ಕುಂದಾಪುರ (ಸೆ,21): ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಐತಿಹಾಸಿಕ ನಗರವಾದ ಬಸ್ರೂರಿನಲ್ಲಿ ಶಿಲಾಯುಗ ಕಾಲದ ಬ್ರಹತ್ ನಿಲ್ಸ್ ಕಲ್ಲು ಒಂದು ಪತ್ತೆಯಾಗಿದೆ. ಶಿರ್ವಾದ ಮುಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನ ಪ್ರಾಚೀನ ಇತಿಹಾಸ ಮತ್ತು ಪುರಾತತ್ವಶಾಸ್ತ್ರವಿಭಾಗದ ಪ್ರಾಧ್ಯಾಪಕ ಪ್ರೊ.ಟಿ. ಮುರುಗೇಶಿ ಈ ನಿಲ್ಸ್ ಕಲ್ಲಿನ ಐತಿಹಾಸಿಕ ಹಿನ್ನೆಲೆಯನ್ನು ಗುರುತಿಸಿದ್ದಾರೆ.
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಚಲನ್ ಚಂದ್ರ ಶೆಟ್ಟಿ ಸಿ.ಎ ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆ
ಕುಂದಾಪುರ (ಸೆ,21): ಕುಂದಾಪುರ ಮೂಲದ ಚಲನ್ ಚಂದ್ರ ಶೆಟ್ಟಿಯವರು ಜೂನ್ 2021ರ ಚಾರ್ಟರ್ಡ್ ಅಕೌಂಟೆಂಟ್ ಅಂತಿಮ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಉಡುಪಿಯ ಶ್ರೀ ಸುರೇಂದ್ರ ನಾಯಕ್ ರವರಲ್ಲಿ ಆರ್ಟಿಕಲ್ ಶಿಪ್ ಮಾಡಿರುವ ಚಲನ್ ಚಂದ್ರ ಶೆಟ್ಟಿ ಯವರು ಅಧ್ಯಾಪಕರಾದ ಬಿಲ್ಲಾಡಿಮನೆ ಶ್ರೀ ಚಂದ್ರಶೇಖರ ಶೆಟ್ಟಿ ಮಣಿಗೇರಿ ಹಾಗೂ ಶಿರೂರು ಹೈಕಾಡಿಮನೆ ಶ್ರೀಮತಿ ಶ್ಯಾಮಲಾ ಸಿ ಶೆಟ್ಟಿ ಯವರ ಪುತ್ರ.
ನಿಸ್ವಾರ್ಥ ಕಲಾ ಸೇವಕಿ ಮತ್ತು ಭಜನಾ ಗಾಯಕಿ ಸುಶೀಲಾ ಪೂಜಾರಿ ನಾವುಂದ
ದೇವರ ಮೇಲಿನ ಭಕ್ತಿ ಮತ್ತು ಆಧ್ಯಾತ್ಮಿಕ ವಿಚಾರಗಳು ಪ್ರತಿಯೊಬ್ಬರ ಬದುಕಿನಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ದೇವರ ಕ್ರಪೆಗೆ ಪಾತ್ರರಾಗಲು ಹಲವು ವಿಧಾನಗಳಿವೆ. ಆದರೆ ಭಜನೆ ಸರಳವಾದ ಮಾರ್ಗ.ಆದರೆ ಆಧುನಿಕತೆಯ ಸ್ಥಿತ್ಯಂತರಕ್ಕೆ ಒಳಗಾದ ಯುವ ಜನತೆ ಆಧ್ಯಾತ್ಮಿಕತೆ , ಭಜನೆ ಹಾಡುವುದು, ಕುಣಿತ ಭಜನೆ, ಜಾನಪದ ಗೀತೆ ಭಾವಗೀತೆಯಂತಹ ಧಾರ್ಮಿಕ ಚಟುವಟಿಕೆಯಿಂದ ದೂರವಾಗುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಮನೆ-ಮನಗಳಲ್ಲಿ ಭಜನೆಯ ಭಕ್ತಿ -ಭಾವ ಕಡಿಮೆಗೊಳ್ಳುತ್ತಿರುವ ಈ ಆಧುನಿಕ ಕಾಲಘಟ್ಟದಲ್ಲಿ ಭಜನೆಯನ್ನು ಭಕ್ತಿಪೂರ್ವಕವಾಗಿ ಹಾಡುತ್ತಾ, […]
ಶಿಕ್ಷ ಪ್ರಭ ಅಕಾಡೆಮಿ ಕುಂದಾಪುರ: ಸಿಎ ಇಂಟರ್ಮೀಡಿಯೇಟ್ ರ್ಯಾಂಕ್ ವಿಜೇತೆ ವೈಷ್ಣವಿ ಎಂ.ವಿ ಯವರಿಗೆ ಸನ್ಮಾನ
