ಮೂಡ್ಲಕಟ್ಟೆ (ಜು, 9): ಕುಂದಾಪುರದ ಪ್ರತಿಷ್ಠಿತ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜು (ಎಮ್.ಐ.ಟಿ.) ಇಂಜಿನಿಯರಿಂಗ್ ಕಾಲೇಜಿನಲ್ಲಿ ಆಧುನಿಕ ತಂತ್ರಜ್ಞಾನ ಭರಿತ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಮತ್ತು ಮಷೀನ್ ಲರ್ನಿಂಗ್ ತಂತ್ರಜ್ಞಾನ ದ ಹೊಸ ಕೋರ್ಸ್ ಅನ್ನು ಪ್ರಾರಂಭಿಸಲು ಅನುಮೋದನೆ ದೊರಕಿದ್ದು, ಇದೇ ಸಾಲಿನಲ್ಲಿ ಪ್ರವೇಶ ಪಡೆಯಲು ಅವಕಾಶವಿರುತ್ತದೆ. ಪ್ರಸ್ತುತ ಆಧುನಿಕ ಯುಗದಲ್ಲಿ ಇಂಜಿನಿಯರಿಂಗ್ ಒಳಗೊಳ್ಳುವಿಕೆ ಇಲ್ಲದಿರುವುದನ್ನು ಊಹಿಸಲು ಕಷ್ಟವಾಗಿದ್ದು, ಸ್ವಯಂಚಾಲಿತವಾಗಿ ಕಾರ್ಯ ನಿರ್ವಹಿಸುವ ಉತ್ಪನ್ನಗಳಿಗೆ ಬಹಳ ಬೇಡಿಕೆ ಇರುವುದರಿಂದ ಕೃತಕ ಬುದ್ದಿಶಕ್ತಿ ತಂತ್ರಜ್ಞಾನ […]
Category: ಗ್ರಾಮೀಣ ಸುದ್ದಿ
ಸುದ್ದಿ ಸಮಾಚಾರ — > ಗ್ರಾಮೀಣ ಸುದ್ದಿ
ಬೆಳ್ಕಲ್ ತೀರ್ಥದ ಪಾವಿತ್ರ್ಯತೆ ಉಳಿವಿಗಾಗಿ ಮತ್ತು ಕ್ಷೇತ್ರದ ಅಭಿವೃದ್ಧಿಗಾಗಿ ಸಲ್ಲಿಸಿದ ಮನವಿಗೆ ಶಾಸಕ ಶ್ರೀ ಬಿ. ಎಂ. ಸುಕುಮಾರ ಶೆಟ್ಟಿ ಸ್ಪಂದನೆ
ವಂಡ್ಸೆ (ಜೂ, 8): ಹಿಂದು ಜಾಗರಣ ವೇದಿಕೆ ಬೈಂದೂರು ತಾಲೂಕಿನ ಕಾರ್ಯಕರ್ತರುಬೆಳ್ಕಲ್ ತೀರ್ಥದ ಪಾವಿತ್ರ್ಯತೆಯ ಉಳಿವಿಗಾಗಿ ಮತ್ತು ಕ್ಷೇತ್ರದ ಅಭಿವೃದ್ಧಿಗಾಗಿ ಸಲ್ಲಿಸಿದ ಮನವಿಗೆಬೈಂದೂರು ಶಾಸಕ ಶ್ರೀ ಬಿ.ಎಂ.ಸುಕುಮಾರ ಶೆಟ್ಟಿ ಸ್ಪಂದಿಸಿದ್ದಾರೆ. ಮನವಿಗೆ ಸ್ಪಂದಿಸಿದ ಶಾಸಕರು ಬೆಳ್ಕಲ್ ತೀರ್ಥದ ಕ್ಷೇತ್ರದ ಪಾವಿತ್ರ್ಯತೆ ಉಳಿವಿಗಾಗಿ ಸೂಕ್ತ ವ್ಯವಸ್ಥೆ ಕಲ್ಪಸಿ, ತೀರ್ಥ ಸ್ಥಾನಕ್ಕೆ ಹೋಗುವವರು ಯಾವುದೇ ಮಾಂಸದ ಊಟ,ಪ್ಲಾಸ್ಟಿಕ್ ಬಾಟಲಿ,ಮದ್ಯ ತೆಗೆದುಕೊಂಡು ಹೋಗದಂತೆ ಕ್ರಮ ಕೈಗೊಳ್ಳಲು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸ್ಥಳದಲ್ಲೇ ಕರೆ ಮಾಡಿ […]
ಅಪಘಾತಗೊಂಡ ಕಲಾವಿದ ಸುಬ್ರಹ್ಮಣ್ಯ ಮೊಗವೀರ ಮನೆಗೆ ಬೈಂದೂರು ಶಾಸಕರ ಭೇಟಿ
