ಯುವ ಸಾಹಿತಿ ಕಿಗ್ಗಾಲು ಜಿ. ಹರೀಶ್ ಮೂಲತಃ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಮೂರ್ನಾಡು ಸಮೀಪದ ಕಿಗ್ಗಾಲು ಗ್ರಾಮದವರು. ಮೂರ್ನಾಡುವಿನ ಪದವಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕೆಲಸ ನಿರ್ವಹಿಸುತ್ತಿರುವ ಇವರು ಈಗಾಗಲೇ ಹಲವು ಸಾಹಿತ್ಯ ಕೃತಿಗಳನ್ನು ರಚಿಸಿದ್ದಾರೆ. ಇವರ ರಾಯರ ತೋಟ ಎಂಬ ಲಲಿತ ಪ್ರಬಂಧಗಳ ಸಂಕಲನ 2011 ರಲ್ಲಿ ಬಿಡುಗಡೆಯಾಗಿದೆ. ಕಥೆ,ಕವನ ,ಲೇಖನ ರಚನೆಯ ಜೊತೆಗೆ ವರದಿಗಾರಿಕೆಯನ್ನು ಕಳೆದ ಇಪ್ಪತ್ತೈದು ವರ್ಷಗಳಿಂದ ಮಾಡುತ್ತಿದ್ದಾರೆ. ಕೊಡಗು ಜಿಲ್ಲೆಯ ಶಕ್ತಿ ದಿನಪತ್ರಿಕೆಯಲ್ಲಿ, ಸುಧಾ, […]
Category: ಗ್ರಾಮೀಣ ಸುದ್ದಿ
ಸುದ್ದಿ ಸಮಾಚಾರ — > ಗ್ರಾಮೀಣ ಸುದ್ದಿ
ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ : ಖಾಯಂ ವೈದ್ಯಾಧಿಕಾರಿಯಾಗಿ ಡಾ|ಅಮಿತಾ ಕೆ . ನೇಮಕ
ಗಂಗೊಳ್ಳಿ(ಜೂ,18): ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಖಾಯಂ ವೈದ್ಯಾಧಿಕಾರಿಯಾಗಿ ಡಾ| ಅಮಿತಾ ರವರನ್ನು ನೇಮಕ ಮಾಡಲಾಗಿದೆ. ಡಾ|ಗಿರೀಶ್ ಕುಲಕರ್ಣಿಯವರ ವರ್ಗಾವಣೆಯಿಂದಾಗಿ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ ಹುದ್ದೆ ತೆರವಾಗಿತ್ತು. ಡಾ| ಅಮಿತಾ ಈ ಹಿಂದೆ ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಯಾಗಿ ಹಾಗೂ ಕುಂದಾಪುರದ ಇಎಸ್ ಐ ಆಸತ್ರೆಯ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿರುತ್ತಾರೆ.
ದುಡಿಮೆಯ ಒಂದು ಪಾಲು ಸಮಾಜಸೇವೆಗೆ ಮೀಸಲು : ಶ್ರೀ ಗೋವಿಂದ ಬಾಬು ಪೂಜಾರಿ
ಉಪ್ಪುಂದ (ಜೂ, 17): ದುಡಿಮೆಯ ಒಂದು ಪಾಲು ಸಮಾಜಸೇವೆಗೆ ಮೀಸಲಾಗಿಡುವುದರ ಜೊತೆಗೆ ಸಮಾಜ ಸೇವೆಯೊಳಗಿನ ಸಂತೃಪ್ತಿಯಿಂದ ನಾವು ಪ್ರತಿಯೊಬ್ಬರಲ್ಲೂ ದೈವತ್ವವನ್ನು ನೋಡಬಹುದು ಎಂದು ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ) ಉಪ್ಪುಂದ ಇದರ ಪ್ರವರ್ತಕರು, ಮ್ಯಾನೇಜಿಂಗ್ ಡೈರೆಕ್ಟರ್ ಕೊಡುಗೈ ದಾನಿ ಶ್ರೀ ಗೋವಿಂದ ಬಾಬು ಪೂಜಾರಿ ಹೇಳಿದರು. ಅವರು ಜೂನ್ 17ರಂದು ಉಪ್ಪುಂದದ ಅಂಬಾಗಿಲಿನಲ್ಲಿರುವ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಕಚೇರಿಯಲ್ಲಿ ವರಲಕ್ಷ್ಮೀ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಸದಸ್ಯರಿಗೆ ದಿನಸಿ […]
ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್(ರಿ). ಉಪ್ಪುಂದ : ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಯುವಕನ ಚಿಕಿತ್ಸೆಗೆ ನೆರವು
ಉಪ್ಪುಂದ (ಜೂ, 17): ಕಳೆದ ಆರು ತಿಂಗಳುಗಳಿಂದ ಎರಡು ಕಿಡ್ನಿಗಳು ವೈಫಲ್ಯಗೊಂಡು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಾವುಂದ ಬಡಾಕೆರೆ ಗ್ರಾಮದ 12 ವರ್ಷ ಪ್ರಾಯದ ಯುವಕ ಧನುಷ್ ಪೂಜಾರಿ ಯವರ ವೈದ್ಯಕೀಯ ಚಿಕಿತ್ಸೆಗೆ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ) ಉಪ್ಪುಂದ ಇದರ ಪ್ರವರ್ತಕರು ಹಾಗೂ ಮ್ಯಾನೇಜಿಂಗ್ ಡೈರೆಕ್ಟರ್, ಉದ್ಯಮಿ ಹಾಗೂ ಕೊಡುಗೈದಾನಿಗಳಾದ ಶ್ರೀ ಗೋವಿಂದ ಬಾಬು ಪೂಜಾರಿ ಯವರು ತಮ್ಮ ಟ್ರಸ್ಟ್ ವತಿಯಿಂದ ಸಹಾಯಧನವನ್ನು ಯುವಕನ ಚಿಕ್ಕಪ್ಪ […]
ಸಿದ್ದಾಪುರ ಗ್ರಾಮ ಪಂಚಾಯತ್ : ವಿಶೇಷಚೇತನರಿಗೆ ಎಪಿಡಿ ಸಂಸ್ಥೆಯ ವತಿಯಿಂದ ಫುಡ್ ಕಿಟ್ ವಿತರಣೆ ಮತ್ತು ಅರಿವು ಕಾರ್ಯಕ್ರಮ
ಸಿದ್ದಾಪುರ (ಜೂ, 16): ಇಲ್ಲಿನ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ವಿಶೇಷಚೇತನರಿಗೆ ಫುಡ್ ಕಿಟ್ ವಿತರಣೆ ಮತ್ತು ಅರಿವು ಕಾರ್ಯಕ್ರಮವನ್ನು ಎಪಿಡಿ ಸಂಸ್ಥೆಯ ಜೀವನೋಪಾಯ ಕಾರ್ಯಕ್ರಮದಡಿ ಹಮ್ಮಿಕೊಳ್ಳಲಾಯಿತು. ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜೂನ್ ,16 ರಂದು ಆಯೋಜಿಸಲಾದ ಕಾರ್ಯಕ್ರಮದಲ್ಲಿ ಎಪಿಡಿ ಸಂಸ್ಥೆಯ ನೋಡಲ್ ಅಧಿಕಾರಿ ಹರೀಶ ಶೆಟ್ಟಿ ಯವರು ಮಾತನಾಡಿ, ನಮ್ಮ ಸಂಸ್ಥೆ ಸುಮಾರು 62 ವರ್ಷದಿಂದ ವಿಶೇಷ ಚೇತನರಿಗೆ ಶಿಕ್ಷಣ, ತರಬೇತಿ, ವೈದ್ಯಕೀಯ ಪುನಶ್ಚೇತನ ಹಾಗೂ ಉದ್ಯೋಗ ಸೌಲಭ್ಯವನ್ನು ನೀಡಿ […]
ಕಟ್ ಬೆಲ್ತೂರು ಗ್ರಾ. ಪ. ಅಧ್ಯಕ್ಷ ನಾಗರಾಜ್ ಪುತ್ರನ್ ರಿಂದ ದಿನಸಿ ಕಿಟ್ ವಿತರಣೆ
ವಂಡ್ಸೆ (ಜೂ, 15): ಕಟ್ ಬೆಲ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಾಗರಾಜ್ ಪುತ್ರನ್ ರವರು ಕರೋನಾ ಲಾಕ್ಡೌನ್ ಸಂಕಷ್ಟಕ್ಕೆ ಸಿಲುಕಿರುವ ಸುಳ್ಸೆ ಗ್ರಾಮದ ಬಡ ಕುಟುಂಬಗಳಿಗೆ ದೈನಂದಿನ ಉಪಯೋಗಕ್ಕೆ ಅನುಕೂಲವಾಗುವ ದಿನಸಿ ವಸ್ತುಗಳ ಕಿಟ್ ವಿತರಣೆ ಮಾಡಿದರು. ದೀರ್ಘಾವಧಿಯ ಕರೋನಾ ಲಾಕ್ಡೌನ್ ನಿಂದಾಗಿ ಹಲವು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದೆ, ಆ ನಿಟ್ಟಿನಲ್ಲಿ ಮಾನವೀಯ ನೆಲೆಯಲ್ಲಿ ಸಹಾಯ ಮಾಡುವುದು ನಮ್ಮ ಆಧ್ಯ ಕರ್ತವ್ಯವಾಗಿದೆ ಎಂದು ಅವರು ಹೇಳಿದರು.
