ಕುಂದಾಪುರ(,ಮಾ.28):ಇಲ್ಲಿನ ಡಾ.ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಜನಸೇವಾ ಟ್ರಸ್ಟ್ ಮೂಡುಗಿಳಿಯಾರು ಆಶ್ರಯದಲ್ಲಿ ‘ಹಸ್ತಿನಾವತಿ’ ಕಾದಂಬರಿಯ ಮರು ಅನಾವರಣ ಕಾರ್ಯಕ್ರಮ ಮಾ.26 ರಂದು ನಡೆಯಿತು. ಬೆಂಗಳೂರು ವಿಶ್ವವಿದ್ಯಾಲಯದ ವಿತ್ತಾಧಿಕಾರಿ ಅಜಿತ್ ಹೆಗ್ಡೆ ಶಾನಾಡಿಯವರು ಜೋಗಿಯವರ ಹಸ್ತಿನಾವತಿ ಕಾದಂಬರಿ ಅನಾವರಣಗೊಳಿಸಿ ಮಾತನಾಡಿದರು. ಈ ಕೃತಿಯಲ್ಲಿ ರಾಜಕೀಯ, ಧಾರ್ಮಿಕ, ಪ್ರೇಮಕತೆ ಎಲ್ಲವೂ ಇದೆ. ಮುಖ್ಯವಾಗಿ ಯುವ ಸಮುದಾಯ ಓದಬೇಕಾದ ಪುಸ್ತಕವಿದು. ಓದುಗರನ್ನು ಬಿಡದಂತೆ ಓದಿಸಿಕೊಂಡು ಹೋಗುವ ಕಲೆ ಜೋಗಿಯವರಿಗೆ ಜನ್ಮತಃ ಸಿದ್ಧಿಯಾಗಿದೆಎಂದರು. ಬದುಕಿನ ವಿಭಿನ್ನ ಪಾತ್ರಗಳನ್ನು […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಐ.ಎಂ.ಜೆ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಅಂಡ್ ಕಾಮರ್ಸ್ ಮೂಡ್ಲಕಟ್ಟೆ:ಶಿಕ್ಷಣ ಮತ್ತು ಜೀವನದ ಬಗ್ಗೆ ಗ್ರಹಿಕೆ ವಿಷಯದ ಕುರಿತು ಕಾರ್ಯಗಾರ
ಕುಂದಾಪುರ(ಮಾ 27): ಇಲ್ಲಿನ ಐ.ಎಂ.ಜೆ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಅಂಡ್ ಕಾಮರ್ಸ್ ಮೂಡ್ಲಕಟ್ಟೆಯಲ್ಲಿ ‘ಶಿಕ್ಷಣ ಮತ್ತು ಜೀವನದ ಬಗ್ಗೆ ಗ್ರಹಿಕೆ’ ಎಂಬ ವಿಷಯದ ಕುರಿತು ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಐ. ಎಂ. ಜೆ. ವಿದ್ಯಾ ಸಂಸ್ಥೆಗಳ ನಿರ್ದೇಶಕರಾದ ಪ್ರೊIದೋಮ ಚಂದ್ರಶೇಖರ್ ಅವರು ವಿಷಯದ ಕುರಿತು ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು. “ವೇಗವಾಗಿ ಬೆಳೆಯುತ್ತಿರುವ ಸ್ಪರ್ಧಾತ್ಮಕ ಪ್ರಪಂಚಕ್ಕೆ ವಿದ್ಯಾರ್ಥಿಗಳು ಅಣಿಯಾಗುತ್ತಿರುವ ನಿಟ್ಟಿನಲ್ಲಿ ವಿದ್ಯಾರ್ಥಿ ಜೀವನದಲ್ಲಿ ತೊಡಗಿಸಿಕೊಳ್ಳಬಹುದಾದ ವಿಷಯದ ಕುರಿತು ಮಾತನಾಡುತ್ತಾ, […]
ಮೂಡ್ಲಕಟ್ಟೆ:ವಿದ್ಯಾ ಅಕಾಡೆಮಿ ಸ್ಕೂಲ್ ವಾರ್ಷಿಕೋತ್ಸವ
