ಕುಂದಾಪುರ (ಏ, 26): ದೇಶದಾದ್ಯಂತ ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡುತ್ತಿರುವ ಹಿನ್ನಲೆಯಲ್ಲಿ ಮುಂದಿನ 60 ದಿನಗಳ ವರೆಗೆ ರಕ್ತದಾನ ಮಾಡಲು ಸಾಧ್ಯವಾಗದಿರುವುದರಿಂದ ಹಾಗೂ ಆ ಸಂಧರ್ಬದಲ್ಲಿ ರಕ್ತದ ಅಭಾವ ಉಂಟಾಗುವ ಸಾಧ್ಯತೆ ಇರುವುದರಿಂದ ಬಿಜೆಪಿ ಯುವಮೋರ್ಚಾ ಕುಂದಾಪುರ ಮಂಡಲ ವತಿಯಿಂದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ- ರಕ್ತ ನಿಧಿ ಕೇಂದ್ರ ಕುಂದಾಪುರ, ಇವರ ಸಹಯೋಗದೊಂದಿಗೆ ಎಪ್ರಿಲ್ 27 ರ ಮಂಗಳವಾರ ಸಮಯ ಬೆಳಿಗ್ಗೆ […]
Category: ಗ್ರಾಮೀಣ ಸುದ್ದಿ
ಸುದ್ದಿ ಸಮಾಚಾರ — > ಗ್ರಾಮೀಣ ಸುದ್ದಿ
ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಎಂ ಐ ಟಿ ಮೂಡ್ಲಕಟ್ಟೆಯ ಶಶಾಂಕ್ ರಾಜ್ಯಮಟ್ಟದಲ್ಲಿ 9ನೇ ಸ್ಥಾನ
ಕುಂದಾಪುರ (ಏ, 23) : ಸೈಬರ್ ಸೆಕ್ಯೂರಿಟಿ ಉತ್ಕೃಷ್ಟತೆಯ ಕೇಂದ್ರ, ಕರ್ನಾಟಕ ಮತ್ತು ರಾಷ್ಟ್ರೀಯ ಸಾಫ್ಟ್ವೇರ್ & ಸರ್ವಿಸ್ ಕಂಪನಿಗಳ ಅಸೋಸಿಯೇಷನ್ ವತಿಯಿಂದ ನಡೆಸಲ್ಪಟ್ಟ ‘ಮಾರ್ಚ್ ಫಾರ್ ಸೆಕ್ಯೂರ್ ಕೋಡ್’ ಎಂಬ ಅತೀ ಬೇಗ ಕೋರ್ಸ್ ಮುಗಿಸುವ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿ ಶಶಾಂಕ್ ರಾಜ್ಯಮಟ್ಟದಲ್ಲಿ 9ನೇ ಸ್ಥಾನ ಪಡೆದು ಅಗ್ರ ಹತ್ತು ವಿಜೇತರಲ್ಲಿ ಒಬ್ಬರಾಗಿದ್ದಾರೆ. ಹಾಗೆಯೇ […]
ಹೆಸಕತ್ತೂರು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿನೂತನ ಶೈಲಿಯ ನಲಿಕಲಿ ಇಂಗ್ಲಿಷ್ ತರಗತಿ – ವಿಡಿಯೋ ನೋಡಿ
ತೆಕ್ಕಟ್ಟೆ (ಏ, 24) : ಕೋವಿಡ್ ಕಾರಣದಿಂದಾಗಿ ಶಿಕ್ಷಣ ವ್ಯವಸ್ಥೆ ಅಲ್ಲೋಲ ಕಲ್ಲೋಲ ಆಗಿದ್ದು ಎಲ್ಲರಿಗೂ ತಿಳಿದಿರುವ ಸಂಗತಿ. ಅದರಲ್ಲೂ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಶಾಲೆಯ ಮುಖ ನೋಡದೆ ಅದೆಷ್ಟು ಅದೆಷ್ಟು ಅದೆಷ್ಟು ತಿಂಗಳುಗಳು ಕಳೆದು ಹೋಗಿದೆ. ಎಲ್ಲವೂ ಸರಿ ಹೋಗಬಹುದು,ಕೋವಿಡ್ ನಿಯಂತ್ರಣಕ್ಕೆ ಬರಬಹುದು ಅನ್ನುವ ಆಲೋಚನೆ ಯಲ್ಲಿದ್ದ ನಮಗಿಂದು ಕರೋನ ಎರಡನೇ ಅಲೆ ಬೆಚ್ಚಿಬೀಳಿಸಿದೆ.ಅದೆಷ್ಟೋ ಸರಕಾರಿ ಪ್ರಾಥಮಿಕ ಶಾಲೆಗಳು ಕರೋನಾ ಕಾರಣದಿಂದಾಗಿ ವಿದ್ಯಾರ್ಥಿಗಳಿಗೆ ವ್ಯವಸ್ಥಿತವಾಗಿ ಶಿಕ್ಷಣವನ್ನು ಒದಗಿಸಲು ಸಾಧ್ಯವಾಗದೆ […]
ಜೈ ಕುಂದಾಪ್ರ ಸೇವಾ ಟ್ರಸ್ಟ್ ರಿ. ವತಿಯಿಂದ ರಕ್ತ ದಾನಿಗಳಿಗೆ ವಿಶೇಷ ಮನವಿ
ಕುಂದಾಪುರ (ಏ, 24): ರಕ್ತದಾನ ಶಿಬಿರ ಹಾಗೂ ತುರ್ತು ಸಂದರ್ಭದಲ್ಲಿ ರಕ್ತದಾನದ ಜೊತೆಗೆ ಬಡ ರೋಗಿಗಳ ಚಿಕಿತ್ಸೆಗೆ ಸ್ಪಂದಿಸುವ ಮೂಲಕ ಜನಸೇವೆ ಗೈಯುತ್ತಿರುವ ಜೈ ಕುಂದಾಪ್ರ ಸೇವಾ ಟ್ರಸ್ಟ್ ರಿ. ರಕ್ತದಾನಿಗಳಲ್ಲಿ ಮನವಿಯೊಂದನ್ನು ಮಾಡಿಕೊಂಡಿದೆ. 18ವರ್ಷ ಮೇಲ್ಪಟ್ಟವರು ಮೇ ತಿಂಗಳಲ್ಲಿ ಕೊರೊನ ಲಸಿಕೆ ಪಡೆಯುವವರು ಮುಂದಿನ 28ದಿನ ರಕ್ತ ದಾನ ಮಾಡುವಂತಿಲ್ಲ .ಎರಡನೇ ಡೋಸ್ ಪಡೆದು ಒಟ್ಟು ಮುಂದಿನ 56 ದಿನಗಳತನಕ ರಕ್ತ ದಾನ ಮಾಡಲು ಅಸಾಧ್ಯ .ಆ ನಿಟ್ಟಿನಲ್ಲಿ […]
ಶ್ರೀ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿ ನಾಕಟ್ಟೆ ಯಡ್ತೆರೆ : ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಮುಂದೂಡಿಕೆ
ಬೈಂದೂರು ( ಏ, 20) : ಕೋವಿಡ್-19 ಮಾರ್ಗಸೂಚಿಯಲ್ಲಿ ಧಾರ್ಮಿಕ ಆಚರಣೆ ಹಾಗೂ ಸಮಾರಂಭಗಳನ್ನು ನಿಷೇಧಿಸಿರುವುದರಿಂದ ಎಪ್ರಿಲ್ 22ರಿಂದ 29 ರ ತನಕ ನಡೆಯಬೇಕಿದ್ದ ಶ್ರೀ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿ ನಾಕಟ್ಟೆ ಯಡ್ತೆರೆ ಇದರ ನವೀಕೃತ ಗರ್ಭಗೃಹ ಸಮರ್ಪಣೆ, ಬಿಂಬ ಪುನಃಪ್ರತಿಷ್ಠೆ- ಬ್ರಹ್ಮಕಲಶೋತ್ಸವ, ಗೆಂಡ ಸೇವೆ- ಪಂಜುರ್ಲಿ ನೇಮೋತ್ಸವ, ಶ್ರೀ ಬ್ರಹ್ಮಬೈದರ್ಕಳ ಜಾತ್ರಾಮಹೋತ್ಸವ, ಧಾರ್ಮಿಕ – ಸಾಂಸ್ಕೃತಿಕ ವೈಭವೋತ್ಸವ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಕೋವಿಡ್ ನಿಯಮಗಳು ಸಡಿಲಗೊಂಡ ಬಳಿಕ ಕಾರ್ಯಕ್ರಮಗಳ […]
