ಹೆಮ್ಮಾಡಿ(ಅ,27): ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಶಾಲಾ ಬಾಲಕಿಯರ ಗುಂಡು ಎಸೆತ ಸ್ಪರ್ಧೆಯಲ್ಲಿ 8.41 ಮೀಟರ್ ದೂರ ಎಸೆದು ದಾಖಲೆ ನಿರ್ಮಿಸುವುದರೊಂದಿಗೆ ಪ್ರಥಮ ಸ್ಥಾನ ಗಳಿಸಿ ಹಾಗೂ ಚಕ್ರ ಎಸೆತ ಸ್ಪರ್ಧೆಯಲ್ಲಿ 19.46 ಮೀಟರ್ ದೂರ ಎಸೆದು ದ್ವಿತೀಯ ಸ್ಥಾನ ಪಡೆದು ಎರಡು ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ ಆಗಿದ್ದಾರೆ. ಇವರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆಯಲ್ಲಿ 7 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಡಾ|ಬಿ.ಬಿ.ಹೆಗ್ಡೆ ಕಾಲೇಜು : ರೋವರ್ಸ್ ಹಾಗೂ ರೇಂಜರ್ಸ್ ಘಟಕದಿಂದ ಸೇವಾ ಶಿಬಿರ
ಕುಂದಾಪುರ (ಅ.26): ಕರಾವಳಿಯ ಪ್ರಸಿದ್ಧ ಕ್ಷೇತ್ರವಾದ ಉಚ್ಚಿಲ ಮಹಾ ಲಕ್ಷ್ಮೀ ದೇವಸ್ಥಾನದ ದಸರಾ ಮಹೋತ್ಸವದ ಪ್ರಯುಕ್ತ ಕುಂದಾಪುರದ ಡಾ|ಬಿ.ಬಿ ಹೆಗ್ಡೆ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ಸ್ವಯಂ ಸೇವಕರಿಂದ ಒಂದು ದಿನದ ಸೇವಾ ಶಿಬಿರವನ್ನು ಅಕ್ಟೋಬರ್ 22ರಂದು ಹಮ್ಮಿಕೊಳ್ಳಲಾಯಿತು. ಕಾಲೇಜಿನ ಸ್ವಯಂಸೇವಕರು ಸಕ್ರಿಯವಾಗಿ ಈ ಶಿಬಿರದಲ್ಲಿ ಭಾಗವಹಿಸಿದ್ದರು.ಕಾಲೇಜಿನ ರೋವರ್ಸ್ ಘಟಕದ ಸಂಯೋಜಕರಾದ ಪ್ರವೀಣ್ ಮೊಗವೀರ ಗಂಗೊಳ್ಳಿ, ಶಿಬಿರವನ್ನು ಸಂಯೋಜಿಸಿದರು.ಜಿಲ್ಲಾ ಸ್ಕೌಟ ಮತ್ತು ಗೈಡ್ ಪ್ರಮುಖರಾದ ಶ್ರೀಮತಿ ಸುಮನ ಉಪಸ್ಥಿತರಿದ್ದರು.
ಜೈ ಕುಂದಾಪ್ರ ಸೇವಾ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಯಾಗಿ ದಿವ್ಯಾ ಕುಂದಾಪುರ ಆಯ್ಕೆ
ಕುಂದಾಪುರ (ಅ.26): ಜೈ ಕುಂದಾಪ್ರ ಸೇವಾ ಟ್ರಸ್ಟ್(ರಿ). ಕುಂದಾಪುರ ಸಂಸ್ಥೆಯಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸಿ ಮಹಿಳಾ ಘಟಕದ ನಿರ್ವಾಹಕಿಯಾಗಿ ಈಗ ಪ್ರಧಾನ ಕಾರ್ಯದರ್ಶಿಯಾಗಿ ಮುಂದಿನ ಅವಧಿಗೆ ದಿವ್ಯ ಕುಂದಾಪುರ ಆಯ್ಕೆಯಾಗಿದ್ದಾರೆ. ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಪುಂಡಲಿಕ ಮೊಗವೀರ ಹಾಗೂ ಪದಾಧಿಕಾರಿಗಳು ಇವರಿಗೆ ಶುಭ ಹಾರೈಸಿದ್ದಾರೆ.
