ತಲ್ಲೂರು(ಆ.05): ಸಮಾಜ ಸೇವಕ, ಶಿಕ್ಷಣ ಪ್ರೇಮಿ, ಧಾರ್ಮಿಕ, ಸಾಮಾಜಿಕ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಅನನ್ಯ ಕೊಡುಗೆ ನೀಡಿರುವ ನಾಡೋಜ ಡಾ. ಜಿ.ಶಂಕರ್ ರವರ 67 ನೇ ಹುಟ್ಟು ಹಬ್ಬವನ್ನು ಮೊಗವೀರ ಯುವ ಘಟನೆಯ ಹೆಮ್ಮಾಡಿ ಘಟಕದ ಆಶ್ರಯದಲ್ಲಿ ತಲ್ಲೂರಿನ ವಿಶೇಷ ಚೇತನ ಮಕ್ಕಳ ಶಾಲೆಯಲ್ಲಿ ಅ .05 ರಂದು ಆಚರಿಸಲಾಯಿತು. ಕೇಕ್ ಕತ್ತರಿಸಿ ವಿದ್ಯಾರ್ಥಿಗಳಿಗೆ ಸಿಹಿ ಹಂಚುವುದರ ಜೊತೆಗೆ ಕಲಿಕಾ ಸಾಮಾಗ್ರಿಗಳನ್ನು ವಿತರಿಸುವುದರ ಜೊತೆಗೆ ವಿಶೇಷ ಭೋಜನ ವ್ಯವಸ್ಥೆ ಮಾಡಲಾಯಿತು.ಮೊಗವೀರ […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಕುಂದಾಪುರದ ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧಿ ಮತ್ತು ಶಾಸ್ತ್ರೀ ಜಯಂತಿ ಆಚರಣೆ
ಕುಂದಾಪುರ (ಅ.04):ಗಾಂಧಿ ಮತ್ತು ಶಾಸ್ತ್ರೀ ಇಬ್ಬರು ರಾಷ್ಟ್ರ ನಾಯಕರ ನಾಯಕತ್ವದ ಗುಣಗಳು ಮತ್ತು ದೇಶದ ಬಗೆಗಿನ ಕಾಳಜಿ ಅವರ ಬಗ್ಗೆ ನಮ್ಮ ವೈಯುಕ್ತಿಕ ಒಲವು-ನಿಲುವುಗಳನ್ನು ಮೀರಿ ನಿಲ್ಲುತ್ತವೆ.ಈ ನಿಟ್ಟಿನಲ್ಲಿ ಮಹಾತ್ಮಾ ಗಾಂಧೀ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಯವರನ್ನು ನಾವೆಲ್ಲರೂ ಸದಾ ನೆನಪಿಸಿಕೊಳ್ಳಬೇಕು” ಎಂದು ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನವೀನ್ ಕುಮಾರ ಶೆಟ್ಟಿಯವರು ತಿಳಿಸಿದರು. ಗಾಂಧೀಜಿ- ಶಾಸ್ತ್ರೀಜಿ ಜಯಂತಿಯ ಅಂಗವಾಗಿ ಇಬ್ಬರೂ ಮಹಾನ್ […]
ಸ್ವಾತಂತ್ರ್ಯ ಹೋರಾಟಗಾರ ತಲ್ಲೂರು ಎಸ್ ಎನ್ ಸುಬ್ಬಣ್ಣ ಗುಪ್ತ ಮನೆಗೆ ನಾಮಫಲಕ ಅನಾವರಣ ಕಾರ್ಯಕ್ರಮ
ತಲ್ಲೂರು(ಅ.04): ಸ್ವರಾಜ್ಯ 75 ಸಂಘಟನೆಯ ಆಶ್ರಯದಲ್ಲಿ ಹಮ್ಮಿಕೊಂಡಿರುವ ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ನಾಮಫಲಕ ಅಳವಡಿಕೆ ಅಭಿಯಾನದ ಅಂಗವಾಗಿ ಅಕ್ಟೋಬರ್ 2 ರಂದು ಕುಂದಾಪುರ ತಾಲೂಕು ಸ್ವಾತಂತ್ರ್ಯ ಹೋರಾಟಗಾರರಾಗಿರುವ ಎಸ್.ಎನ್. ಸುಬ್ಬಣ್ಣ ಗುಪ್ತ ಇವರ ಮನೆಗೆ ನಾಮ ಫಲಕ ಅಳವಡಿಸಲಾಯಿತು. ” ಸ್ವರಾಜ್ಯ 75 ರ ” 18 ನೇ ಮನೆ ಯಲ್ಲಿ ವಿಶ್ವ ದಾಖಲೆಯ ಯೋಗ ಪಟು ಶ್ರೀ ನಿರಂಜನ್ ಶೆಟ್ಟಿ ತಲ್ಲೂರು ಇವರಿಂದ ನಾಮ ಫಲಕ ಅನಾವರಣ ನೆರವೇರಿಸಿದರು. […]
