ಕುಂದಾಪುರ (ನ,21) : ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಜಂಟಿ ಅಶ್ರಯದಲ್ಲಿ ಪುರುಷರ ಮತ್ತು ಮಹಿಳೆಯರ ಅಂತರ್ ಕಾಲೇಜು ಮಟ್ಟದ ಚೆಸ್ ಸ್ಪರ್ಧೆಯು ಡಿಸೆಂಬರ್ 01, 02 ಮತ್ತು 03ರಂದು ನಡೆಯಲಿದೆ. ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಉಡುಪಿ, ದಕ್ಷಿಣಕನ್ನಡ, ಕೊಡಗು ವ್ಯಾಪ್ತಿಯ ಎಲ್ಲಾ ಕಾಲೇಜುಗಳ ಸ್ಪರ್ಧಾಳುಗಳು ಭಾಗವಹಿಸಲಿದ್ದಾರೆ ಎಂದು ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಸರಸ್ವತಿ ವಿದ್ಯಾಲಯ ಪಿ ಯು ಕಾಲೇಜು ಗಂಗೊಳ್ಳಿ :ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ಸಂಪನ್ನ
ಗಂಗೊಳ್ಳಿ ( ನ,21): ವಿದ್ಯಾರ್ಥಿಗಳಲ್ಲಿ ಭಾವೈಕ್ಯತೆ ಮತ್ತು ಸಾಮಾಜಿಕ ಕಳಕಳಿ ಉಂಟು ಮಾಡುವಲ್ಲಿ ರಾಷ್ಟ್ರೀಯ ಸೇವಾ ಯೋಜನೆಯಾ ಇಂತಹ ಯೋಜನೆಗಳು ಅತ್ಯಂತ ಅರ್ಥಪೂರ್ಣವಾಗಿದೆ ಎಂದು ವಂಡ್ಸೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲಕರಾದ ರಾಜೀವ್ ನಾಯ್ಕ್ ಅಭಿಪ್ರಾಯಪಟ್ಟರು. ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಕೊಲ್ಲೂರಿನ ಧರ್ಮಪೀಠದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಕವಿತಾ ಎಂ ಸಿ ರವರು […]
ಮುರುಡೇಶ್ವರ ಬೀಚ್ ಮ್ಯಾರಥಾನ್: ಕುಂದಾಪುರದ ಟ್ರ್ಯಾಕ್ ಆ್ಯಂಡ್ ಫೀಲ್ಡ್ ಕ್ರೀಡಾ ತರಬೇತಿ ಸಂಸ್ಥೆಗೆ 4 ಪದಕಗಳು
ಕುಂದಾಪುರ (ನ.20): ಇತ್ತೀಚೆಗೆ ಮುರುಡೇಶ್ವರದಲ್ಲಿ ನಡೆದ ಬೀಚ್ ಮ್ಯಾರಥಾನ್ ನಲ್ಲಿ ಕುಂದಾಪುರದ ಪ್ರಸಿದ್ದ ಅಥ್ಲೆಟಿಕ್ ಸಂಸ್ಥೆಯಾದ ಕುಂದಾಪುರ ಟ್ರ್ಯಾಕ್ ಆ್ಯಂಡ್ ಫೀಲ್ಡ್ ಕ್ರೀಡಾ ತರಬೇತಿ ಸಂಸ್ಥೆಯ ವಿದ್ಯಾರ್ಥಿಗಳು ನಾಲ್ಕು ಪದಕಗಳನ್ನು ಪಡೆಯುವ ಮೂಲಕ ಉತ್ತಮ ಸಾಧನೆಗೈದಿದ್ದಾರೆ. 16 ವರ್ಷದ ಕೆಳ ವಯಸ್ಸಿನಹುಡುಗಿಯರ ವಿಭಾಗದ 5 ಕಿ.ಲೋ ಮೀಟರ್ ಓಟದಲ್ಲಿ ನವ್ಯ ಆಚಾರ್ (ಓಕ್ ವುಡ್ ಇಂಡಿಯನ್ ಸ್ಕೂಲ್) ಚಿನ್ನದ ಪದಕ ಪಡೆದರೆ, ಅಕ್ಷತಾ ಜಿ.ಪೈ( ಓಕ್ ವುಡ್ ಇಂಡಿಯನ್ ಸ್ಕೂಲ್) ಬೆಳ್ಳಿ ಪದಕ ಪಡೆದಿದ್ದಾರೆ.ಮನಸ್ವಿ( ಸೈಂಟ್ […]
