ಕುಂದಾಪುರ (ಸೆ,7): ಮಂಗಳೂರು ವಿ.ವಿಯ ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾಗಿರುವ ಕುಂದಾಪುರದ ಡಾ|ಬಿ .ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ತೃತೀಯ ಬಿಸಿಎ ವಿದ್ಯಾರ್ಥಿನಿ ದಿವ್ಯಾರವರು ಟಾಟಾ ಸ್ಟೀಲ್ ಏಷಿಯನ್ ಜೂನಿಯರ್ ಗರ್ಲ್ಸ್ ಚೆಸ್ ಚಾಂಪಿಯನ್ಶಿಪ್ ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಜಾರ್ಖಂಡ್ ರಾಜ್ಯದ ಜೇಮ್ ಶೆಡ್ ಪುರದಲ್ಲಿ ಸೆಪ್ಟೆಂಬರ್ 7ರಿಂದ 16ರ ತನಕ ಈ ಚಾಂಪಿಯನ್ಶಿಪ್ ನಡೆಯಲಿದೆ. ಮಂಗಳೂರು ವಿ.ವಿ ಅಕಾಡೆಮಿಕ್ ಕೌನ್ಸಿಲ್ ನ ವಿದ್ಯಾರ್ಥಿ ಪ್ರತಿನಿಧಿಯಾಗಿ ಗುರುತಿಸಿಕೊಂಡಿರುವ ಇವರು ರಾಷ್ಟ್ರಮಟ್ಟದ ಹಾಗೂ […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಕ್ರಿಯೇಟಿವ್ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ : ಶಿಕ್ಷಕ ವೃತ್ತಿ ಪರಮ ಪವಿತ್ರವಾದದ್ದು- ಪ್ರೊ.ಬಿ.ಪದ್ಮನಾಭಗೌಡ
ಕಾರ್ಕಳ(ಸೆ,6): ಶಿಕ್ಷಕ ಮತ್ತು ಶಿಕ್ಷಕ ವೃತ್ತಿಗಳು ಅತ್ಯಂತ ಶ್ರೇಷ್ಠವಾದದ್ದು ವಿದ್ಯಾರ್ಥಿಗಳಲ್ಲಿ ಸದ್ಭಾವನೆಯನ್ನು ಬೆಳೆಸುತ್ತಾ, ಶಿಕ್ಷಕನೂ ಅಧ್ಯಯನಶೀಲನಾಗಬೇಕು. ನಿರಂತರವಾಗಿ ಗುರುತರವಾದ ಜವಾಬ್ದಾರಿಯಿಂದ ಬೋಧನೆ ಮಾಡುವವರಾಗಬೇಕು ಎಂದು ಪ್ರೊ.ಬಿ.ಪದ್ಮನಾಭ ಗೌಡ ಕರೆನೀಡಿದರು. ಅವರು ಕಾರ್ಕಳದ ಕ್ರಿಯೇಟಿವ್ ಪ. ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನದ ಪ್ರಯುಕ್ತ ಆಚರಿಸಲಾದ ‘ಗುರುದೇವೋ ಭವ’ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಇನ್ನೋರ್ವ ಅತಿಥಿ ಚೇತನಾ ವಿಶೇಷ ಶಾಲೆಯ ಮುಖ್ಯೋಪಾಧ್ಯಾಯಿನಿ ಹೇಮಲತಾ ಶೆಟ್ಟಿ ಮಾತನಾಡಿ ಗುರುಗಳೆಂದರೆ ಅಪಾರ […]
ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆ: ಶಿಕ್ಷಕರ ದಿನಾಚರಣೆ
