ಬೈಂದೂರು (ಜು, 12): ಕೊಡುಗೈದಾನಿ ಶ್ರೀ ಗೋವಿಂದ ಬಾಬು ಪೂಜಾರಿಯವರ ಪುತ್ರ ಮಾಸ್ಟರ್ ಪ್ರಜ್ವಲ್ ಜಿ. ಪೂಜಾರಿ ಯವರ ಜನ್ಮದಿನದ ಶುಭಸಂದರ್ಭದಲ್ಲಿ ಕೊಡೇರಿ ರವಳುಮನೆ ನಾಗಮ್ಮ ಎನ್ನುವ ಬಡ ಮಹಿಳೆಯ ಕುಟುಂಬಕ್ಕೆ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ) ಮೂಲಕ ಸಂಪೂರ್ಣವಾಗಿ ನೂತನ ಮನೆಯೊಂದನ್ನು ನಿರ್ಮಿಸಿಕೊಡಲಾಗಿತ್ತಿದ್ದು, ಆ ಕುಟುಂಬಿಕರ ನಿರ್ಣಯದಂತೆ ಇದೇ ಜುಲೈ 16 ರ ಶುಕ್ರವಾರದಂದು ನಾಗೂರು ಸಮೀಪದ ಕೊಡೇರಿಯಲ್ಲಿ ಸರಳವಾಗಿ ನೂತನ ಗೃಹದ ಪ್ರವೇಶೋತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಕೋವಿಡ್ […]
Category: ಗ್ರಾಮೀಣ ಸುದ್ದಿ
ಸುದ್ದಿ ಸಮಾಚಾರ — > ಗ್ರಾಮೀಣ ಸುದ್ದಿ
ಶಿರ್ವ ಸಂತ ಮೇರಿ ಮಹಾವಿದ್ಯಾಲಯ : ಗದ್ದೆ – ನಾಟಿ ಕ್ರಷಿ ಕಾರ್ಯಕ್ರಮ
ಶಿವ೯(ಜು, 12): ಕೃಷಿ ಮಾನವನ ಕುಲ ಕಸುಬು. ಆಧುನಿಕತೆ ಬೆಳೆದಂತೆ ಮನುಷ್ಯ ಬೇರೆ ಬೇರೆ ಕೆಲಸ ಕಾರ್ಯಗಳಲ್ಲಿ ತನ್ನನ್ನು ತೊಡಗಿಸಿಕೊಂಡ ಕಾರಣ ಇಂದು ಕೃಷಿಯಲ್ಲಿ ಯುವ ಜನತೆಗೆ ಆಸಕ್ತಿ ಕಡಿಮೆಯಾಗಿದೆ.ಆಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ಕೃಷಿ ಕಾರ್ಯ ಇಂದು ಸಾಗುತ್ತಿದೆ.ಈ ನಿಟ್ಟಿನಲ್ಲಿ ಯುವಜನತೆ ಕ್ರಷಿ ಚಟುವಟಿಕೆಗಳಲ್ಲಿ ಭಾಗಿಯಾಗುವ ಮೂಲಕ ನೆಲ-ಜಲ ಭೂಮಿಯ ಸಂರಕ್ಷಣೆಯ ಜೊತೆಗೆ ಭೂಮಿಯನ್ನು ಹಸಿರಾಗಿಸಿ ಮುಂದಿನ ಜನಾಂಗಕ್ಕೆ ಹೆಚ್ಚು ಅನುಕೂಲವಾಗಲಿ ಎನ್ನುವ ಸದುದ್ದೇಶದೊಂದಿಗೆ ಶಿರ್ವ ಸಂತ ಮೇರಿ ಮಹಾವಿದ್ಯಾಲಯದ […]
ಕುಂದಾಪುರ : ‘ಸುರಗಂಗೆ’ ಪುಸ್ತಕ ಬಿಡುಗಡೆ
ಕುಂದಾಪುರ (ಜು, 11) : ಪಂಚಭಾಷಾ ಲೇಖಕಿ ಪಾರ್ವತಿ ಜಿ ಐತಾಳ್ ವಿಶೇಷವಾಗಿ ಕನ್ನಡ ಸಾಹಿತ್ಯಕ್ಕೆ ಸಲ್ಲಿಸಿರುವ ಸೇವೆ ಅನುಪಮವಾದದ್ದು. ಅವರ ಸಾಧನೆ ಸದಾ ಕಾಲ ಪ್ರೇರಣೆ ನೀಡುವಂತದ್ದು. ಅವರಿಗೆ ಸಾಹಿತ್ಯ ಕ್ಷೇತ್ರದಲ್ಲಿ ಮತ್ತಷ್ಟು ಎತ್ತರದ ಮನ್ನಣೆ ಸಿಗಲೇ ಬೇಕಿದೆ ಎಂದು ಖ್ಯಾತ ಕಲಾವಿದೆ ಸಾಹಿತಿ ಪೂರ್ಣಿಮಾ ಸುರೇಶ್ ಅಭಿಪ್ರಾಯಪಟ್ಟರು. ಅವರು ಕುಂದಾಪುರದ ಜನಪ್ರತಿನಿಧಿ ಪ್ರಕಾಶನ ಹೊರತಂದಿರುವ ನರೇಂದ್ರ ಎಸ್ ಗಂಗೊಳ್ಳಿ ಸಂಪಾದಕತ್ವದ ಡಾ. ಪಾರ್ವತಿ ಜಿ ಐತಾಳ್ ಅವರ ಸಮಗ್ರ ಕೃತಿಗಳ […]