ಎಚ್. ಎಮ್. ಎಮ್. ಮತ್ತು ವಿ. ಕೆ. ಆರ್. ಶಾಲೆಯಲ್ಲಿ ರೂಬಿಕ್ಸ್ ಕ್ಯೂಬ್ ಗ್ರ್ಯಾಂಡ್ ಮಾಸ್ಟರ್ ಅಫಾನ್ ಕುಟ್ಟಿ
ಕುಂದಾಪುರ(ನ,6): ಇಂದಿನ ದಿಗಳಲ್ಲಿ ವಿದ್ಯಾರ್ಥಿಗಳು ಮೊಬೈಲನ್ನು ಅತೀ ಹೆಚ್ಚು ಬಳಸುತ್ತಿದ್ದು, ಈ ದುಶ್ಟಟವನ್ನು ಬಿಡಿಸಬೇಕಾದರೆ ಪೋಷಕರು ಅವರಿಗೊಂದು ರೂಬಿಕ್ಸ್ ಕ್ಯೂಬ್ ತಂದು ಕೊಡಿ; ಅಲ್ಲದೆ ಎಷ್ಟೇ ಕೆಲಸದ ಒತ್ತಡ ಪೋಷಕರಿಗಿದ್ದರೂ ಕನಿಷ್ಟ ಅರ್ಧ ಗಂಟೆಯಾದರೂ ಪ್ರತಿನಿತ್ಯ ಮಕ್ಕಳೊಂದಿಗೆ ಕಳೆಯಿರಿ ಎಂದು ರೂಬಿಕ್ಸ್ ಕ್ಯೂಬ್ ಮಾಂತ್ರಿಕ, ವಿಶ್ವ ದಾಖಲೆಯ ಯುವ ಪ್ರತಿಭೆ ಗ್ರ್ಯಾಂಡ್ ಮಾಸ್ಟರ್ ಅಫಾನ್ ಕುಟ್ಟಿ ಹೇಳಿದರು. ಅವರು ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. […]
ಡಾ|ಬಿ.ಬಿ.ಹೆಗ್ಡೆ ಕಾಲೇಜು : ವ್ಯವಹಾರ ಆಡಳಿತ ವಿಭಾಗ- ಅಂತರ್ ತರಗತಿ ಸ್ಪರ್ಧೆ
ಕುಂದಾಪುರ(ನ.06): ಇಲ್ಲಿನ ಡಾ|ಬಿ.ಬಿ.ಹೆಗ್ಡೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ವತಿಯಿಂದ ಅಫೆಕ್ಟಿವ್ ಯುಸ್ ಆಫ್ ಡಿಜಿಟಲ್ ಟೂಲ್ಸ್ ಎನ್ನುವ ಅಂತರ್ ತರಗತಿ ಸ್ಪರ್ಧೆಯನ್ನು ಕಾಲೇಜಿನಲ್ಲಿ ನವೆಂಬರ್ 3 ರಂದು ಆಯೋಜಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೋ.ಕೆ.ಉಮೇಶ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಶುಭಹಾರೈಸಿದರು. ಗಣಕವಿಜ್ಞಾನ ವಿಭಾಗದ ಉಪನ್ಯಾಸಕರಾದ ವಿಲ್ಮಾ ಡಿಸೋಜ ,ಶ್ರೀಕಾಂತ್ ಹಾಗೂ ವಾಣಿಜ್ಯ ವಿಭಾಗದ ಉಪನ್ಯಾಸಕಿ ಪೂಜಾ ಕುಂದರ್ ತೀರ್ಮಾನಕಾರರಾಗಿ ಉಪಸ್ಥಿತರಿದ್ದರು. ವಿಭಾಗದ ಮುಖ್ಯಸ್ಥರಾದ ನಂದಾ […]
