ತನ್ನನ್ನು ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುತ್ತಾ, ಮಿತ್ರ ಬಳಗವನ್ನು ಬೆಳೆಸುತ್ತಾ, ತಮ್ಮ ಬದುಕಿನ ಇತಿಮಿತಿಯ ಒಳಗೆ ಉತ್ತಮ ಕೆಲಸ ಮಾಡುವುದರೊಂದಿಗೆ ಹ್ರದಯ ವೈಶಾಲ್ಯತೆಯನ್ನು ತೋರುವ ಒಬ್ಬ ಯುವಕನ ಬಗ್ಗೆ ನಿಮಗೆ ಹೇಳಲೇ ಬೇಕು. ಅವರೇ ಸರಳ ಸ್ವಭಾವದ ಸೇವಾ ಜೀವಿ,ಯುವ ಸಾಹಿತಿ ಉಪ್ಪುಂದ ಮೇಲ್ಮನೆ ಜಗದೀಶ್ ದೇವಾಡಿಗ. ಗೆಳೆಯರು ಇವರನ್ನು ಪ್ರೀತಿಯಿಂದ” ಜಗ್ಗು” ಎಂದು ಕರೆಯುತ್ತಾರೆ. ಶ್ರೀಯುತರು 1985ರ ಮಾರ್ಚ್ ,7 ರಂದು ಭದ್ರ ದೇವಾಡಿಗ & ಚಂದು ದೇವಾಡಿಗರ ಎರಡನೆಯ […]
Category: ಗ್ರಾಮೀಣ ಸುದ್ದಿ
ಸುದ್ದಿ ಸಮಾಚಾರ — > ಗ್ರಾಮೀಣ ಸುದ್ದಿ
ಸಮಾಜ ಸೇವೆಯಿಂದ ಸಂತ್ರಪ್ತಿ ಪಡೆದ ಕೊಡುಗೈದಾನಿ ಶ್ರೀ ಗೋವಿಂದ ಬಾಬು ಪೂಜಾರಿಯವರ ಮನದಾಳದ ಮಾತು
ಪ್ರೀತಿಯ ಬಂಧು ಮಿತ್ರರೇ, ನಾನು ನಿಮ್ಮ ಗೋವಿಂದ ಬಾಬು ಪೂಜಾರಿ.ಕರೋನದಿಂದ ಇಡೀ ಜಗತ್ತೇ ತತ್ತರಿಸಿದೆ. ಕಳೆದ ಎರಡು ವರ್ಷಗಳಿಂದ ಕರೋನಾ ಲಾಕ್ಡೌನ್ ಸಂಕಷ್ಟಕ್ಕೆ ಸಿಲುಕಿರುವವರನ್ನು ಗುರುತಿಸಿ ಆಹಾರದ ಕಿಟ್ ಗಳನ್ನು ಅವರವರ ಗ್ರಾಮಕ್ಕೆ ಇಂತಿಷ್ಟು ಎಂದು ನನ್ನ ಕೈಲಾದಷ್ಟು ಸ್ವತಃ ನಾನೇ ಗ್ರಾಮಗಳಿಗೆ ಭೇಟಿ ನೀಡಿ ಕಿಟ್ ಹಸ್ತಾಂತರಿಸಿದ್ದೇನೆ. ಯಾವುದೇ ಜಾತಿ, ಮತ, ಧರ್ಮ, ರಾಜಕೀಯ ಭೇದಭಾವ ಇಲ್ಲದೆ ಎಲ್ಲಾ ವರ್ಗದವರನ್ನು ಸಮಾನರಂತೆ ಪರಿಗಣಿಸಿ ಬೈಂದೂರು ಭಾಗದ ಮೂಲೆ -ಮೂಲೆಗೆ […]
ಯುವ ಸಾಹಿತಿ ಕೊಡಗಿನ ಕಿಗ್ಗಾಲು ಜಿ. ಹರೀಶ್ ಕುಂದವಾಹಿನಿಯಲ್ಲಿ ತಮ್ಮ ಸಾಹಿತ್ಯ ಅನುಭವವನ್ನು ಹಂಚಿಕೊಳ್ಳಲಿದ್ದಾರೆ
ಯುವ ಸಾಹಿತಿ ಕಿಗ್ಗಾಲು ಜಿ. ಹರೀಶ್ ಮೂಲತಃ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಮೂರ್ನಾಡು ಸಮೀಪದ ಕಿಗ್ಗಾಲು ಗ್ರಾಮದವರು. ಮೂರ್ನಾಡುವಿನ ಪದವಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕೆಲಸ ನಿರ್ವಹಿಸುತ್ತಿರುವ ಇವರು ಈಗಾಗಲೇ ಹಲವು ಸಾಹಿತ್ಯ ಕೃತಿಗಳನ್ನು ರಚಿಸಿದ್ದಾರೆ. ಇವರ ರಾಯರ ತೋಟ ಎಂಬ ಲಲಿತ ಪ್ರಬಂಧಗಳ ಸಂಕಲನ 2011 ರಲ್ಲಿ ಬಿಡುಗಡೆಯಾಗಿದೆ. ಕಥೆ,ಕವನ ,ಲೇಖನ ರಚನೆಯ ಜೊತೆಗೆ ವರದಿಗಾರಿಕೆಯನ್ನು ಕಳೆದ ಇಪ್ಪತ್ತೈದು ವರ್ಷಗಳಿಂದ ಮಾಡುತ್ತಿದ್ದಾರೆ. ಕೊಡಗು ಜಿಲ್ಲೆಯ ಶಕ್ತಿ ದಿನಪತ್ರಿಕೆಯಲ್ಲಿ, ಸುಧಾ, […]
ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ : ಖಾಯಂ ವೈದ್ಯಾಧಿಕಾರಿಯಾಗಿ ಡಾ|ಅಮಿತಾ ಕೆ . ನೇಮಕ
ಗಂಗೊಳ್ಳಿ(ಜೂ,18): ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಖಾಯಂ ವೈದ್ಯಾಧಿಕಾರಿಯಾಗಿ ಡಾ| ಅಮಿತಾ ರವರನ್ನು ನೇಮಕ ಮಾಡಲಾಗಿದೆ. ಡಾ|ಗಿರೀಶ್ ಕುಲಕರ್ಣಿಯವರ ವರ್ಗಾವಣೆಯಿಂದಾಗಿ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ ಹುದ್ದೆ ತೆರವಾಗಿತ್ತು. ಡಾ| ಅಮಿತಾ ಈ ಹಿಂದೆ ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಯಾಗಿ ಹಾಗೂ ಕುಂದಾಪುರದ ಇಎಸ್ ಐ ಆಸತ್ರೆಯ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿರುತ್ತಾರೆ.
ದುಡಿಮೆಯ ಒಂದು ಪಾಲು ಸಮಾಜಸೇವೆಗೆ ಮೀಸಲು : ಶ್ರೀ ಗೋವಿಂದ ಬಾಬು ಪೂಜಾರಿ
ಉಪ್ಪುಂದ (ಜೂ, 17): ದುಡಿಮೆಯ ಒಂದು ಪಾಲು ಸಮಾಜಸೇವೆಗೆ ಮೀಸಲಾಗಿಡುವುದರ ಜೊತೆಗೆ ಸಮಾಜ ಸೇವೆಯೊಳಗಿನ ಸಂತೃಪ್ತಿಯಿಂದ ನಾವು ಪ್ರತಿಯೊಬ್ಬರಲ್ಲೂ ದೈವತ್ವವನ್ನು ನೋಡಬಹುದು ಎಂದು ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ) ಉಪ್ಪುಂದ ಇದರ ಪ್ರವರ್ತಕರು, ಮ್ಯಾನೇಜಿಂಗ್ ಡೈರೆಕ್ಟರ್ ಕೊಡುಗೈ ದಾನಿ ಶ್ರೀ ಗೋವಿಂದ ಬಾಬು ಪೂಜಾರಿ ಹೇಳಿದರು. ಅವರು ಜೂನ್ 17ರಂದು ಉಪ್ಪುಂದದ ಅಂಬಾಗಿಲಿನಲ್ಲಿರುವ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಕಚೇರಿಯಲ್ಲಿ ವರಲಕ್ಷ್ಮೀ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಸದಸ್ಯರಿಗೆ ದಿನಸಿ […]
ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್(ರಿ). ಉಪ್ಪುಂದ : ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಯುವಕನ ಚಿಕಿತ್ಸೆಗೆ ನೆರವು
