ಗಂಗೊಳ್ಳಿ(ಜು,21): ನಾವು ಮಾಡುವ ಸೇವೆ ಅರ್ಹ ವ್ಯಕ್ತಿಗಳಿಗೆ ತಲುಪಬೇಕು. ಯಾವುದೇ ಫಲಾಪೇಕ್ಷೆ ಇಲ್ಲದೆ ಮಾಡಿದ ಸೇವೆಯಿಂದ ಜೀವನ ಸಾರ್ಥಕ ಗೊಳ್ಳುತ್ತದೆ ಎಂದು ರೋಟರಿ ಕ್ಲಬ್ ನ ವಲಯ ಒಂದರ ಅಸಿಸ್ಟೆಂಟ್ ಗವರ್ನರ್ ರೋ. ಡಾ. ಉಮೇಶ್ ಪುತ್ರನ್ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿ ಸರಸ್ವತಿ ವಿದ್ಯಾಲಯದ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ನಡೆದ ರೋಟರಿ ಕ್ಲಬ್ ಗಂಗೊಳ್ಳಿಯ ನೂತನ ಪದಾಧಿಕಾರಿಗಳ ಪದ ಪ್ರಧಾನ ಸಮಾರಂಭದಲ್ಲಿ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಸಮಾಜ ಸೇವಾ […]
Category: ಗ್ರಾಮೀಣ ಸುದ್ದಿ
ಸುದ್ದಿ ಸಮಾಚಾರ — > ಗ್ರಾಮೀಣ ಸುದ್ದಿ
ಬಸ್ರೂರು: ಶೈವ ಪಂಥದ ಕಂಚಿನ ಕಂಬದಲ್ಲಿ ಶಾಸನ ಪತ್ತೆ
ಬಸ್ರೂರು(ಜೂ,20): ಇಲ್ಲಿನ ಮಹಾತೋಬಾರ ಶ್ರೀ ಮಹಾಲಿಂಗೇಶ್ವರ (ನಖರೇಶ್ವರ) ದೇವಸ್ಥಾನದ “ಶೈವ ಪಂಥದ ಕಂಚಿನ ಕಂಬದಲ್ಲಿ ಶಾಸನ ಪತ್ತೆಯಾಗಿದೆ. ಕುಂದಾಪುರ ತಾಲೂಕು ಬಸ್ರೂರು ಗ್ರಾಮ ಬಹಳ ಇತಿಹಾಸ ಪ್ರಸಿದ್ಧ ಸ್ಥಳ. ಇಲ್ಲಿ ವಿಜಯನಗರ,ಆಳುಪ,ಕೆಳದಿ ಸಂಸ್ಥಾನಗಳು ಆಳ್ವಿಕೆ ನಡೆಸಿದ ಸ್ಥಳ ಕೂಡಾ ಆಗಿದೆ.ಬಸ್ರೂರು ಮಹಾತೋಬಾರ ಶ್ರೀ ಮಹಾಲಿಂಗೇಶ್ವರ (ನಖರೇಶ್ವರ) ದೇವಸ್ಥಾನದ ಹೊರ ಸುತ್ತಿನ ಎದುರು ಭಾಗದಲ್ಲಿ ಕ್ರಿ.ಶ 15-16ನೇ ಶತಮಾನದ ಅಂದರೆ ಸರಿಸುಮಾರು 500 ವಷ೯ಗಳ ಹಳೆಯದಾದ ಕಂಚಿನ ಕಂಬದಲ್ಲಿ ಶಾಸನ ಪತ್ತೆಯಾಗಿರುವುದು […]
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ :ಪರಿಸರ ಮಾಹಿತಿ ಕಾರ್ಯಕ್ರಮ
ಕೊಲ್ಲೂರು (ಜೂ,12): ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ಬಿ ಸಿ ಟ್ರಸ್ಟ್ ಬೈಂದೂರು ತಾಲೂಕು ಕೊಲ್ಲೂರು ವಲಯದ ಮೆಕ್ಕೆ ಒಕ್ಕೂಟದಲ್ಲಿ ಪರಿಸರ ಮಾಹಿತಿ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಒಕ್ಕೂಟದ ಅಧ್ಯಕ್ಷರಾದ ಎಂ. ಜೆ. ಬೇಬಿಯವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಸಮನ್ವಯ ಅಧಿಕಾರಿ ಗೀತಾ ಪರಿಸರ ಸಂರಕ್ಷಣೆ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ರಿಕವರಿ ಮೇಲ್ವಿಚಾರಕರಾದ ಸುರೇಶ್, ಕಾರ್ಯಕ್ಷೆತ್ರದ ಸೇವಾಪ್ರತಿನಿಧಿ ರಾಮ ಶೆಟ್ಟಿ ಅತ್ತಿಕಾರ್, ಒಕ್ಕೂಟದ ಉಪಾಧ್ಯಕ್ಷರಾದ […]
ಪಡು ಗೋಪಾಡಿ ಕಿರಿಯ ಪ್ರಾಥಮಿಕ ಶಾಲೆಗೆಅಗತ್ಯ ವಸ್ತುಗಳ ವಿತರಣೆ
ಗೋಪಾಡಿ(ಜೂ,11): ಗೋಪಾಡಿ ಪಡು ಶಾಲೆಗೆಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಸುರೇಂದ್ರ ಕಾಂಚನ್ ಅವರ ಮನವಿಯ ಮೇರೆಗೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪಡುಗೋಪಾಡಿ ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಅಂಗನವಾಡಿ ಮಕ್ಕಳಿಗೆ ಅಗತ್ಯ ವಸ್ತುವಾದ ಬಟ್ಟಲು ಮತ್ತು ಲೋಟವನ್ನು ಹೋಟೆಲ್ ಉಡುಪಿ ರೆಸ್ಟೋರೆಂಟ್ ಕೊಲ್ಲಾಪುರ ಶಿರೋಲಿ ಉದ್ಯಮಿಯಾದ ಶ್ರೀಮತಿ ಸುನಿತಾ ಪ್ರಕಾಶ್ ಕೋಟೇಶ್ವರ ಮೇಪು ಇವರು ವಿತರಿಸಿದರು. ಈ ಸಂಧರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀನಿವಾಸ ಶೆಟ್ಟಿ, ಗೋಪಾಡಿ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸರೋಜ ಪೂಜಾರಿ, […]
ಕಮಲಶಿಲೆ: ಶ್ರೀ ಬ್ರಾಹ್ಮಿ ಗೀತಾಮೃತ- ಭಕ್ತಿ ಗೀತೆ ಅನಾವರಣ
ಕಮಲಶಿಲೆ( ಮೇ,09): ಶ್ರೀ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇವಸ್ಥಾನ,ಶ್ರೀ ಕ್ಷೇತ್ರ ಕಮಲಶಿಲೆ ಶ್ರೀ ದೇವಿಯ ಭಕ್ತಿ ಗೀತೆ” ಶ್ರೀ ಬ್ರಾಹ್ಮಿ ಗೀತಾಮೃತ”ವನ್ನು ಮೇ, 8 ರ ಆದಿತ್ಯವಾರದಂದು ಕ್ಷೇತ್ರದ ಧರ್ಮದರ್ಶಿಗಳಾದ ಸಚ್ಚಿದಾನಂದ ಚಾತ್ರರವರು ದೇವಳದ ಮುಂಭಾಗದಲ್ಲಿ ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಆಡಳಿತ ಧರ್ಮದರ್ಶಿ ಸಚ್ಚಿದಾನಂದ ಚಾತ್ರ, ಜೊತೆ ಧರ್ಮದರ್ಶಿ ಆಜ್ರಿ ಚಂದ್ರಶೇಖರ ಶೆಟ್ಟಿ, ಭಕ್ತಿಗೀತೆಗಳ ನಿರ್ಮಾಪಕ ಸುಕುಮಾರ್ ಶೆಟ್ಟಿ ಕಮಲಶಿಲೆ, ಭಕ್ತಿ ಗೀತೆಗಳ ಗೀತಸಾಹಿತಿ ಪ್ರಸಾದ್ ಕುಮಾರ್ ಮೊಗೆಬೆಟ್ಟು, ಗೀತ ಗಾಯಕರಾದ ಕೃಷ್ಣ […]