ವಂಡ್ಸೆ (ಜು, 8) : ಇತ್ತೀಚೆಗೆ ಬೈಕ್ ಅಪಘಾತಕ್ಕೆ ಒಳಗಾದ ಯಕ್ಷಗಾನ ಕಲಾವಿದ ಬಗ್ವಾಡಿಯ ಸುಬ್ರಹ್ಮಣ್ಯ ಮೊಗವೀರ ನ ಮನೆಗೆ ಬೈಂದೂರಿನ ಶಾಸಕರಾದ ಬಿ. ಎಂ. ಸುಕುಮಾರ ಶೆಟ್ಟಿಯವರು ಭೇಟಿ ನೀಡಿ ಸಾಂತ್ವನ ಹೇಳಿ ಧೈರ್ಯ ತುಂಬಿದರು. ಮೀನುಗಾರಿಕೆ ಇಲಾಖೆಯಿಂದ ಶೀಘ್ರವಾಗಿ ಮನೆ ನಿರ್ಮಿಸಿಕೊಡುವುದಾಗಿ ತಿಳಿಸಿ, ತಕ್ಷಣವೇ ಸಂಬಂಧಪಟ್ಟವರಿಗೆ ಶಾಸಕರು ಮಾತನಾಡಿದರು. ಜೊತೆಗೆ ಕಿರು ಮೊತ್ತದ ಆರ್ಥಿಕ ಸಹಾಯಧನ ನೀಡಿ ಧೈರ್ಯ ತುಂಬಿದ ಶಾಸಕರು ಮನೆ ನಿರ್ಮಿಸಲು ಬೇಕಾಗುವ ಹಂಚುಗಳನ್ನು […]
ಉಡುಪಿ ಡಯೆಟ್ ಯೂಟ್ಯೂಬ್ ಚಾನೆಲ್ – ಉಡುಪಿ ಜಿಲ್ಲಾ ಶಿಕ್ಷಣ ಇಲಾಖೆ ಕೈಗೊಂಡ ಮಹತ್ವಪೂರ್ಣ ಹೆಜ್ಜೆ : ಶಿಕ್ಷಕ ಗಣೇಶ್ ಸಿ. ಎನ್. ಅಭಿಪ್ರಾಯ
ಉಡುಪಿ (ಜು, 4) : ಉಡುಪಿ ಡಯೆಟ್ ಯೂಟ್ಯೂಬ್ ಚಾನೆಲ್ ಇದು ಉಡುಪಿ ಜಿಲ್ಲಾ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗೆ ಕಲಿಕೆಗೆ ಅನುಕೂಲವಾಗಲು ಕೈಗೊಂಡ ಮಹತ್ವ ಪೂರ್ಣ ಹಾಗೂ ಅದ್ಭುತ ಹೆಜ್ಜೆ.ಈ ಕರೋನಾದಂತಹ ಸಾಂಕ್ರಾಮಿಕ ಪರಿಸ್ಥಿತಿಯಲ್ಲಿ ಮಕ್ಕಳನ್ನು ಕಲಿಕೆಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಇದು ಶಿಕ್ಷಕರಿಗೆ ಮತ್ತು ಪೋಷಕರಿಗೆ ಸಹಕಾರಿಯಾಗುತ್ತದೆ. ಈ ಯೂಟ್ಯೂಬ್ ಚಾನೆಲ್ಗೆ ಚಂದಾದಾರರಾಗಲು ಮತ್ತು ಮಕ್ಕಳಿಗೆ ಇಂಗ್ಲಿಷ್ ಕಲಿಯಲು ಸಹಾಯ ಮಾಡಲು ನಾನು ಎಲ್ಲ ಪೋಷಕರನ್ನು ಕೋರುತ್ತೇನೆ ಎಂದು […]
ಅಪಘಾತಕ್ಕೆ ಒಳಗಾಗಿ ಸಂಕಷ್ಟದಲ್ಲಿರುವ ಕಲಾವಿದನ ನೆರವಿಗಾಗಿ “ಅಮ್ಮ ವೇದಿಕೆ” – ಮನೆ ನಿರ್ಮಿಸಿ ಕೊಡುವ ಸಂಕಲ್ಪ
ಬಗ್ವಾಡಿ (ಜು, 4) : ಬೈಕ್ ಅಪಘಾತದಲ್ಲಿ ಗಾಯ ಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ವೆಚ್ಚ ಬರಿಸಲಾಗದೆ ಸಂಕಷ್ಟಕ್ಕೆ ಸಿಲುಕಿದ್ದ ಮಾರಣಕಟ್ಟೆ ಮೇಳದ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಮೊಗವೀರನಿಗೆ ಸಹ್ರದಯಿ, ಸಮಾನ ಮನಸ್ಕರ ತಂಡವೊಂದು ಸಹಾಯ ಮಾಡಲು ಮುಂದಾಗಿದೆ. ಸದ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿರುವ ಕಲಾವಿದನಿಗೆ ಸುಸಜ್ಜಿತವಾದ ಮನೆಯೊಂದನ್ನು ನಿರ್ಮಿಸಿ ಕೊಡಲು “ಅಮ್ಮ ವೇದಿಕೆ” ಯೊಂದು ಸಜ್ಜಾಗಿದೆ. ಆರ್ಥಿಕವಾಗಿ ಬಡತನದಲ್ಲಿರುವ ಈ ಕಲಾವಿದನ ಜೊತೆ ಅಜ್ಜಿ, ಅಮ್ಮ ಹಾಗೂ ಸಹೋದರ […]