ಕರ್ನಾಟಕ ಓಪನ್ ನ್ಯಾಷನಲ್ ಮಾಸ್ಟರ್ ಅಥ್ಲೆಟಿಕ್ಸ್ ಕುಂದಾಪುರದ ಪ್ರಶಾಂತ್ ಶೆಟ್ಟಿ ಅತ್ಯುತ್ತಮ ಸಾಧನೆ
ಕುಂದಾಪುರ (ನ,06): ಮಾಸ್ಟರ್ ಗೇಮ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ಇವರ ಆಶ್ರಯದಲ್ಲಿ ಧಾರವಾಡದ ಆರ್ ಎನ್ ಎಸ್ ಕ್ರೀಡಾಂಗಣದಲ್ಲಿ ನವೆಂಬರ್ 4 ಮತ್ತು 5 ರಂದು ನಡೆದ ಕರ್ನಾಟಕ ಓಪನ್ ನ್ಯಾಷನಲ್ ಅಟ್ಲಾಟೆಕ್ಸ್ ನಲ್ಲಿ ಶಿಕ್ಷಕ ಹಾಗೂ ಕುಂದಾಪುರ ಟ್ರ್ಯಾಕ್ ಆ್ಯಂಡ್ ಫೀಲ್ಡ್ ಕ್ರೀಡಾ ತರಬೇತಿ ಸಂಸ್ಥೆಯ ತರಬೇತುದಾರರಾದ ಪ್ರಶಾಂತ್ ಶೆಟ್ಟಿಯವರು ಅತ್ಯುತ್ತಮ ಸಾಧನೆಗೈದಿದ್ದಾರೆ 400 ಮೀಟರ್ ಓಟದಲ್ಲಿ ಬೆಳ್ಳಿ ಪದಕ, 200 ಮೀಟರ್ ಓಟದಲ್ಲಿ ಬೆಳ್ಳಿ ಪದಕ, ಟ್ರಿಪಲ್ […]
ಎಚ್.ಎಮ್. ಎಮ್ ಮತ್ತು ವಿ.ಕೆ.ಆರ್ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ
ಕುಂದಾಪುರ (ನ.1) : ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತುವಿ.ಕೆ.ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ ಇಂದು ಬಹಳ ಅರ್ಥಪೂರ್ಣವಾಗಿ ಕರ್ನಾಟಕ ರಾಜ್ಯೋತ್ಸವವನ್ನುಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಮತ್ತು ಸಂಸ್ಥೆಯ ವಿವಿಧ ವಿಭಾಗಗಳ ಮುಖ್ಯಸ್ಥರು ತಾಯಿಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು, ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಶಿಕ್ಷಕ ಸಂಜಿತ್ ಹೆಗ್ಡೆ ದಿನದಮಹತ್ವವನ್ನು ತಿಳಿಸಿದರು. ಶಿಕ್ಷಕ ರವಿಚಂದ್ರರವರ ಕನ್ನಡ ಹಿರಿಮೆಯನ್ನು ಬಿತ್ತರಿಸುವ […]
ಗಂಗೊಳ್ಳಿಯಲ್ಲಿ ಕನ್ನಡ ರಾಜ್ಯೋತ್ಸವ