ಮೂಡ್ಲಕಟ್ಟೆ(ಮಾ.27): ಇಲ್ಲಿನ ವಿದ್ಯಾ ಅಕಾಡೆಮಿ ಸ್ಕೂಲಿನ ವಾರ್ಷಿಕೋತ್ಸವವು ಇತ್ತಿಚಿಗೆ ಶಾಲೆಯ ಆವರಣದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಯಾಗಿ ಕುಂದಾಪುರದ ಹೆಮ್ಮಾಡಿಯ ಲಕ್ಷ್ಯ ಕ್ಲಿನಿಕ್ ವೈದ್ಯರಾಗಿರುವ ಅಮ್ಮಾಜಿ ಪಿ ಅವರು ಮುಖ್ಯ ಅಥಿತಿಯಾಗಿ ಆಗಮಿಸಿದ್ದರು. ಶಾಲಾ ವಾರ್ಷಿಕೋತ್ಸವವು ಎಳೆಯರಿಗೆ ಜೀವನ ಪರ್ಯಂತ ಸ್ಮರಣೀಯ ಕ್ಷಣಗಳನ್ನು ನೀಡುವ ಅತ್ಯಂತ ಮಹತ್ವದ ದಿನ,ಶಾಲೆಯು ಮಕ್ಕಳಿಗೆ ಮನೆಯ ವಾತಾವರಣದ ಹೊರತಾಗಿ ಹೊರಗಿನ ವಾತಾವರಣವನ್ನು ಅರಿತುಕೋಳ್ಳಲು ಬಹಳ ಸಹಾಯವಾಗುತ್ತದೆ. ವಿದ್ಯಾರ್ಥಿಗಳ ಉನ್ನತಿಯನ್ನೆ ಧೈರ್ಯವಾಗಿಟ್ಟುಕೊಂಡು ಶಾಲೆಯು ಮುನ್ನಡೆಯುತ್ತಿರುವುದು ಪ್ರಶಂಸನೀಯ […]
ಎಕ್ಸಲೆಂಟ್ ಪ್ರೌಢಶಾಲೆ ಸುಣ್ಣಾರಿ: ಬೀಳ್ಕೊಡುಗೆ ಸಮಾರಂಭ
ಕೋಟೇಶ್ವರ (ಮಾ.27): ಮೌಲ್ಯಯುತ, ಪಠ್ಯ ಪಠ್ಯೇತರ ರಂಗದಲ್ಲಿಯೂ ಶಿಸ್ತುಬದ್ದ ಶಿಕ್ಷಣವನ್ನು ನೀಡಿ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ದಾರಿದೀಪವಾಗಿ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ದಿಗೆ ಪೂರಕವಾಗುವಂತಹ ಕರ್ತವ್ಯ ನಿರ್ವಹಿಸುತ್ತಿರುವ ರಾಜ್ಯದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಒಂದಾದ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಇತ್ತೀಚೆಗೆ ನಡೆಯಿತು. ಸುಜ್ಞಾನ ಎಜುಕೇಶನ್ ಟ್ರಸ್ಟ ನ ಅಧ್ಯಕ್ಷರಾದ ಶ್ರಿ ರಮೇಶ್ ಶೆಟ್ಟಿಯವರು ಸಮಾರಂಭದ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ “ವಿದ್ಯಾರ್ಥಿಗಳು ಪರೀಕ್ಷೆಯ […]
ನೊಂದವರ ನೋವುಗಳನ್ನು ಅರ್ಥ ಮಾಡಿಕೊಳ್ಳಬೇಕಾದುದ್ದು ಸಂಘ ಸಂಸ್ಥೆಗಳ ಜವಾಬ್ದಾರಿ- ಡಾ. ಅಂಪಾರು ನಿತ್ಯಾನಂದ ಶೆಟ್ಟಿ
