ಕುಂದಾಪುರ(ಸೆ.03): ಉಡುಪಿಯ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಉಡುಪಿ ಜಿಲ್ಲಾ ಮಟ್ಟದ ಟೇಬಲ್ ಟೆನಿಸ್ ಪಂದ್ಯಾಟದಲ್ಲಿ ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಬಾಲಕಿಯರ ಟೇಬಲ್ ಟೆನಿಸ್ ತಂಡ ಪ್ರಥಮ ಸ್ಥಾನವನ್ನು ಪಡೆದಿರುತ್ತದೆ. ತಂಡದಲ್ಲಿ ಪ್ರಥಮ ಪಿ.ಯು.ಸಿ ಯ ದೀಪ್ತಿ ಕೆ, ಸಿಂಚನಾ ಶೆಟ್ಟಿ, ಕ್ಷಮಾ ಗೌತಮ್, ಅಂಕಿತಾ, ಭಾರ್ಗವಿ ಇವರು ಭಾಗವಹಿಸಿರುತ್ತಾರೆ. ಅವರಲ್ಲಿ ಮೂವರು ವಿದ್ಯಾರ್ಥಿನಿಯರಾದ ಅಂಕಿತಾ, ಕ್ಷಮಾ ಗೌತಮ್ ಹಾಗೂ ದೀಪ್ತಿ […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು :ಪ್ರೇರಣಾ ಶಿಬಿರ – 2023 ಪ್ರೇರಣೆ– ಉಪನ್ಯಾಸ
ಕುಂದಾಪುರ (ಆ, 23): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನೂತನವಾಗಿ ಸೇರ್ಪಡೆಗೊಂಡ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಶ್ರಯದಲ್ಲಿ ‘ಪರಿಚಯ 2023’ ಕಾರ್ಯಕ್ರಮ ಆಯೋಜಿಸಲಾಯಿತು . ಈ ‘ಪ್ರೇರಣಾ ಶಿಬಿರ’ದ ಅಂಗವಾಗಿ ನಡೆದ ವ್ಯಕ್ತಿತ್ವ ವಿಕಸನ ಶಿಬಿರದಲ್ಲಿ ಜೆಸಿಐ ತರಬೇತುದಾರರಾದ ಶ್ರೀ ಕೆ.ಕೆ. ಶಿವರಾಮ್ ಅವರು “ಪ್ರೇರಣೆ” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು. ಈ ಸಂದರ್ಭ ವಿದ್ಯಾರ್ಥಿಗಳಿಗೆ ಹಲವು […]
ಸರಸ್ವತಿ ವಿದ್ಯಾಲಯ ಗಂಗೊಳ್ಳಿ:ಉಪನ್ಯಾಸಕ ಕೃಷ್ಣ ಗುಜ್ಜಾಡಿಯವರಿಗೆ ಬೀಳ್ಕೊಡುಗೆ
ಗಂಗೊಳ್ಳಿ(ಸೆ,03): ವಿದ್ಯಾರ್ಥಿಗಳ ಬೆಳವಣಿಗೆಯನ್ನು ಪ್ರೋತ್ಸಾಹಿಸುವುದರ ಜೊತೆಗೆ ತಾನು ಕೂಡ ಬೆಳೆಯುವುದು ಓರ್ವ ನಿಜವಾದ ಶಿಕ್ಷಕನ ಸಾಮರ್ಥ್ಯವಾಗಿರುತ್ತದೆ. ಬದುಕಿನಲ್ಲಿ ಕಲಿಕೆ ನಿರಂತರವಾಗಿರಬೇಕು ಎಂದು ಜಿ. ಎಸ್ ವಿ. ಎಸ್ ಅಸೋಸಿಯೇಷನ್ ಕಾರ್ಯದರ್ಶಿ ಎಚ್ ಗಣೇಶ್ ಕಾಮತ್ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಕಳೆದ10 ವರ್ಷಗಳಿಗೂ ಅಧಿಕ ಕಾಲ ಸೇವೆ ಸಲ್ಲಿಸಿ ಇದೀಗ ಸರಕಾರಿ ಶಾಲಾ ಶಿಕ್ಷಕರಾಗಿ ನೇಮಕಗೊಂಡು ಬೇರೆಡೆಗೆ ತೆರಳುತ್ತಿರುವ ಭೌತಶಾಸ್ತ್ರ ಉಪನ್ಯಾಸಕ ಕೃಷ್ಣ ಗುಜ್ಜಾಡಿ […]
ಶ್ರೀ ಮೂಕಾಂಬಿಕಾ ದೇವಳದ ಪಿ .ಯು ಕಾಲೇಜು ಕೊಲ್ಲೂರು :ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ವಿಭಾಗದ ಕುಸ್ತಿ ಪಂದ್ಯಾಟ
ಕೊಲ್ಲೂರು(ಸೆ,04) : ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಕಾಲೇಜು, ಉಡುಪಿ ಜಿಲ್ಲೆ ಹಾಗೂ ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜು ಕೊಲ್ಲೂರು ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಬಾಲಕ ಬಾಲಕಿಯರ ಕುಸ್ತಿ ಪಂದ್ಯಾಟವನ್ನು ಕಾಲೇಜಿನ ಹಳೆ ವಿದ್ಯಾರ್ಥಿ ಅಂತಾರಾಷ್ಟ್ರೀಯ ಮಟ್ಟದ ವೈಟ್ ಲಿಪ್ಟರ್ ಮಂಜುನಾಥ ಮರಾಠಿ ಉದ್ಘಾಟಿಸಿದರು. ಕ್ರೀಡಾ ಜೀವನದ ಪರಿಶ್ರಮ ಸಾಧನೆ ಮತ್ತು ಬದ್ದತೆಯನ್ನು ಮಕ್ಕಳಿಗೆ ಅವರು ತಿಳಿಸಿದರು. ಕಠಿಣ ಪರಿಶ್ರಮ, […]