ಕುಂದಾಪುರ (ಸೆ,20): ಇಲ್ಲಿನ ಕುಂದೇಶ್ವರ ಮಾರ್ಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷ ಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ (ಸ್ಪೇಸ್) ಸಿಎ/ ಸಿಎಸ್/ ಸಿಎಮ್ಎ ಮತ್ತು ಬ್ಯಾಂಕಿಂಗ್ ತರಬೇತಿ ಸಂಸ್ಥೆಯು ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸಿದ ಇಂಟರ್ಮೀಡಿಯೆಟ್ ಪರೀಕ್ಷೆಯಲ್ಲಿ ಭಾರತಕ್ಕೆ 29ನೇ ರ್ಯಾಂಕ್ ಪಡೆದ ವೈಷ್ಣವಿ ಎಂ ವಿ ಯವರನ್ನು ಸನ್ಮಾನಿಸಲಾಯಿತು. ಅತ್ಯಂತ ಕಠಿಣ ಪಠ್ಯಕ್ರಮ ಪರೀಕ್ಷೆಯಲ್ಲೊಂದಾದ ಸಿಎ ಪರೀಕ್ಷೆಯಲ್ಲಿ ನಮ್ಮ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಇಂತಹ ಸಾಧನೆ […]
ಶಿಕ್ಷ ಪ್ರಭಾ ಅಕಾಡೆಮಿ ಕುಂದಾಪುರ: ಸಿಎ ಇಂಟರ್ಮೀಡಿಯೇಟ್ ಪರೀಕ್ಷೆಯಲ್ಲಿ ಅಖಿಲ ಭಾರತ 29ನೇ ರ್ಯಾಂಕ್
ಕುಂದಾಪುರ(ಸೆ,19): ಇಲ್ಲಿನ ಕುಂದೇಶ್ವರ ಮಾರ್ಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಶಿಕ್ಷ ಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್(ಸ್ಪೇಸ್) ಸಿಎ/ಸಿಎಸ್/ಸಿಎಮ್ಎ ಮತ್ತು ಬ್ಯಾಂಕಿಂಗ್ ತರಬೇತಿ ಸಂಸ್ಥೆಯ ವಿದ್ಯಾರ್ಥಿಗಳು ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸಿದ ಸಿಎ ಇಂಟರ್ಮೀಡಿಯೇಟ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ತೋರಿದ್ದಾರೆ. ಸಂಸ್ಥೆಯ ವಿದ್ಯಾರ್ಥಿನಿ ವೈಷ್ಣವಿ ಅವರು 543 ಅಂಕ ಗಳಿಸುವುದರೊಂದಿಗೆ ಅಖಿಲ ಭಾರತಕ್ಕೆ 29ನೇರ್ಯಾಂಕ್ ಗಳಿಸಿದ್ದಾರೆ. ಹಾಗೆಯೇ ಸಂಸ್ಥೆಯ ವಿದ್ಯಾರ್ಥಿಗಳಾದ ರಕ್ಷಿತ್ ಶೆಟ್ಟಿ 246, […]
ಸಂಗೀತ
ನದಿಯ ಮೇಲೆ ತೇಲುವ ನಾವೆಯ ಗಾನಕೆಹರಿವ ನೀರಿನ ನಾದವಿಲ್ಲಿ ಹಿನ್ನಲೆ ಸಂಗೀತಅಂಬಿಗನೀಗ ಮೈಮರೆತಿದ್ದಾನೆಆ ಶಿಖರದ ಮೈಸವರಿ ಸಾಗುತ್ತಿದೆ ತಂಗಾಳಿಕುಣಿವ ಸಸ್ಯಶ್ಯಾಮಲೆಯ ನೋಡುತ್ತಲೀಗನನ್ನೂರು ಹಾಗೇ ಮೈಮರೆತಿದೆಗದ್ದೆಯೊಳಗಿನ ರೈತನ ಹಾಡನ್ನು ಪೈರುಗಳು ಆಲಿಸಿವೆಅವನ ಪ್ರತಿಹೆಜ್ಜೆಗಳೂ ನಾಟ್ಯದಂತೆಯೇಧರಿತ್ರಿಗೂ ಏನೋ ರೋಮಾಂಚನವಾಗುತ್ತಿದೆಪತಂಗಗಳೂ ಜೇನ್ನೊಳಗಳೂ ಹುಡುಕಾಡಿವೆ ಮಧುವಿಗಾಗಿಹೂವೊಂದು ಸುಖಿಸುತ್ತಿರಲೀಗ ಗೋವಿನ ಕೊರಳ ಗಂಟೆಗಳುಹಿಮ್ಮೇಳ ನುಡಿಸುತ್ತೀವೆಮೂಡಣದಲ್ಲೀಗ ನೇಸರನಾಗಮನದ ಸಮಯಪಕ್ಷಿಗಳೀಗ ಆಲಾಪನೆ ಶುರುಹಚ್ಚಿಕೊಂಡಿವೆಮರದೆಲೆಗಳಿಂದ ಬೀಳುವ ಮುತ್ತಿನ ಹನಿಗಳೂ ಏನೋವಿಶೇಷ ಪರಿಣಾಮವನ್ನುಂಟುಮಾಡಿವೆ ಸಂಗೀತಕ್ಕೆನಡುವಲ್ಲಿ ಕೊಡವ ಹೊತ್ತು ಸಾಗಿದ ನೀರೆಯದ್ದೊಂದು ಕಾವ್ಯಹಟ್ಟಿಯನ್ನು ಬಿಟ್ಟ […]
ಸ್ಪರ್ಧೆಗಳ ಮೂಲಕ ವ್ಯಕ್ತಿತ್ವ ವಿಕಸನ ವೃದ್ಧಿ-ಡಾ| ಹೆರಾಲ್ಡ್ ಐವನ್ ಮೋನಿಸ್
