ಕುಂದಾಪುರ (ಏ.19): ಸಮುದಾಯ ಕುಂದಾಪುರ ಇವರ ಆಶ್ರಯದಲ್ಲಿ ದಿ.ಕಾರ್ಕಡ ರಾಮಚಂದ್ರ ಉಡುಪ ನೆನಪಿನ ಕಾರ್ಯಕ್ರಮ “ಚುಕ್ಕಿ ಚಂದ್ರಮ”- ಮಕ್ಕಳಿಗಾಗಿ ಒಂದು ದಿನದ ವಿಜ್ಞಾನ ಮೇಳ ವನ್ನು ಇದೇ ಏ,22 ರಂದು ಪೂರ್ವಾಹ್ನ 9.30 ರಿಂದ ಅಪರಾಹ್ನ 4.30 ತನಕ ಕುಂದಾಪುರದ ಸಂತ ಜೊಸೆಫ್ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದೆ. 6 ರಿಂದ 10ನೆಯ ತರಗತಿಯವರೆಗಿನ ನಲವತ್ತು ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದ್ದು, ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲು ಶ್ರೀಬಾಲಗಂಗಾಧರ ಶೆಟ್ಟಿ , ಉದಯ ಗಾಂವಕಾರ್ […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಶ್ವೇತಾ ಪೂಜಾರಿಗೆ ಚಿನ್ನದ ಪದಕ
ಕುಂದಾಪುರ( ಏ.18): ಬೆಂಗಳೂರಿನ ಇಂಟರ್ ನ್ಯಾಷನಲ್ ಸ್ಕೂಲ್ ಆಫ್ ಬಿಸಿನೆಸ್ ಅಂಡ್ ರಿಸರ್ಚ್ ನ ವಿದ್ಯಾರ್ಥಿನಿ ಶ್ವೇತಾ ಪೂಜಾರಿ ಬೆಂಗಳೂರು ವಿಶ್ವವಿದ್ಯಾನಿಲಯದ 2019- 21 ರ ಎಂಬಿಎ ಪರೀಕ್ಷೆಯ ಮಾರ್ಕೆಟಿಂಗ್ ಮತ್ತು ಫೈನಾನ್ಸ್ ವಿಭಾಗದ ಪರೀಕ್ಷೆಯಲ್ಲಿ ಕಾಲೇಜಿಗೆ ಅತ್ಯಧಿಕ ಅಂಕ ಗಳಿಸುವ ಮೂಲಕ ಚಿನ್ನದ ಪದಕವನ್ನು ಗಳಿಸಿರುತ್ತಾರೆ. ಪಠ್ಯಕ್ರಮದ ಹೊರತಾಗಿ ಸಮಾಜಕ್ಕೆ ತನ್ನದೇ ಆದ ಕೊಡುಗೆಯನ್ನು ನೀಡಿರುವ ವಿದ್ಯಾರ್ಥಿಗಳಿಗೆ ನೀಡಲಾಗುವ ಐ ಎಸ್ ಬಿ ಆರ್ ಕಾಲೇಜಿನ ಜೆಮ್ಸ್ ಮತ್ತು […]
ಡಾ. ಬಿ.ಬಿ. ಹೆಗ್ಡೆ ಕಾಲೇಜಿಗೆ 2 ರ್ಯಾಂಕ್ & 5 ಚಿನ್ನದ ಪದಕ
ಕುಂದಾಪುರ ( ಏ.18): ಮಂಗಳೂರು ವಿ.ವಿಯ 2020-21 ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ,ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ .ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಿದ್ಯಾರ್ಥಿಗಳಾದ ಕಾವ್ಯ ದೇವಾಡಿಗ ಹಾಗೂ ಸುಮಧುರ ಶೆಟ್ಟಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದುವುದರ ಜೊತೆಗೆ ಬಿ.