ವಂಡ್ಸೆ (ಜೂ, 24) : ಭಾರತದ ಸಮಗ್ರತೆ ಮತ್ತು ಸಾರ್ವಭೌಮತೆಗೆ ಅಡ್ಡಿಯಾದ ಆರ್ಟಿಕಲ್ 370 ಬಗ್ಗೆ ಮೊದಲು ಧ್ವನಿ ಎತ್ತಿದವರು ಡಾ.ಶ್ಯಾಮ ಪ್ರಸಾದ್ ಮುಖರ್ಜಿಯವರು. ಇವರ ಪ್ರಯತ್ನದ ಫಲವಾಗಿ ಜನಸಂಘದ ರಚನೆಯಾಯಿತು. ಇವರು ಬಿತ್ತಿದ ರಾಷ್ಟ್ರೀಯತೆ ಮತ್ತು ಭಾರತೀಯತೆಯ ಗುಣಗಳಿಂದಾಗಿ ಇಂದು ನಮ್ಮ ಬಿಜೆಪಿ ಪಕ್ಷ ವಿಶ್ವದ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ಬೈಂದೂರು ಶಾಸಕ ಬಿ.ಎಮ್. ಸುಕುಮಾರ ಶೆಟ್ಟಿ ಹೇಳಿದರು. ಉದಾತ್ತ ಕಾರಣಗಳಿಗಾಗಿ ಹುತಾತ್ಮರಾದ ಶ್ಯಾಮಪ್ರಸಾದ್ ಮುಖರ್ಜಿಯವರು ಎಂದೆಂದಿಗೂ […]
Category: ಗ್ರಾಮೀಣ ಸುದ್ದಿ
ಸುದ್ದಿ ಸಮಾಚಾರ — > ಗ್ರಾಮೀಣ ಸುದ್ದಿ
ಬಾರ್ಕೂರು : ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರಕಾರಿ ಕಾಲೇಜು – ಉಚಿತ ಟ್ಯಾಬ್ಲೆಟ್ ಪಿ ಸಿ ವಿತರಣಾ ಕಾರ್ಯಕ್ರಮ ಹಾಗೂ ಸ್ಮಾರ್ಟ್ ಕ್ಲಾಸ್ ರೂಮ್ ಉದ್ಘಾಟನಾ ಸಮಾರಂಭ
ಬ್ರಹ್ಮಾವರ (ಜೂ, 24): ಕರ್ನಾಟಕ ಸರಕಾರದ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವತಿಯಿಂದ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಬಾರ್ಕೂರು ಇದರ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿ ಸಿ ವಿತರಣಾ ಕಾರ್ಯಕ್ರಮ ಹಾಗೂ ಸ್ಮಾರ್ಟ್ ಕ್ಲಾಸ್ ರೂಮ್ ಉದ್ಘಾಟನಾ ಸಮಾರಂಭ ಜೂನ್, 23 ರಂದು ಕಾಲೇಜಿನ ರೂಸಾ ಸಭಾಂಗಣದಲ್ಲಿ ನಡೆಯಿತು. ಕಾಲೇಜು […]
ವಿಶ್ವ ಹಿಂದೂ ಪರಿಷತ್ ಬಜರಂಗದಳ ಕೋಟೇಶ್ವರ : ಅಶಕ್ತ ಕುಟುಂಬಕ್ಕೆ ನೂತನ ಗ್ರಹ ನಿರ್ಮಾಣ
ಕೋಟೇಶ್ವರ (ಜೂ,23) ವಿಶ್ವಹಿಂದೂ ಪರಿಷತ್ ಬಜರಂಗದಳ ಕೋಟೇಶ್ವರದ ಕಾರ್ಯಕರ್ತರು ಲಾಕ್ಡೌನ್ ದಿನಗಳಲ್ಲಿ ತಮ್ಮ ಸಮಯ ವ್ಯರ್ಥ ಮಾಡದೇ ಸಮಾಜದ ಅಶಕ್ತರ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು.ಅದಕ್ಕೆ ಉದಾಹರಣೆ ಎನ್ನುವಂತೆ ಕೋಟೇಶ್ವರ ಪರಿಸರದ ಬೇಬಿ ಎನ್ನುವ ಮಹಿಳೆಯ ತೀರ ಅಶಕ್ತ ಕುಟುಂಬದ ಮನೆ ದು:ಸ್ಥಿತಿಯನ್ನು ಕಂಡು ಅದನ್ನು ಸಂಪೂರ್ಣ ದುರಸ್ಥಿ ಮಾಡಿಸಿ ವಿನೂತನವಾಗಿ ನಿರ್ಮಿಸಿ ಕೊಟ್ಟಿರುತ್ತಾರೆ .ಇವರ ಈ ಸೇವಾ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ಅಂಪಾರು : ವಿಕಲಚೇತನರಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಣೆ
ಅಂಪಾರು (ಜೂ, 22): ಉಡುಪಿ ಜಿಲ್ಲೆಯ ಸಕ್ಷಮ ಸಂಸ್ಥೆಯಿಂದ ಅಂಪಾರು ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿರುವ ವಿಕಲಚೇತನರಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಣಾ ಕಾರ್ಯಕ್ರಮ ಜೂನ್,22 ರಂದು ಅಂಪಾರು ಗ್ರಾಮ ಪಂಚಾಯತ್ ಕೇಂದ್ರದಲ್ಲಿ ನಡೆಯಿತು. ಉಡುಪಿ ಜಿಲ್ಲೆಯ ಸಕ್ಷಮ ಸಂಸ್ಥೆಯ ಶ್ರೀ ನಿತೇಶ್ ಮಲ್ಪೆ ಕಿಟ್ ವಿತರಿಸಿದರು. ಈ ಸಂದರ್ಭದಲ್ಲಿ ಅಂಪಾರು ಗ್ರಾಮ ಪಂಚಾಯತ್ ನ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸರ್ವ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, VRW ಸುಜಾತ ಶೆಟ್ಟಿ, ಹಾಗೂ […]
ವಂಡ್ಸೆ : ಶಾಸಕರ ನಿವಾಸದಲ್ಲಿ ವಿಶ್ವ ಯೋಗ ದಿನಾಚರಣೆ
ವಂಡ್ಸೆ (ಜೂ, 22): ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯದ ಸಮತೋಲನ ಕಾಪಾಡಿಕೊಳ್ಳಲು ಯೋಗಾಸನ ಅತ್ಯವಶ್ಯಕ. ಆ ನಿಟ್ಟಿನಲ್ಲಿ ಜೂನ್, 21 ರಂದು ಜಗತ್ತಿನ ವಿವಿಧ ಭಾಗಗಳಲ್ಲಿ ವಿಶ್ವ ಯೋಗ ದಿನಾಚರಣೆ ಆಚರಿಸಲಾಗುತ್ತದೆ. ನಮ್ಮ ರಾಜ್ಯದ ವಿವಿಧ ಭಾಗಗಳಲ್ಲೂ ವಿಶ್ವ ಯೋಗ ದಿನಾಚರಣೆ ಆಚರಿಸಿದ್ದು, ಬೈಂದೂರು ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ ತಮ್ಮ ನೆಂಪುವಿನಲ್ಲಿರುವ ನಿವಾಸದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸುವುದರ ಮೂಲಕ ಯೋಗಾಸನದ ಮಹತ್ವವನ್ನು ತಿಳಿಸಿದರು. ಈ […]
