ಕುಂದಾಪುರ ( ನ .6): “ಕಾರ್ಟೂನು ಕುಂದಾಪ್ರ’ ಇವರ ನೇತೃತ್ವದಲ್ಲಿ, ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ಸಹಭಾಗಿತ್ವದಲ್ಲಿ 12ನೆಯ ವರ್ಷದ “ಕಾರ್ಟೂನು ಹಬ್ಬ” ಈ ಬಾರಿ ನವೆಂಬರ್ 15 ರಿಂದ 19ರ ತನಕ ಕುಂದಾಪುರದ ಕಲಾಮಂದಿರದಲ್ಲಿ ನಡೆಯಲಿದ್ದು ಆ ಪ್ರಯುಕ್ತ ನವೆಂಬರ್ 15 ರಂದು ಮಧ್ಯಾಹ್ನ 2ಗಂಟೆಗೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳಿಗಾಗಿ “ಕಾರ್ಟೂನು ರಚನಾ ಸ್ಪರ್ಧೆ”ಯು ನಡೆಯಲಿದೆ. “ಕಾರ್ಟೂನು ಸ್ಪರ್ಧೆ”ಯು 4ರಿಂದ 7ನೇಯ ತರಗತಿ, 8ರಿಂದ […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಓಪನ್ ರಾಪಿಡ್ ಚೆಸ್ ಟೂರ್ನಮೆಂಟ್ ನಲ್ಲಿ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಶಾಲೆಗಳ ವಿದ್ಯಾರ್ಥಿಗಳ ಸಾಧನೆ
ಕುಂದಾಪುರ (ನ,.5) : ಕುಂದಾಪುರ ಎಜುಕೇಶನ್ ಸೊಸೈಟಿ (ರಿ. ) ಪ್ರವರ್ತಿತ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಆಚಾರ್ಯ ಆಂಗ್ಲ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳು ಶ್ರೀ ಸಿದ್ಧಿ ವಿನಾಯಕ ಚೆಸ್ ಅಕಾಡೆಮಿ (ರಿ.) ಉಪ್ಪುಂದ ಮತ್ತು ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಷನ್ (ರಿ.) ಉಡುಪಿ ಇವರ ಸಹಭಾಗಿತ್ವದಲ್ಲಿ ನಡೆಸಿದ “ಶ್ರೀ ಸಿದ್ಧಿ ವಿನಾಯಕ ಟ್ರೋಫಿ” ಓಪನ್ ರಾಪಿಡ್ ಚೆಸ್ ಟೂರ್ನಮೆಂಟ್ – 2025 ಸ್ಪರ್ಧೆಯಲ್ಲಿ ಬಹುಮಾನಗಳನ್ನು […]
ರಾಜ್ಯ ಮಟ್ಟದ ಕ್ರೀಡಾಕೂಟ: ಹೆಮ್ಮಾಡಿಯ ಜನತಾ ಪಿಯು ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಹೆಮ್ಮಾಡಿ( ನ ,5): ಈಗಾಗಲೇ ನಡೆಯುತ್ತಿರುವ ರಾಜ್ಯ ಮಟ್ಟದ ವಿವಿಧ ಕ್ರೀಡಾ ಕೂಟಗಳಲ್ಲಿ ಜನತಾ ಪಿಯು ಕಾಲೇಜಿನ ವಿದ್ಯಾರ್ಥಿಗಳಾದ ಯೋಗೀಶ (ನೆಟ್ ಬಾಲ್ )ಆದಿತ್ಯ (ವಾಲಿಬಾಲ್ )ಸಾಹಿಮ್ (ಕಬಡ್ಡಿ )ಪ್ರಣೀತ (ಕುಸ್ತಿ )ಭಾಗವಹಿಸಿ ಉತ್ತಮ ಸಾಧನೆಗೈದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಪರಿಸರ ಚಿತ್ರಕಲೆ ಸಂಜಿತ್ ಎಂ. ದೇವಾಡಿಗ ದ್ವಿತೀಯ ಸ್ಥಾನ