ಸಂತ ಮೇರಿ ಕಾಲೇಜು, ಶಿರ್ವ ” ಸಿ ಪ್ರೋಗ್ರಾಮ್ ಮೇಡ್ ಈಜಿ” – ಪ್ರಶ್ನೋತ್ತರ ಮಾಲಿಕೆ ಪುಸ್ತಕ ಬಿಡುಗಡೆ
ಶಿವ೯(ಅ,4):: ಇಲ್ಲಿನ ಶಿರ್ವ ಸಂತಮೇರಿ ಮಹಾವಿದ್ಯಾಲಯದ ಗಣಕ ವಿಜ್ಞಾನ ವಿಭಾಗದ ವತಿಯಿಂದ ಏರ್ಪಡಿಸಿದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಕಾಲೇಜಿನ ಕಚೇರಿ ಅಧೀಕ್ಷಕ್ಕಿ ಶ್ರೀಮತಿ ಡೋರಿನ್ ಡೀಸಿಲ್ವ ಅವರು ಉಪನ್ಯಾಸಕ ಕೆ.ಪ್ರವೀಣ್ ಕುಮಾರ್ರವರ “ಸಿ ಪ್ರೋಗ್ರಾಮ್ ಮೇಡ್ ಈಜಿ” – ಪ್ರಶ್ನೋತ್ತರ ಮಾಲಿಕೆ ಪುಸ್ತಕ ಬಿಡುಗಡೆಗೊಳಿಸಿದರು. ಪ್ರತಿಯೊಂದು ಪುಸ್ತಕ ಒಂದು ಒಳ್ಳೆಯ ಸ್ನೇಹಿತ, ಪುಸ್ತಕಗಳ ಓದುವ ಮೂಲಕ ಅನೇಕ ವಿಷಯಗಳನ್ನು ಸಂಗ್ರಹಿಸಬಹುದು ಮತ್ತು ವಿವಿಧ ಜ್ಞಾನಾರ್ಜನೆಗಳನ್ನು ವಿದ್ಯಾರ್ಥಿಗಳು ವೃದ್ಧಿಸಿಕೊಳ್ಳಬಹುದು.ಪರೀಕ್ಷಾ […]
ಕುಂದಾಪುರ ತಾಲೂಕಿನ ವಿಶೇಷ ಚೇತನರ ಸಂಪನ್ಮೂಲ ಕೇಂದ್ರಕ್ಕೆ ಕೆ.ಎಸ್.ಲತಾ ಕುಮಾರಿ ಭೇಟಿ
ಕುಂದಾಪುರ( ಅ,4): ತಾಲೂಕಿನ ವಿಶೇಷ ಚೇತನರ ಸಂಪನ್ಮೂಲ ಕೇಂದ್ರಕ್ಕೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಮಾನ್ಯ ರಾಜ್ಯ ಆಯುಕ್ತರು ಹಾಗೂ ನಿರ್ದೇಶಕರಾದ ಕೆ.ಎಸ್.ಲತಾ ಕುಮಾರಿ ಇತ್ತೀಚೆಗೆ ಭೇಟಿ ನೀಡಿದರು . ಈ ಸಂದರ್ಭದಲ್ಲಿ ಅವರನ್ನು ತಾಲೂಕು MRW VRW,URW ನೌಕರರ ಸಂಘದಿಂದ ಸ್ವಾಗತಿಸಿ ,ಅಭಿನಂದಿಸಿದರು. ಈ ಸಂದರ್ಭದಲ್ಲಿ ತಾಲೂಕು ವಿಶೇಷ ಚೇತನ ಸಂಪನ್ಮೂಲ ವ್ಯಕ್ತಿ ಹಾಗೂ ಯೂನಿಯನ್ ಗೌರವಾಧ್ಯಕ್ಷರಾದ ಶ್ರೀ ಮಂಜುನಾಥ ಹೆಬ್ಬಾರ್, ತಾಲೂಕು ನೌಕರರ ಸಂಘದ […]
ಶಿವಮೊಗ್ಗ ಮಕ್ಕಳ ದಸರಾ 2022: ಕರಾಟೆ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದ ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿಗಳು
ಶಿವಮೊಗ್ಗ (ಸೆ,2022): ಶಿವಮೊಗ್ಗ ಮಹಾನಗರ ಪಾಲಿಕೆ, ಕರ್ನಾಟಕ ರಾಜ್ಯ ಕರಾಟೆ ಅಸೋಸಿಯೇಷನ್ (ರಿ) ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ (ರಿ), ಶಿವಮೊಗ್ಗ ಇವರ ಪ್ರಯೋಜಕತ್ವದಲ್ಲಿ ಶಿವಮೊಗ್ಗ ಮಕ್ಕಳ ದಸರಾ 2022 ರ ಅಂಗವಾಗಿ ಸೆಪ್ಪಂಬರ್ 27 ರಂದು ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 2 ನೇ ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕುಂದಾಪುರದ ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ. ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ […]
ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಗಾoಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ
ಕುಂದಾಪುರ(ಅ,02) ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನ ಘಟಕದ ಆಶ್ರಯದಲ್ಲಿ ನಡೆದ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ|ಕೆ.ಉಮೇಶ್ ಶೆಟ್ಟಿಯವರು ಮಾತನಾಡಿ ಗಾಂಧಿ ಹಾಗೂ ಶಾಸ್ತ್ರಿ ಇಬ್ಬರೂ ನುಡಿದಂತೆ ನಡೆದವರು ಅವರ ತತ್ವ ಬೋಧನೆಗಳು ಇಂದಿಗೂ ಪ್ರಸ್ತುತ. ಸಮಕಾಲೀನವಾಗಿ ಅವರು ಸಾದರ ಪಡಿಸಿದ ಮೌಲ್ಯಗಳು ಇನ್ನಷ್ಟು ಅಧ್ಯಯನ ಶೀಲತೆಗೆ ಒಳಗಾಗಲಿ ಎಂದರು. ಕಾಲೇಜಿನ ಎನ್.ಎಸ್.ಎಸ್. ಯೋಜನಾಧಿಕಾರಿ ಹಾಗೂ […]
ಎಸ್ ವಿ ಪಿ ಯು ಕಾಲೇಜು ಗಂಗೊಳ್ಳಿ : ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ
ಗಂಗೊಳ್ಳಿ (ಸೆ.01): ಎನ್ಎಸ್ಎಸ್ ಮೂಲಕ ಸಿಗುವ ಅವಕಾಶಗಳನ್ನು ಸಮರ್ಪಕವಾಗಿ ವಿದ್ಯಾರ್ಥಿಗಳು ಬಳಸಿಕೊಂಡರೆ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯ. ವ್ಯಕ್ತಿತ್ವ ವಿಕಸನದ ಜೊತೆಗೆ ಉತ್ತಮ ಸಮಾಜವನ್ನು ಕಟ್ಟುವಲ್ಲಿಯೂ ಎನ್ಎಸ್ಎಸ್ ಕೊಡುಗೆಯನ್ನು ನೀಡುತ್ತದೆ ಎಂದು ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ನಿಯಮಿತದ ಅಧ್ಯಕ್ಷರಾದ ಶ್ರೀ ಎಚ್ ಗಣೇಶ್ ಕಾಮತ್ ಅವರು ಅಭಿಪ್ರಾಯ ಪಟ್ಟರು. ಅವರು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು, ಗಂಗೊಳ್ಳಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕವು ಸರಸ್ವತಿ ವಿದ್ಯಾಲಯ ಅಂಗ್ಲ ಮಾಧ್ಯಮ […]
ಕಾಂತಾರ…..ಇದು ದೈವಲೀಲೆಯ ಅವತಾರ…..
