ಶಿರ್ವ(ಜ.17): ಮಂಗಳೂರಿನ ಪ್ರತಿಷ್ಠಿತ ದಿಯಾ ಸಿಸ್ಟಮ್ ಸಂಸ್ಥೆ(ಗ್ಲೋಟಚ್ ಟೆಕ್ನಾಲಜೀಸ್) ಯು ನೇರ ನೇಮಕಾತಿ ಕ್ಯಾಂಪಸ್ ಸಂದರ್ಶನ ಈಗಾಗಲೇ ಬಿಸಿಎ, ಬಿಎಸ್ಸಿ (ಸಿ.ಎಸ್),ಬಿಇ(ಸಿವಿಲ್ ಮತ್ತು ಮೆಕಾನಿಕಲ್ ಹೊರತುಪಡಿಸಿ), ಬಿಕಾಂ( ಕಂಪ್ಯೂಟರ್ ಅಪ್ಲಿಕೇಶನ್), ಡಿಪ್ಲೋಮಾ(ಸಿಎಸ್),ಎಂಎಸ್ಸಿ (ಸಿಎಸ್), ಎಂಸಿಎ ಮುಗಿಸಿಕೊಂಡಿರುವ ಅಭ್ಯರ್ಥಿಗಳಿಗೆ ಶಿರ್ವ ಸಂತ ಮೇರಿ ಕಾಲೇಜಿನ ಗಣಕ ವಿಜ್ಞಾನ ವಿಭಾಗ,ವೃತ್ತಿ ಸಮಾಲೋಚನೆ ಮತ್ತು ನಿಯೋಜನೆ ಕೋಶ ವತಿಯಿಂದ ಜನವರಿ 13 ರಂದು ಕಾಲೇಜಿನ ಫಾ. ಹೆನ್ರಿ ಕ್ಯಾಸ್ಟಲಿನೊ ಸಭಾಂಗಣದಲ್ಲಿ ನಡೆಯಿತು. ಇದು ಸ್ಪರ್ಧಾತ್ಮಕ ಯುಗ […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಶಿರ್ವ ಸಂತ ಮೇರಿ ಕಾಲೇಜಿನಲ್ಲಿ 74ನೇ ಸೇನಾ ದಿನಾಚರಣೆ
ಶಿರ್ವ(ಜ.17): ರಾಷ್ಟ್ರದ ಭದ್ರತೆಯನ್ನು ಕಾಪಾಡುವುದು ಪ್ರತಿಯೊಬ್ಬ ಯುವ ನಾಗರಿಕನ ಕರ್ತವ್ಯವಾಗಿದೆ. ರಾಷ್ಟ್ರೀಯ ಆಸ್ತಿಗಳು, ನೈಸರ್ಗಿಕ ಸಂಪನ್ಮೂಲಗಳು, ಕಾನೂನು ಮತ್ತು ಸುವ್ಯವಸ್ಥೆಯನ್ನು ರಕ್ಷಿಸಲು ಇಂದು ನಾವು ಸಶಸ್ತ್ರ ಪಡೆಗಳನ್ನು ಹೆಚ್ಚಿಸಬೇಕಾಗಿದೆ. ಸೇನೆ ತನ್ನ ನೆಲೆಯಲ್ಲಿ ಸಮರ್ಪಕವಾಗಿ ಕಾರ್ಯ ನಿರ್ವಹಿಸಲು ಪ್ರಜೆಗಳು ಮತ್ತು ಸರ್ಕಾರ ತಮ್ಮ ಸಂಪೂರ್ಣ ಸಹಕಾರವನ್ನು ನೀಡಿ ರಾಷ್ಟ್ರದ ಪ್ರಗತಿಗೆ ಕೈಜೋಡಿಸಬೇಕಾಗಿರುವುದು ಇಂದು ಅತಿ ಅಗತ್ಯವಾಗಿದೆ ಎಂದು ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಕಾಲೇಜಿನ ಎನ್.ಸಿ.ಸಿ ಭೂಯುವ ಸೇನಾ ದಳದಿಂದ […]
ನರೇಂದ್ರ ಎಸ್ ಗಂಗೊಳ್ಳಿಗೆ ಸನ್ಮಾನ
ಗಂಗೊಳ್ಳಿ(ಜ.15 ): ಯುವ ಲೇಖಕ ಮತ್ತು ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಅವರ ಬಹುಮುಖ ಪ್ರತಿಭೆಯನ್ನು ಗುರುತಿಸಿ ತಲ್ಲೂರಿನ ಸಪ್ತಸ್ವರ ವಿವಿಧೋದ್ದೇಶ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿ ದೇವಾಡಿಗ ಉಪ್ಪಿನಕುದ್ರು ಇವರು ವೈಯಕ್ತಿಕ ನೆಲೆಯಲ್ಲಿ ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಸನ್ಮಾನಿಸಿದರು. ಸನ್ಮಾನಿಸಿ ಮಾತನಾಡಿದ ಅವರು ನಮ್ಮ ನಡುವಿನ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಿ ಗೌರವಿಸುವ ಕಾರ್ಯ ನಿರಂತರವಾಗಿ ಆಗಬೇಕಿದೆ. ಆ ಮೂಲಕ ಇಂತಹ ಕಾರ್ಯಗಳು ಮತ್ತಷ್ಟು ಪ್ರತಿಭೆಗಳ ಬೆಳವಣಿಗೆಗೆ […]
ಕಂದಾವರದ ಕೆಂದಾವರೆಗೆ ಕಿರೀಟ ಪ್ರಶಸ್ತಿ ಪ್ರದಾನ ( ಮಾರಣಕಟ್ಟೆ ಹಬ್ಬದಲ್ಲಿ ನೈಕಂಬ್ಳಿ ಸಂಯೋಜನೆಯ ಯಕ್ಷಸಂಕ್ರಾಂತಿ ಯಕ್ಷಗಾನ)
ಕುಂದಾಪುರ (ಜ.15): ಮಕರ ಸಂಕ್ರಾಂತಿಯಂದು ಮಾರಣಕಟ್ಟೆ ಹಬ್ಬದಲ್ಲಿ ಜರುಗಿದ ಪಾವಂಜೆ ಮೇಳದ ಯಕ್ಷಗಾನ ಬಯಲಾಟದಲ್ಲಿ ಹಿರಿಯ ಪ್ರಸಂಗಕರ್ತ ಕಂದಾವರ ರಘುರಾಮ ಶೆಟ್ಟಿ ಅವರಿಗೆ ನಾಗರಾಜ್ ಶೆಟ್ಟಿ ನೈಕಂಬ್ಳಿ ನೇತೃತ್ವದ ಯಕ್ಷ ಸಂಕ್ರಾಂತಿಯ ‘ಕಿರೀಟ’ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಕಂದಾವರ ರಘುರಾಮ ಶೆಟ್ಟಿಯವರು, ಯಕ್ಷಗಾನ ಅಮೋಘವಾದ ಕಲೆ. ದೀರ್ಘವಾಗಿ ಸಾಗಿ ಬಂದ ಈ ಕಲೆ ವಿಚಾರಶೀಲರು, ಜಿಜ್ಞಾಸುಗಳು, ಸಾಮಾನ್ಯ ಹಳ್ಳಿಯ ಜನರನ್ನೂ ತಲುಪುವ ಸಾಮರ್ಥ್ಯ ಹೊಂದಿದ ಪ್ರಭಾವಿ ಕಲೆಯಾಗಿದೆ. ಯಕ್ಷಗಾನಕ್ಕೆ […]
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶೇಡಿಮನೆ:ವಿವೇಕಾನಂದ ಜಯಂತಿಯ ಪ್ರಯುಕ್ತ ಪುಸ್ತಕ ಕೊಡುಗೆ
ಆಜ್ರಿ(ಜ.13): ಕುಂದಾಪುರ ತಾಲೂಕಿನ ಶೇಡಿಮನೆ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶೇಡಿಮನೆ ಅರಸಮ್ಮಕಾನು ಇಲ್ಲಿನ ಹಳೆ ವಿದ್ಯಾರ್ಥಿಗಳು ಸುಮಾರು ಮುನ್ನೂರಕ್ಕೂ ಹೆಚ್ಚು ಪುಸ್ತಕಗಳನ್ನು ಶಾಲೆಯ ಗ್ರಂಥಾಲಯಕ್ಕೆ ಕೊಡುಗೆಯಾಗಿ ನೀಡಿದರು .ಜ.12 ರಂದು ನಡೆದ ಸ್ವಾಮಿ ವಿವೇಕಾನಂದ ಜಯಂತಿಯ ಯುವದಿನದ ಈ ಸಂಭ್ರಮದ ರೂವಾರಿ ಹಳೆ ವಿದ್ಯಾರ್ಥಿ ವೆಂಕಟರಮಣ ಪೂಜಾರಿ ಇವರ ನೇತೃತ್ವದಲ್ಲಿ ಪುಸ್ತಕಗಳನ್ನು ಶಾಲೆಯ ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಲಾಯಿತು. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಶ್ರೀ ವಸಂತ ಪೂಜಾರಿ ಯವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು. […]
