ಕುಂದಾಪುರ, (ಸೆ. 15): ಭಾಷೆ ಕೇವಲ ಸಂವಹನ ಮಾಧ್ಯಮವಲ್ಲ, ಅದು ಸಂಸ್ಕೃತಿಯ ಪ್ರತೀಕ. ಹೀಗೆ ಭಾರತೀಯ ಸಂಸ್ಕೃತಿಯ ಪ್ರತೀಕವಾಗಿ ರಾಷ್ಟ್ರದ ಅಧಿಕ್ರತ ಭಾಷೆಯಾದ ಹಿಂದಿಯನ್ನು ಕಾಣಬಹುದು. ಹೀಗಾಗಿ ಸಂಸ್ಕೃತಿ ಸಂಸ್ಕಾರವನ್ನು ಗೌರವಿಸಿ ಅನುಸರಿಸಿ ಎಂದು ಜಿ.ಎಮ್. ವಿದ್ಯಾನಿಕೇತನ್ ಆಂಗ್ಲ ಮಾಧ್ಯಮ ಶಾಲೆಯ ಹಿಂದಿ ಶಿಕ್ಷಕಿ ಶ್ರೀಮತಿ ಕಿರಣಾ ತಿವಾರಿ ಹೇಳಿದರು. ಅವರು ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಹಿಂದಿ ವಿಭಾಗ ಆಯೋಜಿಸಿದ ಹಿಂದಿ ದಿವಸ್ ಕಾರ್ಯಕ್ರಮದಲ್ಲಿ […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ತ್ರಾಸಿ:ಆರಾಧ್ಯ ಯೋಗ ತರಬೇತಿ ಕೇಂದ್ರ ಉದ್ಘಾಟನೆ
ತ್ರಾಸಿ(ಸೆ.18): ಯೋಗ ಕೇವಲ ದೈಹಿಕ ಕಸರತ್ತು ಮಾತ್ರವಲ್ಲದೇ ದೇಹ ಮತ್ತು ಮನಸ್ಸನ್ನು ಸದೃಢಗೊಳಿಸುವ ಒಂದು ಸಾಧನ. ಯೋಗ ಬಲ್ಲವನು ನಿರೋಗಿಯಾಗಿ ಆರೋಗ್ಯಪೂರ್ಣ ಬದುಕನ್ನು ಸಾಗಿಸಬಹುದು ಆ ನಿಟ್ಟಿನಲ್ಲಿ ತ್ರಾಸಿಯಲ್ಲಿ ಆರಂಭಗೊಂಡಿರುವ ಆರಾಧ್ಯ ಯೋಗ ಕೇಂದ್ರದ ಸುದುಪಯೋಗವನ್ನು ಪಡೆದುಕೊಳ್ಳಿ ಎಂದು ಖ್ಯಾತ ಯೋಗ ಗುರು ಸುಬ್ಬಯ್ಯ ದೇವಾಡಿಗ ಅರೆಹೊಳೆ ಹೇಳಿದರು. ಅವರು ತ್ರಾಸಿ ಕಲ್ಲಾಣಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಆರಾಧ್ಯ ಯೋಗ ಕೇಂದ್ರ ದ ಉದ್ಘಾಟನೆ ಕಾರ್ಯಕ್ರಮದ ಮುಖ್ಯ […]
ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ:ಭಾರತದ ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮ
ಕುಂದಾಪುರ(ಸೆ,17): ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಭಾರತದ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ 1864 ವಿದ್ಯಾರ್ಥಿಗಳು ಮತ್ತು ಉಪಪ್ರಾಂಶುಪಾಲರಾದ ಶ್ರೀ ಕಿರಣ ಹೆಗ್ಡೆ, ಉಪನ್ಯಾಸಕರು, ಅಧ್ಯಾಪಕರು ಭಾಗವಹಿಸಿದರು. ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಸಂವಿಧಾನದ ಪ್ರತಿಜ್ಞಾ ವಿಧಿಯನ್ನು ಉಪನ್ಯಾಸಕರಾದ ಶ್ರೀ ಉದಯ ಕುಮಾರ ಶೆಟ್ಟಿ ಬೋಧಿಸಿದರು.
ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದಲ್ಲಿ ಹಿಂದಿ ದಿನಾಚರಣೆ
ಗಂಗೊಳ್ಳಿ( ಸೆ.16): ಭಾರತದಲ್ಲಿ ಅತಿ ಹೆಚ್ಚು ಜನರು ಮಾತನಾಡುವ ಭಾಷೆ ಹಿಂದಿ ಯಾಗಿದೆ. ಅದನ್ನು ನಮ್ಮ ರಾಷ್ಟ್ರಭಾಷೆ ಎನ್ನಲು ನಾವು ಹೆಮ್ಮೆ ಪಡಬೇಕು. ಹೊಸ ಭಾಷೆಗಳನ್ನು ಕಲಿಯುವುದರಿಂದ ಜ್ಞಾನ ವೃದ್ಧಿಯಾಗುತ್ತದೆ ಎಂದು ಹಿರಿಯಡಕ ಸರಕಾರಿ ಪದವಿ ಪೂರ್ವ ಕಾಲೇಜಿನ ಹಿಂದಿ ಭಾಷಾ ಉಪನ್ಯಾಸಕರಾದ ಅನಂತರಾಮ ನಾಯಕ್ ಅಭಿಪ್ರಾಯ ಪಟ್ಟರು. ಅವರು ಕಳೆದ ಗುರುವಾರ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಹಿಂದಿ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ […]
ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದಲ್ಲಿ ಸಂವಿಧಾನ ಪೀಠಿಕೆ ಓದು
ಗಂಗೊಳ್ಳಿ(ಸೆ.15): ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು, ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಪ್ರೌಢಶಾಲೆ ಮತ್ತು ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ಸಹಭಾಗಿತ್ವದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಭಾರತದ ಸಂವಿಧಾನ ಪೀಠಿಕೆ ವಾಚನ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿನಿ ನಿಶಾ ಬಿ ಪೂಜಾರಿ ಪೀಠಿಕೆಯನ್ನು ವಾಚಿಸಿದರು. ಪ್ರಾಂಶುಪಾಲರು ಮುಖ್ಯೋಪಾ ದ್ಯಾಯರು ಉಪನ್ಯಾಸಕರು ಶಿಕ್ಷಕರು ಮತ್ತು ವಿದ್ಯಾರ್ಥಿ ವೃಂದ ಮತ್ತು ಸಿಬ್ಬಂದಿ ವರ್ಗ ಪಾಲ್ಗೊಂಡಿದ್ದರು.
ಕುಂದಾಪುರ ತಾಲೂಕು ಯುವ ಬಂಟರ ಸಂಘ:ಇಂಜಿನಿಯರ್ಸ್ ಡೇ ಆಚರಣೆ
ಕುಂದಾಪುರ(ಸೆ,15): ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯನವರ ಹುಟ್ಟು ಹಬ್ಬದ ಪ್ರಯುಕ್ತ ಇಂಜಿನಿಯರ್ಸ್ ಡೇ ಕಾರ್ಯಕ್ರಮವನ್ನು ಮೆಸ್ಕಾಂ ಇಂಜಿನಿಯರ್ ಶ್ರೀ ಭರತ್ ರಾಜ್ ಶೆಟ್ಟಿ ಜಾಂಬೂರು ಅವರನ್ನು ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಸಂಘದ ಕಚೇರಿಯಲ್ಲಿ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಶಾಲು ಹೊದಿಸಿ ಸನ್ಮಾನಿಸುವ ಮೂಲಕ ಆಚರಿಸಿದರು. ಸನ್ಮಾನ ಸ್ವೀಕರಿಸಿದ ಭರತ್ ರಾಜ್ ಶೆಟ್ಟಿ ರಾಷ್ಟ್ರೀಯ ಅಭಿಯಂತರರ ದಿನಾಚರಣೆಯ ಪ್ರಸ್ತುತತೆಯ ಬಗ್ಗೆ ಮಾತನಾಡಿ, ಇಂದು […]
ಡಾ|ಬಿ.ಬಿ.ಹೆಗ್ಡೆ ಕಾಲೇಜು: ಸಂವಿಧಾನದ ಪ್ರಸ್ತಾವನೆ ಓದು ಕಾರ್ಯಕ್ರಮ
ಕುಂದಾಪುರ(ಸೆ.15): ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ರಾಜ್ಯಾದ್ಯಂತ ಹಮ್ಮಿಕೊಂಡ ಭಾರತ ಸಂವಿಧಾನದ ಪ್ರಸ್ತಾವನೆಯ ಓದು ಕಾರ್ಯಕ್ರಮವನ್ನು ಡಾ|ಬಿ.ಬಿ ಹೆಗ್ಡೆ ಕಾಲೇಜಿನಲ್ಲಿ ಸೆಪ್ಟೆಂಬರ್ 15ರಂದು ಆಚರಿಸಲಾಯಿತು. ಕಾಲೇಜಿನ ಸರ್ವಬೋಧಕ -ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಸಂವಿಧಾನದ ಪ್ರಸ್ತಾವನೆಯನ್ನು ಓದುವುದರ ಮುಖಾಂತರ ಪ್ರತಿಜ್ಞೆಗೈದರು.ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ .ಉಮೇಶ್ ಶೆಟ್ಟಿ ಹಾಗೂ ಉಪ ಪ್ರಾಂಶುಪಾಲರಾದ ಕೆ. ಚೇತನ್ ಶೆಟ್ಟಿ ಉಪಸ್ಥಿತರಿದ್ದರು.
ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಸುನಿಧಿ ಜಿಲ್ಲಾಮಟ್ಟಕ್ಕೆ ಆಯ್ಕೆ
ಗಂಗೊಳ್ಳಿ(ಸೆ,14): ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸುನಿಧಿ ಇವರು ಕುಂದಾಪುರ ತಾಲೂಕು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿಯರ ಕಬಡ್ಡಿ ತಂಡವನ್ನು ಜಿಲ್ಲಾ ಮಟ್ಟದಲ್ಲಿ ಪ್ರತಿನಿಧಿಸಲು ಆಯ್ಕೆಯಾಗಿರುತ್ತಾರೆ. ಈಕೆ ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಪ್ರೌಢಶಾಲೆಯ ಉಪ ಪ್ರಾಂಶುಪಾಲರಾದ ಉಮೇಶ್ ಕರಣಿಕ್ ಮತ್ತು ಸುಮನ ದಂಪತಿಯ ಪುತ್ರಿ .
ಶ್ರೇಯಾ ಮೇಸ್ತ ಜಿಲ್ಲಾಮಟ್ಟಕ್ಕೆ ಆಯ್ಕೆ
ಗಂಗೊಳ್ಳಿ( ಸೆ,14): ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಶ್ರೇಯಾ ಮೇಸ್ತ ಇವರು ಕುಂದಾಪುರ ತಾಲೂಕು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿಯರ ತ್ರೋಬಾಲ್ ತಂಡವನ್ನು ಜಿಲ್ಲಾ ಮಟ್ಟದಲ್ಲಿ ಪ್ರತಿನಿಧಿಸಲು ಆಯ್ಕೆಯಾಗಿರುತ್ತಾರೆ. ಈಕೆ ನಾಗರಾಜ ಮೇಸ್ತ ಮತ್ತು ನಯನ ದಂಪತಿಯ ಪುತ್ರಿ.
ಡಾ| ಬಿ. ಬಿ. ಹೆಗ್ಡೆ ಕಾಲೇಜು: ಬಿಸಿಎ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಪೂರ್ವ ಪರಿಚಯ ಕಾರ್ಯಕ್ರಮ
ಕುಂದಾಪುರ (ಸೆ.14): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ಬಿಸಿಎ ವಿಭಾಗದ ವತಿಯಿಂದ ಪ್ರಥಮ ವರ್ಷದ ಪದವಿಗೆ ಸೇರ್ಪಡೆಯಾದ ವಿದ್ಯಾರ್ಥಿಗಳಿಗೆ ಪೂರ್ವ ಪರಿಚಯ ಕಾರ್ಯಕ್ರಮವನ್ನು ಕಾಲೇಜಿನ ಸಭಾಂಗಣದಲ್ಲಿ ಸೆಪ್ಟೆಂಬರ್ 11ರಂದು ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಉಪ ಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ ಶುಭಾಶಂಸನೆಗೈದರು. ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಶ್ರೀ ಮಹೇಶ್ ಕುಮಾರ್ ಪ್ರಾಸ್ತಾವಿಸಿದರು. ವಿಭಾಗದ ಪ್ರಾಧ್ಯಾಪಕರು […]