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಪಶ್ಚಿಮ ಘಟ್ಟದ ತಪ್ಪಲಿನ ಕೆರಾಡಿ ಎನ್ನುವ ಹಳ್ಳಿಯೊಂದರಲ್ಲಿ ಚಿತ್ರೀಕರಣಗೊಂಡು, ಅದೇ ಹಳ್ಳಿಗರ ಮನೆಮಗ ಸ್ಯಾಂಡಲ್ ವುಡ್ ನ ಖ್ಯಾತ ನಟ -ನಿರ್ದೇಶಕ ರಿಷಬ್ ಶೆಟ್ಟಿಯವರು ನಾಯಕನಾಗಿ ನಟಿಸಿರುವ ಹಾಗೂ ಕೆ.ಜಿ.ಫ್ ಖ್ಯಾತಿಯ ಹೊಂಬಾಳೆ ಫಿಲ್ಸಂ ರವರ ನಿರ್ಮಾಣದಲ್ಲಿ ಮೂಡಿ ಬಂದ ಕಾಂತಾರ ಚಿತ್ರ ಕನ್ನಡದ ಸಿನಿಮಾರಂಗದಲ್ಲಿ ಹೊಸ ಅಲೆಯನ್ನು ಸ್ರಷ್ಠಿಸಿದೆ. ದೈವಾರಾಧನೆಯ ಜೊತೆಗೆ ಭೂ ಮಾಲೀಕತ್ವದ ಸಂಘರ್ಷದೊದಿಗೆ ಹೆಣೆದು ಕೊಂಡಿರುವ ಸಿನೆಮಾದ ಕಥೆ ತುಳುನಾಡು […]
ಎಕ್ಸೆಲೆಂಟ್ ಪ್ರೌಢ ಶಾಲೆ ಸುಣ್ಣಾರಿ : ಹಾಲಾಡಿ ವೃತ್ತಮಟ್ಟದ ಅಥ್ಲೇಟಿಕ್ಸ್ ನಲ್ಲಿ ಎರಡು ಚಿನ್ನದ ಪದಕ
ಕುಂದಾಪುರ(ಸೆ,30): ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಮಾಸೆಬೈಲು ಇವರ ಜಂಟಿ ಆಶ್ರಯದಲ್ಲಿ ನಡೆದ ಪ್ರಾಥಮಿಕ ಶಾಲಾ ಹಾಲಾಡಿ ಸಂಯೋಜಕ ವೃತ್ತ ಮಟ್ಟದ ಕ್ರೀಡಾ ಕೂಟದಲ್ಲಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಮತ್ತು ಶಾಲೆಯ ವಿದ್ಯಾರ್ಥಿಗಳಾದ ಅಕ್ಷರ್ ಎನ್ ಶೆಟ್ಟಿ ಬಾಲಕರ ವಿಭಾಗದ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಮತ್ತು ಸರ್ವಜಿಷ್ಣು ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ. ಇವರನ್ನು […]