ಡಾ| ಬಿ. ಬಿ. ಹೆಗ್ಡೆ ಕಾಲೇಜು : ಒಂದು ದಿನದ ವಿಶೇಷ ಶಿಬಿರ- ಸ್ವಚ್ಛತಾ ಕಾರ್ಯಕ್ರಮ – ಅಮೃತ ಕೆರೆ
ಕುಂದಾಪುರ (ಆ,27): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಶ್ರೀ ಚಂದ್ರಶೇಖರ್ ಆಜಾದ್ ಮಿತ್ರಮಂಡಳಿ, ಬಸ್ರೂರು ಇವರ ಜಂಟಿ ಆಶ್ರಯದಲ್ಲಿ ಒಂದು ದಿನದ ವಿಶೇಷ ಶಿಬಿರದ ಅಂಗವಾಗಿ ‘ಅಮೃತ ಕೆರೆ’ ಎಂಬ ಶೀರ್ಷಿಕೆಯಲ್ಲಿ ಬಸ್ರೂರಿನ ಕೆರೆಕಟ್ಟೆಯ ದೇವರ ಕೆರೆಯ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ತಾಲೂಕ್ ಪಂಚಾಯತ್ ಮಾಜಿ ಉಪಾಧ್ಯಕ್ಷ ಶ್ರೀ ರಾಮ್ಕಿಶನ್ ಹೆಗ್ಡೆ ಶ್ರಮದಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭ […]
ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು : ವೃತ್ತಿ ಮಾರ್ಗದರ್ಶನ- ಮಾಹಿತಿ ಕಾರ್ಯಕ್ರಮ
ಹೆಮ್ಮಾಡಿ(ಸೆ,02): ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು, ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ಹಾಗೂ ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ ಇವರ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕುರಿತು ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪ್ರಾಂಶುಪಾಲರಾಗಿರುವ ಶ್ರೀ ಗಣೇಶ ಮೊಗವೀರ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ಅಧ್ಯಕ್ಷರಾದ ಶ್ರೀ ವಸಂತರಾಜ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ವೃತ್ತಿ ಮಾರ್ಗದರ್ಶನದ ಅಗತ್ಯತೆಯ […]
ಜನತಾ ಸ್ವತಂತ್ರ ಪಿ ಯು ಕಾಲೇಜು ಹೆಮ್ಮಾಡಿ: ಪೋಷಕ- ಶಿಕ್ಷಕರ ಸಭೆ
ಹೆಮ್ಮಾಡಿ(ಸೆ,2): ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ 2023-24ನೇ ಶೈಕ್ಷಣಿಕ ವರ್ಷದ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪ್ರಥಮ ಪೋಷಕ-ಶಿಕ್ಷಕರ ಸಭೆ ಇತ್ತೀಚೆಗೆ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾಗಿರುವ ಶ್ರೀ ಗಣೇಶ ಮೊಗವೀರ ಮಾತನಾಡಿ ವರ್ಷದ ಶೈಕ್ಷಣಿಕ ಕಾರ್ಯಕಲಾಪಗಳ ಬಗ್ಗೆ, ಬದಲಾದ ಪರೀಕ್ಷಾ ಪದ್ದತಿಯ ಕುರಿತು ಹಾಗೂ ವಿದ್ಯಾರ್ಥಿಗಳ ಕಲಿಕಾ ಪ್ರಗತಿ ಈ ಕುರಿತು ತಿಳಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಇಲ್ಲಿಯ ಶಿಕ್ಷಣ […]