ಉಪ್ಪುಂದ (ಜೂ, 17): ಕಳೆದ ಆರು ತಿಂಗಳುಗಳಿಂದ ಎರಡು ಕಿಡ್ನಿಗಳು ವೈಫಲ್ಯಗೊಂಡು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಾವುಂದ ಬಡಾಕೆರೆ ಗ್ರಾಮದ 12 ವರ್ಷ ಪ್ರಾಯದ ಯುವಕ ಧನುಷ್ ಪೂಜಾರಿ ಯವರ ವೈದ್ಯಕೀಯ ಚಿಕಿತ್ಸೆಗೆ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ) ಉಪ್ಪುಂದ ಇದರ ಪ್ರವರ್ತಕರು ಹಾಗೂ ಮ್ಯಾನೇಜಿಂಗ್ ಡೈರೆಕ್ಟರ್, ಉದ್ಯಮಿ ಹಾಗೂ ಕೊಡುಗೈದಾನಿಗಳಾದ ಶ್ರೀ ಗೋವಿಂದ ಬಾಬು ಪೂಜಾರಿ ಯವರು ತಮ್ಮ ಟ್ರಸ್ಟ್ ವತಿಯಿಂದ ಸಹಾಯಧನವನ್ನು ಯುವಕನ ಚಿಕ್ಕಪ್ಪ […]
ಸಿದ್ದಾಪುರ ಗ್ರಾಮ ಪಂಚಾಯತ್ : ವಿಶೇಷಚೇತನರಿಗೆ ಎಪಿಡಿ ಸಂಸ್ಥೆಯ ವತಿಯಿಂದ ಫುಡ್ ಕಿಟ್ ವಿತರಣೆ ಮತ್ತು ಅರಿವು ಕಾರ್ಯಕ್ರಮ
ಸಿದ್ದಾಪುರ (ಜೂ, 16): ಇಲ್ಲಿನ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ವಿಶೇಷಚೇತನರಿಗೆ ಫುಡ್ ಕಿಟ್ ವಿತರಣೆ ಮತ್ತು ಅರಿವು ಕಾರ್ಯಕ್ರಮವನ್ನು ಎಪಿಡಿ ಸಂಸ್ಥೆಯ ಜೀವನೋಪಾಯ ಕಾರ್ಯಕ್ರಮದಡಿ ಹಮ್ಮಿಕೊಳ್ಳಲಾಯಿತು. ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜೂನ್ ,16 ರಂದು ಆಯೋಜಿಸಲಾದ ಕಾರ್ಯಕ್ರಮದಲ್ಲಿ ಎಪಿಡಿ ಸಂಸ್ಥೆಯ ನೋಡಲ್ ಅಧಿಕಾರಿ ಹರೀಶ ಶೆಟ್ಟಿ ಯವರು ಮಾತನಾಡಿ, ನಮ್ಮ ಸಂಸ್ಥೆ ಸುಮಾರು 62 ವರ್ಷದಿಂದ ವಿಶೇಷ ಚೇತನರಿಗೆ ಶಿಕ್ಷಣ, ತರಬೇತಿ, ವೈದ್ಯಕೀಯ ಪುನಶ್ಚೇತನ ಹಾಗೂ ಉದ್ಯೋಗ ಸೌಲಭ್ಯವನ್ನು ನೀಡಿ […]
ಕಟ್ ಬೆಲ್ತೂರು ಗ್ರಾ. ಪ. ಅಧ್ಯಕ್ಷ ನಾಗರಾಜ್ ಪುತ್ರನ್ ರಿಂದ ದಿನಸಿ ಕಿಟ್ ವಿತರಣೆ
ವಂಡ್ಸೆ (ಜೂ, 15): ಕಟ್ ಬೆಲ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಾಗರಾಜ್ ಪುತ್ರನ್ ರವರು ಕರೋನಾ ಲಾಕ್ಡೌನ್ ಸಂಕಷ್ಟಕ್ಕೆ ಸಿಲುಕಿರುವ ಸುಳ್ಸೆ ಗ್ರಾಮದ ಬಡ ಕುಟುಂಬಗಳಿಗೆ ದೈನಂದಿನ ಉಪಯೋಗಕ್ಕೆ ಅನುಕೂಲವಾಗುವ ದಿನಸಿ ವಸ್ತುಗಳ ಕಿಟ್ ವಿತರಣೆ ಮಾಡಿದರು. ದೀರ್ಘಾವಧಿಯ ಕರೋನಾ ಲಾಕ್ಡೌನ್ ನಿಂದಾಗಿ ಹಲವು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದೆ, ಆ ನಿಟ್ಟಿನಲ್ಲಿ ಮಾನವೀಯ ನೆಲೆಯಲ್ಲಿ ಸಹಾಯ ಮಾಡುವುದು ನಮ್ಮ ಆಧ್ಯ ಕರ್ತವ್ಯವಾಗಿದೆ ಎಂದು ಅವರು ಹೇಳಿದರು.