ಸಿ.ಎ ಪದವಿಯಲ್ಲಿ ಮೂರನೇ ರ್ಯಾಂಕ್ ಹಾಗೂ ನಾಲ್ಕನೇ ರ್ಯಾಂಕ್ ಪಡೆದುಕೊಂಡಿದ್ದಾರೆ. ಹಾಗೆಯೇ ಅಂತಿಮ ಪದವಿ ಬಿ.ಕಾಂ ಫೈನಾನ್ಸಿಯಲ್ ಎಕೌಂಟಿಂಗ್ ವಿಷಯದಲ್ಲಿ ವಿದ್ಯಾರ್ಥಿನಿಯರಾದ ಪ್ರತೀಕ್ಷಾ ಪಿ.ಎಸ್ ,ಅಂಕಿತಾ,ಸುಚಿತ್ರಾ ಶೆಟ್ಟಿ ,ಬಿ.ಬಿ ಹಾಜಿರಾ […]
ಮೊಗವೀರ ಯುವ ಸಂಘಟನೆ (ರಿ.)ಉಡುಪಿ ಜಿಲ್ಲೆ, ಕೋಟೇಶ್ವರ ಘಟಕ: ಬಡ ಕುಟುಂಬಕ್ಕೆ ಮನೆ ಹಸ್ತಾಂತರ
ಕೋಟೇಶ್ವರ:( ಏ,17): ಮೊಗವೀರ ಯುವ ಸಂಘಟನೆ (ರಿ.), ಉಡುಪಿ ಜಿಲ್ಲೆ ಇದರ ಕೋಟೇಶ್ವರ ಘಟಕದ ವತಿಯಿಂದ ಮೂವರು ಮಕ್ಕಳನ್ನು ಕಳೆದುಕೊಂಡು , ದುಡಿಮೆಯ ವಯಸ್ಸು ಮೀರಿದ ಅಸಹಾಯಕ ಕುಟುಂಬಕ್ಕೆ ಸಂಘಟನೆಯ ವತಿಯಿಂದ ನಿರ್ಮಿಸಿ ಕೊಟ್ಟ ಮನೆ “ಶ್ರೀ ಕೃಷ್ಣ” ಇದರ ಗ್ರಹ ಪ್ರವೇಶ ಏ.16 ರಂದು ಜರುಗಿತು. ಮೊಗವೀರ ಯುವ ಸಂಘಟನೆಯ ಕೋಟೇಶ್ವರ ಘಟಕದ ಗೌರವಾಧ್ಯಕ್ಷ ಜಗದೀಶ್ ಮಾರ್ಕೋಡು ರವರು ಉದ್ಘಾಟನೆಗೊಳಿಸಿ, ಮನೆಯನ್ನು ಫಲಾನುಭವಿಗೆ ಹಸ್ತಾಂತರಿಸಲಾಯಿತು. ಕೋಟೇಶ್ವರ ಘಟಕದ ಅಧ್ಯಕ್ಷ […]
ನನ್ನದು ವರ್ಕ್ ಫ್ರಮ್ ಹೋಮ್ ಸ್ವಾಮಿ…..
ಒಂದು ಕುರ್ಚಿಒಂದು ಸಿಸ್ಟಮ್…. .ಆಗೊಮ್ಮೆ ಇಗೊಮ್ಮೆ ಹೈ ಸ್ಪೀಡ್ ನಲ್ಲಿ ಕೆಲಸ ಮಾಡೋ ಇಂಟರ್ನೆಟ್ಟು…. ಬೆನ್ನು ನೋವಾಗದಿರಲಿ ಎಂದು ಬೆನ್ನು ಹಿಂದೊಂದು ತಲೆದಿಂಬು…. ಯಾಕಂದ್ರೆ ನನ್ನದು ವರ್ಕ್ ಫ್ರಮ್ ಹೋಮ್ ಸ್ವಾಮಿ..!ಹಿಂದೆ ಆಫೀಸಿನಲ್ಲಿ ಕೇಳಿಸುತ್ತಿದ್ದ ಮಾತಿನ ಸದ್ದಿಲ್ಲ….. ಮೈ ಮರೆತು ನಕ್ಕ ನಗುವಿನ ಅಲೆಯಿಲ್ಲ…… ಸೂರ್ಯೋದಯ ಕಾಣೋಲ್ಲ ,ಸೂರ್ಯಾಸ್ತಮವೂ ಕಂಡಿಲ್ಲ….. ಸಮಯದ ಅರಿವಿಲ್ಲ, ಹಸಿವಿನ ಪರಿವಿಲ್ಲ ………ಯಾಕೆ ಅಂದ್ರೆ ನಮ್ದು ವರ್ಕ್ ಫ್ರಮ್ ಹೋಮ್ ಸ್ವಾಮಿ.. ಸಂಬಂಧಗಳು ಹಳಸಿವೆ,ಭಾವನೆಗಳ ತಿಳಿಯಲು ಸಮಯವಿಲ್ಲ………..ಮನೆಯೊಳಿದ್ದರೂ ಮನೆಯ […]
ಬಿಜೆಪಿ ಕುಂದಾಪುರ ಮಂಡಲ ಎಸ್ಸಿ ಮೋರ್ಚಾವತಿಯಿಂದ ಡಾ.ಬಿ. ಆರ್ .ಅಂಬೇಡ್ಕರ್ ಜಯಂತಿ ಆಚರಣೆ