ಕುಂದಾಪುರ (ಮಾ, 22): ಸಮಾಜದಲ್ಲಿ ಒಂದಷ್ಟು ಜನ ಬೇರೆ ಬೇರೆ ಕಾರಣಗಳಿಂದ ನೋವನ್ನು ಅನುಭವಿಸುತ್ತಿರುತ್ತಾರೆ. ಅಂತವರ ನೋವಿಗೆ ಕಾರಣವಾದ ಸಂಗತಿಯನ್ನು ಅರ್ಥ ಮಾಡಿಕೊಂಡು ಅವರಿಗೆ ಸ್ವಾಂತನದ ಹಿತ ಮಾತುಗಳನ್ನು ಹೇಳಿ ಅವರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸವನ್ನು ಸಂಘ ಸಂಸ್ಥೆಗಳು ಮಾಡಬೇಕಾಗಿದೆ. ನೊಂದವರ ನೋವುಗಳನ್ನು ಸಾಕ್ಷಿ ಇಲ್ಲದೆ ಅರ್ಥ ಮಾಡಿಕೊಳ್ಳುವುದು ಸಂಘ-ಸಂಸ್ಥೆಗಳ ಬಹುದೊಡ್ಡ ಜವಾಬ್ದಾರಿ ಕೂಡ ಆಗಿದೆ ಎಂದು ಕುಂದಾಪುರ ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷರಾದ ಡಾ. ಅಂಪಾರು ನಿತ್ಯಾನಂದ […]
ಸಾಹಿತ್ಯಕ್ಕೆ ಭಾವನೆಗಳನ್ನು ಉದ್ದೀಪಿಸುವ ಶಕ್ತಿಯಿದೆ: ಶ್ರೀ ಮುನಿರಾಜ ರೆಂಜಾಳ
ಕಾರ್ಕಳ( ಮಾ.17): ಸಾಹಿತ್ಯ ಸರ್ವವ್ಯಾಪಿಯಾದುದು. ಸಾಹಿತ್ಯದ ರಸಭಾವಗಳನ್ನು ಅರಿತರೆ ಬದುಕಿನ ದಾರಿ ದೀಪವಾಗಬಲ್ಲದು. ಜೀವನದಲ್ಲಿ ನಾವು ಸಾಹಿತ್ಯ ಮತ್ತು ನೈತಿಕ ಮೌಲ್ಯಗಳಿಗೆ ತೆರೆದುಕೊಂಡಾಗ ಹೊಸ ದೃಷ್ಟಿ ಗೋಚರಿಸುತ್ತದೆ. ಮನಸ್ಸಿನ ತೃಪ್ತಿಗಾಗಿ ನಾವೆಲ್ಲ ಪುಸ್ತಕ ಪ್ರೀತಿಯನ್ನು, ಓದುವಿಕೆಯನ್ನು ಅಳವಡಿಸಿಕೊಳ್ಳಬೇಕಾಗಿದೆ. ಎಂದು ನಿವೃತ್ತ ಮುಖ್ಯೋಪಾಧ್ಯಾಯ ಮುನಿರಾಜ ರೆಂಜಾಳರು ನುಡಿದರು. ಅವರು ಹಿರ್ಗಾನದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಸಾಹಿತ್ಯ ಸಾಂಗತ್ಯ ಸರಣಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. […]
ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್& ಕಮ್ಯುನಿಕೇಷನ್ ವಿಭಾಗದ ವತಿಯಿಂದ ವಿಎಲ್ಎಸ್ಐ ಸಿಸ್ಟಮ್ ವಿನ್ಯಾಸ
ಕುಂದಾಪುರ(ಮಾ,16): ಇಲ್ಲಿನ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ವಿಭಾಗದ ವತಿಯಿಂದ ವಿಎಲ್ಎಸ್ಐ ಸಿಸ್ಟಮ್ ವಿನ್ಯಾಸ ಎಂಬ ವಿಷಯದ ಬಗ್ಗೆ ಒಂದು ದಿನದ ತಾಂತ್ರಿಕ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಸಿಐಯೆಂಟ್ ಸೆಮಿಕಂಡಕ್ಟರ್ ಇದರ ಪ್ರೋಗ್ರಾಮ್ ಮ್ಯಾನೇಜರ್ ಆಗಿರುವ ರಿಝ್ವಾನ್ ರೋಶನ್ ಹಾಗೂ ಕಾರ್ಮಿಕ್ ಡಿಸೈನ್ ಪ್ರೈವೇಟ್ ಲಿಮಿಟೆಡ್ ಇದರ ನಿರ್ದೇಶಕರಾದ ದಿಲೀಪ್ ಮೊಗವೀರ ಇವರು ಆಗಮಿಸಿ ವಿಧ್ಯಾರ್ಥಿಗಳಿಗೆ ಕಾರ್ಯಗಾರ ನಡೆಸಿಕೊಟ್ಟರು. ಸೆಮಿಕಂಡಕ್ಟರ್ ತಂತ್ರಜ್ಞಾನದ ಪ್ರಾಮುಖ್ಯತೆಯನ್ನು ತಿಳಿಸುತ್ತ, ಚಿಪ್ […]