ತಲ್ಲೂರಿನ ಬಡ ಕುಟಂಬ ಗಿರಿಜಾ ಮೊಗವೀರರ ಮನೆ ನಿರ್ಮಾಣಕ್ಕೆ ಸಹಾಯಹಸ್ತ ಚಾಚಿದ ಕೊಡುಗೈದಾನಿ ಶ್ರೀ ಗೋವಿಂದ ಬಾಬು ಪೂಜಾರಿ
ಕುಂದಾಪುರ (ಜು, 04): ಕುಂದಾಪುರ ತಾಲೂಕಿನ ತಲ್ಲೂರು ಗ್ರಾಮದ ಗಿರಿಜಾ ಮೊಗವೀರ ರ ಬಡ ಕುಟಂಬದ ಮನೆ ನಿರ್ಮಾಣಕ್ಕೆ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ( ರಿ) ಉಪ್ಪುಂದ ಇದರ ಅಧ್ಯಕ್ಷರಾದ ಕೊಡುಗೈದಾನಿ ಶ್ರೀ ಗೋವಿಂದ ಬಾಬು ಪೂಜಾರಿಯವರು ಸಹಾಯಹಸ್ತ ಚಾಚಿದ್ದಾರೆ. ಗಿರಿಜಾರವರ ಮನೆಯ ಮೇಲ್ಛಾವಣಿಯ ಕಾಮಗಾರಿ ವೆಚ್ಚವನ್ನ ಭರಿಸುವುದಾಗಿ ಶ್ರೀ ಗೋವಿಂದ ಬಾಬು ಪೂಜಾರಿ ತಿಳಿಸಿದ್ದಾರೆ. ಸ್ವತಃ ತಾವೇ ಗಿರಿಜಾ ರವರ ಮನೆಗೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿ […]
ಜೈ ಕುಂದಾಪ್ರ ಸೇವಾ ಟ್ರಸ್ಟ್ (ರಿ.) ಕುಂದಾಪುರ : 34ನೇ ಯೋಜನೆ – ಕಲಿಕೆಗೆ ಆಸರೆ
ಕುಂದಾಪುರ (ಜು, 02): ದ್ವಿತೀಯ ಪಿ.ಯು.ಸಿ ವ್ಯಾಸಂಗ ಮುಗಿಸಿದ ನಂತರ 2021-2022 ನೇ ಸಾಲಿನಲ್ಲಿ ವೃತ್ತಿಪರ ಶಿಕ್ಷಣ (ನರ್ಸಿಂಗ್, ಪ್ಯಾರಾ ಮೆಡಿಕಲ್, ಫುಡ್ ಟೆಕ್ನಿಷಿಯನ್, ಹೋಟೆಲ್ ಮ್ಯಾನೇಜ್ಮೆಂಟ್ ಇತ್ಯಾದಿ) ಕೋರ್ಸ್ ನ್ನು ಆಯ್ಕೆ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೆ ಜೈ ಕುಂದಾಪ್ರ ಸೇವಾ ಟ್ರಸ್ಟ್ (ರಿ) ಕುಂದಾಪುರದ ವತಿಯಿಂದ “ವಿದ್ಯಾರ್ಥಿವೇತನ” ಹಾಗೂ ಸಹಾಯಧನವನ್ನು ನೀಡುವ ಕಲಿಕೆಗೆ ಆಸರೆ ಎನ್ನುವ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಈ ಯೋಜನೆಯ ಸದುಪಯೋಗ ಪಡೆದು ಕೊಳ್ಳ ಬೇಕೆಂದು […]
ಬೈಕ್ ಅಪಘಾತದಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿಕ್ಷಕ ಜಿ. ಎಸ್. ಶಿವಕುಮಾರ್ ರವರ ಚಿಕಿತ್ಸೆಯ ನೆರವಿಗೆ ಮನವಿ