ಗಂಗೊಳ್ಳಿ ( ನ ,01): ವಿಜಯ ಕರ್ನಾಟಕ ದಿನಪತ್ರಿಕೆಯು ವಿಶ್ವ ಪರಿಸರ ದಿನದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಉಡುಪಿ ಜಿಲ್ಲಾ ಮಟ್ಟದ ಚಿತ್ರಕಲೆ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಏಳನೆಯ ತರಗತಿ ವಿದ್ಯಾರ್ಥಿ ಸಂಜಿತ್ ಎಂ ದೇವಾಡಿಗ ದ್ವಿತೀಯ ಸ್ಥಾನ ಗಳಿಸಿರುತ್ತಾನೆ. ಇವನು ಗಂಗೊಳ್ಳಿಯ ಚಿತ್ರಕಲಾ ಶಿಕ್ಷಕ ಮಾಧವ ಎಮ್ ದೇವಾಡಿಗ ಮತ್ತು ಉಪನ್ಯಾಸಕಿ ಸಾವಿತ್ರಿ ಎಸ್ ದಂಪತಿ ಪುತ್ರ. ವಿದ್ಯಾರ್ಥಿಯ ಸಾಧನೆಗೆ […]
ಕುಂದಾಪುರದ ಹೆಚ್ ಎಮ್ ಎಮ್ ಮತ್ತು ವಿ ಕೆ ಆರ್ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮದ ಆಚರಣೆ
ಕುಂದಾಪುರ : (ನ.1) : ಕುಂದಾಪುರ ಎಜುಕೇಶನ್ ಸೊಸೈಟಿ (ರಿ. ) ಪ್ರವರ್ತಿತ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಶಾಲೆಗಳಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡ ಸಂಸ್ಥೆಯ ಉಪಪ್ರಾಂಶುಪಾಲರಾದ ಶ್ರೀಮತಿ ಶುಭ ಕೆ ಎನ್ ಅವರು ಕನ್ನಡ ನಾಡು ನುಡಿಯ ಬಗ್ಗೆ ಹೆಮ್ಮೆ ಇರಬೇಕು. ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ನಮ್ಮೆಲ್ಲರ ಪಾತ್ರ ಪ್ರಮುಖವಾದದ್ದು. ಕನ್ನಡ ಭಾಷೆ ಹೃದಯದ ಧ್ವನಿಯಾಗಿದೆ ಎಂದು […]
ಬಿ. ಬಿ. ಹೆಗ್ಡೆ ಕಾಲೇಜು: ‘ಉಗಮ-2025’ ಸಂಪನ್ನ
ಕುಂದಾಪುರ (ಅ.31): ವಿದ್ಯಾರ್ಥಿಗಳಿಗೆ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಿಗೆ ಅವಕಾಶ ನೀಡಿದಾಗ ಮಕ್ಕಳು ಬೌದ್ಧಿಕವಾಗಿ ಬೆಳೆಯಲು ಸಾಧ್ಯ. ಹೀಗಾಗಿ ಮಕ್ಕಳಿಗೆ ನೀಡಿದ ಈ ಅವಕಾಶ ಪ್ರಶಂಸನೀಯ ಎಂದು ಗುತ್ತಿಗೆದಾರರಾದ ಯಡಾಡಿ-ಮತ್ಯಾಡಿಯ ಲಯನ್ ಅರುಣ್ ಕುಮಾರ್ ಹೆಗ್ಡೆ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ‘ಉಗಮ-2025’ರ ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ| ಕೆ. ಉಮೇಶ್ […]
ಬಿ. ಬಿ. ಹೆಗ್ಡೆ ಕಾಲೇಜು : ಸರ್ದಾರ್ ವಲ್ಲಭಭಾಯಿ ಪಟೇಲ್ 150 ನೇ ಜನ್ಮ ದಿನಾಚರಣೆ
ಕುಂದಾಪುರ (ಅ.31): ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ 1 ಮತ್ತು 2 ರ ಆಶ್ರಯದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ಪ್ರಯುಕ್ತ ಸ್ವಚ್ಛ ಸಂಗಮ್ ಸ್ವಚ್ಛತಾ ಕಾರ್ಯಕ್ರಮ ಹಾಗೂ ‘ಸರ್ದಾರ್ ವಲ್ಲಭಭಾಯಿ ಪಟೇಲ್: ಭಾರತದ ರಾಷ್ಟ್ರ ಶಿಲ್ಪಿ’ ಎನ್ನುವ ವಿಷಯದ ಕುರಿತು ಪ್ರಬಂಧ ಸ್ಪರ್ಧೆ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ […]