ಉಚ್ಚಿಲ ದಸರಾ ಮೆರವಣಿಗೆ: ಸಾರ್ವಜನಿಕರ ಗಮನ ಸೆಳೆದ ಮೊಗವೀರ ಯುವ ಸಂಘಟನೆಯ ಟ್ಯಾಬ್ಲೊ
ಉಚ್ಚಿಲ(ಅ.26): ಕರಾವಳಿ ಭಾಗದ ಪ್ರಸಿದ್ಧ ಉಚ್ಚಿಲ ದಸರಾ ಮಹೋತ್ಸವದ ಮೆರವಣಿಗೆಯಲ್ಲಿ ಮೊಗವೀರ ಯುವ ಸಂಘಟನೆ (ರಿ.)ಉಡುಪಿ ಜಿಲ್ಲೆ ಇವರ ರಕ್ತದಾನದ ಮಹತ್ವದ ಕುರಿತಾಗಿ ಜನಜಾಗೃತಿ ಸಾರುವ ಟ್ಯಾಬ್ಲೊ ಸಾರ್ವಜನಿಕರ ಗಮನ ಸೆಳೆದಿದೆ. ಕರಾವಳಿ ಭಾಗದಲ್ಲಿ ರಕ್ತದಾನದ ಕ್ರಾಂತಿಯನ್ನೇ ಮಾಡಿರುವ ನಾಡೋಜ ಡಾ.ಜಿ. ಶಂಕರ್ ರವರ ಮಾರ್ಗದರ್ಶನದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮೊಗವೀರ ಯುವ ಸಂಘಟನೆ(ರಿ), ಉಡುಪಿ ಜಿಲ್ಲೆ ಈಗಾಗಲೇ ನಾಡಿನಾದ್ಯಂತ ಹಮ್ಮಿಕೊಂಡಿರುವ ರಕ್ತ ದಾನದ ಕಿರುನೋಟ ಹಾಗೂ ಜಿ.ಶಂಕರ್ ಮಣಿಪಾಲ […]
ನಾಡ ಹಬ್ಬ ದಸರಾ 2023: ದೇವಿಯ ಅವತಾರದಲ್ಲಿ ಸೌಜನ್ಯ
ಬ್ರಹ್ಮಾವರ(ಅ,18): ನಾಡ ಹಬ್ಬ ದಸರ-2023 ನಾಡಿನೆಲ್ಲೆಡೆ ಸಂಭ್ರಮದಿಂದ ಆಚರಿಸುವ ಹಬ್ಬ. 10 ದಿನಗಳ ಹಬ್ಬವಾಗಿದ್ದು, ನವರಾತ್ರಿ ಎಂದು ಕರೆಯಲ್ಪಡುವ ಒಂಬತ್ತು ರಾತ್ರಿಗಳಿಂದ ಪ್ರಾರಂಭವಾಗುತ್ತದೆ ಮತ್ತು ಕೊನೆಯ ದಿನ ವಿಜಯದಶಮಿ. ಈ ಸಾರಿ ವಿಶೇಷವಾಗಿ ಗ್ರಾಮೀಣ ಭಾಗವಾದ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೈಕಾಡಿ ಶ್ರೀ ರಾಮ ಡಿಜಿಟಲ್ ಸ್ಟುಡಿಯೋ ಹೈಕಾಡಿ ಈ ಸಂಸ್ಥೆಯ ವತಿಯಿಂದ ಮೊದಲ ಬಾರಿಗೆ ವಿಭಿನ್ನವಾಗಿ ಶೃಂಗರಿಸಿ ಶ್ರೀ ದೇವಿಯ ಫೋಟೋ ಶೂಟ್ ಮಾಡಿಸಿ ದಸರ ಹಬ್ಬಕ್ಕೆ […]
ರಾಜ್ಯಮಟ್ಟದ ಎನ್ನೆಸ್ಸೆಸ್ ಯುವಜನೋತ್ಸವದಲ್ಲಿ ಡಾ Iಬಿ. ಬಿ. ಹೆಗ್ಡೆ ಕಾಲೇಜಿನ ಸ್ವಯಂಸೇವಕ ಮದನ್ ಎಮ್. ವಿ
