ಬೈಂದೂರು (ಆ, 23) : ವಿಶ್ವಕರ್ಮ ಸಮಾಜಬಾಂಧವರ ಪ್ರಮುಖ ಧಾರ್ಮಿಕ ಕೇಂದ್ರವಾದ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಉಳ್ಳೂರು -11 ರ ಉಪ್ರಳ್ಳಿಯ ಶ್ರೀ ಕಾಳಿಕಾಂಬಾ ದೇವಸ್ಥಾನದ ಗರ್ಭಗುಡಿಯ ಶಿಲಾಮಯ ದ್ವಾರಬಾಗಿಲುಗಳಿಗೆ ಭಕ್ತರಾದ ಶ್ರೀ ಯೋಗೀಶ್ ಆಚಾರ್ಯ ಮತ್ತು ಶ್ರೀಮತಿ ಶರ್ಮಿಳಾ ಯೋಗೀಶ್ ಆಚಾರ್ಯ ಬಸ್ರೂರು ದಂಪತಿಗಳು ಹಿತ್ತಾಳೆಯ ಕಲಾತ್ಮಕ ಹೊದಿಕೆಯನ್ನು ಹಾಗೂ ಸುಬ್ರಾಯ ಆಚಾರ್ಯ ಮತ್ತು ಮಕ್ಕಳು ಅಕ್ಸಾಲಿಮನೆ ಬಗ್ವಾಡಿ ಯವರು ದೇವರಿಗೆ ಹಿತ್ತಾಳೆಯ ಪ್ರಭಾವಳಿಯನ್ನು ಸೇವಾರೂಪದಲ್ಲಿ ದೇವಾಲಯದ […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಗಂಗೊಳ್ಳಿ: ಮೀನುಗಾರರಿಗೆ ಅತ್ಯಾಧುನಿಕ ಜೀವ ರಕ್ಷಕ ಸಲಕರಣೆ ಗಳನ್ನು ಸರಕಾರ ಒದಗಿಸಬೇಕು: ಗಂಗೊಳ್ಳಿ ವಲಯ ನಾಡದೋಣಿ ಮೀನುಗಾರರ ಸಂಘ ಮನವಿ
ಗಂಗೊಳ್ಳಿ(ಆ,22): ಸರಕಾರ ಮೀನುಗಾರರಿಗೆ ಅತ್ಯಾಧುನಿಕವಾದ ಜೀವ ರಕ್ಷಕ ಸಲಕರಣೆಗಳು ಒದಗಿಸಬೇಕು ಹಾಗೂ ಅಳಿವೆ ಬಾಗಿಲಿನ ಸುತ್ತಮುತ್ತಲು ಮೀನುಗಾರರಿಗೆ ಯಾವುದೇ ರೀತಿಯ ಜೀವ ಹಾನಿಯಾಗದಂತೆ 24X7 ರಕ್ಷಣಾ ಪಡೆ ನಿರ್ಮಿಸಿ ಕಾರ್ಯನಿರತರಾಗುವಂತೆ ಸರಕಾರಕ್ಕೆ ಪ್ರಸ್ತಾವನೆಯನ್ನು ಗಂಗೊಳ್ಳಿ ವಲಯ ನಾಡದೋಣಿ ಸಂಘದ ವತಿಯಿಂದ ಯಶವಂತ ಖಾರ್ವಿಯವರ ನೇತ್ರತ್ವದಲ್ಲಿ ಮೀನುಗಾರಿಕೆ ಸಹಾಯಕ ನಿರ್ದೇಶಕಿ ಸುಮಲತಾ ರವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ಗಣಪತಿ ಖಾರ್ವಿ, ನಿರ್ದೇಶಕ ರಾಜೇಶ್ ಖಾರ್ವಿ ಹಾಗೂ ಜೊತೆ […]
ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ವತಿಯಿಂದ 75ರ ಸ್ವಾತಂತ್ರ್ಯೋತ್ಸವ ಆಚರಣೆ
ಕುಂದಾಪುರ(ಆ,15): ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ವತಿಯಿಂದ 75 ರ ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವವನ್ನು ಕೋಟೇಶ್ವರದ ಅಂಶೂ ಐಕಾನ್ ಅಪಾರ್ಟ್ಮೆಂಟ್ ನಲ್ಲಿ ವಿನೂತನ ರೀತಿಯಲ್ಲಿ ಆಚರಿಸಲಾಯಿತು. ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ನ ಅಧ್ಯಕ್ಷರಾದ ಲ.ಕಂದಾವರ ಜಯಶೀಲ ಶೆಟ್ಟಿ ಧ್ವಜಾರೋಹಣ ನೆರವೇರಿಸಿದರು. ಅದೇ ಸಂದರ್ಭದಲ್ಲಿ ಸ್ವಾತಂತ್ರ್ಯಪೂರ್ವದಲ್ಲಿ ಹುಟ್ಟಿದ ಮಹನೀಯರಾದ ಭಂಡಾರ್ಕಾರ್ಸ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಡಾ. ಜಿ. ಎಚ್. ಪ್ರಭಾಕರ ಶೆಟ್ಟಿ, ನಿವೃತ್ತ ಬ್ಯಾಂಕ್ ಅಧಿಕಾರಿ ಶ್ರೀ ಗೋವಿಂದ ಶೆಟ್ಟಿ, ಶ್ರೀ […]
ವಿದ್ಯಾರ್ಥಿಗಳು ಆಂತರಿಕ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಿಕೊಳ್ಳಬೇಕು: ಲೆಫ್ಟಿನೆಂಟ್ ಶ್ರೀ ಕೆ ಪ್ರವೀಣ್ ಕುಮಾರ್
ಪುತ್ತೂರು(ಆ,22): ವಿದ್ಯಾರ್ಥಿಗಳು ಉತ್ತಮ ಉದ್ಯೋಗವನ್ನು ಪಡೆಯಬೇಕಾದರೆ ವಿದ್ಯಾರ್ಥಿ ಜೀವನದಲ್ಲಿ ತಮ್ಮ ಆಂತರಿಕ ಶೈಕ್ಷ ಣಿಕ ಗುಣಮಟ್ಟವನ್ನು ಹೆಚ್ಚಿಸಿಕೊಳ್ಳಬೇಕಾದದು ಇಂದು ಅನಿವಾರ್ಯವಾಗಿದೆ. ಇದಕ್ಕೆ ವಿದ್ಯಾರ್ಥಿಗಳು ಪೂರ್ವ ತಯಾರಿಯನ್ನು ಮಾಡುವುದರ ಜೊತೆಗೆ, ಸರಿಯಾದ ಮಾಹಿತಿ ಮತ್ತು ವೃತ್ತಿ ಮಾರ್ಗದರ್ಶನವನ್ನು ಪಡೆದು, ನಿರ್ದಿಷ್ಟ ಗುರಿಯನ್ನು ತಲುಪಬೇಕೇಂದು ಶಿರ್ವ ಸಂತ ಮೇರಿ ಮಹಾವಿದ್ಯಾಲಯದ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಲೆಫ್ಟಿನೆಂಟ್ ಶ್ರೀ ಕೆ ಪ್ರವೀಣ್ ಕುಮಾರ್ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜಿನ ಗಣಕವಿಜ್ಞಾನ ವಿಭಾಗ […]
ಡಾ.ಬಿ.ಬಿ.ಹೆಗ್ಡೆ ಕಾಲೇಜು, ಕುಂದಾಪುರ: ಓಣಂ ಸಂಭ್ರಮ
ಕುಂದಾಪುರ (ಆ,21): ಇಲ್ಲಿನ ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಓಣಂ ಹಬ್ಬವನ್ನು ಕಾಲೇಜಿನ ಐಕ್ಯೂಎಸಿ ಘಟಕ ಹಾಗೂ ಹಿಂದಿ ವಿಭಾಗದ ಆಯೋಜನೆಯಲ್ಲಿ ಆಗಸ್ಟ್,21 ರಂದು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೋ.ಕೆ ಉಮೇಶ್ ಶೆಟ್ಟಿ ಯವರು ದೀಪ ಬೆಳಗಿಸುವ ಮೂಲಕ ಓಣಂ ಆಚರಣೆಗೆ ಶುಭಹಾರೈಸಿದರು.ಕಾಲೇಜಿನ ಉಪ ಪ್ರಾಂಶುಪಾಲರಾದ ಶ್ರೀ.ಚೇತನ್ ಶೆಟ್ಟಿ ಕೋವಾಡಿ,ಐಕ್ಯೂಎಸಿ ಘಟಕದ ಸಂಯೋಜಕಿ ಅವಿತಾ ಕೋರೆಯಾ,ಹಿಂದಿ ವಿಭಾಗದ ಮುಖ್ಯಸ್ಥರಾದ ಡಾ.ದೀಪಾ ಹಾಗೂ ಕಾಲೇಜಿನ ಬೋಧಕ ,ಬೋಧಕೇತರ ವ್ರಂದ ಹಾಗೂ ವಿದ್ಯಾರ್ಥಿಗಳು […]
