ಕೋಟೇಶ್ವರ( ಆ,12): ಬೀಜಾಡಿ ಕಡಲತೀರದಲ್ಲಿ ಮೊಗವೀರ ಯುವ ಸಂಘಟನೆ(ರಿ),ಉಡುಪಿ ಇದರ ಕೋಟೇಶ್ವರ ಘಟಕ ನೇತ್ರತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಸಾಮೂಹಿಕ ಸಮುದ್ರ ಪೂಜೆ ನಡೆಯಿತು. ಗೋಪಾಡಿ ಶ್ರೀ ಬ್ರಹ್ಮಲಿಂಗೇಶ್ವರ ಮತ್ತು ಶ್ರೀ ಚಿಕ್ಕುಅಮ್ಮ ದೇವರಿಗೆ ಪೂಜೆ ಸಲ್ಲಿಸಿ ಸುಮಾರು 250 ಜನ ಕಾಲ್ನಡಿಗೆಯಲ್ಲಿ ಮೆರವಣಿಗೆಯ ಮೂಲಕ ಸಮುದ್ರ ತೀರಕ್ಕೆ ತೆರಳಿ ಸಮುದ್ರ ದೇವನಿಗೆ ಪೂಜೆಸಲ್ಲಿಸಿ ಬಾಗೀನ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಸಂಘಟನೆಯ ಪದಾಧಿಕಾರಿಗಳು, ಗುರಿಕಾರರುಗಳು, ಭಾಗದ ಮೀನುಗಾರರು ಉಪಸ್ತಿತರಿದ್ದರು. […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಶಿಕ್ಷ ಪ್ರಭ ಅಕಾಡೆಮಿ ಕುಂದಾಪುರ: ಸಿ ಎ ಫೌಂಡೇಶನ್ ಪರೀಕ್ಷೆ ಯಲ್ಲಿ ಉತ್ಕ್ರಷ್ಟ ಸಾಧನೆ
ಕುಂದಾಪುರ(ಅ,11): ಸಿಎ/ಸಿಎಸ್ ಪ್ರೊಫೆಶನಲ್ ಕೋರ್ಸುಗಳ ಹೆಸರಾಂತ ತರಬೇತಿ ಸಂಸ್ಥೆ ಕುಂದಾಪುರ ಕುಂದೇಶ್ವರ ದೇವಸ್ಥಾನ ರಸ್ತೆಯ ಸಿರಿ ಬಿಲ್ಡಿಂಗ್ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷ ಪ್ರಭ ಅಕಾಡೆಮಿ ಆಫ್ ಕಾಮರ್ಸ್ ಎಜ್ಯುಕೇಶನ್(ಸ್ಪೇಸ್)ನ ವಿದ್ಯಾರ್ಥಿಗಳು ಇನ್ಸ್ಟಿಟ್ಯೂಟ್ ಆಫ್ ಚಾರ್ಟ್ರಡ್ ಅಕೌಂಟೆoಟ್ಸ್ ಆಫ್ ಇಂಡಿಯ ಜೂನ್ 2022 ರಲ್ಲಿ ನೆಡೆಸಿದ ಸಿ ಎ ಫೌಂಡೇಶನ್ ಪರೀಕ್ಷೆಯಲ್ಲಿ ಅನೇಕ ವಿದ್ಯಾರ್ಥಿಗಳು ಉತ್ತಮ ಅಂಕಗಳೊoದಿಗೆ ತೇರ್ಗಡೆ ಹೊಂದುದರ ಮೂಲಕ ಶ್ರೇಷ್ಠ ಸಾಧನೆಗೈದಿದ್ದಾರೆ. ಸಂಸ್ಥೆಯ ೬ ವಿದ್ಯಾರ್ಥಿಗಳು ಪ್ರಥಮ ಹಂತದಲ್ಲಿ […]
ಎಂಜಿಎಂ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಪ್ರೊ.ಲಕ್ಷ್ಮೀನಾರಾಯಣ ಕಾರಂತ ಅಧಿಕಾರ ಸ್ವೀಕಾರ
ಉಡುಪಿ(ಆ,10): ಎಂಜಿಎಂ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಅರ್ಥಶಾಸ್ತ್ರ ವಿಭಾಗ ಮುಖ್ಯಸ್ಥ, ಸಾಲಿಗ್ರಾಮದ ಚಿತ್ರಪಾಡಿಯ ಪ್ರೊ.ಲಕ್ಷ್ಮೀನಾರಾಯಣ ಕಾರಂತ ಅಧಿಕಾರ ಸ್ವೀಕರಿಸಿದರು. 1992ರಲ್ಲಿ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ವೃತ್ತಿಯನ್ನು ಪ್ರಾರಂಭಿಸಿ, 1998ರಲ್ಲಿ ಎಂಜಿಎಂಗೆ ವರ್ಗಾವಣೆಗೊಂಡು ಕಳೆದ 24 ವರ್ಷದಿಂದ ಅರ್ಥಶಾಸ್ತ್ರ ಪ್ರಾಧ್ಯಾಪಕರಾಗಿ, ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿರುತ್ತಾರೆ. ಕಾಲೇಜಿನ ಎನ್ನೆಸ್ಸೆಸ್, ರೆಡ್ ಕ್ರಾಸ್ ಅಧಿಕಾರಿಯಾಗಿ, ಕಾಲೇಜಿನ ಸ್ಟಾಫ್ ಕ್ಲಬ್ಬಿನ ಸಂಚಾಲಕರಾಗಿ ಕರ್ತವ್ಯ ನಿರ್ವಹಿಸಿದ್ದಾರೆ.
ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ ಯಲ್ಲಿ ಕ್ರಿಯೇಟಿವ್ ಕಾಲೇಜ್ ಗೆ ಪ್ರಥಮ ಸ್ಥಾನ
ಉಡುಪಿ (ಆ,07): 75 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಆಯೋಜಿಸಲಾಗಿರುವ ಉಡುಪಿ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಸುಮಂತ್ ಶೆಟ್ಟಿ ಮತ್ತು ನಿಹಾರ್ ಭಟ್ ಪ್ರಥಮ ಸ್ಥಾನ ಗಳಿಸಿದ್ದಾರೆ. ಆಜಾದಿ ಕಾ ಅಮೃತ್ ಮಹೋತ್ಸವ್ʼ ನ ಸುಸಂದರ್ಭದಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ಉಡುಪಿಯ ಸರಕಾರಿ ಪದವಿ ಪೂರ್ವ ಕಾಲೇಜು, ಮಲ್ಪೆಯಲ್ಲಿ ದಿನಾಂಕ : ಆಗಸ್ಟ್ 3 ರಂದು ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಲಾಗಿತ್ತು. ರಸಪ್ರಶ್ನೆ […]
ಶ್ರೀ ಗೋವಿಂದ ಬಾಬು ಪೂಜಾರಿಯವರಿಗೆ ವಿಜಯರತ್ನ-2022 ಪ್ರಶಸ್ತಿ ಪ್ರದಾನ
ಕುಂದಾಪುರ(ಅ,7): ವಿಆರ್ಎಲ್ ಸಮೂಹ ಸಂಸ್ಥೆಯ ವಿಜಯವಾಣಿ ಮತ್ತು ದಿಗ್ವಿಜಯ 24X7 ನ್ಯೂಸ್ ಚಾನಲ್ ವತಿಯಿಂದ ಶಿಕ್ಷಣ, ಉದ್ಯಮ, ಆರೋಗ್ಯ, ಪರಿಸರ ಕಾಳಜಿ, ಸಮಾಜಸೇವೆ ಸೇರಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ನಾಡಿನ 42 ಸಾಧಕರಿಗೆ ಕೊಡಮಾಡುವ ‘ವಿಜಯರತ್ನ-2022’ ಪ್ರಶಸ್ತಿಗೆ ಯಶಸ್ವಿ ಉದ್ಯಮಿ, ಸಮಾಜಸೇವಕ ,ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ) ಉಪ್ಪುಂದ ಇದರ ಅಧ್ಯಕ್ಷರಾದ ಡಾ.ಗೋವಿಂದ ಬಾಬು ಪೂಜಾರಿಯವರು ಭಾಜನರಾದರು. ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಕಾರ್ಯಕ್ರಮವನ್ನು […]
ಸೇವೆಯಿಂದ ನಿವ್ರತ್ತರಾದ ನೆಂಪು ಅಂಗನವಾಡಿ ಶಿಕ್ಷಕಿ ಭಾರತಿ ಶೆಟ್ಟಿಯವರಿಗೆ ಬಿಳ್ಕೋಡುಗೆ
ವಂಡ್ಸೆ (ಜು, 30) : ಸುಧಿರ್ಘ 25 ವರ್ಷಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿ ಜು,30 ರಂದು ಸೇವೆಯಿಂದ ನಿವ್ರತ್ತರಾದ ನೆಂಪು ಅಂಗನವಾಡಿ ಶಿಕ್ಷಕಿ ಭಾರತಿ ಶೆಟ್ಟಿಯವರನ್ನು ಶ್ರೀ ವಿನಾಯಕ ಯುವಕ ಸಂಘ (ರಿ) ನೆಂಪು ಹಾಗೂ ನೆಂಪು ಗ್ರಾಮಸ್ಥರ ವತಿಯಿಂದ ಅವರ ಸೇವೆಯನ್ನು ಗುರುತಿಸಿ ಬೀಳ್ಕೊಡುಗೆಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ನೆಂಪು ಇದರ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ ನೆಂಪುವಹಿಸಿದ್ದರು. […]
ಕಾಮನವೆಲ್ತ್ ಕ್ರೀಡಾಕೂಟ : ಕುಂದಾಪುರದ ಗುರುರಾಜ್ ಪೂಜಾರಿಗೆ ಕಂಚಿನ ಪದಕ
ಕುಂದಾಪುರ (ಜು, 30) : ಬರ್ಮಿಂಗ್ಹ್ಯಾಮ್ ನಲ್ಲಿ ನಡೆಯುತ್ತಿರುವ ಕಾಮನವೆಲ್ತ್ ಕ್ರೀಡಾಕೂಟದ 61 ಕೆ.ಜಿ ವೇಟ್ಲಿಫ್ಟಿಂಗ್ ವಿಭಾಗದಲ್ಲಿ ಉಡುಪಿ ಜಿಲ್ಲೆಯ ಕುಂದಾಪುರದ ವಂಡ್ಸೆ ಮೂಲದ ಗುರುರಾಜ್ ಪೂಜಾರಿ ಜೆಡ್ಡು ಕಂಚಿನ ಪದಕ ಪಡೆದು ಸಾಧನೆಗೈದಿದ್ದಾರೆ.ಒಟ್ಟು 269 ಕೆಜಿ ಎತ್ತಿರುವ ಗುರುರಾಜ್ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಸಾಧನೆಗೈದು ದೇಶಕ್ಕೆ ಕೀರ್ತಿ ತಂದಿದ್ದಾರೆ.