ನಾವುಂದ : ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್(ರಿ). ಉಪ್ಪುಂದ ವತಿಯಿಂದ ಬಡ ಕುಟುಂಬಗಳಿಗೆ ದಿನಸಿ ಸಾಮಾನುಗಳ ಕಿಟ್ ವಿತರಣೆ
ನಾವುಂದ( ಜೂ, 15) : ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ ಇದರ ಪ್ರವರ್ತಕರು ಹಾಗೂ ಮ್ಯಾನೇಜಿಂಗ್ ಡೈರೆಕ್ಟರ್ ಶ್ರೀ ಗೋವಿಂದ ಬಾಬು ಪೂಜಾರಿಯವರು ನಾವುಂದ ಗ್ರಾಮದ ಮಸ್ಕಿ ಯ ಶ್ರೀ ಗೋಪಾಲಕ್ರಷ್ಣ ದೇವಸ್ಥಾನದ ವಠಾರದಲ್ಲಿ ಕಡು ಬಡವರಿಗೆ ಕರೋನಾ ಲಾಕ್ಡೌನ್ ಸಮಯದಲ್ಲಿ ದೈನಂದಿನ ನಿರ್ವಹಣಿಗೆ ಬೇಕಾಗುವ ದಿನಸಿ ಸಾಮಾನುಗಳ ಕಿಟ್ ವಿತರಿಣೆ ಮಾಡಿದರು. ಈ ಸಂದರ್ಭದಲ್ಲಿ ಶ್ರೀ ಗೋಪಾಲ ಕ್ರಷ್ಣ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು, ಈಶ್ವರ ಸಿ ನಾವುಂದ […]
ಹಳ್ಳಿಹೊಳೆ : ವಿಶೇಷ ಚೇತನರಿಗೆ ಎಪಿಡಿ (ದಿ ಅಸೋಸಿಯೇಶನ್ ಆಫ್ ಪೀಪಲ್ ವಿತ್ ಡಿಸೆಬಿಲಿಟಿ) ಸಂಸ್ಥೆಯಿಂದ ಫುಡ್ ಕಿಟ್ ವಿತರಣೆ
ಕುಂದಾಪುರ (ಜೂ, 14): ಹಳ್ಳಿಹೊಳೆಗ್ರಾಮ ಪಂಚಾಯತ್ವ್ಯಾಪ್ತಿಯಲ್ಲಿರುವ ವಿಶೇಷ ಚೇತನರಿಗೆ ಎಪಿಡಿ( ದಿ ಅಸೋಸಿಯೇಶನ್ ಆಫ್ ಪೀಪಲ್ ವಿತ್ ಡಿಸೆಬಿಲಿಟಿ) ಸಂಸ್ಥೆಯಿಂದ ಫುಡ್ ಕಿಟ್ ವಿತರಣಾ ಕಾರ್ಯಕ್ರಮ ಜೂನ್ , 14 ರಂದು ಪಂಚಾಯತ್ ಸಭಾಂಗಣದಲ್ಲಿ ಜರುಗಿತು. ಈ ಕಾರ್ಯಕ್ರಮದಲ್ಲಿ ಎಪಿಡಿ ಸಂಸ್ಥೆಯ ನೋಡಲ್ ಅಧಿಕಾರಿಗಳಾದ ಶ್ರೀ ಹರೀಶ ಶೆಟ್ಟಿಯವರು ಪುಡ್ ಕಿಟ್ ವಿತರಣೆ ಮಾಡಿ ಎಪಿಡಿ ಸಂಸ್ಥೆಯ ಬಗ್ಗೆ ಮತ್ತು ಜೀವನೋಪಾಯ ಕಾರ್ಯಕ್ರಮದ ತರಬೇತಿ ಬಗ್ಗೆ ಮಾಹಿತಿಯನ್ನು ನೀಡಿದರು. ಪಂಚಾಯತ್ […]