ಮೊಗವೀರ ಯುವ ಸಂಘಟನೆ (ರಿ.)ಉಡುಪಿ ಜಿಲ್ಲೆ, ಕೋಟೇಶ್ವರ ಘಟಕ: ಬಡ ಕುಟುಂಬಕ್ಕೆ ಮನೆ ಹಸ್ತಾಂತರ
ಕೋಟೇಶ್ವರ:( ಏ,17): ಮೊಗವೀರ ಯುವ ಸಂಘಟನೆ (ರಿ.), ಉಡುಪಿ ಜಿಲ್ಲೆ ಇದರ ಕೋಟೇಶ್ವರ ಘಟಕದ ವತಿಯಿಂದ ಮೂವರು ಮಕ್ಕಳನ್ನು ಕಳೆದುಕೊಂಡು , ದುಡಿಮೆಯ ವಯಸ್ಸು ಮೀರಿದ ಅಸಹಾಯಕ ಕುಟುಂಬಕ್ಕೆ ಸಂಘಟನೆಯ ವತಿಯಿಂದ ನಿರ್ಮಿಸಿ ಕೊಟ್ಟ ಮನೆ “ಶ್ರೀ ಕೃಷ್ಣ” ಇದರ ಗ್ರಹ ಪ್ರವೇಶ ಏ.16 ರಂದು ಜರುಗಿತು. ಮೊಗವೀರ ಯುವ ಸಂಘಟನೆಯ ಕೋಟೇಶ್ವರ ಘಟಕದ ಗೌರವಾಧ್ಯಕ್ಷ ಜಗದೀಶ್ ಮಾರ್ಕೋಡು ರವರು ಉದ್ಘಾಟನೆಗೊಳಿಸಿ, ಮನೆಯನ್ನು ಫಲಾನುಭವಿಗೆ ಹಸ್ತಾಂತರಿಸಲಾಯಿತು. ಕೋಟೇಶ್ವರ ಘಟಕದ ಅಧ್ಯಕ್ಷ […]
ಬೈಂದೂರು :ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮ
ಬೈಂದೂರು (ಏ,10): ಸ್ವಾತಂತ್ರ್ಯ ಹೋರಾಟಗಾರ ಬಾಡಾ ದಿ.ಮಂಜುನಾಥ ಜೋಶಿ ಯವರ ಮನೆಗೆ ಸ್ವಾತಂತ್ರ್ಯ ಹೋರಾಟಗಾರರ ಮನೆ ಎನ್ನುವ ನಾಮಫಲಕ ಅಳವಡಿಕೆ ಕಾರ್ಯಕ್ರಮ ಇತ್ತೀಚೆಗೆ ಬೈಂದೂರು ತಾಲೂಕು ವ್ಯಾಪ್ತಿಯ ಬಾಡಾದಲ್ಲಿ ನಡೆಯಿತು. ನಾಮ ಫಲಕ ಅನಾವರಣವನ್ನು ಉದ್ಯಮಿ ಶ್ರೀ ಸುಜೀತ್ ಶೆಟ್ಟಿ ಹಿಲಿಯಾಣ ರವರು ನೆರವೇರಿಸಿದರು. ಕಾರ್ಯಕ್ರಮದ ಅತಿಥಿಯಾಗಿ ಶ್ರೀ ಜಯಾನಂದ ಹೋಬಳಿದಾರ್, ನಾಗರತ್ನ ಹೇರಳೆ,ಶ್ರೀ ಜಯದೇವಿ ಭಟ್ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಅರುಣ ಶಿರೂರು ರವರು ವಹಿಸಿದ್ದರು.ಸ್ವರಾಜ್ಯ75 ಸಂಘಟನೆಯ ನೇತ್ರತ್ವದಲ್ಲಿ […]
ಎ.16ಕ್ಕೆ ಬಗ್ವಾಡಿ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದ ರಥೋತ್ಸವ
ಹೆಮ್ಮಾಡಿ (ಏ,7): ಕುಂದಾಪುರ ತಾಲೂಕಿನ ಪ್ರಮಖ ದೇವಾಲಯಗಳಲ್ಲಿ ಒಂದಾದ ಬಗ್ವಾಡಿ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದ ವಾರ್ಷಿಕ ಬ್ರಹ್ಮ ರಥೋತ್ಸವ ಇದೇ ಎಪ್ರಿಲ್ 16 ರ ಶನಿವಾರ ದಂದು ನಡೆಯಲಿದೆ. ರಥೋತ್ಸವದ ಪ್ರಯುಕ್ತ ಎ.14ರಿಂದ 18ರ ವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.