ಮಂಗಳೂರು (ಜು, 03) : ಮಂಗಳೂರಿನ ಶ್ರೀನಿವಾಸ ಕಾಲೇಜಿನಲ್ಲಿ ಶಿಕ್ಷಕರಾಗಿ ಕೆಲಸ ನಿರ್ವಹಿಸುತ್ತಿರುವ ಸುರುಳಿಕುಮೇರಿ ನಿವಾಸಿ, ಪ್ರಸ್ತುತ ಪುತ್ತೂರಿನಲ್ಲಿ ವಾಸವಾಗಿರುವ ಜಿ.ಎಸ್. ಶಿವಕುಮಾರ್ ಅವರು ಕಳೆದ ಜೂನ್, 25 ರಂದು ಪುತ್ತೂರಿನ ಸಂಪ್ಯ ಬಳಿ ಬೈಕ್ ಅಪಘಾತದಿಂದಾಗಿ ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ತೀವ್ರ ನಿಗಾ ವಿಭಾಗದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದಾರೆ. ಅವರ ಮಕ್ಕಳು ಇನ್ನೂ ಚಿಕ್ಕವರಾಗಿದ್ದು, ಪತ್ನಿ ಗೃಹಿಣಿಯಾಗಿದ್ದಾರೆ. ಅವರ ಚಿಕಿತ್ಸೆಗೆ ಬಹುದೊಡ್ಡ ಮೊತ್ತದ ಅವಶ್ಯಕತೆಯಿದ್ದು. ದಿನಕ್ಕೆ 40-50 ಸಾವಿರ ರೂ […]
ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಮೊಗವೀರ ಬಗ್ವಾಡಿಯವರ ಚಿಕಿತ್ಸೆಗೆ ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಸ್ಥಾನದ ವತಿಯಿಂದ ನೆರವು
ಹೆಮ್ಮಾಡಿ (ಜು, 3): ಬೈಕ್ ಅಪಘಾತಕ್ಕೀಡಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಮೊಗವೀರರ ಚಿಕಿತ್ಸೆಗೆ ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಸ್ಥಾನದ ವತಿಯಿಂದ ಹತ್ತು ಸಾವಿರ ರೂಪಾಯಿಯ ಸಹಾಯ ಧನವನ್ನು ಮೊಗವೀರ ಮಹಾಜನ ಸೇವಾ ಸಂಘ (ರಿ) ಬಗ್ವಾಡಿ ಹೋಬಳಿ ಅಧ್ಯಕ್ಷರಾದ ಕೆ. ಕೆ. ಕಾಂಚನ್ ರವರು ಅವರ ಸಂಬಂಧಿಕರಿಗೆ ಹಸ್ತಾಂತರಿಸಿದರು. ಈ ಸಂಧರ್ಭದಲ್ಲಿ ಸಂಘದ ಕಾರ್ಯದರ್ಶಿ ಸುರೇಶ್ ವಿಠಲವಾಡಿ ಉಪಸ್ಥಿತರಿದ್ದರು.
ರೋಟರಿ ಕ್ಲಬ್ ಗಂಗೊಳ್ಳಿ : ರಾಷ್ಟ್ರೀಯ ವೈದ್ಯರ ದಿನಾಚರಣೆ
ಗಂಗೊಳ್ಳಿ (ಜು, 01): ರಾಷ್ಟ್ರೀಯ ವೈದ್ಯರ ದಿನಾಚರಣೆ ಪ್ರಯುಕ್ತ ರೋಟರಿ ಕ್ಲಬ್ ಗಂಗೊಳ್ಳಿ ಇದರ ಆಶ್ರಯದಲ್ಲಿ ವೈದ್ಯರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಮಿತಾ ರವರನ್ನು ವೈದ್ಯರ ದಿನಾಚರಣೆ ಪ್ರಯುಕ್ತ ಸನ್ಮಾನಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಗಂಗೊಳ್ಳಿ ಇದರ ಅಧ್ಯಕ್ಷ ರಾಜೇಶ್ ಶೇರೆಗಾರ್ ವಹಿಸಿದ್ದರು. ನಾರಾಯಣ ನಾಯ್ಕ, ರಮನಾಥ ನಾಯಕ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ರೋಟರಿ ಕ್ಲಬ್ ಗಂಗೊಳ್ಳಿ ಇದರ ಪದಾಧಿಕಾರಿಗಳು, ಗ್ರಾಮ ಪಂಚಾಯತ್ […]