ಸಂತ ಮೇರಿ ಕಾಲೇಜು ಶಿರ್ವ: ರಾಷ್ಟ್ರೀಯ ಯುವ ದಿನಾಚರಣೆ
ಶಿರ್ವ(ಜ.13): ಇಲ್ಲಿನ ಸಂತ ಮೇರಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ರೋವರ್- ರೇಂಜರ್ ಘಟಕದ ವತಿಯಿಂದ ಸ್ವಾಮಿ ವಿವೇಕಾನಂದರ 159 ನೇ ಜನ್ಮ ದಿನದ ಅಂಗವಾಗಿ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮವನ್ನು ಜ.12 ರಂದು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀ ರವಿನಂದನ್ ಭಟ್ ರವರು ಮಾತನಾಡಿ ಸ್ವಾಮಿ ವಿವೇಕಾನಂದರು ಯುವ ಸಮುದಾಯದ ಆದರ್ಶ, ಅವರ […]
ಡಾ.ಬಿ. ಬಿ. ಹೆಗ್ಡೆ ಕಾಲೇಜು: ಎನ್ಎಸ್ಎಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
ಕುಂದಾಪುರ(ಜ.13): ಡಾ.ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆಯನ್ನು ಎನ್.ಎಸ್.ಎಸ್ ಉಡುಪಿ ಜಿಲ್ಲಾ ನೋಡಲ್ ಅಧಿಕಾರಿ ಶ್ರೀ ಪ್ರವೀಣ್ ಶೆಟ್ಟಿಯವರು ಜ.12 ರಂದು ನೆರವೆರಿಸಿದರು. ಉದ್ಘಾಟನಾ ನೆಲೆಯ ಮಾತುಗಳನ್ನಾಡಿ ಅವರು ಎನ್.ಎಸ್.ಎಸ್ ನ ಮಹತ್ವ ಹಾಗೂ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದಲ್ಲಿ ಎನ್.ಎಸ್.ಎಸ್ ನ ಪಾತ್ರದ ಕುರಿತು ತಿಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿ ತನ್ನ ಎನ್.ಎಸ್.ಎಸ್ ಅನುಭವವನ್ನು ಹಂಚಿಕೊಂಡರು. […]
ಡಾ.ಬಿ. ಬಿ. ಹೆಗ್ಡೆ ಕಾಲೇಜು : ರಾಷ್ಟ್ರೀಯ ಯುವ ದಿನಾಚರಣೆ
ಕುಂದಾಪುರ(ಜ.13): ಡಾ.ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ಘಟಕದ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ 159 ನೇ ಜನ್ಮ ದಿನದ ಅಂಗವಾಗಿ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮವನ್ನು ಜ.12 ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.ಎನ್.ಎಸ್.