ಹೊಸಂಗಡಿ(ಅ,30): ಸರಕಾರಿ ಪದವಿ ಪೂರ್ವ ಕಾಲೇಜು ಹೊಸಂಗಡಿ ಇದರ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರವು ಸರಕಾರಿ ಪ್ರೌಢ ಶಾಲೆ, ಬಂಗ್ಲೆಗುಡ್ಡೆ ಇಲ್ಲಿ ಅ,29 ರ ಶನಿವಾರ ಉದ್ಘಾಟನೆಗೊಂಡಿತು. ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀ ಭಾಸ್ಕರ ಶೆಟ್ಟಿ ಇವರು ಶಿಬಿರ ಉದ್ಘಾಟನೆ ಮಾಡಿ ವಿದ್ಯಾರ್ಥಿಗಳು ಆತ್ಮ ವಿಶ್ವಾಸ ಹಾಗೂ ಸ್ವಾವಲಂಬಿಯಾಗಿ ಬದುಕಬೇಕು, ಹಾಗೆ ಬದುಕಬೇಕಾದರೆ ಎನ್ ಎಸ್ ಎಸ್ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದರು. ಈ ಕಾರ್ಯಕ್ರಮದ […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಆಪದ್ಬಾಂಧವ ಈಶ್ವರ ಮಲ್ಪೆಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ಉಡುಪಿ(ಅ.30) : ಸಮಾಜ ಸೇವಕ, ಮುಳುಗು ತಜ್ಞ, ಜೀವರಕ್ಷಕ, ಆಪದ್ಬಾಂಧವ ಉಡುಪಿಯ ಈಶ್ವರ ಮಲ್ಪೆಯವರು ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ . ತಮ್ಮ ವೈಯುಕ್ತಿಕ ಹಾಗೂ ಕೌಟುಂಬಿಕ ಬದುಕಿನ ಸಾಕಷ್ಟು ಸವಾಲುಗಳ ನಡುವೆಯೂ ಜನಸೇವೆ ಮಾಡಬೇಕೆಂದು ಸ್ವಯಂ ಪ್ರೇರಣೆಯಿಂದ, ನಿಸ್ವಾರ್ಥ ಸೇವೆಯಲ್ಲಿ ತಲ್ಲೀನರಾಗಿರುವುದರ ಜೊತೆಗೆ ತುರ್ತು ಆಂಬ್ಯುಲೆನ್ಸ್ ಸೇವೆಯಲ್ಲಿ ನಿರತರಾಗಿ ,ನೀರಿಗೆ ಬಿದ್ದವರನ್ನು ಅಪಾಯದಿಂದ ಪಾರುಮಾಡುವ ,ಹಾಗೆಯೇ ನೀರಿಗೆ ಬಿದ್ದು ನಾಪತ್ತೆಯಾಗಿ ಕಣ್ಮರೆಯಾಗಿರುವ ಅದೆಷ್ಟೋ ಮ್ರತ ದೇಹವನ್ನು […]
ಮಾರಣಕಟ್ಟೆಯ ಕರ್ಣ, ಕೊಡುಗೈ ದಾನಿ ಶ್ರೀ ಕೃಷ್ಣಮೂರ್ತಿ ಮಂಜರಿಗೆ ರಾಜ್ಯೋತ್ಸವ ಪ್ರಶಸ್ತಿ
ಕುಂದಾಪುರ (ಅ,30): ಮಾರಣಕಟ್ಟೆಯ ಕರ್ಣ, ಕೊಡುಗೈ ದಾನಿ, ಸಮಾಜಸೇವಕ, ಶಿಕ್ಷಣ ಪ್ರೇಮಿ, ತನ್ನ ದುಡಿಮೆಯ ಅರ್ಧ ಭಾಗಕ್ಕೂ ಹೆಚ್ಚು ಹಣವನ್ನು ಸಮಾಜಕ್ಕೆ ನೀಡುವ ಕೃಷ್ಣಮೂರ್ತಿ ಮಂಜರು ಈ ಬಾರಿಯ ರಾಜ್ಯ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ. ಎಂ.ಎಸ್. ಮಂಜ ಚಾರಿಟೇಬಲ್ ಟ್ರಸ್ಟ್ ಮೂಲಕ ನೂರಾರು ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಕಾರಣರಾದವರು, ತನ್ನ ದುಡಿಮೆ ಹಣವನ್ನು ಸ್ವಾರ್ಥಕ್ಕಾಗಿ ಬಳಸಿಕೊಳ್ಳದೇ ಸಮಾಜಕ್ಕಾಗಿ ವಿನಿಯೋಗಿಸುವ ಧೀಮಂತ ವ್ಯಕ್ತಿತ್ವದ ಶ್ರೀ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರುರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿರೋದು […]
ಎಚ್. ಎಮ್. ಎಮ್ ಮತ್ತು ವಿ.ಕೆ.ಆರ್ ಶಾಲೆಯಲ್ಲಿ ಕನ್ನಡ ಕೋಟಿ ಕಂಠ ಗಾಯನ
ಕುಂದಾಪುರ (ಅ ,28) : ಕನ್ನಡದ ಅಸ್ಮಿತೆಯನ್ನು ಸಾರುವ ವಿನೂತನ ಅಭಿಯಾನ ʼಕೋಟಿ ಕಂಠ ಗಾಯನʼವು ಅ.28 ರಂದು ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರುಗಿತು. ಕನ್ನಡ ,ನಾಡು -ನುಡಿಯ ಮಹತ್ವವನ್ನು ಸಾರುವ ಆರು ಹಾಡುಗಳನ್ನು ವಿದ್ಯಾರ್ಥಿಗಳು ಹಾಗೂ ಬೋಧಕ ಬೋಧಕೇತರ ಸಿಬ್ಬಂದಿಗಳು ಒಕ್ಕೊರಲಿನಿಂದ ಹಾಡಿ ಕನ್ನಡಾಭಿಮಾನವನ್ನು ಮೆರೆದರು.
