ಕುಂದಾಪುರ (ಅ, 02) : ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಕಾಲೇಜಿನ 2019-20ರ ಶೈಕ್ಷಣಿಕ ವರ್ಷದ ‘ಶಿಖರ’ ವಾರ್ಷಿಕ ಸಂಚಿಕೆಯನ್ನು ಎಂಆರ್ಪಿಎಲ್ ಮಂಗಳೂರು ಇಲ್ಲಿನ ಡಾ. ಸಂಪತ್ ಕುಮಾರ್ ಹೆಚ್.ಸಿ. ಯವರು ಅನಾವರಣಗೊಳಿಸಿದರು. ನಂತರ ಮಾತನಾಡಿದ ಅವರು, ಕಾಲೇಜಿನ ವಾರ್ಷಿಕ ಸಂಚಿಕೆ ಶಿಖರ ವಿಶ್ವವಿದ್ಯಾನಿಲಯದಲ್ಲಿ ಸತತ ನಾಲ್ಕು ವರ್ಷ ಪ್ರಥಮ ಸ್ಥಾನ ಪಡೆದಿರುವುದು ಹೆಮ್ಮೆಯ ವಿಚಾರ. ವಾರ್ಷಿಕ ಸಂಚಿಕೆ ವರ್ಷದ ಕಾರ್ಯಕ್ರಮಗಳ ಜೊತೆಗೆ ಸಂಸ್ಥೆಯ ಗುಣಮಟ್ಟದ ಪ್ರತೀಕ ಆಗಿರುತ್ತದೆ ಎಂದು […]
Category: ಗ್ರಾಮೀಣ ಸುದ್ದಿ
ಸುದ್ದಿ ಸಮಾಚಾರ — > ಗ್ರಾಮೀಣ ಸುದ್ದಿ
ಮರೆಯಲಾಗದ ಕಾಲೇಜು ನೆನಪು….
ನೆನಪುಗಳ ಮಾತು ಮಧುರ ಎಂಬ ಮಾತು ಎಷ್ಟು ಅರ್ಥಪೂರ್ಣವಾಗಿದೆ ಅಲ್ವ?.. ನನ್ನ ಜೀವನದಲ್ಲಿ ನನಗೆ ಅಚ್ಚೆಳೆದು ಉಳಿದ ನೆನಪು ಎಂದರೆ ಅದು ನನ್ನ ಕಾಲೇಜು ದಿನದ ನೆನಪುಗಳು. ಆ ದಿನವನ್ನೆಲ್ಲಾ ಮತ್ತೇ ನೆನಪಿಸಿಕೊಂಡರೆ ಕಣ್ಣಿನಂಚಿನಲ್ಲಿ ಕಂಬನಿ ಮೂಡುತ್ತದೆ. ಪಿಯುಸಿ ಮುಗಿದಿತ್ತು. ಮುಂದೇನು ಎಂಬ ಪ್ರಶ್ನೆ? ಮನೆಯವರ ಆಸೆ ಈಡೇರಿಸಲಾ? ಅಕ್ಕಪಕ್ಕದ ಮನೆಯವರ ಆಸೆ ಈಡೇರಿಸಲಾ ? ನನ್ನ ಆಸೆ ಈಡೇರಿಸಿಕೊಳ್ಳಲಾ? ಎಂಬ ಗೊಂದಲ.. ಅದೇನೇ ಆಗಲಿ ಎಂದು ಒಂದೆರಡು ಕಾಲೇಜಿನ […]
ಸರಸ್ವತಿ ವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
ಗಂಗೊಳ್ಳಿ (ಅ, 02 ): ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳು ಉದ್ಘಾಟನಾ ಕಾರ್ಯಕ್ರಮವು ಇತ್ತೀಚೆಗೆ ಗಂಗೊಳ್ಳಿಯ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಇಂಡೋರ್ ಸ್ಟೇಡಿಯಂನಲ್ಲಿ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ರೋಟರಿ ಕ್ಲಬ್ ಗಂಗೊಳ್ಳಿಯ ಅಧ್ಯಕ್ಷರಾದ ರಾಜೇಶ್ ಎಂ. ಜಿ ನೆರವೇರಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಲಯನ್ಸ್ ಅಕ್ಷಯ ಹೆಗ್ಡೆ ಮೊಳಹಳ್ಳಿ ಸ್ವಯಂಸೇವಕರನ್ನುಉದ್ದೇಶಿಸಿ ರಾಷ್ಟ್ರೀಯ ಸೇವಾ ಯೋಜನೆ ಯಲ್ಲಿ ತೊಡಗಿಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳು […]
ಬಂಟಕಲ್ ಇಂಜಿನಿಯರಿಂಗ್ ಕಾಲೇಜು “ಮೆಂಟರ್ ಇನ್ಸಿಟ್ಯೂಟ್” ಆಗಿ ಆಯ್ಕೆ