ಎಸ್ ಉಡುಪಿ ಜಿಲ್ಲಾ ನೋಡಲ್ ಅಧಿಕಾರಿ ಶ್ರೀ ಪ್ರವೀಣ್ ಶೆಟ್ಟಿಯವರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ದೇಶ ನಿರ್ಮಾಣದಲ್ಲಿ ಎನ್.ಎಸ್.ಎಸ್.ನ ಪಾತ್ರ ಹಾಗೂ ಸ್ವಾಮಿ ವಿವೇಕಾನಂದರ ತತ್ವಾದರ್ಶವನ್ನು ವಿದ್ಯಾರ್ಥಿಗಳು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲರಾದ […]
ಜ.14 ಮತ್ತು 15 ರಂದು ಶ್ರೀ ಹಾಡಿಗರಡಿ ದೈವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ
ನಾಡ(ಜ.12): ಶ್ರೀ ಕ್ಷೇತ್ರ ಹಾಡಿಗರಡಿ ದೈವಸ್ಥಾನ ನಾಡ ಇದರ ಪರಿವಾರ ದೈವಗಳ ವಾರ್ಷಿಕ ಹಾಲುಹಬ್ಬ, ಗೆಂಡಸೇವೆ, ಮಹಾಪೂಜೆ, ದೈವದರ್ಶನ ಹಾಗೂ ಮಹಾ ಅನ್ನಸಂತರ್ಪಣೆ ಕಾರ್ಯಕ್ರಮ ಇದೇ ಜ.14 ಮತ್ತು 15 ರಂದು ನಡೆಯಲಿದೆ. ಜ.14 ರ ಶುಕ್ರವಾರ ಸಂಜೆ 6 ಗಂಟೆಗೆ ದೈವದರ್ಶನ ಹಾಗೂ ಗೆಂಡಸೇವೆ, 7 ಗಂಟೆಗೆ ಮಹಾ ಅನ್ನಸಂತರ್ಪಣೆ, ಸಾಧಕರಿಗೆ ಸನ್ಮಾನ, ವಿದ್ಯಾರ್ಥಿವೇತನ ವಿತರಣೆಇನ್ನಿತರ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಹಾಗೆಯೇ ಜ.15ರ ಶನಿವಾರಬೆಳಿಗ್ಗೆ ಗಂಟೆ 10-00ಕ್ಕೆ […]
ನಿವೇದಿತಾ ಪ್ರೌಢಶಾಲೆ ಬಸ್ರೂರು: ಕೋವಿಡ್ ಲಸಿಕಾಕರಣ ಅಭಿಯಾನ
ಬಸ್ರೂರು (ಜ.10): ಇಲ್ಲಿನ ನಿವೇದಿತಾ ಪ್ರೌಢಶಾಲೆಯಲ್ಲಿ 5 ರಿಂದ 18 ರವರೆಗಿನ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕಾಕರಣ ಅಭಿಯಾನ ಪ್ರಾಥವಿುಕ ಆರೋಗ್ಯ ಕೇಂದ್ರ ಬಸ್ರೂರು ಇವರ ಸಹಕಾರದಿಂದ ಜ.10 ರಂದು ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಸಂಚಾಲಕ ಶ್ರೀ.ಬಿ ಅಪ್ಪಣ್ಣ ಹೆಗ್ಡೆಯವರು ನೆರವೇರಿಸಿದರು. ಸಭೆಯ ಅಧ್ಯಕ್ಷತೆಯನ್ನು ಬಸ್ರೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಇಂದಿರಾ ಪೂಜಾರಿಯವರು ವಹಿಸಿದ್ದರು. ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿಗಳಾದ ಡಾ. ವಿದ್ಯಾರವರು ಪ್ರಾಸ್ತಾವಿಕ ಮಾತುಗಳನ್ನು ಆಡಿದರು. ಶಾಲಾ […]