ಶ್ರೀ ವರಲಕ್ಷ್ಮೀ ಚಾರಿಟೇಬಲ್ (ರಿ) ಉಪ್ಪುಂದ : ಜೂನ್, 26 ರಂದು ಬಡ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ ಕಾರ್ಯಕ್ರಮ
ಉಪ್ಪುಂದ (ಜೂನ್, 22): ಕರೋನಾ ಲಾಕ್ಡೌನ್ ಸಂದರ್ಭದಲ್ಲಿ ಸರಿಸುಮಾರು ಆರು ಸಾವಿರಕ್ಕೂ ಮಿಕ್ಕಿ ಬಡಕುಟುಂಬಗಳಿಗೆ ದಿನಸಿ ಸಾಮಾಗ್ರಿಗಳ ಕಿಟ್ ನ್ನು ವಿತರಿಸಿರುವ ಕೊಡುಗೈದಾನಿ ಶ್ರೀ ಗೋವಿಂದ ಬಾಬು ಪೂಜಾರಿಯವರ ಜನ್ಮದಿನದ ಶುಭ ಸಂದರ್ಭದಲ್ಲಿ ಉಪ್ಪುಂದದ ಕಾಸನಾಡಿ ಗ್ರಾಮದ ವಿಜಯ ರಮೇಶ್ ಪೂಜಾರಿಯವರಿಗೆ ಟ್ರಸ್ಟ್ ವತಿಯಿಂದ ನೀಡಲಾಗುವ ನೂತನ ಗ್ರಹ ‘ಶ್ರೀ ವರಲಕ್ಷ್ಮೀ ನಿಲಯ’ ದ ಪ್ರವೇಶೋತ್ಸವ ಹಾಗೂ ಹಸ್ತಾಂತರ ಕಾರ್ಯಕ್ರಮ ಜೂನ್, 26 ರ ಶನಿವಾರದಂದು ಉಪ್ಪುಂದದ ಕಾಸನಾಡಿಯಲ್ಲಿ ಜರುಗಲಿದೆ. […]
ಸಂತ ಮೇರಿ ಮಹಾವಿದ್ಯಾಲಯ, ಶಿರ್ವ : ಅಂತರಾಷ್ಟ್ರೀಯ ಯೋಗ ದಿನಾಚರಣೆ
ಶಿರ್ವ (ಜೂ, 21): ಅಂತರಾಷ್ಟ್ರೀಯ ಯೋಗ ದಿನವನ್ನು ಜೂನ್ 21ರಂದು ಜಗತ್ತಿನಾದ್ಯಂತ ಆಚರಿಸಲಾಗುತ್ತದೆ.ಪ್ರಸ್ತುತ ಸಾಲಿನಲ್ಲಿ ಕೋವಿಡ್ -19 ಕಾರಣದಿಂದಾಗಿ ಸಾರ್ವಜನಿಕ ಸಭೆ,ಸಮಾರಂಭ ಹಾಗೂ ಮತ್ತಿತರ ಕಾರ್ಯಕ್ರಮಗಳನ್ನು ಆಯೋಜಿಸುವುದನ್ನು ನಿಷೇಧಿಸುವುದರಿಂದ, ಮನೆಯಿಂದಲೇ ಯೋಗ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ,ಯೋಗ ದಿನವನ್ನು ಆಚರಿಸಲು ಸರ್ಕಾರದ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಆಯುಷ್ ಇಲಾಖೆ ಹಾಗೂ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಸಹಯೋಗದಲ್ಲಿ ಆಯುಷ್ ಮಂತ್ರಾಲಯವು ನೀಡಿರುವ ಮಾರ್ಗಸೂಚಿಯಂತೆ “Be With Yoga, Be At Home” ಘೋಷವಾಕ್ಯದೊಂದಿಗೆ […]
ಲಾಕ್ ಡೌನ್ ಸಂದರ್ಭದಲ್ಲಿ ವಿಕಲಚೇತನರ ಸಂಕಷ್ಟಕ್ಕೆ ಸ್ಪಂದಿಸಲು ಸಚಿವ ಶ್ರೀನಿವಾಸ ಪೂಜಾರಿಗೆ ಮನವಿ