ಯುವಾಬ್ರಿಗೇಡ್ ಶಂಕರನಾರಾಯಣ : “ಉಸಿರು ಹಂಚೋಣ” ಗಿಡ ನೆಡುವ ಕಾರ್ಯಕ್ರಮ
ಶಂಕರನಾರಾಯಣ (ಜು, 11): ಕುಂದಾಪುರ ತಾಲೂಕಿನ ಶಂಕರನಾರಾಯಣದ ಕುಪ್ಪಾರು ಪ್ರದೇಶದಲ್ಲಿ ಯುವಾಬ್ರಿಗೇಡ್ ಶಂಕರನಾರಾಯಣದ ವತಿಯಿಂದ “ಉಸಿರು ಹಂಚೋಣ” ಶೀರ್ಷಿಕೆಯಡಿಯಲ್ಲಿ ಮನೆ-ಮನೆಗೆ ಸಂಪರ್ಕ ಮಾಡಿ ವಿವಿಧ ರೀತಿಯ ಗಿಡಗಳನ್ನು ವಿತರಿಸಿ ,ಗಿಡಗಳನ್ನು ನೆಟ್ಟು ಅದನ್ನು ಪೋಷಿಸುವ ಕಾರ್ಯಕ್ರಮನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಶಂಕರನಾರಾಯಣ ಘಟಕದ ಪ್ರಮೋದ್ ಶಂಕರನಾರಾಯಣ, ವಿಜಯ್ ಯಡಮಕ್ಕಿ, ಕಿರಣ್ ಉಳ್ಳೂರು-74, ನಂದನ ಶಂಕರನಾರಾಯಣ, ನಿತೀಶ್ ಶಂಕರನಾರಾಯಣ, ಶ್ರೀಶ ಶಂಕರನಾರಾಯಣ, ಚೇತನ್ ಶಂಕರನಾರಾಯಣ ಪಾಲ್ಗೊಂಡಿದ್ದರು.
ಎಕ್ಸಲೆಂಟ್ ಕಾಲೇಜ್ ಕುಂದಾಪುರ : ಎಸ್.ಎಸ್.ಎಲ್.ಸಿ. ಪರೀಕ್ಷಾರ್ಥಿಗಳಿಗಾಗಿ “ಭವಿಷ್ಯದ ಬಾಗಿಲು” ಕಾರ್ಯಕ್ರಮ
ಕುಂದಾಪುರ (ಜು, 11): ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಮೂಡಬಿದಿರೆಯ ಆಡಳಿತಕ್ಕೆ ಒಳಪಟ್ಟ ಕುಂದಾಪುರದ ಎಕ್ಸಲೆಂಟ್ ಪಿಯು ಕಾಲೇಜು ಮತ್ತು ಸ್ಕೂಲ್ ಪ್ರಸ್ತುತ ವರ್ಷ ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗಾಗಿ “ಭವಿಷ್ಯದ ಬಾಗಿಲು” ಎನ್ನುವ ವಿನೂತನ ಕಾರ್ಯಕ್ರಮವನ್ನು ಆನ್ ಲೈನ್ ನಲ್ಲಿ ಜುಲೈ 12 ಮತ್ತು 13 ರಂದು ಹಮ್ಮಿಕೊಂಡಿದೆ. ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಉಡುಪಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ವಿಜೇತರಾಗಿರುವ ಡಾ|| […]
ಅಮ್ಮ ಸೇವಾ ವೇದಿಕೆ ಹೆಮ್ಮಾಡಿ : ಪದಾಧಿಕಾರಿಗಳ ಆಯ್ಕೆ ಮತ್ತು ಸಹಾಯ ಧನ ಸಂಗ್ರಹ
ಹೆಮ್ಮಾಡಿ (ಜು, 11): ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಮೊಗವೀರ ನಿಗೆ ಶಾಶ್ವತವಾಗಿ ಮನೆಯೊಂದನ್ನು ನಿರ್ಮಿಸಿ ಕೊಡುವ ಸಂಕಲ್ಪದೊಂದಿಗೆ ಹುಟ್ಟಿಕೊಂಡ ಅಮ್ಮ ಸೇವಾ ವೇದಿಕೆ ಹೆಮ್ಮಾಡಿ ಇದರ ಸೇವಾ ಚಟುವಟಿಕೆಗಳನ್ನು ವಿಸ್ತರಿಸುವ ಸಲುವಾಗಿ ಜುಲೈ 11 ರಂದು ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ಸಭಾಗ್ರಹದಲ್ಲಿ ಸಭೆ ನಡೆಸಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಶ್ರೀ ಉದಯ ಕುಮಾರ್ ಹಟ್ಟಿಯಂಗಡಿಯವರನ್ನು ಅಧ್ಯಕ್ಷರಾಗಿ, ಚಂದ್ರ ಬಿ. ಕಂಡ್ಲೂರು ರವರನ್ನುಕಾರ್ಯದರ್ಶಿಯಾಗಿ ಹಾಗೂ ಕೋಶಾಧಿಕಾರಿಯಾಗಿ ಶ್ರೀ ಜಗದೀಶ್ ಮಾರ್ಕೋಡು […]
ಗಂಗೊಳ್ಳಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ : ರಕ್ತದಾನದ ಮಹತ್ವದ ಕುರಿತು ಅರಿವು ಮೂಡಿಸುತ್ತ ಪಾದಯಾತ್ರೆಗೈಯುತ್ತಿರುವ ಚರಣ್ ಗಂಗೊಳ್ಳಿ ನೇತೃತ್ವದ ಯುವಕರ ತಂಡ
ಗಂಗೊಳ್ಳಿ (ಜು,11) : ಕುಂದಾಪುರ ತಾಲೂಕಿನ ಗಂಗೊಳ್ಳಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯುವಕರ ತಂಡವೊಂದು ಪಾದಯಾತ್ರೆಗೆ ಹೊರಟಿದೆ. ಸತತ ಹದಿಮೂರನೇ ವರುಷದ ಪಾದಯಾತ್ರೆ ಯಲ್ಲಿ ಸಾಗುತ್ತಿರುವ ಈ ತಂಡ ದಾರಿಯುದ್ದಕ್ಕೂ ರಕ್ತದಾನದ ಮಹತ್ವದ ಕುರಿತು ಅರಿವು ಮುಡಿಸುತ್ತಿದೆ. ಇಂತಹ ಅರ್ಥಪೂರ್ಣ ಕಾರ್ಯದಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿರುವ ಈ ಭಕ್ತರ ತಂಡದ ನೇತೃತ್ವ ವಹಿಸಿರುವವರು ರಕ್ತದಾನಿ ಚರಣ್ ಗಂಗೊಳ್ಳಿ . ಸತತ ನಲವತ್ತು ಬಾರಿ ಅಗತ್ಯ ಉಳ್ಳವರಿಗೆ ಸ್ವತಃ ರಕ್ತದಾನ ಮಾಡುವುದರ […]
ತ್ರಾಸಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಿಶಿಷ್ಟ ಜಾತಿ ಫಲಾನುಭವಿಗಳಿಗೆ ನಿವೇಶನಾ ಹಕ್ಕುಪತ್ರಗಳನ್ನು ವಿತರಿಸಿದ ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ
ತ್ರಾಸಿ (ಜು, 10) : ತ್ರಾಸಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಿಶಿಷ್ಟ ಜಾತಿ ಫಲಾನುಭವಿಗಳಿಗೆ ನಿವೇಶನಾ ಹಕ್ಕುಪತ್ರಗಳನ್ನು ಬೈಂದೂರು ಶಾಸಕರಾದ ಬಿ.ಎಂ. ಸುಕುಮಾರ ಶೆಟ್ಟಿಯವರು ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಅರ್ಹ ಆರ್ಥಿಕ ದುರ್ಬಲರನ್ನು ಆಯ್ಕೆ ಮಾಡಿ ಹಕ್ಕು ಪತ್ರ ವಿತರಣೆ ಮಾಡಿದ್ದೇವೆ. ಇಂತಹ ಯೋಜನೆಗಳು ಜನರ ಅನುಕೂಲಕ್ಕೆ ಇರುವಂತದ್ದು, ಅದು ಅರ್ಹರನ್ನು ತಲುಪಬೇಕು. ಆ ನಿಟ್ಟಿನಲ್ಲಿ ಎಲ್ಲಾ ಪಂಚಾಯತ್ನಲ್ಲೂ ನಿವೇಶನ ರಹಿತರ ಪಟ್ಟಿಯನ್ನು ಪಡೆದು ನಿವೇಶನ […]
ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜು : ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಹೊಸ ಇಂಜಿನಿಯರಿಂಗ್ ಕೋರ್ಸ್ ಆರಂಭ
ಮೂಡ್ಲಕಟ್ಟೆ (ಜು, 9): ಕುಂದಾಪುರದ ಪ್ರತಿಷ್ಠಿತ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜು (ಎಮ್.ಐ.ಟಿ.) ಇಂಜಿನಿಯರಿಂಗ್ ಕಾಲೇಜಿನಲ್ಲಿ ಆಧುನಿಕ ತಂತ್ರಜ್ಞಾನ ಭರಿತ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಮತ್ತು ಮಷೀನ್ ಲರ್ನಿಂಗ್ ತಂತ್ರಜ್ಞಾನ ದ ಹೊಸ ಕೋರ್ಸ್ ಅನ್ನು ಪ್ರಾರಂಭಿಸಲು ಅನುಮೋದನೆ ದೊರಕಿದ್ದು, ಇದೇ ಸಾಲಿನಲ್ಲಿ ಪ್ರವೇಶ ಪಡೆಯಲು ಅವಕಾಶವಿರುತ್ತದೆ. ಪ್ರಸ್ತುತ ಆಧುನಿಕ ಯುಗದಲ್ಲಿ ಇಂಜಿನಿಯರಿಂಗ್ ಒಳಗೊಳ್ಳುವಿಕೆ ಇಲ್ಲದಿರುವುದನ್ನು ಊಹಿಸಲು ಕಷ್ಟವಾಗಿದ್ದು, ಸ್ವಯಂಚಾಲಿತವಾಗಿ ಕಾರ್ಯ ನಿರ್ವಹಿಸುವ ಉತ್ಪನ್ನಗಳಿಗೆ ಬಹಳ ಬೇಡಿಕೆ ಇರುವುದರಿಂದ ಕೃತಕ ಬುದ್ದಿಶಕ್ತಿ ತಂತ್ರಜ್ಞಾನ […]
ಬೆಳ್ಕಲ್ ತೀರ್ಥದ ಪಾವಿತ್ರ್ಯತೆ ಉಳಿವಿಗಾಗಿ ಮತ್ತು ಕ್ಷೇತ್ರದ ಅಭಿವೃದ್ಧಿಗಾಗಿ ಸಲ್ಲಿಸಿದ ಮನವಿಗೆ ಶಾಸಕ ಶ್ರೀ ಬಿ. ಎಂ. ಸುಕುಮಾರ ಶೆಟ್ಟಿ ಸ್ಪಂದನೆ
ವಂಡ್ಸೆ (ಜೂ, 8): ಹಿಂದು ಜಾಗರಣ ವೇದಿಕೆ ಬೈಂದೂರು ತಾಲೂಕಿನ ಕಾರ್ಯಕರ್ತರುಬೆಳ್ಕಲ್ ತೀರ್ಥದ ಪಾವಿತ್ರ್ಯತೆಯ ಉಳಿವಿಗಾಗಿ ಮತ್ತು ಕ್ಷೇತ್ರದ ಅಭಿವೃದ್ಧಿಗಾಗಿ ಸಲ್ಲಿಸಿದ ಮನವಿಗೆಬೈಂದೂರು ಶಾಸಕ ಶ್ರೀ ಬಿ.ಎಂ.ಸುಕುಮಾರ ಶೆಟ್ಟಿ ಸ್ಪಂದಿಸಿದ್ದಾರೆ. ಮನವಿಗೆ ಸ್ಪಂದಿಸಿದ ಶಾಸಕರು ಬೆಳ್ಕಲ್ ತೀರ್ಥದ ಕ್ಷೇತ್ರದ ಪಾವಿತ್ರ್ಯತೆ ಉಳಿವಿಗಾಗಿ ಸೂಕ್ತ ವ್ಯವಸ್ಥೆ ಕಲ್ಪಸಿ, ತೀರ್ಥ ಸ್ಥಾನಕ್ಕೆ ಹೋಗುವವರು ಯಾವುದೇ ಮಾಂಸದ ಊಟ,ಪ್ಲಾಸ್ಟಿಕ್ ಬಾಟಲಿ,ಮದ್ಯ ತೆಗೆದುಕೊಂಡು ಹೋಗದಂತೆ ಕ್ರಮ ಕೈಗೊಳ್ಳಲು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸ್ಥಳದಲ್ಲೇ ಕರೆ ಮಾಡಿ […]










