ಕುಂದಾಪುರ( ಜು,5): ಮನುಷ್ಯನ ದೇಹಕ್ಕೆ ಬೆನ್ನುಮೂಳೆ ಹೇಗೆ ಆಧಾರವೋ, ಅದೇ ರೀತಿ ಸದೃಢ ಸಮಾಜ ನಿರ್ಮಾಣಕ್ಕೆ ಉತ್ತಮ ನಾಯಕತ್ವ ಅವಶ್ಯಕ. ಇಂತಹ ನಾಯಕತ್ವ ಗುಣವನ್ನು ವಿದ್ಯಾರ್ಥಿ ದೆಸೆಯಿಂದಲೇ ಬೆಳೆಸಿಕೊಳ್ಳಬೇಕು. ವಿರೋಧ ಪಕ್ಷದವರು ಆಡಳಿತ ಪಕ್ಷದ ಕಾರ್ಯಕ್ಕೆ ಸೂಕ್ತ ಬೆಂಬಲ ನೀಡಿದರೆ ಶಾಲಾ ಸಂಸoತ್ತು ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಲು ಸಾಧ್ಯ ಎಂದು ನಾಡಾ ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಪುಷ್ಪರವರು ಹೇಳಿದರು. ಅವರು ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ: ಜು.9 ರಂದು ಎರಡನೇ ಮಹಾಸಭೆ
ಗಂಗೊಳ್ಳಿ(ಜು,5) : ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿಯ ಎರಡನೇ ವಾರ್ಷಿಕ ಮಹಾಸಭೆ ಮತ್ತು ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವು ಜುಲೈ 9 ರ ಭಾನುವಾರದಂದು ಗಂಗೊಳ್ಳಿಯ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ನಡೆಯಲಿದೆ. ಶ್ರೀ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ಪ್ರವರ್ತಕರಾದ ಡಾ. ಗೋವಿಂದ ಬಾಬು ಪೂಜಾರಿಯವರು ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರಕಾರದ ಮಾಜಿ ಶಾಸಕರಾದ ಕೋಟ ಶ್ರೀನಿವಾಸ್ ಪೂಜಾರಿ, ಉಡುಪಿ ಜಿಲ್ಲಾ ಪಂಚಾಯತ್ ನ ಮಾಜಿ ಸದಸ್ಯೆ […]
ಜಿ.ಎಸ್.ವಿ.ಎಸ್ ಅಸೋಷಿಯೇಷನ್ ಗಂಗೊಳ್ಳಿ: ಶೈಕ್ಷಣಿಕ ಸಾಧಕರ ಅಭಿನಂದನಾ ಸಮಾರಂಭ
ಗಂಗೊಳ್ಳಿ(ಜು,5): ಗಂಗೊಳ್ಳಿಯ ಜಿ.ಎಸ್.ವಿ.ಎಸ್ ಅಸೋಷಿಯೇಷನ್ ವತಿಯಿಂದ ಕಳೆದ 2022-23ರ ಶೈಕ್ಷಣಿಕ ವರುಷದಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳಲ್ಲಿ ಶೇಕಡ 85ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿರುವ ವಿದ್ಯಾರ್ಥಿಗಳು ಮತ್ತು ವಿಷಯವಾರು ನೂರಕ್ಕೆ ನೂರು ಅಂಕಗಳನ್ನು ಪಡೆದ ವಿದ್ಯಾರ್ಥಿಗಳು ಮತ್ತು ಭೋಧಕರನ್ನು ಗೌರವಿಸುವ ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಸಮಾರಂಭ ಕಾರ್ಯಕ್ರಮವು ಇಲ್ಲಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಕುಂದಾಪುರದ ಚಿನ್ಮಯಿ ಆಸ್ಪತ್ರೆಯ […]
