರವನ್ನು ನೀಡಿದರು. ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಸಂಸ್ಥೆಯ ವತಿಯಿಂದ ಅಭಿನಂದನೆಗಳನ್ನು ಕೋರಲಾಗಿದೆ.