ಡಾ.ಬಿ.ಬಿ.ಹೆಗ್ಡೆ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ
ಕುಂದಾಪುರ (ಆ,21): ಮಾಜಿ ಪ್ರಧಾನಿ ದಿವಂಗತ ಶ್ರೀ ರಾಜೀವ್ ಗಾಂಧಿಯವರ ಜನ್ಮ ದಿನವನ್ನು ಸದ್ಭಾವನಾ ದಿನವಾಗಿ ಆಗಸ್ಟ್,20ರಂದು ದೇಶದಲ್ಲೆಡೆ ಆಚರಿಸಲಾಗುತ್ತದೆ. ದೇಶದ ಜನರಲ್ಲಿ ಭಾಷೆ,ಧರ್ಮ ಪ್ರಾದೇಶಿಕತೆ ಕುರಿತಾಗಿ ಸದ್ಭಾವನೆ ಮೂಡಿಸಲು ಈ ಕಾರ್ಯಕ್ರಮ ಆಚರಿಸಲಾಗುತ್ತಿದ್ದು, ಕುಂದಾಪುರದ ಡಾ.ಬಿ.ಬಿ.ಹೆಗ್ಡೆ ಕಾಲೇಜಿನ ಎನ್.ಎಸ್.ಎಸ್ ಘಟಕದ ಆಶ್ರಯದಲ್ಲಿ ಸದ್ಭಾವನಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಪ್ರತಿಜ್ಞೆಯನ್ನು ಸ್ವೀಕರಿಸುವ ಮೂಲಕ ಆಚರಿಸಲಾಯಿತು . ಕಾಲೇಜಿನ ಪ್ರಾಂಶುಪಾಲರಾದ ಪ್ರೋ.ಕೆ.ಉಮೇಶ್ ಶೆಟ್ಟಿ ,ಉಪಪ್ರಾಂಶುಪಾಲರಾದ ಶ್ರೀ.ಚೇತನ್ ಶೆಟ್ಟಿ ಕೋವಾಡಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ಎನ್.ಎಸ್.ಎಸ್ […]
ಡಾ|ಬಿ.ಬಿ. ಹೆಗ್ಡೆ ಕಾಲೇಜು ಕುಂದಾಪುರ: ಯೋಧ ಪ್ರದೀಪ್ ಖಾರ್ವಿ ಯವರಿಗೆ ಸನ್ಮಾನ
ಕುಂದಾಪುರ (ಆ,20): ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕುಂದಾಪುರದ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್ಸಿಸಿ ಘಟಕದ ವತಿಯಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಕುಂದಾಪುರದ ಯೋಧ ಪ್ರದೀಪ್ ಖಾರ್ವಿ ಯವರನ್ನು ಸಂಸ್ಥೆಯ ಸಂಸ್ಥಾಪಕರು ಮತ್ತು ಬೈಂದೂರು ಶಾಸಕರಾದ ಬಿ.ಎಂ.ಸುಕುಮಾರ ಶೆಟ್ಟಿಯವರು ಸನ್ಮಾನಿಸಿ ಗೌರವಿಸಿದರು. ನಂತರ ಮಾತನಾಡಿದ ಅವರು ಪ್ರದೀಪ್ ಖಾರ್ವಿಯವರು ಯುವ ಸಮುದಾಯಕ್ಕೆ ಪ್ರೇರಣೆ, ನಮ್ಮ ಭಾಗದಲ್ಲಿ ಇನ್ನಷ್ಟು ಸಂಖ್ಯೆಯ ಯುವಕ ಯುವತಿಯರು ಸೈನ್ಯಕ್ಕೆ ಸೇರುವಂತಾಗಲಿ […]
ಶ್ರೀ ಶಾರದಾ ಕಾಲೇಜು, ಬಸ್ರೂರು: 75ನೇ ಸ್ವಾತಂತ್ರ್ಯ ದಿನಾಚರಣೆ