ಬಂಟಕಲ್ (ಅ, 01) : ಭಾರತ ಶಿಕ್ಷಣ ಸಚಿವಾಲಯದ ಆಧೀನದಲ್ಲಿರುವ ಇನ್ಸಿಟ್ಯೂಶನ್ ಇನ್ನೊವೇಶನ್ ಕೌನ್ಸಿಲ್ (ಐಐಸಿ) 2021-22ರ ಸಾಲಿನಲ್ಲಿ ನಡೆದ ಮಾರ್ಗದರ್ಶಕ ಕಾರ್ಯಕ್ರಮದಲ್ಲಿ ಬಂಟಕಲ್ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯವನ್ನು ಮಾರ್ಗದರ್ಶಕ ಸಂಸ್ಥೆಯನ್ನಾಗಿ ಆಯ್ಕೆ ಮಾಡಲಾಗಿದೆ. ಸ್ಥಳೀಯ ಪರಿಸರ ವ್ಯವಸ್ಥೆಯನ್ನು ನವೀನ ಮಾದರಿಯಲ್ಲಿ ರಚಿಸುವುದು,ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಯಾಂತ್ರಿಕತೆಯನ್ನು ಬೆಂಬಲಿಸಿ ಅದರ ಚೌಕಟ್ಟಿನಲ್ಲಿ ಹೊಸಹೊಸ ಸಾಧನೆಗಳನ್ನು ಮಾಡಲು ಇತರ ವಿದ್ಯಾಸಂಸ್ಥೆಗಳಲ್ಲಿ ಆಟಲ್ ಶ್ರೇಯಾಂಕಕ್ಕಾಗಿ ವಿದ್ಯಾರ್ಥಿಗಳನ್ನು ರೂಪಿಸುವುದು, ವಿದ್ಯಾರ್ಥಿಗಳಿಗೆ […]
ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನೊಂದಿಗೆ ಸೃಸ್ಟಿ ವೆಂಚರ್, ಪಡುಬಿದ್ರಿ ಒಡಂಬಡಿಕೆ
ಬಂಟಕಲ್ (ಆ, 01) : ಇಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯವು ಸೃಷ್ಟಿ ವೆಂಚರ್, ಪಡುಬಿದ್ರಿ ಇತ್ತೀಚೆಗೆ ಸಂಸ್ಥೆಯ ಆವರಣದಲ್ಲಿ ಒಡಂಬಡಿಕೆಯೊಂದನ್ನು ಮಾಡಿಕೊಂಡಿದೆ. ಈ ಒಪ್ಪಂದದ ಪ್ರಕಾರ ಎರಡೂ ಸಂಸ್ಥೆಗಳು ಜೊತೆಗೂಡಿ ನಿರ್ಮಾಣ ಕ್ಷೇತ್ರದಲ್ಲಿ ಹೊಸ ಅವಿಷ್ಕಾರ ನಡೆಸಲಿದೆ. ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಪರಿಸರ ಸ್ನೇಹಿ ಮನೆ ಹಾಗೂ ಕಟ್ಟಡ ನಿರ್ಮಾಣದ ಬಗ್ಗೆ ಸಂಶೋಧನೆ ಮತ್ತು ಅಭಿವೃದ್ಧಿಯ ಕಾರ್ಯ ನಿರ್ವಹಿಸಲಿದೆ. ಇದರಿಂದ ಸಂಸ್ಥೆಯ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ನಿರ್ಮಾಣ […]
ಗೀತಾನಂದ ಫೌಂಡೇಶನ್ : ಪ್ರತಿಭಾ ಪುರಸ್ಕಾರ ನೋಟ್ ಬುಕ್ ವಿತರಣೆ ಹಾಗೂ ಅಂಗವಿಕಲರಿಗೆ ಸೈಕಲ್ ವಿತರಣೆ
ಕೋಟ (ಅ, 01) : ಗೀತಾನಂದ ಫೌಂಡೇಷನ್(ರಿ) ಕೋಟ ಇದರ ಆಶ್ರಯದಲ್ಲಿ ಸ್ಥಳೀಯ ಪ್ರಾಥಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕೋಟ ಪಡುಕರೆ ಸಂಯುಕ್ತ ಪ್ರೌಢ ಶಾಲೆಯಲ್ಲಿ ಉಚಿತ ನೋಟ್ ಪ್ರಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ ಹಾಗೂ ಅಂಗವಿಕಲರಿಗೆ ಸೈಕಲ್ ವಿತರಣೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೀತಾನಂದ ಫೌಂಡೇಷನ್ ಪ್ರವರ್ತಕರು ಉದ್ಯಮಿ, ಕೊಡುಗೈದಾನಿ ಶ್ರೀ ಆನಂದ ಸಿ .ಕುಂದರ್ ವಹಿಸಿದ್ದರು. ನಮ್ಮ ಟ್ರಸ್ಟ್ ಶಿಕ್ಷಣ, ಆರೋಗ್ಯ ಮತ್ತು ಬಡಜನರಿಗೆ ನಿರಂತರವಾಗಿ […]
ತೆಂಕನಿಡಿಯೂರು ಕಾಲೇಜು: ಎನ್.ಎಸ್.ಎಸ್ ದಿನಾಚರಣೆ ಪ್ರಯುಕ್ತ ಫಿಟ್ ಇಂಡಿಯಾ 2.0 ಜಾಥಾ
