ಕುಂದಾಪುರ (ನ,17): ಜೇಸಿಐ ಕುಂದಾಪುರ ಇದರ ಜೇಸಿ ಸಪ್ತಾಹ 2022 ರ ವೈವಿಧ್ಯಮಯ ಯಕ್ಷಗಾನ ಕಲಾಪ್ರಕಾರಗಳನ್ನೊಳಗೊಂಡ ‘ಒಡ್ಡೋಲಗ ಯಕ್ಷರಾಧನೆ’ ಎಂಬ ಶೀರ್ಷಿಕೆಯಡಿ ನಡೆದ ಯಕ್ಷಗಾನ ಸ್ಪರ್ಧೆಯಲ್ಲಿ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಯಕ್ಷಗಾನ ಭಾಗವತಿಕೆ ಸ್ಪರ್ಧೆಯಲ್ಲಿ ಪ್ರಥಮ ಬಿಸಿಎ ‘ಎ’ ವಿಭಾಗದ ಪೂಜಾ ಆಚಾರ್ ತೆಕ್ಕಟ್ಟೆ ಪ್ರಥಮ ಸ್ಥಾನ ಮತ್ತು ಯಕ್ಷಗಾನ ಚಂಡೆ ಸ್ಪರ್ಧೆಯಲ್ಲಿ ತೃತೀಯ ಸ್ಥಾನ, ಯಕ್ಷಗಾನ ನಾಟ್ಯ ಸ್ಪರ್ಧೆಯಲ್ಲಿ […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಪ್ರಬಂಧ ಸ್ಪರ್ಧೆಯಲ್ಲಿ ನರೇಂದ್ರ ಎಸ್ ಗಂಗೊಳ್ಳಿಯವರಿಗೆ ಪ್ರಥಮ ಸ್ಥಾನ
ಗಂಗೊಳ್ಳಿ (ನ,17):ಸಾಹಿತ್ಯ ಗಂಗಾ ಧಾರವಾಡ ವತಿಯಿಂದ ನಡೆದ “ಕನ್ನಡ ಪ್ರಜ್ಞೆ” ಮತ್ತು “ಕನ್ನಡದ ನಾಳೆಗಳು” ಎಂಬ ವಿಷಯದ ಕುರಿತು ನಡೆದ ಪ್ರಬಂಧ ಸ್ಪರ್ಧೆಯಲ್ಲಿ ಕುಂದಾಪುರದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಪ್ರಥಮ ಬಹುಮಾನವನ್ನು ಪಡೆದಿರುತ್ತಾರೆ. ಸಾಹಿತ್ಯ ,ಕಲೆಯಲ್ಲಿ ಅಪಾರ ಆಸಕ್ತಿ ಹೊಂದಿರುವ ನರೇಂದ್ರ ಎಸ್ ಗಂಗೊಳ್ಳಿಯವರು ಬಹುಮುಖ ಪ್ರತಿಭಾ ಸoಪನ್ನರಾಗಿದ್ದು ,ಇತ್ತೀಚೆಗೆ ಇವರು ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆಗೆ ನೇಷನ್ […]
ಪದವಿ ಮತ್ತು ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆ
ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ ಮತ್ತು ಸಾಹಿತ್ಯ ತಂಗುದಾಣ ಗಂಗೊಳ್ಳಿ ಇವರ ಸಹಯೋಗದಲ್ಲಿ ಕರ್ನಾಟಕ ರಾಜ್ಯದ ಪದವಿ ಮತ್ತು ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ”ಮಹಿಳಾ ದೌರ್ಜನ್ಯವನ್ನು ತಡೆಗಟ್ಟುವಲ್ಲಿ ನಮ್ಮ ಅರಿವು” ವಿಷಯದ ಕುರಿತಂತೆ ವಿದ್ಯಾರ್ಥಿಗಳು ಎ 4 ಅಳತೆಯ ಕಾಗದದಲ್ಲಿ ನಾಲ್ಕು ಪುಟ ಗಳಿಗೆ ಮೀರದಂತೆ ಕಾಗದದ ಒಂದೇ ಮಗ್ಗುಲಿನಲ್ಲಿ ಕನ್ನಡದ ಹಸ್ತಾಕ್ಷರದಲ್ಲಿ ಬರೆದು ಕಾಲೇಜಿನ ಮುಖ್ಯಸ್ಥರ ದೃಢೀಕರಣದೊಂದಿಗೆ 05-12- 2022 ರ […]
ಮೊಗವೀರ ಯುವ ಸಂಘಟನೆ (ರಿ.), ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕ: ನವೆಂಬರ್ 18 ರಂದು ಉಚಿತ ಕನ್ನಡಕ ವಿತರಣೆ
ಹೆಮ್ಮಾಡಿ (ನ17): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಇದರ ಹೆಮ್ಮಾಡಿ ಘಟಕದ ಆಶ್ರಯದಲ್ಲಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ), ಅಂಬಲಪಾಡಿ ಉಡುಪಿ ,ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ (ರಿ) ಉಡುಪಿ, ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ನಿ, ಹೆಮ್ಮಾಡಿ ಇವರ ಸಹಯೋಗದೊಂದಿಗೆ ನವೆಂಬರ್ 06 ರಂದು ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ನಿ, […]
ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪಡುಗೋಪಾಡಿ – ಮಕ್ಕಳ ದಿನಾಚರಣೆ
ಕೋಟೇಶ್ವರ (ನ,15): ಇಲ್ಲಿನ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಕ್ರೀಡಾಕೂಟದ ಜೊತೆಗೆ ಮಕ್ಕಳ ದಿನಾಚರಣೆಯನ್ನು ನ.14 ರಂದು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕೋಟೇಶ್ವರದ ಹೆಸರಾಂತ ವೈದ್ಯರಾದ ಡಾ. ಶ್ರೀಪಾದ್ ಹೆಗ್ಡೆ ಯವರು ಶಾಲಾ ಮಕ್ಕಳಿಗೆ ಕ್ರೀಡಾ ಸಮವಸ್ತ್ರ ವಿತರಿಸಿದರು. ನಿವೃತ್ತ ಮೆಸ್ಕಾಂ ಅಧಿಕಾರಿ ಬಾಬಣ್ಣ ಪೂಜಾರಿ ಕಾರ್ಯಕ್ರಮ ಉದ್ದೇಶಿಸಿ ಮಾತಾನಾಡಿ ಮಕ್ಕಳು ಉತ್ತಮ ವಿದ್ಯಾಭ್ಯಾಸದ ಜೊತೆಗೆ ಉತ್ತಮ ಸಂಸ್ಕಾರ ಪಡೆಯುವುದರ ಮೂಲಕ ನಮ್ಮೂರಿಗೆ ಕೀರ್ತಿ ತರುವುದರ ಜೊತೆಗೆ ಇಡೀ ದೇಶದ ಆಸ್ತಿಯಾಗಬೇಕು, […]
ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ನಲ್ಲಿ ಮಕ್ಕಳ ದಿನಾಚರಣೆ
ಕುಂದಾಪುರ( ನ,15) : ಇಲ್ಲಿನ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಆಚಾರ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ ಇಂದು ಮಕ್ಕಳ ದಿನಾಚರಣೆಯನ್ನು ನ.14 ರಂದು ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲೆ ಡಾ. ಚಿಂತನಾ ರಾಜೇಶ್, ಉಪ ಪ್ರಾಂಶುಪಾಲೆ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶುಭಾ ಕೆ.ಎನ್, ಸಹಾಯಕ ಮುಖ್ಯ ಶಿಕ್ಷಕ ಚಂದ್ರಶೇಖರ್ ಶೆಟ್ಟಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಜಗದೀಶ್ ಆಚಾರ್ ಸಾಸ್ತಾನ, ಸಹಾಯಕ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು: ಅoತಿಮ ವರ್ಷದ ವಿದ್ಯಾರ್ಥಿಗಳಿಗೆ ಉದ್ಯೋಗಾಧಾರಿತ ಕೌಶಲ್ಯ ತರಬೇತಿ ಕಾರ್ಯಕ್ರಮ
ಕುಂದಾಪುರ (ನ,15): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉದ್ಯೋಗ ಮಾಹಿತಿ ಮತ್ತು ತರಬೇತಿ ವಿಭಾಗದ ವತಿಯಿಂದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಉದ್ಯೋಗಾಧಾರಿತ ಕೌಶಲ್ಯ ತರಬೇತಿಯ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ರಿಸರ್ಚ್ ಎಂಡ್ ಟ್ರೈನಿಂಗ್ , ಎಮ್.ಡಿ.ಎನ್. ಲ್ಯಾಬ್ಸ್, ಮಣಿಪಾಲ್ನ ಡೈರೆಕ್ಟರ್ರಾದ ಡಾ| ನಿರಂಜನ್ ಯು.ಸಿ. ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳನ್ನುದ್ಧೇಶಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಶ್ರೀಮತಿ ಎಮ್.ಎಸ್. ಸುಪರ್ಣಾ ಶೆಟ್ಟಿ ಉದ್ಯೋಗಾಧಾರಿತ ಕೌಶಲ್ಯಗಳ ಬಗ್ಗೆ […]
ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜು ಕುಂದಾಪುರ: ವಾರ್ಷಿಕ ಕ್ರೀಡಾಕೂಟ
ಕುಂದಾಪುರ (ನ,15): ಇವತ್ತಿನ ನಮ್ಮ ದೈನಂದಿನ ಜೀವನದಲ್ಲಿ ದೇಹದಂಡನೆ ಕಡಿಮೆಯಾಗಿರುವುದರಿಂದ ವ್ಯವಸ್ಥಿತವಾದ ತರಬೇತಿ ಆಧರಿತ ಕ್ರೀಡೆಯ ಅಗತ್ಯವಿದೆ. ದಿನ ನಿತ್ಯವೂ ಅಲ್ಪ ಸಮಯವನ್ನಾದರೂ ನಾವು ದೇಹಬಲವನ್ನು ಹೆಚ್ಚಿಸುವಂಥ ಕಾರ್ಯಗಳಿಗೆ ನೀಡಬೇಕು” ಎಂದು ಕುಂದಾಪುರ ತಾಲೂಕು ಯುವಸಬಲೀಕರಣ ಮತ್ತು ಕ್ರೀಡಾಧಿಕಾರಿಯವರಾದ ಶ್ರೀ ಕುಸುಮಾಕರ ಶೆಟ್ಟಿಯವರು ಹೇಳಿದರು . ಅವರು ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಕರೆ ನೀಡಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾಲೇಜಿನ […]
ಸೇವಾ ಚೇತನ ಟ್ರಸ್ಟ್ ಮೂಡುಬಗೆ: ಮನೆ ಹಸ್ತಾಂತರ ಕಾರ್ಯಕ್ರಮ
ಅoಪಾರು( ನ,15): ಬಡ ಕುಟುಂಬದ ವನಜ ಪೂಜಾರಿ ಇವರು ಮನೆಯನ್ನು ಕಟ್ಟಬೇಕು ಎಂದು ನಿರ್ಧರಿಸಿದ ಆ ಸಮಯದಲ್ಲಿ ತನ್ನ ಗಂಡನನ್ನು ಮಾರಕ ಕ್ಯಾನ್ಸರ್ ಖಾಯಿಲೆಯಿಂದ ಕಳೆದುಕೊಂಡಾಗ ಅವರೊಂದಿಗೆ ಇದ್ದಿದ್ದು ಎಂಡೋಸಲ್ಫನ್ ಪೀಡಿತ ಬುದ್ಧಿಮಾಂದ್ಯ ಮಗ. ಮಗನನ್ನು ಬಿಟ್ಟು ಕೂಲಿಗೂ ಹೋಗಲಾಗದ ಪರಿಸ್ಥಿತಿ. ಇವರ ಮನೆ ನಿರ್ಮಾಣ ಕಾರ್ಯ ಪೂರ್ಣ ಗೊಳಿಸಬೇಕೆಂದು ಅನೇಕರು ಪ್ರಯತ್ನ ಪಟ್ಟರೂ ಕೂಡ ಸಾಧ್ಯವಾಗದಿದ್ದಾಗ ಇವರು ಸಂಪರ್ಕಿಸಿದ್ದು ಸೇವಾ ಚೇತನ ಟ್ರಸ್ಟ್ . ಅವರ ಕಷ್ಟವನ್ನು […]
ಬದುಕು ಬದಲಿಸಬಹುದು ಖ್ಯಾತಿಯ ನೇಮಿಚಂದ್ರ – ಕುಂದಾಪುರದ ಎಚ್.ಎಮ್.ಎಮ್.ವಿ.ಕೆ.ಆರ್. ಶಾಲೆಗೆ ಭೇಟಿ
ಕುಂದಾಪುರ ( ನ.14): ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಆಚಾರ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ನ.12 ರಂದು ಸಿದ್ಧ ವಿಜ್ಞಾನಿ, ಕಥೆಗಾರ್ತಿ, ಮಾನವತಾವಾದಿ, ಲೇಖಕಿ “ಬದುಕು ಬದಲಿಸಬಹುದು” ಖ್ಯಾತಿಯ ನೇಮಿಚಂದ್ರ ರವರು ಆಗಮಿಸಿದ್ದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕ ಸಾಧಕಿಯರನ್ನು ಶಾಲೆಯ ವಿದ್ಯಾರ್ಥಿಗಳಿಗೆ ಪರಿಚಯಿಸುವ ಮೂಲಕ ವಿದ್ಯಾರ್ಥಿಗಳನ್ನು ಸಾಧನೆಗೆ ಪ್ರೇರೇಪಿಸುವ ಸದುದ್ದೇಶದೊಂದಿಗೆ ”ವಿಜ್ಞಾನಿಯೊಂದಿಗೆ ಸಂವಾದ “ ಎನ್ನುವ […]