ನೆಂಪು ಉತ್ಸವ ಪೋಸ್ಟರ್ ಬಿಡುಗಡೆ
ವಂಡ್ಸೆ(ಮಾ.15): ಶ್ರೀ ವಿನಾಯಕ ಯುವಕ ಸಂಘ( ರಿ.)ನೆಂಪು ಇವರ ಪ್ರಸ್ತುತಿಯಲ್ಲಿ ಏಪ್ರಿಲ್,15 ರಂದು ವಂಡ್ಸೆ ಸಮೀಪದ ನೆಂಪುವಿನಲ್ಲಿ ನಡೆಯುವ “ನೆಂಪು ಉತ್ಸವ” ದ ಪೋಸ್ಟರ್ ನ್ನು ಮಾರ್ಚ್ ,15 ರಂದು ನೆಂಪು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ರಾಮಕೃಷ್ಣ ಭಟ್ ನೆಂಪು, ಹಿರಿಯರಾದ ನಾರಾಯಣ ಆಚಾರ್ ಹೇರ್ಜಾಡಿ, ಬಸವ ನಾಯ್ಕ್ ನೆಂಪು, ನಾಗ ನಾಯ್ಕ್ ನೀರ್ಕೋಡ್ಲು,ಶ್ರೀನಿವಾಸ್ ಮೊಗವೀರ ನೆಂಪು,ಮಂಜಯ್ಯ ಶೆಟ್ಟಿ ಹೇರ್ಜಾಡಿ, […]
ಬಸ್ರೂರು: 400 ವರ್ಷಗಳ ಹಳೆಯ ಲಿಂಗ ಮುದ್ರೆ ಕಲ್ಲು ಪತ್ತೆ
ಕುಂದಾಪುರ (ಮಾ.13): ತಾಲೂಕಿನ ಬಸ್ರೂರು ಗ್ರಾಮ ಪಂಚಾಯತ್ ಹಿಂಭಾಗದ ಅಶೋಕ ಪಾರ್ಕ್ ಜೀರ್ಣೋದ್ಧಾರ ಕಾರ್ಯವು ಸ್ಧಳೀಯರ ಸಹಕಾರದಲ್ಲಿ ನಡೆಯುತ್ತಿದ್ದು,ಈ ಪಾರ್ಕ ಅಭಿವೃದ್ಧಿ ಕಾರ್ಯದ ಸಮಿತಿ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಮಹೇಶ್ ಮೆಂಡನ್ ನೇತೃತ್ವದಲ್ಲಿ ಜಾಗ ಸಮತಟ್ಟು ಮಾಡುವ ಸಂಧರ್ಭ ಲಿಂಗಮುದ್ರೆ ಕಲ್ಲು ಪತ್ತೆಯಾಗಿದೆ. ಈ ಕಲ್ಲಿನ ಬಗ್ಗೆ ಭಾರತೀಯ ಇತಿಹಾಸ ಸಂಕಲನ ಸಮಿತಿ ಕರ್ನಾಟಕ ಉಡುಪಿ ಜಿಲ್ಲೆಯ ಜಿಲ್ಲಾ ಸಂಚಾಲಕರು ಪ್ರದೀಪ ಕುಮಾರ್ ಬಸ್ರೂರು ಇವರ ಗಮನಕ್ಕೆ ತಂದಿರುತ್ತಾರೆ. ಕಲ್ಲಿನಲ್ಲಿ […]
ಕುಂದಾಪುರ: ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರೀಯ ಮಹಿಳಾ ದಿನಾಚರಣೆ
ಕುಂದಾಪುರ(ಮಾ.13): ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊಫ಼ೆಸರ್ ಜೆನಿಫರ್ ಮೆನೇಜಸ್ ಲಿಂಗ ಸಮಾನತೆ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿದರು. ವಿವಿಧ ಮನರಂಜನಾ ಸ್ಪರ್ದೆಗಳನ್ನು ಆಯೋಜಿಸಲಾಗಿದ್ದು ಕಾಲೇಜಿನ ಎಲ್ಲ ಮಹಿಳೆಯರು ಉತ್ಸಾಹದಿಂದ ಪಾಲ್ಗೊಂಡರು.