ಶಿರ್ವ(ಸೆ,18) : ಪ್ರತಿಯೊಂದು ಕ್ಷೇತ್ರದಲ್ಲಿ ಕಂಪ್ಯೂಟರ್ ಬಳಕೆ ಹೆಚ್ಚುತ್ತಿರುವ ಕಾರಣ ಕಂಪ್ಯೂಟರ್ ಕಲಿಕೆಯ ಅವಶ್ಯಕತೆ ಇಂದು ಅಗತ್ಯವಾಗಿದೆ .ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ತಮ್ಮಲ್ಲಿರುವ ಕೌಶಲ್ಯಗಳನ್ನು ವೃದ್ಧಿಸಿಕೊಳ್ಳಲು ಕಂಪ್ಯೂಟರ್ ಗಳನ್ನು ಹೆಚ್ಚಾಗಿ ಬಳಸಿಕೊಂಡು ಸಮಾಜಕ್ಕೆ ಬೇಕಾಗುವ ತಂತ್ರಜ್ಞಾನವನ್ನು ರೂಪಿಸಿ,ಸಂಶೋಧನಾ ಮನಸ್ಥಿತಿ ಬೆಳೆಸಿಕೊಂಡು ಉತ್ತಮ ಉದ್ಯೋಗ ಪಡೆದುಕೊಳ್ಳಬೇಕೆಂದು ಶಿರ್ವ ಸಂತ ಮೇರಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ಹೇಳಿದರು. ಅವರು ಕಾಲೇಜಿನ ಗಣಕ ವಿಜ್ಞಾನ ವಿಭಾಗ ಮತ್ತು ಐಟಿ ಕ್ಲಬ್ […]
ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ: ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮ
ಕುಂದಾಪುರ (ಸೆ,18): ಬಿ.ಜೆ.ಪಿ ಕುಂದಾಪುರ ಮಂಡಲದ ವ್ಯಾಪ್ತಿಯಲ್ಲಿ ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮಕ್ಕೆ ಸಪ್ಟೆಂಬರ್,18 ರಂದು ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಮಂಡಳಿ ಉಪಾಧ್ಯಕ್ಷ ಕಿರಣ್ ಕೊಡ್ಗಿ, ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ ಅವರ ಉಪಸ್ಥಿತಿಯಲ್ಲಿ ಚಾಲನೆ ನೀಡಲಾಯಿತು. ಕುಂದಾಪುರ ಪುರಸಭೆ ವ್ಯಾಪ್ತಿಯ ಸಂಗಮ್ ವಾರ್ಡ್, ಮಂಗಳೂರು ಟೈಲ್ಸ್ ಪ್ಯಾಕ್ಟರಿ ವಾರ್ಡ್, ಬಹದ್ದೂರ್ ಷಾ ವಾರ್ಡ್ ಬೂತ್ ಅಧ್ಯಕ್ಷರ ಮನೆಗೆ […]
ಪ್ರಧಾನಿ ನರೇಂದ್ರ ಮೋದಿಜಿಯವರ ಜನ್ಮದಿನಾಚರಣೆ: ಶಿರೂರಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಟ್ರೀ ಗಾರ್ಡ್ ಕೊಡುಗೆ
ಶಿರೂರು(ಸೆ,18): ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರ ಜನ್ಮ ದಿನದ ಪ್ರಯುಕ್ತಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ಶಿರೂರು ಮಹಾಶಕ್ತಿ ಕೇಂದ್ರ ವತಿಯಿಂದ “ಸೇವೆ ಮತ್ತು ಸಮರ್ಪಣಾ ಅಭಿಯಾನ”ದ ಅಂಗವಾಗಿ ಶಾಸಕರಾದ ಬಿ. ಎಂ. ಸುಕುಮಾರ್ ಶೆಟ್ಟಿಯವರುಶಿರೂರಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಟ್ರೀ ಗಾರ್ಡ್ ಕೊಡುಗೆ ನೀಡಿದರು. ಕಳೆದ ಎಂಟು ವರ್ಷಗಳಲ್ಲಿ ದೇಶದ ಪ್ರಸಿದ್ದಿ ಜಗತ್ತಿನಾದ್ಯಂತ ಪಸರಿಸಿದೆ. ನರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ ಈ ದೇಶ ಅತ್ಯಂತ ಅಭಿವೃದ್ಧಿಯ ಪಥದತ್ತ ಸಾಗಿದೆ ಎಂದು ಶಾಸಕರು […]