ಸಿ.ಇ.ಟಿ ಫಲಿತಾಂಶ : ಕಾರ್ಕಳ ಕ್ರಿಯೇಟಿವ್ ಪಿ ಯು ಕಾಲೇಜು ಪ್ರಥಮ ವರ್ಷದಲ್ಲಿಯೇ ಅಮೋಘ ಸಾಧನೆ
ಕಾರ್ಕಳ (ಜು, 30) : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಜೂನ್ -2022 ರಲ್ಲಿ ನಡೆಸಿದ ವಿವಿಧ ವೃತ್ತಿಪರ ಕೋರ್ಸ್ಗಳಿಗೆ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿ ಯು ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸಿ ರಾಜ್ಯದ ವಿವಿಧ ಪ್ರತಿಷ್ಠಿತ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಅರ್ಹತೆಗಳಿಸಿದ್ದಾರೆ. ರಾಜ್ಯದ ಕೃಷಿ ವಿಶ್ವ ವಿದ್ಯಾನಿಲಯಗಳಿಗೆ ನಡೆಸುವ ಪ್ರಾಯೋಗಿಕ ಪರೀಕ್ಷೆಯಲ್ಲಿ ಉಪಾಸನ ಬಿ ಪಿ ರಾಜ್ಯಕ್ಕೆ 42 ನೇ ರ್ಯಾಂಕ್ ಹಾಗೂ ಪಶುವೈದ್ಯಕೀಯ […]
ಡಾ|ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ಕಾರ್ಗಿಲ್ ವಿಜಯ ದಿವಸ್ ಆಚರಣೆ
ಕುಂದಾಪುರ(ಜು,27): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಸಿ.ಸಿ. ಘಟಕದ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಆಚರಿಸಲಾಯಿತು.ಈ ಕಾರ್ಯಕ್ರಮದಲ್ಲಿ ಭಾರತೀಯ ಸೈನ್ಯದಲ್ಲಿ ಸೇವೆ ಸಲ್ಲಿಸುತ್ತಿರುವ ಯೋಧ ಬಸ್ರೂರಿನ ಶ್ರೀ ದೀಪಕ್ ಕುಮಾರ್ರವರು ವಿದ್ಯಾರ್ಥಿಗಳಿಗೆ ಸೈನ್ಯದ ಸೇವೆಯ ಕುರಿತು ತಿಳಿಸುವುದರ ಜೊತೆಗೆ ಸೈನ್ಯಕ್ಕೆ ಸೇರಲು ಬೇಕಾದ ಸಲಹೆಯನ್ನು ನೀಡಿದರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ. ಉಮೇಶ್ ಶೆಟ್ಟಿ ಅಧ್ಯಕ್ಷರಾಗಿ ಉಪಸ್ಥಿತರಿದ್ದರು,.ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಪ್ರಾಸ್ತಾವಿಕ […]
ಡಾ|ಬಿ.ಬಿ.ಹೆಗ್ಡೆ ಕಾಲೇಜು ಕುಂದಾಪುರ: ರಕ್ಷಕ -ಶಿಕ್ಷಕ ಸಭೆ
ಕುಂದಾಪುರ(ಜು,27): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಇದರ ರಕ್ಷಕ – ಶಿಕ್ಷಕ ಸಂಘದ ಸದಸ್ಯರಿಗೆ ನ್ಯಾಕ್ ಪೂರ್ವಭಾವಿ ಸಭೆ ಜು,26 ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ‘ ಈ ಕಾರ್ಯಕ್ರಮದಲ್ಲಿ ನ್ಯಾಕ್ ಟೀಮ್ ಭೇಟಿಯ ಕುರಿತು ಚರ್ಚಿಸಲಾಯಿತು.ಸಭೆಯ ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲ ಪ್ರೊ.ಕೆ. ಉಮೇಶ್ ಶೆಟ್ಟಿ ಮಾತನಾಡಿ, ಶೀಘ್ರವೇ ಕಾಲೇಜಿಗೆ ನ್ಯಾಕ್ ಟೀಮ್ ಭೇಟಿ ನೀಡಲಿದ್ದು .ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ […]