ಶ್ರೀ ಗಣೇಶ್ ಗಂಗೊಳ್ಳಿ ಯವರಿಗೆ ಕರ್ನಾಟಕ ಜನಪದ ಭೂಷಣ ಪ್ರಶಸ್ತಿ ಪ್ರಧಾನ
ಬೈಂದೂರು (ಏ, 21): ದೇಶಪಾಂಡೆ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ಬೀದರ್ ಹಾಗೂ ಮಂದಾರ ಕಲಾವಿದರ ವೇದಿಕೆ ಬೀದರ್ ವತಿಯಿಂದ ಸಾಹಿತ್ಯ ಮತ್ತು ಇತರ ಕ್ಷೇತ್ರಗಳ ಸಾಧಕರಿಗೆ ನೀಡುವ ರಾಜ್ಯ ಮಟ್ಟದ ಪ್ರಶಸ್ತಿ ಪ್ರಧಾನ ಸಮಾರಂಭ ಉಪ್ಪುಂದ- ಕಂಬದ ಕೋಣೆಯ ‘ರೈತಸಿರಿ’ ಸಭಾಭವನ, ಕೆ.ಆರ್.ಎಸ್.ಎಸ್. ಎಸ್. ನಿ.,ನಲ್ಲಿ ಎಪ್ರಿಲ್ 18 ರಂದು ನಡೆಯಿತು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕನ್ನಡ ಜನಪದ ಪರಿಷತ್ ಇದರ ಜಿಲ್ಲಾಧ್ಯಕ್ಷ ಹಾಗೂ ಖ್ಯಾತ ಆಕಾಶವಾಣಿ […]
ಶ್ರೀ ನರೇಂದ್ರ ಎಸ್. ಗಂಗೊಳ್ಳಿ ಯವರಿಗೆ ಪ್ರತಿಭಾ ಚೂಡಾಮಣಿ ರತ್ನ ಪ್ರಶಸ್ತಿ ಪ್ರಧಾನ
ಬೈಂದೂರು (ಏ, 21): ದೇಶಪಾಂಡೆ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ಬೀದರ್ ಹಾಗೂ ಮಂದಾರ ಕಲಾವಿದರ ವೇದಿಕೆ ಬೀದರ್ ವತಿಯಿಂದ ಸಾಹಿತ್ಯ ಮತ್ತು ಇತರ ಕ್ಷೇತ್ರಗಳ ಸಾಧಕರಿಗೆ ನೀಡುವ ರಾಜ್ಯ ಮಟ್ಟದ ಪ್ರಶಸ್ತಿ ಪ್ರಧಾನ ಸಮಾರಂಭ ಉಪ್ಪುಂದ- ಕಂಬದ ಕೋಣೆಯ ‘ರೈತಸಿರಿ’ ಸಭಾಭವನ, ಕೆ.ಆರ್.ಎಸ್.ಎಸ್. ಎಸ್. ನಿ.,ನಲ್ಲಿ ಎಪ್ರಿಲ್ 18 ರಂದು ನಡೆಯಿತು. ಈ ಸಂದರ್ಭದಲ್ಲಿ ಯುವ ಲೇಖಕ ಹಾಗೂ ಉಪನ್ಯಾಸಕರಾದ ಶ್ರೀ ನರೇಂದ್ರ ಎಸ್ ಗಂಗೊಳ್ಳಿ ಇವರಿಗೆ ಪ್ರತಿಭಾ […]
ಯುವ ಬ್ರಿಗೇಡ್ ಸ್ವಚ್ಚತಾ ಕಾರ್ಯದ ಪ್ರತಿಫಲ : ಸಂಪೂರ್ಣ ಮುಚ್ಚಿ ಹೊಗಿದ್ದ ಬಸ್ರೂರಿನ ಗುಪ್ಪಿ ಸದಾನಂದ ದೇವಾಲಯಕ್ಕೆ ಗ್ರಾಮಸ್ಥರಿಂದ ಕಟ್ಟೆ ಪೂಜೆ