ದಾನದಲ್ಲಿ ಕರ್ಣ, ಆದರ್ಶದಲ್ಲಿ ರಾಮ, ಕಾರ್ಮಿಕರ ಅನ್ನದಾತ ಶ್ರೀ ಗೋವಿಂದ ಬಾಬು ಪೂಜಾರಿ
ಅವರ ಒಂದು ಹಿತನುಡಿಯೇ ಸಾಕು ನಿಮ್ಮ ಸಂಕಷ್ಟಗಳ ಸಾಂತ್ವನಕ್ಕೆ . ಅದರಲ್ಲೂ ಅವರ ಶ್ರೀರಕ್ಷೆ, ಸಹಾಯ ಹಾಗೂ ಸಹಕಾರ ಸಿಕ್ಕರಂತೂ ನೀವು ನಿಜವಾಗಿಯೂ ಜೀವನದಲ್ಲಿ ಸಾಧನೆಯ ಜೊತೆಗೆ ಯಶಸ್ಸನ್ನು ಕಾಣುತ್ತೀರಿ. ಜೀವನದಲ್ಲಿ ಎಂದಿಗೂ ಸೋತೆ ಎನ್ನುವ ಭಾವನೆಯೊಂದಿಗೆ ಜೀವನ ನೆಡೆಸಬೇಡಿ ,ಒಂದಲ್ಲ ಒಂದು ದಿನ ಗೆದ್ದೆ ಗೆಲ್ಲುವೆ ಎನ್ನುವ ಛಲದೊಂದಿಗೆ ಜೀವನ ನೆಡೆಸಿ ಎನ್ನುವ ಅವರ ಆದರ್ಶ ಪಾಲನೆಯ ಬದುಕು ಅನುಕರಣೀಯ. ಧೈರ್ಯದಿಂದ ಮುಂದೆ ಹೋಗಿ ,ಜಗತ್ತಿನ ಎಲ್ಲಾ ಕೆಲಸವನ್ನು […]
ಚಿತ್ರದುರ್ಗ ರೆಡ್ ಕ್ರಾಸ್ : ಕೋವಿಡ್ ಸಂಧರ್ಬದಲ್ಲಿನ ವೈದ್ಯಕೀಯ ಉಪಕರಣಗಳ ಹಸ್ತಾಂತರ ಕಾರ್ಯಕ್ರಮ
ಚಿತ್ರದುರ್ಗ (ಜೂನ್ , 13) : ಕೋವಿಡ್ ಸಂಧರ್ಬದಲ್ಲಿನ ವೈದ್ಯಕೀಯ ಉಪಕರಣಗಳ ಹಸ್ತಾಂತರ ಕಾರ್ಯಕ್ರಮ ಅಂಗವಾಗಿ ಚಿತ್ರದುರ್ಗ ನಗರದ ಮೆದೆಹಳ್ಳಿ ರಸ್ತೆಯಲ್ಲಿರುವ ಶ್ರೀ ಶಾಂತ ರಾಮತೀರ್ಥ ಆಶ್ರಮದ ಶ್ರೀ ಶ್ರೀ ಶ್ರೀ ಪ್ರಹಲ್ಲಾದ್ ಗುರೂಜಿ ರವರನ್ನು ಜೂನ್ 13 ರಂದು ಭೇಟಿ ಮಾಡಿ ಪಲ್ಸ ಓಕ್ಸಿಮೀಟರನ್ನು ರೆಡ್ ಕ್ರಾಸ್ ವತಿಯಿಂದ ನೀಡಲಾಯಿತು. ಈ ಸಂದರ್ಭದಲ್ಲಿ ರೆಡ್ ಕ್ರಾಸ್ ಕಾರ್ಯದರ್ಶಿ ಮಜಹರ್ ಉಲ್ಲಾ ಮತ್ತು ನಿರ್ದೇಶಕರಾದ ಗಿರೀಶ್ ರವರು ಉಪಸ್ಥಿತರಿದ್ದರು.