ಕೋಟ (ಜೂ, 19): ಕರೋನಾ ಲಾಕ್ ಡೌನ್ ಸಂದರ್ಭದಲ್ಲಿ ವಿಕಲಚೇತನರು ಅನುಭವಿಸುತ್ತಿರುವ ಸಂಕಷ್ಟಕ್ಕೆ ಸ್ಪಂದಿಸಲು ಉಡುಪಿ ಜಿಲ್ಲೆಯ ಅಂಗವಿಕಲರ ಮತ್ತು ಪಾಲಕರ ಜಿಲ್ಲೆಯಾಧ್ಯಕ್ಷರಾದ ಶ್ರೀ ಮಂಜುನಾಥ ಹೆಬ್ಬಾರ್ ನೇತೃತ್ವದಲ್ಲಿ ಧಾರ್ಮಿಕ ದತ್ತಿ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀ ಕೋಟಾ ಶ್ರೀನಿವಾಸ ಪೂಜಾರಿ ಯವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾನ್ಯ ಸಚಿವರು ಮಾತನಾಡಿ ಅತ್ಯಂತ ತೀವ್ರತೆ ಮತ್ತು ಕಷ್ಟದಲ್ಲಿದ್ದ ವಿಕಲಚೇತನರಿಗೆ ಆಹಾರ ಸಾಮಗ್ರಿಗಳ ಕಿಟ್ […]
ಬದುಕು ಮತ್ತು ಕಲೆ ಎರಡನ್ನು ಸಮಾನವಾಗಿ ಪ್ರೀತಿಸುವ ಉಪ್ಪುಂದ ಮೇಲ್ಮನೆ ಜಗದೀಶ್ ದೇವಾಡಿಗ
ತನ್ನನ್ನು ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುತ್ತಾ, ಮಿತ್ರ ಬಳಗವನ್ನು ಬೆಳೆಸುತ್ತಾ, ತಮ್ಮ ಬದುಕಿನ ಇತಿಮಿತಿಯ ಒಳಗೆ ಉತ್ತಮ ಕೆಲಸ ಮಾಡುವುದರೊಂದಿಗೆ ಹ್ರದಯ ವೈಶಾಲ್ಯತೆಯನ್ನು ತೋರುವ ಒಬ್ಬ ಯುವಕನ ಬಗ್ಗೆ ನಿಮಗೆ ಹೇಳಲೇ ಬೇಕು. ಅವರೇ ಸರಳ ಸ್ವಭಾವದ ಸೇವಾ ಜೀವಿ,ಯುವ ಸಾಹಿತಿ ಉಪ್ಪುಂದ ಮೇಲ್ಮನೆ ಜಗದೀಶ್ ದೇವಾಡಿಗ. ಗೆಳೆಯರು ಇವರನ್ನು ಪ್ರೀತಿಯಿಂದ” ಜಗ್ಗು” ಎಂದು ಕರೆಯುತ್ತಾರೆ. ಶ್ರೀಯುತರು 1985ರ ಮಾರ್ಚ್ ,7 ರಂದು ಭದ್ರ ದೇವಾಡಿಗ & ಚಂದು ದೇವಾಡಿಗರ ಎರಡನೆಯ […]
ಸಮಾಜ ಸೇವೆಯಿಂದ ಸಂತ್ರಪ್ತಿ ಪಡೆದ ಕೊಡುಗೈದಾನಿ ಶ್ರೀ ಗೋವಿಂದ ಬಾಬು ಪೂಜಾರಿಯವರ ಮನದಾಳದ ಮಾತು
ಪ್ರೀತಿಯ ಬಂಧು ಮಿತ್ರರೇ, ನಾನು ನಿಮ್ಮ ಗೋವಿಂದ ಬಾಬು ಪೂಜಾರಿ.ಕರೋನದಿಂದ ಇಡೀ ಜಗತ್ತೇ ತತ್ತರಿಸಿದೆ. ಕಳೆದ ಎರಡು ವರ್ಷಗಳಿಂದ ಕರೋನಾ ಲಾಕ್ಡೌನ್ ಸಂಕಷ್ಟಕ್ಕೆ ಸಿಲುಕಿರುವವರನ್ನು ಗುರುತಿಸಿ ಆಹಾರದ ಕಿಟ್ ಗಳನ್ನು ಅವರವರ ಗ್ರಾಮಕ್ಕೆ ಇಂತಿಷ್ಟು ಎಂದು ನನ್ನ ಕೈಲಾದಷ್ಟು ಸ್ವತಃ ನಾನೇ ಗ್ರಾಮಗಳಿಗೆ ಭೇಟಿ ನೀಡಿ ಕಿಟ್ ಹಸ್ತಾಂತರಿಸಿದ್ದೇನೆ. ಯಾವುದೇ ಜಾತಿ, ಮತ, ಧರ್ಮ, ರಾಜಕೀಯ ಭೇದಭಾವ ಇಲ್ಲದೆ ಎಲ್ಲಾ ವರ್ಗದವರನ್ನು ಸಮಾನರಂತೆ ಪರಿಗಣಿಸಿ ಬೈಂದೂರು ಭಾಗದ ಮೂಲೆ -ಮೂಲೆಗೆ […]