ರಾಜ್ಯ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ 2025 ಸ್ಪರ್ಧೆ: ಆಧ್ಯಾ ವಿ. ಮೊಗವೀರ ಪ್ರಥಮ ಸ್ಥಾನ
ಕುಂದಾಪುರ (ಆ ,31): ಮೂಡಬಿದ್ರೆ ಆಳ್ವಾಸ್ ಪಿ ಯು ಕಾಲೇಜಿನ ಕೆ . ಅಮರ್ ನಾಥ ಶೆಟ್ಟಿ ವೇದಿಕೆಯಲ್ಲಿ ಅಕ್ಟೋಬರ್ 26 ರಂದು ನಡೆದ ಐಡಿಯಲ್ ಪ್ಲೇ ಅಬಕಸ್ ಇಂಡಿಯಾ( ಪ್ರೈ) ಲಿಮಿಟೆಡ್ ವತಿಯಿಂದ ನಡೆದ 20ನೇ ರಾಜ್ಯ ಮಟ್ಟದ ಅಬಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ 2025 ಸ್ಪರ್ಧೆಯಲ್ಲಿ ಮಂಕಿ ಶಾಲೆಯ 3ನೇ ತರಗತಿಯ ಆಧ್ಯಾ ವಿ. ಮೊಗವೀರ ಓಪನ್ ಕೇಟಗರಿ ZEL ವಿಭಾಗದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. […]
ಸಂದೀಪ್ ಪೂಜಾರಿ ತ್ರಾಸಿ ಅಂತರಾಷ್ಟ್ರೀಯ ಯೋಗ ಸ್ಪರ್ಧೆಗೆ ಆಯ್ಕೆ
ಕುಂದಾಪುರ ( ನ .02): ವರ್ಷಿಣಿ ಯೋಗ ಶಿಕ್ಷಣ, ಸಾಂಸ್ಕೃತಿಕ ಮತ್ತು ಕ್ರೀಡಾ ಟ್ರಸ್ಟ್ (ರಿ.),ಶಿವಮೊಗ್ಗ, ಮತ್ತು ಕಲಾ ಯೋಗಾಸನ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಅಕಾಡೆಮಿ ತುಮಕೂರು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ತುಮಕೂರು ಇವರ ಇವರ ಸಹಯೋಗದೊಂದಿಗೆ ಕನ್ನಡ ರಾಜ್ಯೋತ್ಸವದ ಅಂಗವಾಗಿ 8 ನೇ ವರ್ಷದ ರಾಷ್ಟ್ರಮಟ್ಟದ ಯೋಗಾಸನಾ ಸ್ಪರ್ಧೆ 2025-26 ಮಹಾತ್ಮ ಗಾಂಧಿ ಒಳಾಂಗಣ ಕ್ರೀಡಾಂಗಣ ತುಮಕೂರು ನಲ್ಲಿ ನಡೆದ 8 ನೇ ವರ್ಷದ […]
ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರ್ಥ್ಮೆಟಿಕ್-2025 ಸ್ಪರ್ಧೆ: ಅರಾಟೆ ಲಕ್ಷ್ ರಾಜೇಶ್ ಪ್ರಥಮ
ಕುಂದಾಪುರ ( ಆ ,31) : ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ವತಿಯಿಂದ ಮೂಡುಬಿದಿರೆ ಆಳ್ವಾಸ್ ಪಿಯು ಕಾಲೇಜಿನಲ್ಲಿ ತಾ. 26-10-2025ರಂದು ಜರುಗಿದ 20ನೇ ಕರ್ನಾಟಕ ರಾಜ್ಯಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರ್ಥ್ಮೆಟಿಕ್-2025ರ ಸ್ಪರ್ಧೆಯಲ್ಲಿ ಕುಂದಾಪುರ ಸೆಂಟರಿನ ಅರಾಟೆ ಲಕ್ಷ್ ರಾಜೇಶ್ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಲಕ್ಷ್ ರಾಜೇಶ್ ಕುಂದಾಪುರ ಅಬಾಕಸ್ ಸೆಂಟರಿನ ಮುಖ್ಯಸ್ಥ ಪ್ರಸನ್ನ ಕೆ.ಬಿ. ಮತ್ತು ಶ್ರೀಮತಿ ಮಹಾಲಕ್ಷಿö್ಮ ಇವರುಗಳು ತರಬೇತಿ ನೀಡಿದ್ದರು. ಲಕ್ಷ್ ರಾಜೇಶ್ ಪ್ರಸ್ತುತ […]