ಕುಂದಾಪುರ (ಸೆ,06) : ಶ್ರೀ ಬಿ.ಎಂ.ಸುಕುಮಾರ್ ಶೆಟ್ಟಿಯವರ ಅಧ್ಯಕ್ಷತೆಯ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ವಿದ್ಯಾರ್ಥಿಗಳು ಶಿಕ್ಷಕರಿಗೆ ಪುಷ್ಪಾರ್ಚನೆಗೈದು ಆರತಿ ಬೆಳಗಿ ವಂದಿಸಿದರು. ಮಕ್ಕಳ ನೃತ್ಯ ಮತ್ತು ಅಭಿನಯ ಕಾರ್ಯಕ್ರಮದ ಮೆರುಗನ್ನು ಇಮ್ಮಡಿಗೊಳಿಸಿತು. ನಂತರ ಬೋಧಕೇತರ ಸಿಬ್ಬಂದಿಗಳಿಂದ ಶಿಕ್ಷಕರಿಗಾಗಿ ಅನೇಕ ಕ್ರೀಡೆಗಳೂ ಕೂಡ ಏರ್ಪಟ್ಟವು. ಹಾಗೆಯೇ ಜಿಲ್ಲಾ ಮಟ್ಟದ ಗೀತಗಾಯನ […]
ಚೆಸ್ – ಎಚ್.ಎಮ್.ಎಮ್.ವಿ.ಕೆ.ಆರ್ ನ ಶ್ರೀನಿತ್ ಶೇಟ್ ಪ್ರಥಮ
ಕುಂದಾಪುರ (02.09.2023): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್. ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಯ ಒಂದನೇ ತರಗತಿಯ ವಿದ್ಯಾರ್ಥಿ ಶ್ರೀನಿತ್ ಶೇಟ್, ಶ್ರೀ ನಾರಾಯಣ ಗುರು ಚೆಸ್ ಸ್ಕೂಲ್, ಉಡುಪಿ ಯಲ್ಲಿ ಆಯೋಜಿಸಲ್ಪಟ್ಟ ಏಳರ ವಯೋಮಿತಿಯ ರಾಪಿಡ್ ಚೆಸ್ ಟೂರ್ನಮೆಂಟ್ 2023 ರಲ್ಲಿ ಭಾಗವಹಿಸಿ, ಪ್ರಥಮ ಸ್ಥಾನ ಪಡೆದು ವಿಜೇತನಾಗಿರುತ್ತಾನೆ. ಈತ ಕುಂದಾಪುರದ ಗ್ರಾಫಿಕ್ ಡಿಸೈನರ್ ಆಗಿರುವ ಶ್ರೀಕಾಂತ್ ಶೇಟ್ ಮತ್ತು ಸ್ವಪ್ನ ಪ್ರಿಯ ದಂಪತಿಯ ಪುತ್ರ. ವಿಜೇತ ಶ್ರೀನಿತ್ […]
ಡಾ.ಗಣೇಶ್ ಗಂಗೊಳ್ಳಿ ಯವರಿಗೆ ಬೇಂದ್ರೆ ನುಡಿ ಸಿರಿ ರಾಷ್ಟ್ರೀಯ ಪ್ರಶಸ್ತಿ
ಕುಂದಾಪುರ (ಸೆ,06): ಕನಕ ಅಧ್ಯಯನ ಪೀಠ, ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಹಾಗೂ ಚೇತನ ಫೌಂಡೇಶನ್ ಕರ್ನಾಟಕ ಇವರ ಸಂಯುಕ್ತ ಆಶ್ರಯದಲ್ಲಿ ಸೆಪ್ಟೆಂಬರ್ .09 ರಂದು ಧಾರವಾಡ ನುಡಿ ಸಡಗರ ಕಾರ್ಯಕ್ರಮದಲ್ಲಿ ನಾಡಿನ ಪ್ರಸಿದ್ಧ ಗಾಯಕ ಹಾಗೂ ಸಂಘಟಕ ಡಾ.ಗಣೇಶ್ ಗಂಗೊಳ್ಳಿ ಅವರನ್ನು ಬೇಂದ್ರೆ ನುಡಿ ಸಿರಿ ರಾಷ್ಟ್ರೀಯ ಪ್ರಶಸ್ತಿ ಗೆ ಆಯ್ಕೆ ಮಾಡಲಾಗಿದೆ . ಈ ಕುರಿತು ಕಾರ್ಯಕ್ರಮದ ಸಂಯೋಜಕರಾದ ಶ್ರೀ ಚಂದ್ರಶೇಖರ್ ಮಾದಲಾಗೆರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಯುವ ಬಂಟರ ಸಂಘದ ವತಿಯಿಂದ ಗುರುವಂದನಾ ಕಾರ್ಯಕ್ರಮ