ನಾವುಂದ : ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್(ರಿ). ಉಪ್ಪುಂದ ವತಿಯಿಂದ ಬಡ ಕುಟುಂಬಗಳಿಗೆ ದಿನಸಿ ಸಾಮಾನುಗಳ ಕಿಟ್ ವಿತರಣೆ
ನಾವುಂದ( ಜೂ, 15) : ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ ಇದರ ಪ್ರವರ್ತಕರು ಹಾಗೂ ಮ್ಯಾನೇಜಿಂಗ್ ಡೈರೆಕ್ಟರ್ ಶ್ರೀ ಗೋವಿಂದ ಬಾಬು ಪೂಜಾರಿಯವರು ನಾವುಂದ ಗ್ರಾಮದ ಮಸ್ಕಿ ಯ ಶ್ರೀ ಗೋಪಾಲಕ್ರಷ್ಣ ದೇವಸ್ಥಾನದ ವಠಾರದಲ್ಲಿ ಕಡು ಬಡವರಿಗೆ ಕರೋನಾ ಲಾಕ್ಡೌನ್ ಸಮಯದಲ್ಲಿ ದೈನಂದಿನ ನಿರ್ವಹಣಿಗೆ ಬೇಕಾಗುವ ದಿನಸಿ ಸಾಮಾನುಗಳ ಕಿಟ್ ವಿತರಿಣೆ ಮಾಡಿದರು. ಈ ಸಂದರ್ಭದಲ್ಲಿ ಶ್ರೀ ಗೋಪಾಲ ಕ್ರಷ್ಣ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು, ಈಶ್ವರ ಸಿ ನಾವುಂದ […]
ಹಳ್ಳಿಹೊಳೆ : ವಿಶೇಷ ಚೇತನರಿಗೆ ಎಪಿಡಿ (ದಿ ಅಸೋಸಿಯೇಶನ್ ಆಫ್ ಪೀಪಲ್ ವಿತ್ ಡಿಸೆಬಿಲಿಟಿ) ಸಂಸ್ಥೆಯಿಂದ ಫುಡ್ ಕಿಟ್ ವಿತರಣೆ
ಕುಂದಾಪುರ (ಜೂ, 14): ಹಳ್ಳಿಹೊಳೆಗ್ರಾಮ ಪಂಚಾಯತ್ವ್ಯಾಪ್ತಿಯಲ್ಲಿರುವ ವಿಶೇಷ ಚೇತನರಿಗೆ ಎಪಿಡಿ( ದಿ ಅಸೋಸಿಯೇಶನ್ ಆಫ್ ಪೀಪಲ್ ವಿತ್ ಡಿಸೆಬಿಲಿಟಿ) ಸಂಸ್ಥೆಯಿಂದ ಫುಡ್ ಕಿಟ್ ವಿತರಣಾ ಕಾರ್ಯಕ್ರಮ ಜೂನ್ , 14 ರಂದು ಪಂಚಾಯತ್ ಸಭಾಂಗಣದಲ್ಲಿ ಜರುಗಿತು. ಈ ಕಾರ್ಯಕ್ರಮದಲ್ಲಿ ಎಪಿಡಿ ಸಂಸ್ಥೆಯ ನೋಡಲ್ ಅಧಿಕಾರಿಗಳಾದ ಶ್ರೀ ಹರೀಶ ಶೆಟ್ಟಿಯವರು ಪುಡ್ ಕಿಟ್ ವಿತರಣೆ ಮಾಡಿ ಎಪಿಡಿ ಸಂಸ್ಥೆಯ ಬಗ್ಗೆ ಮತ್ತು ಜೀವನೋಪಾಯ ಕಾರ್ಯಕ್ರಮದ ತರಬೇತಿ ಬಗ್ಗೆ ಮಾಹಿತಿಯನ್ನು ನೀಡಿದರು. ಪಂಚಾಯತ್ […]