ಬಸ್ರೂರು (ಆ,19): ಶ್ರೀ ಶಾರದಾ ಕಾಲೇಜಿನಲ್ಲಿ ದೇಶದ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಾಲೇಜು ಟ್ರಸ್ಟ್ ಸದಸ್ಯರಾದ ಶ್ರೀಮತಿ ಅನುಪಮಾ ಎಸ್. ಶೆಟ್ಟಿ ಧ್ವಜಾರೋಹಣ ಗೈದು ಕಾರ್ಯಕ್ರಮನುದ್ದೇಶಿಸಿ ಮಾತನಾಡಿ, ಇಂದು ಸ್ವಾತಂತ್ರ್ಯ ಜೊತೆ ಜೊತೆಗೆ ದೇಶದ ಶ್ರೀಮಂತ ಸಂಸ್ಕೃತಿ ಹಾಗೂ ಆಚರಣೆಯನ್ನು ಆಚರಿಸಲಾಗುತ್ತದೆ ಎಂದರು. ಕಾಲೇಜಿನ ಪ್ರಾಂಶುಪಾಲರಾದ ಡಾ.ಚಂದ್ರಾವತಿ ಶೆಟ್ಟಿ ಸ್ವಾಗತಿಸಿದರು. ಎನ್.ಸಿ.ಸಿ ಅಧಿಕಾರಿ ಸಂದೀಪ್ .ಕೆ ಕಾರ್ಯಕ್ರಮ ನಿರೂಪಿಸಿದರು. ರೋವರ್ಸ್ & ರೇಂಜರ್ಸ ಅಧಿಕಾರಿ […]
ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸದ್ಭಾವನ ದಿನಾಚರಣೆ- ಪ್ರತಿಜ್ಞಾ ಸ್ವೀಕಾರ
ಶಿರ್ವ(ಆ,19): ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ 2021ರ ಆಗಸ್ಟ್ 18ರಂದು ರಾಷ್ಟ್ರೀಯ ಸದ್ಭಾವನ ದಿನಾಚರಣೆ ಹಾಗೂ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸರವರು ಪ್ರತಿಜ್ಞಾ ವಿಧಿಯನ್ನು ಬೋಧಿಸಿ, ಎಲ್ಲಾ ಧರ್ಮ, ಭಾಷೆಗಳ ಜನರಲ್ಲಿ ರಾಷ್ಟ್ರೀಯ ಏಕೀಕರಣ, ಕೋಮು ಸೌಹಾರ್ದತೆಯನ್ನು ಉತ್ತೇಜಿಸಿ, ಎಲ್ಲರಲ್ಲೂ ಸದ್ಭಾವನೆಯನ್ನು ಮೂಡಿಸಿ ಹಿಂಸಾಚಾರವನ್ನು ತ್ಯಜಿಸುವಂತೆ ಮಾಡಲು ಪ್ರತಿವರ್ಷಆಗಸ್ಟ್ 20ರಂದು ಸದ್ಭಾವನಾ ದಿನವನ್ನು ಆಚರಿಸಲಾಗುತ್ತದೆ. ಆದರೆ ಈ ವರ್ಷ ಆಗಸ್ಟ್ 20ರಂದು […]
ಮಗುವಿನ್ನು ಉಳಿಸಿಕೊಳ್ಳಲು ಆಗಲಿಲ್ಲ ,ಆದರೆ ಹೆತ್ತವರ ಈ ಮಾನವೀಯ ನೆಲೆಯ ಕಾರ್ಯ ನಿಜಕ್ಕೂ ಪ್ರಶಂಸನೀಯ
ಮಲ್ಪೆ (ಆ,19): ಉಡುಪಿ ಜಿಲ್ಲೆಯ ಬೆಳ್ಮಣ್ಣು ಗ್ರಾಮದ ಸಂದೀಪ ದೇವಾಡಿಗ ಹಾಗೂ ರಂಜಿತಾ ಸಂದೀಪ್ ದಂಪತಿಯ ಪುಟ್ಟ ಕಂದಮ್ಮ ಮಾಸ್ಟರ್ ಮಿಥಾಂಶ್ ನನ್ನು ಉಳಿಸಿಕೊಳ್ಳೋಕೆ ಪಟ್ಟ ಕಷ್ಟ ಅಷ್ಟಿಷ್ಟಲ್ಲ.ಮಾರಕ ಕಾಯಿಲೆಯಿಂದ ಬಳಲುತ್ತಿದ್ದ ಈ ಮಗುವಿನ ಚಿಕಿತ್ಸಾ ವೆಚ್ಚ ಬರೊಬ್ಬರಿ 16 ಕೋಟಿ ರೂಪಾಯಿ ಅಗತ್ಯವಿತ್ತು. ಅಷ್ಟು ಹಣ ಹೊಂದಿಸಲು ಹೆತ್ತವರು ಸಾರ್ವಜನಿಕರಲ್ಲಿ ಸಹಾಯ ಕೋರಿದ್ದರು. ಆದರೆ 16 ಕೋಟಿ ಸಂಗ್ರಹ ಆಗಲಿಲ್ಲ. ಕೇವಲ 48 ಲಕ್ಷ ರೂಪಾಯಿ ಮಾತ್ರ ಸಾರ್ವಜನಿಕರಿಂದ […]