ಕುoದಾಪುರ (ಅ.17) : ಅಕ್ಟೋಬರ್ 03 ರಿಂದ 07 ವರೆಗೆ ರಾಯಚೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಎನ್.ಎಸ್.ಎಸ್. ಯುವಜನೋತ್ಸವದಲ್ಲಿ ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್. ಸ್ವಯಂಸೇವಕ ಮದನ್ ಎಮ್. ವಿ ಅವರು ಮಂಗಳೂರು ವಿಶ್ವವಿದ್ಯಾನಿಲಯ ತಂಡವನ್ನು ಪ್ರತಿನಿಧಿಸಿದ್ದಾರೆ. ವೈಯಕ್ತಿಕವಾಗಿ ಚಿತ್ರಕಲೆ ಸ್ಪರ್ಧೆಯಲ್ಲಿ ದ್ವಿತೀಯ, ಗುಂಪು ಸ್ಪರ್ಧೆಯಲ್ಲಿ ವಸ್ತು ಪ್ರದರ್ಶನದಲ್ಲಿ ಪ್ರಥಮ, ಭಾವೈಕ್ಯತಾ ಮೆರವಣಿಗೆಯಲ್ಲಿ ದ್ವಿತೀಯ ಹಾಗೂ ಪ್ರಹಸನದಲ್ಲಿ […]
ಅಂತರ್ ಕಾಲೇಜು ನಾಟಕ ಸ್ಪರ್ಧೆ – ಡಾIಬಿ.ಬಿ. ಹೆಗ್ಡೆ ಕಾಲೇಜು ರನ್ನರ್ಸ್
ಕುಂದಾಪುರ (ಅ.10) : ದಿನಾಂಕ 10-10-2023 ರಂದು ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ ಉಡುಪಿಯ ವತಿಯಿಂದ ಯುವಜನೋತ್ಸವ 2023ರ ಅಂಗವಾಗಿ ಎಮ್.ಜಿ.ಎಮ್. ಕಾಲೇಜಿನ ನೂತನ ರವೀಂದ್ರ ಮಂಟಪ ಇಲ್ಲಿ ಹಮ್ಮಿಕೊಳ್ಳಲಾದ ಜಿಲ್ಲಾಮಟ್ಟದ ನಾಟಕ ಸ್ಪರ್ಧೆಯಲ್ಲಿ ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ಎನ್.ಎಸ್.ಎಸ್. ಸ್ವಯಂಸೇವಕರ ತಂಡ ದ್ವಿತೀಯ ಸ್ಥಾನ ಪಡೆದಿದೆ. ಜಿಲ್ಲಾ ಏಡ್ಸ್ ನಿಯಂತ್ರಣಧಿಕಾರಿ ಡಾ| ಚಿದಾನಂದ ಸಂಜು ಪ್ರಶಸ್ತಿಯನ್ನು ಕಾಲೇಜಿನ ಉಪಪ್ರಾಂಶುಪಾಲ, ಎನ್.ಎಸ್.ಎಸ್. ಕಾರ್ಯಕ್ರಮಧಿಕಾರಿ […]
ಅಂತರ್ ಕಾಲೇಜು ಮಟ್ಟದ ಸಾಂಸ್ಕೃತಿಕ ಸ್ಪರ್ಧೆ:ಡಾ|ಬಿ.ಬಿ. ಹೆಗ್ಡೆ ಕಾಲೇಜು ಪ್ರಥಮ
ಕುಂದಾಪುರ (ಅ. 15): ಜೆ.ಸಿ.ಐ ಕುಂದಾಪುರ ಘಟಕವು ಜೆ.ಸಿ.ಐ ಸಪ್ತಾಹ -2023 ರ ಪ್ರಯುಕ್ತ ‘ಕಾಮನಬಿಲ್ಲು’ ಎಂಬ ಶೀರ್ಷಿಕೆ ಅಡಿಯಲ್ಲಿ ಆಯೋಜಿಸಿದ್ದ ಅಂತರ್ ಕಾಲೇಜು ಮಟ್ಟದ ಸಾಂಸ್ಕçತಿಕ ಸ್ಪರ್ಧೆಯಲ್ಲಿ ಕುಂದಾಪುರದ ಡಾ|. ಬಿ.ಬಿ. ಹೆಗ್ಡೆ ಕಾಲೇಜು “ಪ್ರಥಮ ಸ್ಥಾನವನ್ನು” ಪಡೆದುಕೊಂಡಿತು. ವಿದ್ಯಾರ್ಥಿಗಳು ಯಕ್ಷಗಾನ, ಅರೆಶಾಸ್ತ್ರೀಯ , ಜಾನಪದ ನೃತ್ಯ, ಸಿನಿಮಾ ನೃತ್ಯ, ಹಳೆಯ ಸಿನಿಮಾ ಹಾಡು ಸೇರಿದಂತೆ ವೈವಿದ್ಯಮಯ ಸಾಂಸ್ಕçತಿಕ ಕಾರ್ಯಕ್ರಮ ನೀಡಿದರು. ಜೆ.ಸಿ.ಐ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಜೆ.ಸಿ. […]