ಕೋಟೇಶ್ವರ: ಟೈಲರಿಂಗ್ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಹಾಗೂ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ
ಜಿಲ್ಲಾ ವಿಕಲಚೇತನರ ಇಲಾಖೆ ಉಡುಪಿ ಜಿಲ್ಲೆ , ಎಪಿಡಿ ಸಂಸ್ಥೆ ಬೆಂಗಳೂರು, ಗ್ರಾಮ ಪಂಚಾಯತ್ ಕೋಟೇಶ್ವರ ಆಶ್ರಯದಲ್ಲಿ ಟೈಲರಿಂಗ್ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಹಾಗೂ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ಮಾರ್ಚ್ 31 ರಂದು ಬೆಳಿಗ್ಗೆ 11 ಗಂಟೆಗೆ ಕೋಟೇಶ್ವರ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಕೃಷ್ಣ ಗೊಲ್ಲ ಮಾತನಾಡಿ ಗ್ರಾಮೀಣ ಭಾಗದಲ್ಲಿ ವಿಶೇಷ ಚೇತನರನ್ನ ಗುರುತಿಸಿ ಎಪಿಡಿ ಸಂಸ್ಥೆ […]
ಸಾಮಾಜಿಕ ಹಿತ ಚಿಂತನೆ ಯುವಕರಿಗೆ ಮುಖ್ಯ: ಯುವಶಕ್ತಿ ಬೆಳ್ಳಿ ಹಬ್ಬದಲ್ಲಿ ಸಚಿವ ಕೋಟ ಅಭಿಮತ
ವಕ್ವಾಡಿ(ಮಾ.20): ಸ್ವಾಸ್ಥ್ಯ ಸಮಾಜಕ್ಕೆ ಪ್ರಜ್ಞಾವಂತ ಯುವಕರ ಪಾಲು ಮಹತ್ತರವಾದದ್ದು. ಊರಿನ ಸಮಗ್ರ ಅಭಿವೃದ್ಧಿಗಾಗಿ ಯುವಕರು ದುಡಿಯಬೇಕು ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಯುವಶಕ್ತಿ ಮಿತ್ರ ಮಂಡಲಿ (ರಿ.) ಹೆಗ್ಗಾರ್ ಬೈಲು, ವಕ್ವಾಡಿ ಇದರ ಬೆಳ್ಳಿ ಹಬ್ಬದ ಪ್ರಯಕ್ತ ಹಮ್ಮಿಕೊಂಡ ಯುವ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರಪಂಚದ ಯಾವುದೇ ದೇಶಗಳಲ್ಲೂ ಇಲ್ಲದಷ್ಟು ಯುವಶಕ್ತಿ ನಮ್ಮ ದೇಶದಲ್ಲಿದೆ. ಯುವ ಪೀಳಿಗೆಯಲ್ಲಿರುವ […]