ಕೋಟಿ ಕಂಠ ಗೀತ ಗಾಯನಕ್ಕೆ ಸಾಕ್ಷಿಯಾದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಮತ್ತು ಶಾಲೆ ಕುಂದಾಪುರ
ಕುಂದಾಪುರ( ಅ,29): ನಾಡು ನುಡಿಯ ಕುರಿತು ಅಭಿಮಾನ ಮೂಡಿಸುವ , ನಮ್ಮ ಪರಂಪರೆಯ ಬಗ್ಗೆ ಹೆಮ್ಮೆ ಮೂಡಿಸುವ ಸಲುವಾಗಿ ಕರ್ನಾಟಕ ಸರ್ಕಾರವು ಅನುಷ್ಠಾನಗೊಳಿಸಿದ “ಕೋಟಿ ಕಂಠ ಗೀತಗಾಯನ” ಕಾರ್ಯಕ್ರಮವನ್ನು ಕುಂದಾಪುರದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಯ ಸಭಾಂಗಣದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಪ್ರಾಂಶುಪಾಲರನ್ನು ಒಳಗೊಂಡoತೆ ಸಮೂಹ ಗೀತಗಾಯನ ಅ.28 ರಂದು ಯಶಸ್ವಿಯಾಗಿ ನೆರವೇರಿತು. ವಿದ್ಯಾರ್ಥಿಗಳೆಲ್ಲರೂ ಸಮವಸ್ತ್ರ ಧರಿಸಿ ಶಿಸ್ತು ಬದ್ಧವಾಗಿ ಸರ್ಕಾರವು ನಿಗದಿಪಡಿಸಿದ ಗೀತೆಗಳಾದ ಜಯಭಾರತ ಜನನಿಯ ತನುಜಾತೆ, […]
ಯಕ್ಷ ಕಲಾವಿದ ,ಅಬ್ಬರದ ಮಹಿಷಾಸುರ ಖ್ಯಾತಿಯ ನಂದೀಶ್ ಜನ್ನಾಡಿ
ನವರಸಗಳಿಂದ ಕೂಡಿದ ಒಂದು ಕಲಾ ಪ್ರಕಾರ ಇದೆ ಎಂದಾದರೆ ಅದು ಯಕ್ಷಗಾನ ಮಾತ್ರ. ಹಾಡುಗಾರಿಕೆ, ವೇಷ ಭೂಷಣಗಳ ಒಳಗೊಂಡ ಒಂದು ಸ್ವತಂತ್ರ ಕಲೆಯಾದ ಯಕ್ಷಗಾನ ಕರ್ನಾಟಕದ ಸಾಂಪ್ರದಾಯಿಕ ಕಲಾ ಪ್ರಕಾರಗಳಲ್ಲಿ ಅತ್ಯಂತ ಪ್ರಮುಖವಾದದ್ದು. ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಚಿಕ್ಕಮಗಳೂರು, ಕೇರಳದ ಕಾಸರಗೋಡು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಯಕ್ಷಗಾನವನ್ನು ಭಕ್ತಿಯಿಂದ ಆರಾಧನಾ ಕಲೆಯಾಗಿ ನಂಬಿದವರು ಇದ್ದಾರೆ. ಯಕ್ಷಗಾನವು ಮೂರು ತಿಟ್ಟುಗಳು ಬಡಗು ತಿಟ್ಟು, ತೆಂಕುತಿಟ್ಟು , ನಡುತಿಟ್ಟು ಎಂದು ವಿಂಗಡಿಸಲ್ಪಟ್ಟಿದ್ದರೂ ಆದರ ಮೂಲ ತತ್ವಗಳು ಮತ್ತು […]
ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ: ಸಹಸ್ರ ವಿದ್ಯಾರ್ಥಿಗಳ ಕಂಠ ಸಿರಿಯಲ್ಲಿ ಕೋಟಿ ಕಂಠ ಗಾಯನ
ಕುಂದಾಪುರ( ಅ,28): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಆಶ್ರಯದಲ್ಲಿ ನಡೆದ ‘ಕೋಟಿ ಕಂಠ ಗಾಯನ’ದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಶ್ರೀ ರಕ್ಷಿತ್ ರಾವ್, ಕಾರ್ಯಕ್ರಮ ಸಂಯೋಜಕರಾದ ಶ್ರೀಮತಿ ರೇಷ್ಮಾ ಶೆಟ್ಟಿ, ಶ್ರೀ ಸುಕುಮಾರ್ ಶೆಟ್ಟಿ ಕಮಲಶಿಲೆ ಹಾಗೂ ಎಲ್ಲಾ ಪ್ರಾಧ್ಯಾಪಕರು, ಶಿಕ್ಷಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಕನ್ನಡ ಪ್ರತಿಜ್ಞಾ ವಿಧಿ ಸ್ವೀಕರಿಸಿ, ಕನ್ನಡ ಮಾತೆಗೆ […]