ಉಡುಪಿ(ಸೆ,29); ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆಯ ಪ್ರಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ, ನೆಹರೂ ಯುವ ಕೇಂದ್ರ ಉಡುಪಿ, ಸರಕಾರಿ ಪದವಿಪೂರ್ವ ಕಾಲೇಜು ತೆಂಕನಿಡಿಯೂರು ಇವರ ಸಂಯುಕ್ತ ಆಶ್ರಯದಲ್ಲಿ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಸ್ವಾತಂತ್ರ್ಯ ಓಟ ಹಾಗೂ ಫಿಟ್ ಇಂಡಿಯಾ ಓಟ ಆಯೋಜಿಸಲಾಗಿತ್ತು. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಿಶ್ವನಾಥ ಕರಬರವರು ಓಟಕ್ಕೆ ಚಾಲನೆ ನೀಡಿದರು.ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ […]
ಅರಾಟೆ : ವಾಜಪೇಯಿ ಬಸ್ಸು ತಂಗುದಾಣ ಉದ್ಘಾಟಿಸಿದ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ
ಅರಾಟೆ (ಸೆ, 27) : ಬೈಂದೂರು ವಿಧಾನಸಭಾ ಕ್ಷೇತ್ರದ ಹೊಸಾಡು ಗ್ರಾಮಪಂಚಾಯತ್ ವ್ಯಾಪ್ತಿಯ ಅರಾಟೆ ಎಂಬಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯ ಮೂಲಕ ಮೂರು ಲಕ್ಷ ರೂಪಾಯಿ ವೆಚ್ಚದಲ್ಲಿ, ದೇಶ ಕಂಡ ಧೀಮಂತ ನಾಯಕ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಯವರ ಹೆಸರಿನಲ್ಲಿ ನಿರ್ಮಿಸಲಾದ ಪ್ರಯಾಣಿಕರ ತಂಗುದಾಣವನ್ನು ಬೈಂದೂರಿನ ಶಾಸಕರಾದ ಬಿ.ಎಂ ಸುಕುಮಾರ ಶೆಟ್ಟಿ ಯವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಭಾರತೀಯ ಜನತಾಪಕ್ಷದ ಬೈಂದೂರು ಮಂಡಲದ ಅಧ್ಯಕ್ಷರಾದ ದೀಪಕ್ ಕುಮಾರ್ […]
ಡಾ। ಬಿ. ಬಿ. ಹೆಗ್ಡೆ ಕಾಲೇಜು-ಎನ್.ಎಸ್.ಎಸ್ ಘಟಕ: ಬಸ್ರೂರಿನಲ್ಲಿ “ನಿರ್ಮಲ ದೇಗುಲ ” ಸ್ವಚ್ಚತಾ ಕಾರ್ಯಕ್ರಮ
ಬಸ್ರೂರು (ಸೆ, 26): ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಇತಿಹಾಸ ಪ್ರಸಿದ್ಧ ಬಸ್ರೂರಿನ ಮೂಡ್ಕೇರಿಯ ನಾಥ ಪರಂಪರೆಯ ಪ್ರಾಚೀನ ಶ್ರೀ ಕಾಲಭೈರವ ದೇವಸ್ಥಾನದಲ್ಲಿ ಸೆಪ್ಟೆಂಬರ್26 ರಂದು ಸ್ವಚ್ಚತಾ ಕಾರ್ಯ “ನಿರ್ಮಲ ದೇಗುಲ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾಲೇಜಿನ ಉಪ ಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ಸಾರ್ವಜನಿಕ ಸಂಪರ್ಕಾಧಿಕಾರಿ ನಾಗರಾಜ್ ಶೆಟ್ಟಿ ನೈಕಂಬ್ಳಿ , ನಿಕಟಪೂರ್ವ ಎನ್.ಎಸ್.ಎಸ್ ಯೋಜನಾಧಿಕಾರಿ […]
ಶ್ರೀ ಗೋವಿಂದ ಬಾಬು ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಪ್ರದಾನ
ಕುಂದಾಪುರ (ಸೆ, 25) : ಕೊಡುಗೈ ದಾನಿ ಉದ್ಯಮಿ ,ಶೇಫ್ ಟಾಕ್ ಹಾಸ್ಪಿಟಾಲಿಟಿ ಸಂಸ್ಥೆ ಹಾಗೂ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ) ಉಪ್ಪುಂದ ಇದರ ಅಧ್ಯಕ್ಷರಾದ ಶ್ರೀ ಗೋವಿಂದ ಬಾಬು ಪೂಜಾರಿಯವರಿಗೆ ಸಮಾಜ ಸೇವಾ ಕ್ಷೇತ್ರದ ಅನನ್ಯ ಕೊಡುಗೆಯನ್ನು ಗುರುತಿಸಿ ಏಶಿಯಾ ವೇದಿಕ್ ಕಲ್ಚರ್ ಫೌಂಡೇಷನ್ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.