ಕುಂದಾಪುರ (ಏ, 18) : 500 ವರ್ಷ ಇತಿಹಾಸ ಹೊಂದಿರುವ ಸಂಪೂರ್ಣ ಮುಚ್ಚಿ ಹೋಗಿರುವ ಬಸ್ರೂರಿನ ಗುಪ್ಪಿ ಸದಾನಂದ ದೇವಾಲಯವನ್ನು ಕಳೆದ ವರ್ಷ ಯುವಾಬ್ರಿಗೇಡ್ ವತಿಯಿಂದ ಊರವರ ಸಹಕಾರದಲ್ಲಿ ಸ್ವಚ್ಛತಾ ಕಾರ್ಯ ನಡೆಸಿದ್ದರು.ತದ ನಂತರ ಭಕ್ತರು ಈ ದೇವಾಲಯಕ್ಕೆ ಭೇಟಿ ನೀಡಲು ಪ್ರಾರಂಭಿಸಿದರು. ಇದರ ಫಲವಾಗಿ ಇತ್ತೀಚೆಗೆ ಊರವರೆಲ್ಲ ಸೇರಿ ಕಟ್ಟೆ ಪೂಜೆ ನೆರವೇರಿಸಿದ್ದಾರೆ.ಮಣ್ಣಿನಲ್ಲಿ ಹುದುಗಿಹೋಗಿದ್ದ ಬಸ್ರೂರಿನ ಈ ಗುಪ್ಪಿ ಸದಾನಂದ ದೇವಾಲಯ ಇಂದು ಭಕ್ತಿ ಪ್ರಿಯ ಕ್ಷೇತ್ರವಾಗುತ್ತದೆ . […]
ಶ್ರೀ ನಾಗ ದೇವಸ್ಥಾನ ಬೆಣ್ಗೆರೆ – ಗುಜ್ಜಾಡಿ ಸ್ವಾಗತ ಗೋಪುರ ಉದ್ಘಾಟಿಸಿದ ಶಾಸಕ ಬಿ. ಎಮ್. ಸುಕುಮಾರ ಶೆಟ್ಟಿ
ಗಂಗೊಳ್ಳಿ (ಏ, 10) : ಕುಂದಾಪುರ ತಾಲ್ಲೂಕಿನ ಗುಜ್ಜಾಡಿ ಸಮೀಪದ ಬೆಣ್ಗೆರೆ ಶ್ರೀ ನಾಗ ದೇವಸ್ಥಾನದ ಸ್ವಾಗತ ಗೋಪುರವನ್ನು ಬೈಂದೂರಿನ ಶಾಸಕರಾದ ಬಿ.ಎಂ ಸುಕುಮಾರ ಶೆಟ್ಟಿ ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿಶ್ರೀ ನಾಗ ದೇವಸ್ಥಾನ ಮಂಡಳಿಯ ಅಧ್ಯಕ್ಷ ಉಮೇಶ್ ಮೇಸ್ತ, ಮಾಜಿ ಅಧ್ಯಕ್ಷ ಶಾಂತರಾಮ ಮೇಸ್ತ ಗುಜ್ಜಾಡಿ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷ ಹಾಗೂ ಸದಸ್ಯ ಹರೀಶ ಮೇಸ್ತ , ದೇವಸ್ಥಾನದ ಭಕ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. […]
ಬೀಜಾಡಿ-ಗೋಪಾಡಿ : ಶ್ರೀ ರಾಮನವಮಿ ಪ್ರಯುಕ್ತ ಮನೆ – ಮನೆ ಭಜನೆ ಕಾರ್ಯಕ್ರಮ
ಕೋಟೇಶ್ವರ (ಏ, 12): ಶ್ರೀರಾಮ ಭಜನಾ ಮಂಡಳಿ(ರಿ) ಬೀಜಾಡಿ- ಗೋಪಾಡಿ ಇವರು ಶ್ರೀ ರಾಮನವಮಿ ಪ್ರಯುಕ್ತ ಪ್ರತಿವರ್ಷ ನಡೆಸುವ ನಗರ ಭಜನೆ ಮತ್ತು ಶ್ರೀರಾಮ ರಕ್ಷ ಹೋಮ ಧಾರ್ಮಿಕ ಕಾರ್ಯಕ್ರಮದ ಸಲುವಾಗಿ ಬೀಜಾಡಿ- ಗೋಪಾಡಿ ಗ್ರಾಮಗಳಲ್ಲಿ ಏಪ್ರಿಲ್ 9 ರಿಂದ 20 ರ ತನಕ ಮನೆ ಮನೆ ಭಜನಾ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ರಾತ್ರಿ ಸಮಯದಲ್ಲಿ ಗ್ರಾಮದ ಮನೆ – ಮನೆಗಳಿಗೆ ತೆರಳಿ ಶ್ರೀರಾಮ ದೇವರ ನಾಮ ಸ್ಮರಣೆಯೊಂದಿಗೆ ಕುಣಿತ ಭಜನೆ […]