ಐ ಎಂ ಜೆ ಐ ಎಸ್ ಸಿ ಕಾಲೇಜು ಮೂಡ್ಲಕಟ್ಟೆ – ಕಾಲೇಜು ವಾರ್ಷಿಕೋತ್ಸವ
ಕುಂದಾಪುರ (ಜು,4): ಐಎಂಜೆ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ & ಕಾಮರ್ಸ್ ಕಾಲೇಜು ಮೂಡ್ಲಕಟ್ಟೆ, ಕುಂದಾಪುರ ಇಲ್ಲಿ ವಾರ್ಷಿಕೋತ್ಸವ ಇತ್ತೀಚೆಗೆ ಗಿ ನೆರವೇರಿತು. ಕಲಿಕೆಯು ಕೇವಲ ಪರೀಕ್ಷೆಗೆ ಮಾತ್ರ ಸೀಮಿತವಲ್ಲ, ಕಲಿತದ್ದು ಬದುಕಿನುದ್ದಕ್ಕೂ ಇರಬೇಕಾಗಿದೆ. ಆದ್ದರಿಂದ ಆಳವಾದ ಅಧ್ಯಯನ ಮಾಡುವ ಹವ್ಯಾಸ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿಗಳು ಏನೇ ಗುರಿ ಕಂಡರೂ ಅದನ್ನು ಸಾಧಿಸುವ ಗರಿಷ್ಠ ಪ್ರಯತ್ನವನ್ನು ಮಾಡಬೇಕು” ಎಂದು ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತ ಶ್ರೀಮತಿ ರಶ್ಮಿ ಎಸ್ಆರ್ ಹೇಳಿದರು. ಮುಖ್ಯ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು: ಕುಂದಗನ್ನಡ ನೆಲಪರ ಆಚರಣೆ ಮತ್ತು ಸಂಸ್ಕೃತಿ-ವಿಶೇಷ ಉಪನ್ಯಾಸ
ಕುಂದಾಪುರ (ಜುಲೈ 04): ಕುಂದಾಪುರ ಭಾಷಿಕ ಮತ್ತು ಸಾಂಸ್ಕೃತಿಕವಾಗಿ ಅನನ್ಯವಾದ ಪ್ರದೇಶ. ಕೃಷಿ ಪ್ರಧಾನವಾದ ಈ ಭಾಗದಲ್ಲಿ ಕೃಷಿಯೊಂದಿಗೆ ಅನೇಕ ನೆಲಪರವಾದ ಆಚರಣೆಗಳು ಹೆಣೆದುಕೊಂಡಿದೆ’. ಆಚರಣೆಗಳು ಮರೆಯಾದಂತೆ ಭಾಷೆ, ಸಂಸ್ಕೃತಿ ತಮ್ಮ ನೆಲೆಯನ್ನು ಕಳೆದುಕೊಳ್ಳುತ್ತದೆ. ಆ ನಿಟ್ಟಿನಲ್ಲಿ ನಮ್ಮ ಪ್ರಾದೇಶಿಕ ಆಚರಣೆಗಳನ್ನು ಯುವ ಪೀಳಿಗೆಗೆ ಪರಿಚಯಿಸುವುದು ತುರ್ತು ಎಂದು ಸಿದ್ದಾಪುರದ ವೈದ್ಯರಾದ ಡಾ| ಜಗದೀಶ್ ಶೆಟ್ಟಿ ಹೇಳಿದರು. ಅವರು ದಿನಾಂಕ ಜು.04 ರಂದು ಡಾ| ಬಿ. ಬಿ. ಹೆಗ್ಡೆ ಪ್ರಥಮ […]
ಲಯನ್ಸ್ ಕ್ಲಬ್ ಕೋಸ್ಟಲ್ ವತಿಯಿಂದ ಪ್ರಸೂತಿ ತಜ್ಞ ಡಾ. ರಂಜಿತ್ ಕುಮಾರ್ ಶೆಟ್ಟಿಗೆ ಸನ್ಮಾನ