ಡಾ|ಬಿ.ಬಿ.ಹೆಗ್ಡೆ ಕಾಲೇಜು : ಬಿಬಿಎ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಪೂರ್ವಪರಿಚಯ ಕಾರ್ಯಕ್ರಮ
ಕುಂದಾಪುರ (ಸೆ.02): ಇಲ್ಲಿನ ಡಾ|ಬಿ.ಬಿ.ಹೆಗ್ಡೆ ಕಾಲೇಜಿನ ಬಿಬಿಎ ವಿಭಾಗದ ವತಿಯಿಂದ ಪ್ರಥಮ ವರ್ಷದ ಪದವಿಗೆ ಸೇರ್ಪಡೆಯಾದ ವಿದ್ಯಾರ್ಥಿಗಳಿಗೆ ಪೂರ್ವ ಪರಿಚಯ ಕಾರ್ಯಕ್ರಮವನ್ನು ಕಾಲೇಜಿನ ಸಭಾಂಗಣದಲ್ಲಿ ಸೆಪ್ಟೆಂಬರ್ 02 ರಂದು ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಕೆ ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಉಪ ಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ ಶುಭಾಶಂಸನೆಗೈದರು.ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ನಂದಾ ರೈ ಪ್ರಸ್ತಾವಿಕ ಮಾತುಗಳಾಡಿದರು. ವಿಭಾಗದ ಪ್ರಾಧ್ಯಾಪಕರಾದ ಹರೀಶ್.ಬಿ. ಪ್ರವೀಣ್ ಮೊಗವೀರ […]
ಸರ್ಕಾರಿ ಪಿ ಯು ಕಾಲೇಜು ಬಿದ್ಕಲ್ ಕಟ್ಟೆ: ವಿದ್ಯಾರ್ಥಿಗಳ ಹಾಗೂ ಪೋಷಕರ ಸಭೆ
ಬಿದ್ಕಲ್ ಕಟ್ಟೆ(ಆ,31): ಇಲ್ಲಿನ ಸರ್ಕಾರಿ ಪಿ ಯು ಕಾಲೇಜಿನಲ್ಲಿ ಪ್ರಥಮ ಮತ್ತು ದ್ವಿತೀಯ ಪಿಯುಸಿ ಕಲಾ,ವಾಣಿಜ್ಯಮತ್ತು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಹಾಗೂ ಪೋಷಕರ ಸಭೆಯನ್ನು ಸಂಸ್ಥೆಯ ಪ್ರಾಂಶುಪಾಲ ರಾದ ಶ್ರೀ ವಿಘ್ನೇಶ್ವರ ಭಟ್ ರವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಜರುಗಿತು. ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ಕಾರ್ಯಕ್ರಮದಲ್ಲಿ ಅಭಿನಂದಿಸಲಾಯಿತು. ಮುಂಬರುವ ಮದ್ಯವಾರ್ಷಿಕ ಪರೀಕ್ಷೆಯನ್ನು ಹೇಗೆ ಎದುರಿಸಬೇಕೆಂದು ಮಾರ್ಗದರ್ಶನ ಮಾಡಲಾಯಿತು. ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ಬಗ್ಗೆ ಹೆಚ್ಚಿನ ಗಮನ ಹರಿಸಿ ಶೇಕಡಾ 100%ರಷ್ಟು […]
ಸಂಕದಹೊಳೆ ನವಶಕ್ತಿ ಜ್ಞಾನ ವಿಕಾಸ ಕೇಂದ್ರ: ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ
ಕುಂದಾಪುರ(ಆ,29): ಸಂಕದ ಹೊಳೆ ಯುವಕ ಸಂಘದ ಸಭಾಂಗಣದಲ್ಲಿ ವರ ಮಹಾಲಕ್ಷ್ಮೀ ಪೂಜೆಯನ್ನು ಆಗಸ್ಟ್ 29 ರಂದು ಆಯೋಜಿಸಲಾಯಿತು. ಆಪ್ರಯುಕ್ತ ಆಯೋಜಿಸಿದ ಧಾರ್ಮಿಕ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ತೀರ್ಥಹಳ್ಳಿ ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಮಂಜುನಾಥ್ ಮೃಗವಧೆ ಯವರು ಆಗಮಿಸಿ ಧಾರ್ಮಿಕತೆಯ ಬಗ್ಗೆ ಮಾಹಿತಿ ನೀಡಿದರು. ಧಾರ್ಮಿಕ ಸಭೆಯ ಅಧ್ಯಕ್ಷತೆಯನ್ನು ನವಶಕ್ತಿ ಜ್ಞಾನ ವಿಕಾಸ ಕೇಂದ್ರದ ಅಧ್ಯಕ್ಷೆ ವನಜಾಕ್ಷಿಯವರು ಧಾರ್ಮಿಕ ಸಭೆಯ ಅಧ್ಯಕ್ಷತೆವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನೆರಟೂರು ಗ್ರಾಮ ಪಂಚಾಯತ್ ಅಧ್ಯಕ್ಷೆ […]