ಕುಂದಾಪುರ(ಸೆ, 5): ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಸೆಪ್ಟೆಂಬರ್ 5 ರ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸಂಜಯ ಗಾಂಧಿ ಪ್ರೌಢಶಾಲೆಯ ನಿವೃತ್ತ ಸಹ ಶಿಕ್ಷಕರಾದ ಶ್ರೀ ಎಚ್. ಲಕ್ಷ್ಮೀನಾರಾಯಣ ಶೆಟ್ಟಿಯವರನ್ನು ಕಾಳಾವರದ ಸ್ವಗ್ರಹದಲ್ಲಿ ಯುವ ಬಂಟರ ಸಂಘದ ದತ್ತಿನಿಧಿ ಪೋಷಕರಾದ ಶ್ರೀ ಹುಂತ್ರಿಕೆ ಸುಧಾಕರ ಶೆಟ್ಟಿ ಹಾಗೂ ಸಂಘದ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಸನ್ಮಾನಿಸಿ ಗೌರವಿಸಿದರು. ಡಾ. ಬಿ .ಬಿ ಹೆಗ್ಡೆ ಕಾಲೇಜಿನ ಕನ್ನಡ […]
ಗುರು ದೇವೋಭವ
“ಗುರು ಬ್ರಹ್ಮ,ಗುರು ವಿಷ್ಣು,ಗುರು ದೇವೋ ಮಹೇಶ್ವರ ಗುರು ಸಾಕ್ಷಾತ್ ಪರಬ್ರಹ್ಮ ತಸ್ಮತಿ ಶ್ರೀ ಗುರುದೇವೋ ನಮಃ” ಮತ್ತು “ಮಾತೃದೇವೋಭವ,ಪಿತೃದೇವೋಭವ,ಆಚಾರ್ಯ ದೇವೋಭವ” ಎಂಬ ಸಂಸ್ಕೃತ ಶ್ಲೋಕಗಳು, “ಗುರುವಿನ ಗುಲಾಮನಾಗುವ ತನಕ ದೊರೆಯದಣ್ಣ ಮುಕುತಿ” ಎಂಬ ಪುರಂದರ ದಾಸರ ನುಡಿ, ಮುಂದೆ ಗುರಿ, ಹಿಂದೆ ಗುರು ಇದ್ದವನು ಏನನ್ನು ಬೇಕಾದರೂ ಸಾಧಿಸುತ್ತಾನೆ ಎಂಬ ಹೇಳಿಕೆ ಗುರುವಿನ ಮಹತ್ವವನ್ನು ಸಾರುತ್ತವೆ. ಮಕ್ಕಳ ಮೊದಲ ಗುರುವಾದ ತಾಯಿ ಈ ಜಗತ್ತಿನಲ್ಲಿ ಮಹತ್ವದ ಮತ್ತು ಪ್ರಥಮ ಸ್ಥಾನ […]
ಉಡುಪಿ ಜಿಲ್ಲಾ ಪದವಿಪೂರ್ವ ವಾಣಿಜ್ಯ ಶಾಸ್ತ್ರ ಉಪನ್ಯಾಸಕರ ಸಂಘದ ಅಧ್ಯಕ್ಷರಾಗಿ ಎಂ.ರಾಘವೇಂದ್ರ ಭಟ್ ಆಯ್ಕೆ
ಗಂಗೊಳ್ಳಿ(ಸೆ,03): ಉಡುಪಿ ಜಿಲ್ಲಾ ಪದವಿಪೂರ್ವ ವಾಣಿಜ್ಯ ಶಾಸ್ತ್ರ ಉಪನ್ಯಾಸಕರ ಸಂಘದ 2023-24ನೇ ಸಾಲಿನ ಅಧ್ಯಕ್ಷರಾಗಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ .ಎಂ.ರಾಘವೇಂದ್ರ ಭಟ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಹರೀಶ್ ಕುಮಾರ್ ಎಸ್.ಎಮ್.ಎಸ್.ಪ.ಪೂ.ಕಾಲೇಜು. ಬ್ರಹ್ಮಾವರ ಜೊತೆ ಕಾರ್ಯದರ್ಶಿಗಳಾಗಿ ಬಲರಾಮ ವೈದ್ಯ ಸರ್ಕಾರಿ ಪ.ಪೂ.ಕಾಲೇಜು ಹೆಬ್ರಿ ಮತ್ತು ಹೇಮಲತಾ. ಸರ್ಕಾರಿ ಪ.ಪೂ.ಕಾಲೇಜು ಮಲ್ಪೆ ಹಾಗೂ ಕೋಶಾಧಿಕಾರಿಯಾಗಿ ಪ್ರಮೀಳಾ.ಡಿ.ಅಂಚನ್ ಸ. ಪ. ಪೂ. ಕಾಲೇಜು ತೆಂಕನಿಡಿಯೂರು ಇವರು ಆಯ್ಕೆಯಾದರು.
ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ : ನಾರಾಯಣ ಗುರುಗಳ ಜನ್ಮ ದಿನಾಚರಣೆ
ಗಂಗೊಳ್ಳಿ (ಸೆ,03): ಗಂಗೊಳ್ಳಿಯ ಬಿಲ್ಲವರ ಹಿತ ರಕ್ಷಣಾ ವೇದಿಕೆಯ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುಗಳ 169ನೇ ಜನ್ಮ ದಿನಾಚರಣೆಯನ್ನು ಸಂಘದ ಕಚೇರಿಯಲ್ಲಿ ಆಚರಿಸಲಾಯಿತು. ಬಿಲ್ಲವರ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಜಿ ಗೋಪಾಲ ಪೂಜಾರಿ ಮಾತನಾಡಿ ನಾರಾಯಣ ಗುರುಗಳು ಪ್ರತಿಪಾದಿಸಿದ ಸಿದ್ದಾಂತ ಮತ್ತು ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಟ್ಟು ಸಮಾಜದ ಹಿತರಕ್ಷಣೆಯಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕು ಎಂದು ಹೇಳಿದರು. ಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪ ನಮನವನ್ನು […]
ಗೀತ ಗಾಯನದಲ್ಲಿ ರಾಜ್ಯಮಟ್ಟಕ್ಕೆ ಎಚ್.ಎಮ್.ಎಮ್ ಶಾಲೆಯ ಬುಲ್ ಬುಲ್ ವಿದ್ಯಾರ್ಥಿಗಳು
ಕುಂದಾಪುರ(ಸೆ,03) : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಅಸೋಸಿಯೇಶನ್ ನ ಆಶ್ರಯದಲ್ಲಿ ಮುಕುಂದ ಕೃಪಾ ಆಂಗ್ಲ ಮಾಧ್ಯಮ ಶಾಲೆ, ಉಡುಪಿಯಲ್ಲಿ ಆಯೋಜಿಸಲ್ಪಟ್ಟ ಜಿಲ್ಲಾ ಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್.ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಬುಲ್ ಬುಲ್ ವಿದ್ಯಾರ್ಥಿಗಳು ಭಾಗವಹಿಸಿ, ವಿಜೇತರಾಗಿ, ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಸಂಸ್ಥೆಯ ಪ್ರಾಥಮಿಕ ವಿಭಾಗದ ಪ್ರಿಯದರ್ಶಿನಿ ಬುಲ್ ಬುಲ್ ಸ್ಕಾಚ್ ತಂಡದ ವಿದ್ಯಾರ್ಥಿಗಳಾದ ಸಂಹಿತಾ, ಗೋಪಿಕಾ, ರಿನೊಲಾ, ಪ್ರಕೃತಿ ಮತ್ತು ಸಿಂಚನಾ […]