ಕುಂದಾಪುರ( ಜು, 04): ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ವತಿಯಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ ಪ್ರಯುಕ್ತ ಕುಂದಾಪುರದಲ್ಲಿ ಪ್ರಸಿದ್ಧ ಪ್ರಸೂತಿ ತಜ್ಞರಾಗಿ ನಾಲ್ಕು ದಶಕಗಳಿಂದ ಸೇವೆ ಸಲ್ಲಿಸುತ್ತಿರುವ, ಸಮಾಜದಲ್ಲಿ ವಿಶೇಷ ಜನಮನ್ನಣೆ ಪಡೆದ ಹಿರಿಯ ಪ್ರಸೂತಿ ತಜ್ಞರಾದ, ಕುಂದಾಪುರದ ಪ್ರತಿಷ್ಠಿತ ವಿನಯ ನರ್ಸಿಂಗ್ ಹೋಮ್ ನ ಆಡಳಿತ ನಿರ್ದೇಶಕರೂ ಆದ ಡಾ. ರಂಜಿತ್ ಕುಮಾರ್ ಶೆಟ್ಟಿ ಯವರನ್ನು ಜು 01 ರ ಶನಿವಾರದಂದು ಅವರ ಕುಂದಾಪುರದ ಸ್ವಗ್ರಹದಲ್ಲಿ ಲಯನ್ಸ್ ಕ್ಲಬ್ ಕುಂದಾಪುರ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು, ಕುಂದಾಪುರ: ಸಿಬ್ಬಂದಿಗಳಿಗೆ ಬೀಳ್ಕೊಡುಗೆ
ಕುಂದಾಪುರ (ಜುಲೈ 03) : ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಸ್ಟಾಫ್ ವೆಲ್ಫೇರ್ ಅಸೋಸಿಯೇಶನ್ ಆಯೋಜಿಸಿದ ಸಿಬ್ಬಂದಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಕಾಲೇಜಿನ ಪಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ, ಸಂಸ್ಥೆಯಲ್ಲಿ ಸೇವೆ ಸಲ್ಲಿಸಿ ಸಂಸ್ಥೆಯ ಶ್ರೇಯೋಭಿವೃದ್ಧಿಗೆ ಸಹಕರಿಸಿದ ಇಬ್ಬರು ಉಪಾನ್ಯಾಸಕರನ್ನು ಶ್ಲಾಘಿಸಿದರು. ಉಪಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ಬೀಳ್ಕೋಡುಗೆ ಸ್ವೀಕರಿಸಿದ ಗಣಿತ ಶಾಸ್ತ್ರ ಉಪನ್ಯಾಸಕಿ ಶ್ರೀಮತಿ ನಿರುಷಾ ಆನಂದ ಶೆಟ್ಟಿ ಮತ್ತು […]
ಡಾ| ಬಿ. ಬಿ. ಹೆಗ್ಡೆ ಕಾಲೇಜು ಕುಂದಾಪುರ: ವಿಸ್ತರಣಾ ಚಟುವಟಿಕೆ
ಕುಂದಾಪುರ (ಜು,4): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕುಂದಗನ್ನಡ ಸಂಘ ಹಾಗೂ ಕನ್ನಡ ಸಂಘದ ವಿದ್ಯಾರ್ಥಿ ಗಳಿಂದ ವಿಸ್ತರಣಾ ಚಟುವಟಿಕೆ ಕಾರ್ಯಕ್ರಮವನ್ನು ಜೂನ್ 26ರಂದು ಕೊಳ್ಕೆಬೈಲ್ ಸೂರಪ್ಪ ಶೆಟ್ಟಿ ಸರ್ಕಾರಿ ಪ್ರೌಢಶಾಲೆ, ಹಕ್ಲಾಡಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಕುಂದಗನ್ನಡ ಸಂಘ ಹಾಗೂ ಕನ್ನಡ ಸಂಘದ ವಿದ್ಯಾರ್ಥಿಗಳು ನಡೆಸಿಕೊಟ್ಟ ಈ ಕಾರ್ಯಕ್ರಮದಲ್ಲಿ ಹಕ್ಲಾಡಿ ಪ್ರೌಢಶಾಲೆಯ ವಿದ್ಯರ್ಥಿಗಳ ಸಹಯೋಗದೊಂದಿಗೆ ಅನೇಕ ಪಠ್ಯೇತರ ಕರ್ಯ ಚಟುವಟಿಕೆಗಳನ್ನು ನಡೆಸುವುದರ ಮೂಲಕ ವಿಜೇತ ವಿದ್ಯಾರ್ಥಿಗಳಿಗೆ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು ಕುಂದಾಪುರ: ಲಲಿತ ಕಲಾ ಸಂಘದ ವತಿಯಿಂದ ವಿಸ್ತರಣಾ ಚಟುವಟಿಕೆ
ಕುಂದಾಪುರ (ಜು,3): ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಇದರ ಲಲಿತ ಕಲಾಸಂಘದ ವತಿಯಿಂದ ವಿಸ್ತರಣಾ ಚಟುವಟಿಕೆಯನ್ನು ಅಂಪಾರು ಮೂಡುಬಗೆ ವಾಗ್ಜ್ಯೋತಿ ಶ್ರವಣ ದೋಷವುಳ್ಳ ಮಕ್ಕಳ ವಸತಿ ಶಾಲೆಯಲ್ಲಿ ಹಮ್ಮಿಕೊಳ್ಳಲಾಯಿತು. ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ ಹಾಗೂ ಕಲೆಯ ಮಹತ್ವವನ್ನು ತಿಳಿಸುವ ಸಲುವಾಗಿ ಲಲಿತಾ ಕಲಾಸಂಘದ ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮ, ಯಕ್ಷಗಾನ, ಭರತನಾಟ್ಯ, ಜಾನಪದ ನೃತ್ಯ ಹಾಗೂ ಅರೆ ಶಾಸ್ತ್ರೀಯ ನೃತ್ಯ ಮೊದಲಾದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರದರ್ಶಿಸಲಾಯಿತು. ಇದರ ಜೊತೆಗೆ […]
ಆರ್.ಎನ್.ಶೆಟ್ಟಿ ಪಿ. ಯು ಕಾಲೇಜು ಕುಂದಾಪುರ : ಶಾಸ್ತ್ರೀಯ ನೃತ್ಯದಲ್ಲಿ ರಾಷ್ಟ್ರಮಟ್ಟದ ಸಾಧನೆ
ಕುಂದಾಪುರ(ಜು,3): ಇಲ್ಲಿನ ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ ಕಲಿಯುತ್ತಿರುವ ಕುಮಾರಿ ಪೂರ್ವಿಕಾ ಇವರು ಪ್ರಭಾತ್ ಕಲಾವಿದರ ತಂಡ ಗೋಪಿನಾಥ್ ನ್ಯಾಸ-2023 ವತಿಯಿಂದ ಬೆಂಗಳೂರಿನಲ್ಲಿಆಯೋಜಿಸಲ್ಪಟ್ಟ ರಾಷ್ಟ್ರ ಮಟ್ಟದ ಶಾಸ್ತ್ರೀಯ ನೃತ್ಯ ಮತ್ತು ಸಂಗೀತ ಸ್ಪರ್ಧೆಗಳ ಭರತನಾಟ್ಯ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಪರ್ಯಾಯ ಪಾರಿತೋಷಕವನ್ನು ಗಳಿಸಿರುತ್ತಾರೆ. ಕು.ಪೂರ್ವಿಕಾ ಇವರು ವಿದುಷಿ ಪ್ರವಿತ ಮತ್ತು ಅಶೋಕ್ ಕುಮಾರ್ ರವರ ಪುತ್ರಿ. ಪೂರ್ವಿಕಾಳ ಈ ಅಮೋಘ ನೃತ್ಯಸಾಧನೆಯನ್ನು ಮೆಚ್ಚಿ, […]