ಕುಂದಾಪುರ : ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಕೋಟಿ ಕಂಠ ಗಾಯನ
ಕುಂದಾಪುರ (ಅ,28):ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಸ್ಕ್ರತಿ ಇಲಾಖೆಯ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಅ.28 ರಂದು ಕುಂದಾಪುರದ ಗಾಂಧಿ ಮೈದಾನದಲ್ಲಿ ಆಯೋಜಿಸಲಾದ ‘ ಕೋಟಿ ಕಂಠ ಗಾಯನ ‘ ಕಾರ್ಯಕ್ರಮದಲ್ಲಿ ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡು ಕನ್ನಡ ನಾಡು- ನುಡಿಯ ಹಿರಿಮೆಗೆ ಸಂಬಂಧಿಸಿದ ಹಾಡುಗಳನ್ನು ಹಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನವೀನ್ ಕುಮಾರ ಶೆಟ್ಟಿಯವರು ಹಾಗೂ ಬೋಧಕ- ಬೋಧಕೇತರ ಸಿಬ್ಬಂಧಿಗಳು ಕಾರ್ಯಕ್ರಮದಲ್ಲಿ […]
ಎಂ.ಜಿ.ಎಂ. ಕಾಲೇಜಿನಲ್ಲಿ 67ನೇ ಕರ್ನಾಟಕ ರಾಜ್ಯೋತ್ಸವದ ಕೋಟಿ ಕಂಠ ಗಾಯನ
ಉಡುಪಿ(ಅ,28): ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕೋಟಿ ಕಂಠ ಗಾಯನ ಕಾರ್ಯಕ್ರಮವು ಕಾಲೇಜಿನ ನೂತನ ರವೀಂದ್ರ ಮಂಟಪದ ಬಳಿ ಬೆಳಿಗ್ಗೆ 11 ಗಂಟೆಗೆ ಜರುಗಿತು. ಕಾಲೇಜಿನ ಪ್ರಾಂಶುಪಾಲ ಪ್ರೊ. ಲಕ್ಷ್ಮೀನಾರಾಯಣ ಕಾರಂತ ಕಾರ್ಯಕ್ರಮದ ಬಗ್ಗೆ ವಿವರಣೆ ನೀಡಿ ಕೋಟಿ ಕಂಠ ಗಾಯನಕ್ಕೆ ಚಾಲನೆ ನೀಡಿದರು. ಪದವಿ ಪೂರ್ವ ವಿಭಾಗದ ಪ್ರಾಂಶುಪಾಲೆ ಮಾಲತಿದೇವಿ ಎ. ಶುಭಹಾರೈಸಿದರು. ಸಂಸ್ಕೃತ ವಿಭಾಗದ ಮುಖ್ಯಸ್ಥೆ ಡಾ| ವಸುಮತಿ ಭಟ್ ನೇತೃತ್ವದಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ಕನ್ನಡದ ಆರು […]
ಕುಂದಾಪುರ: ಡಾ | ಬಿ.ಬಿ.ಹೆಗ್ಡೆ ಕಾಲೇಜಿನಲ್ಲಿ ದೀಪಾವಳಿ ಸಂಭ್ರಮಾಚರಣೆ
ಕುಂದಾಪುರ (ಅ,27): ನೆಲದ ಸೊಗಡಿನ ಹಬ್ಬ ದೀಪಾವಳಿ. ಇದೊಂದು ಜನಪದ ಆಚರಣೆ, ಕೃಷಿ ಸಂಸ್ಕೃತಿಯನ್ನು ಬಿಂಬಿಸುದರ ಜೊತೆಗೆ ಕತ್ತಲೆಯ ಮೇಲೆ ಬೆಳಕಿನ ವಿಜಯವನ್ನು ಸಾಧಿಸುವ ಹಬ್ಬ ಎಂದು ಹಿರಿಯ ಜಾನಪದ ಕಲಾವಿದರಾದ ಶ್ರೀ ನಾಗರಾಜ ಪಾಣ ಮೂಡುವಾಲ್ತೂರು ಅವರು ಹೇಳಿದರು. ಅವರು ಅಕ್ಟೊಬರ್25 ರಂದು ಕುಂದಾಪುರದ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಆಯೋಜಿಸಿದ “ದೀಪಾವಳಿ ಆಚರಣೆ” ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೋ. […]