ಚೆಸ್ : ರಾಷ್ಟ್ರಮಟ್ಟಕ್ಕೆ ವಿ.ಕೆ.ಆರ್ ಆಂಗ್ಲ ಮಾಧ್ಯಮ ವಿದ್ಯಾರ್ಥಿನಿ ಶ್ರಾವ್ಯ
ಕುಂದಾಪುರ(ಅ,17): ಕುಂದಾಪುರ ಎಜ್ಯುಕೇಶನ್ ಸೊಸೈಟಿ(ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಪ್ರೌಢ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಶ್ರಾವ್ಯ ಇವಳು ಬೆಂಗಳೂರು ನಗರ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ ಬೆಂಗಳೂರು ದಕ್ಷಿಣ ಜಿಲ್ಲೆ ಇಲ್ಲಿ ನಡೆದ 17ರ ವಯೋಮಾನದ ಬಾಲಕಿಯರ ರಾಜ್ಯ ಮಟ್ಟದ ಚೆಸ್ ಪಂದ್ಯಾಟದಲ್ಲಿ ವಿಜೇತಳಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. […]
ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ:ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ
ಕುಂದಾಪುರ (ಅ.15): ಸರಕಾರಿ ಪದವಿ ಪೂರ್ವ ಕಾಲೇಜು, ಕುಂದಾಪುರ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ 07 ದಿನಗಳ ವಾರ್ಷಿಕ ವಿಶೇಷ ಶಿಬಿರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೆದೂರು ಇಲ್ಲಿ ಉದ್ಘಾಟನೆಗೊಂಡಿತು. ಕೆದೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಉದ್ಯಮಿಗಳಾದ ಶಾನಾಡಿ ಶ್ರೀ ಸಂಪತ್ ಕುಮಾರ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಕೆದೂರು ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಈ ಶಿಬಿರದ ನೇತೃತ್ವ ವಹಿಸಿರುವ […]