ಕುಂದಾಪುರ (ಏ.26): ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಜಯಂತಿಯನ್ನು ಕುಂದಾಪುರ ಮಂಡಲ ಎಸ್ಸಿ ಮೋರ್ಚಾ ವತಿಯಿಂದ ಎಸ್ಸಿ ಮೋರ್ಚಾ ಮಂಡಲ ಅಧ್ಯಕ್ಷ ಮಹೇಶ್ ಕಾಳಾವರ ಅವರ ಅಧ್ಯಕ್ಷತೆಯಲ್ಲಿ ಪಕ್ಷದ ಕಚೇರಿಯಲ್ಲಿ ಆಚರಿಸಲಾಯಿತು . ಕಾರ್ಯಕ್ರಮದಲ್ಲಿ ಮಂಡಲ ಅಧ್ಯಕ್ಷರಾದ ಶಂಕರ ಅಂಕದಕಟ್ಟೆ ಯವರು ಮಾತನಾಡಿ ಹುಟ್ಟಿನಿಂದಲು ಅಸ್ಪ್ರಶ್ಯತೆ ಅಸಮಾನತೆಯಿಂದ ಶೋಷಣೆಗೆ ಒಳಪಟ್ಟು ನಂತರ ದಿನದಲ್ಲಿ ಅದನ್ನು ಹೋಗಲಾಡಿಸಲು ಅಂಬೇಡ್ಕರ್ ಅವರು ಪಟ್ಟ ಶ್ರಮ ಅವೀಸ್ಮರಣೀಯ, ಅವರ ಕಾರಣದಿಂದಾಗಿಯೇ ಇಂದು […]
ಅಂಪಾರು: ನಮ್ಮೂರ ಸಂಭ್ರಮದ ಪೋಸ್ಟರ್ ಅನಾವರಣಗೊಳಿಸಿ ಶುಭ ಹಾರೈಸಿದ ಡಾ.ಡಿ.ವೀರೇಂದ್ರ ಹೆಗ್ಡೆ
ಕುಂದಾಪುರ (ಏ,14):ಇಲ್ಲಿನ ಅಂಪಾರು ಗ್ರಾಮ ಮೂಡುಬಗೆಯಲ್ಲಿ ಮೇ, 11 ರಂದು ಜರುಗಲಿರುವ ಧಾರ್ಮಿಕ -ಸಾಮಾಜಿಕ- ಸಾಂಸ್ಕೃತಿಕ ಸಮಾಗಮ ”ನಮ್ಮೂರ ಸಂಭ್ರಮ’‘ದ ಪೋಸ್ಟರ್ ನ್ನು ಧರ್ಮಸ್ಥಳದ ಧರ್ಮದರ್ಶಿಗಳಾದ ಪೂಜ್ಯ ಡಾ.ಡಿ.ವಿರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಧರ್ಮಸ್ಥಳಕ್ಕೆ ಭೇಟಿ ನೀಡಿದ ಅಂಪಾರಿನ ನಮ್ಮೂರ ಸಂಭ್ರಮದ ತಂಡದ ಬಳಿ ಮಾತನಾಡಿ ಡಾ. ಡಿ. ವೀರೇಂದ್ರ ಹೆಗಡೆಯವರು ಕಾರ್ಯಕ್ರಮದ ಉದ್ದೇಶಗಳನ್ನು ರೂಪು ರೇಷೆಗಳನ್ನು ತಿಳಿದುಕೊಂಡು ಕಾರ್ಯಕ್ರಮದ ಯಶಸ್ಸಿಗೆ ಶುಭಕೋರಿದರು.ಕಾರ್ಯಕ್ರಮದ ಬಗ್ಗೆ ವಿವರಣೆ ಪಡೆದು ಸಂತೃಪ್ತರಾದ […]
ಸಮುದಾಯದತ್ತ ಶಾಲೆಯಲ್ಲಿ ಸಂಜಿತ್ ಸ್ಯಾಕ್ಸೋಫೋನ್ ವಾದನ
ಗಂಗೊಳ್ಳಿ( ಏ.13): ಇಲ್ಲಿನ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಖಾರ್ವಿಕೇರಿಯಲ್ಲಿ ಕಳೆದ ಶನಿವಾರ ನಡೆದ ಸಮುದಾಯದತ್ತ ಶಾಲೆ ಕಾರ್ಯಕ್ರಮದಲ್ಲಿ ಈ ಶಾಲೆಯ ಮೂರನೇ ತರಗತಿಯ ವಿದ್ಯಾರ್ಥಿ ಸಂಜಿತ್ ಎಂ ದೇವಾಡಿಗನಿಂದ ಸ್ಯಾಕ್ಸೋಪೋನ್ ವಾದನದ ಕರ್ಯಕ್ರಮ ನಡೆಯಿತು. ಭಕ್ತಿಗೀತೆ, ದೇಶಭಕ್ತಿ ಗೀತೆ, ಭಾವಗೀತೆ, ಚಲನಚಿತ್ರ ಗೀತೆಯ ಜೊತೆಗೆ ರಾಷ್ಟ್ರಗೀತೆಯನ್ನು ನುಡಿಸಿ ಮೆಚ್ಚುಗೆ ಗಳಿಸಿದ ಸಂಜಿತ್ ಎಂ ದೇವಾಡಿಗನನ್ನು ಅಭಿನಂದಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಎಸ್. […]