ಗಂಗೊಳ್ಳಿ( ನ.02): ನಮ್ಮ ಮಾತೃಭಾಷೆಯಾದ ಕನ್ನಡದ ಬಗೆಗೆ ನಿರಂತರವಾದ ಪ್ರೀತಿ ಕಾಳಜಿಯನ್ನು ಇಟ್ಟುಕೊಂಡು ಅದನ್ನು ನಿತ್ಯದ ಜೀವನದಲ್ಲಿ ಹೆಚ್ಚು ಬಳಸೋಣ ಎಂದು ನಿವೃತ್ತ ಪೋಸ್ಟ್ ಮಾಸ್ಟರ್ ಸೀತಾರಾಮ ಗಾಣಿಗ ಅಭಿಪ್ರಾಯಪಟ್ಟರು ಅವರು ಬೆಂಗಳೂರು ಹೋಟೆಲ್ ನ್ಯೂಸ್ ಮಾಸಪತ್ರಿಕೆ ಮತ್ತು ಕರ್ನಾಟಕ ಕರಾವಳಿ ನಾಗರಿಕ ಹಿತರಕ್ಷಣಾ ವೇದಿಕೆಯ ವತಿಯಿಂದ ಗಂಗೊಳ್ಳಿಯಲ್ಲಿ ನಡೆದ 68ನೇ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದಂದು ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಶಂಕರ ಜಿ.ಭಾಸ್ಕರ, ಲಕ್ಷ್ಮಣ, ಗುರು ಪಟೇಲ್, […]
ಡಾ|ಬಿ.ಬಿ.ಹೆಗ್ಡೆ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ
ಕುಂದಾಪುರ (ನ.01): ಕನ್ನಡ ಸಾಹಿತ್ಯ, ಸಾಂಸ್ಕೃತಿಕ ಪರಂಪರೆ ಹಿರಿದಾದುದ್ದು. ಹಳೆಗನ್ನಡ, ನಡುಗನ್ನಡ, ಹೊಸಗನ್ನಡ ಕಾಲಘಟ್ಟದ ಸಾಹಿತ್ಯದ ಸೃಜನಶೀಲ ಓದು ಕರ್ನಾಟಕದ ಭವ್ಯತೆಯನ್ನು ಪರಿಚಯಿಸುತ್ತದೆ ಎಂದು ಸಮುದಾಯ ಸಾಂಸ್ಕೃತಿಕ ಸಂಘಟನೆ ಕುಂದಾಪುರ ಇದರ ಅಧ್ಯಕ್ಷರಾದ ಡಾ| ಸದಾನಂದ ಬೈಂದೂರು ಹೇಳಿದರು. ಇವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಹಾಗೂ ಕನ್ನಡ ಸಂಘದ ಜಂಟಿ ಆಶ್ರಯದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಮಾತನಾಡಿದರು. […]
ಡಾ|ಬಿ.ಬಿ.ಹೆಗ್ಡೆ ಕಾಲೇಜು: ‘ದಾಂಡಿಯಾ’ ಸಂಭ್ರಮ
ಕುoದಾಪುರ (ನ.02): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಲಲಿತಕಲಾ ಸಂಘ ಮತ್ತು ಯೋಗ ಶಿಕ್ಷಣದ ಆಶ್ರಯದಲ್ಲಿ ನವರಾತ್ರಿಯ ವಿಶೇಷ ಆಚರಣೆಯಾದ ‘ದಾಂಡಿಯಾ’ವನ್ನು ಆಯೋಜಿಸಲಾಯಿತು. ಕಾಲೇಜಿನ ವಿದ್ಯಾರ್ಥಿಗಳು ದಾಂಡಿಯಾ ನೃತ್ಯ ಪ್ರಸ್ತುತಪಡಿಸಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ| ಕೆ. ಉಮೇಶ್ ಶೆಟ್ಟಿ, ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ, ಬೋಧಕ-ಬೋಧಕೇತರರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಲಲಿತಕಲಾ ಸಂಘದ ಸಂಯೋಜಕರಾದ ಶ್ರೀಮತಿ […]