ಡಾ.ಗೋವಿಂದ ಬಾಬು ಪೂಜಾರಿ ಯವರಿಗೆ ದಿ. ಕೆ.ಸಿ ಕುಂದರ್ ಸ್ಮಾರಕ ದತ್ತಿ ಪ್ರಶಸ್ತಿ
ಕುಂದಾಪುರ(ಏ.13): ಯಶಸ್ವಿ ಉದ್ಯಮಿ,ಸಮಾಜ ಸೇವಕ ಹಾಗೂ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್(ರಿ.) ಉಪ್ಪುಂದ ಇದರ ಅಧ್ಯಕ್ಷ ಡಾ.ಗೋವಿಂದ ಬಾಬು ಪೂಜಾರಿ ಯವರು ಡಾ.ಕಾರಂತ ಪ್ರತಿಷ್ಠಾನ ಕೋಟ, ಡಾ. ಕಾರಂತ ಟ್ರಸ್ಟ್ ಉಡುಪಿ,ಕೋಟತಟ್ಟು ಗ್ರಾಮ ಪಂಚಾಯತ್ ನೀಡುವ ಕರಾವಳಿಯ ಮೀನುಗಾರ ಮುಖಂಡರಾಗಿದ್ದ ದಿ.ಕೆ.ಸಿ ಕುಂದರ್ ಸ್ಮಾರಕ ದತ್ತಿ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ. ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಮೂಲಕ ಯಾವುದೇ ಜಾತಿ, ಮತ,ಧರ್ಮ ತಾರತಮ್ಯ ಇಲ್ಲದೆ ನೋಂದವರಿಗೆ ಸಹಾಯ ಹಸ್ತ ಚಾಚುವ ಡಾ.ಗೋವಿಂದ […]
ದಿ.ಸದಿಯ ಸಾಹುಕಾರ್ ರವರ ಹ್ರದಯ ವೈಶಾಲ್ಯತೆಗೆ ಶರಣು ಶರಣಾರ್ತಿ
ಯಪ್ಪಾ..ಬರೋಬ್ಬರಿ 16.50 ಎಕ್ರೆ ಜಾಗ…ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲೇ ಇದೆ. ಕೋಟಿ – ಕೋಟಿ ಬೆಲೆ ಬಾಳುವ ಆಸ್ತಿ ಎಂದು ಹುಬ್ಬೆರಿಸಿ ಆಶ್ಚರ್ಯ ಚಿಕಿತರಾಗಿ ಅಕ್ಕ ಪಕ್ಕದವರ ಜೊತೆ ಮಾತನಾಡುವ ಜನರನ್ನು ಕಂಡು ಹೀಗೆ ಸುಮ್ಮನೆ ಆಲೋಚಿಸತೋಡಗಿದೆ. ಆಧುನಿಕ ಬದುಕಿನ ಈ ನಾಗಾಲೋಟದಲ್ಲಿ ತಾನು,ತನ್ನದು,ತನ್ನದಷ್ಟಕ್ಕೆ ಎನ್ನುವ ಸ್ವಾರ್ಥಪರತೆಗೆ ಒಳಗಾದ ಜನತೆ ಇಂದು ಪರರ ಹಿತಾಸಕ್ತಿಗಿಂತ ಸ್ವ ಹಿತಾಸಕ್ತಿಗೆ ಹೆಚ್ಚು ಒತ್ತು ಕೊಡುತ್ತೀರುವುದು ವಾಸ್ತವ.ಈ ಸ್ವಾರ್ಥ ತುಂಬಿದ ಜಗತ್ತೀನಲ್ಲಿ ಒಂದಿಂಚು ಭೂಮಿಗೂ ಹೊಡೆದಾಡುವ ಮನುಷ್ಯರ […]










