ಮಧುವನ ( ಆ, 18): ಇಲ್ಲಿನ ಇ ಸಿ ಆರ್ ಕಾಲೇಜಿನಲ್ಲಿ ಸ್ವತಂತ್ರ ದಿನದ ಅಮೃತ ಮಹೋತ್ಸವದ ಅಂಗವಾಗಿ ನಡೆಸ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮವನ್ನುಆಯೋಜಿಸಲಾಗಿತ್ತು. ವಿಶ್ವ ಯೋಗದಿನದ ಅಂಗವಾಗಿ ನಡೆದ “ಮನೆಯಲ್ಲಿಯೇ ಯೋಗ” ಎಂಬ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಪ್ರಥಮ ವರ್ಷದ ಬಿ. ಬಿ. ಎ ವಿದ್ಯಾರ್ಥಿನಿ ಕುಮಾರಿ ಬಿಂದುಶ್ರೀ ಯವರಿಗೆ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಮಧು ಟಿ ಭಾಸ್ಕರ್ ಅವರು ರೂ. 5000 ನಗದು ಬಹುಮಾನ […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಸ್ಪರ್ಧೆಯಲ್ಲಿ ಭಾಗವಹಿಸಲು ಸ್ವಂತಿಕೆ ಹಾಗೂ ಸೃಜನಶೀಲತೆ ಪ್ರಮುಖವಾದುದು – ನರೇಂದ್ರ .ಎಸ್ .ಗಂಗೊಳ್ಳಿ
ಗಂಗೊಳ್ಳಿ (ಆ,18) :ಯಾವುದೇ ಸ್ಪರ್ಧೆಗಳಲ್ಲಿ ಭಾಗವಹಿಸುವಾಗ ಅದರ ನೀತಿ-ನಿಯಮಗಳನ್ನು ಸರಿಯಾಗಿ ಪಾಲಿಸಬೇಕು. ವಿಷಯ ಸಂಗ್ರಹಣೆಗಾಗಿ ವಿವಿಧ ಆಕರಗಳನ್ನು ಬಳಸಿಕೊಂಡರೂ ಕೂಡ ಸ್ವಂತಿಕೆ ಸೃಜನಶೀಲತೆ ಮುಖ್ಯವಾಗಬೇಕು ಎಂದು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಶ್ರೀ ಸಂಪಿಗೆ ಜಟ್ಟಿಗೇಶ್ವರ ದೇವಸ್ಥಾನದ ವಠಾರದಲ್ಲಿ ಗಂಗೊಳ್ಳಿ ಸಮುದಾಯ ಹಿತರಕ್ಷಣಾ ಸಮಿತಿ(ರಿ)ಯ ವತಿಯಿಂದ ಭಾರತದ 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಪ್ರೌಢಶಾಲಾ […]
ಸುಣ್ಣಾರಿ ಎಕ್ಸ್ಲೆಂಟ್ ಕಾಲೇಜಿನಲ್ಲಿ ವನಮಹೋತ್ಸವ ಆಚರಣೆ
ಕೋಟೇಶ್ವರ (ಆ,18): ಸುಜ್ಞಾನ್ ಎಜುಕೇಶನ್ ಟ್ರಸ್ಟ್ ಮೂಡಬಿದ್ರೆ, ಶಿಕ್ಷಾಪ್ರಭಾ ಅಕಾಡೆಮಿ ಕುಂದಾಪುರ, ಹಾಗೂ ಲಯನ್ಸ್ ಕ್ಲಬ್ ಹಂಗಳೂರು (ಕುಂದಾಪುರ) ಇವರ ಸಂಯುಕ್ತ ಆಶ್ರಯದಲ್ಲಿ ಆಗಸ್ಟ್ , 6 ರಂದು ವನಮಹೋತ್ಸವ ಕಾರ್ಯಕ್ರಮ ಸುಣ್ಣಾರಿ ಎಕ್ಸ್ಲೆಂಟ್ ಕಾಲೇಜಿನಲ್ಲಿ ನಡೆಯಿತು. ಉಡುಪಿ ಜಿಲ್ಲೆಯ ಉಪನಿರ್ದೇಶಕರಾದ ಮಾರುತಿಯವರು ಗಿಡನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಹೆಚ್. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪಚಂದ್ರ ಶೆಟ್ಟಿ, ಎಮ್.ಎಮ್. ಹೆಗ್ಡೆ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷರಾದ ಎಂ. […]
ಸುಣ್ಣಾರಿ ಎಕ್ಸಲೆಂಟ್ ಕಾಲೇಜು :ಸಂಭ್ರಮದ 75ನೇ ಸ್ವಾತಂತ್ರ್ಯ ದಿನಾಚರಣೆ
ಕೋಟೇಶ್ವರ (ಆ ,18): ಇಲ್ಲಿನ ಸುಣ್ಣಾರಿ ಎಕ್ಸಲೆಂಟ್ ಕಾಲೇಜಿನಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕುಂದಾಪುರದ ಪ್ರಸಿದ್ಧ ಹೋಮಿಯೋಪತಿ ವೈದ್ಯರಾದ, ಡಾಕ್ಟರ್ ಉತ್ತಮ್ ಕುಮಾರ್ ಶೆಟ್ಟಿ ಧ್ವಜಾರೋಹಣ ಮಾಡಿ, ಸ್ವಾತಂತ್ರ್ಯ ಹೋರಾಟಗಾರರ ಹೋರಾಟದ ಬದುಕಿನ ಬಗ್ಗೆ ತಿಳಿಸಿದರು. ಸುಜ್ಞಾನ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷರು, ಕಾಲೇಜಿನ ಪ್ರಾಂಶುಪಾಲರಾದ ಡಾ.ಎಚ್ ರಮೇಶ್ ಶೆಟ್ಟಿ ಮಾತನಾಡಿ ನಮ್ಮ ಹಿರಿಯರು ತಂದುಕೊಟ್ಟ ಸ್ವಾತಂತ್ರ್ಯವನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕು. ಇನ್ನೂರು ವರ್ಷ […]
ಹರೀಶ್ ಬಂಗೇರ ತಾಯ್ನಾಡಿಗೆ ಆಗಮನ: ಭಾವುಕ ಕ್ಷಣಕ್ಕೆ ಸಾಕ್ಷಿಯಾಯಿತು ಬೆಂಗಳೂರು ಏರ್ಪೋರ್ಟ್
ಬೆಂಗಳೂರು (ಆ,18): ಸೌದಿ ಅರೇಬಿಯಾದಲ್ಲಿ ಬಂಧನಕ್ಕೊಳಪಟ್ಟಿದ್ದ ಕುಂದಾಪುರ ಮೂಲದ ಹರೀಶ್ ಬಂಗೇರ ಬೆಂಗಳೂರು ಏರ್ಪೋರ್ಟ್ ತಲುಪಿದ್ದಾರೆ. ಸೌದಿ ದೊರೆಯ ವಿರುದ್ಧ ಫೇಸ್ಬುಕ್ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದರೆಂದು ಆರೋಪ ಎದುರಿಸಿರುವ ಹರೀಶ್ ನಿರಪರಾಧಿ ಎಂದು ತಿಳಿದ ಮೇಲೆ ಸೌದಿ ಅರೇಬಿಯಾ ಸರಕಾರ ಇವರನ್ನು ಬಿಡುಗಡೆಗೊಳಿಸಿದ್ದು,ಇದೀಗ ಕುಂದಾಪುರ ಪರಿಸರದ ಜನತೆಗೆ ಸಂತೋಷ ತಂದಿದೆ. ಬೆಂಗಳೂರಿಗೆ ಆಗಮಿಸಿದ ಹರೀಶ್ ಬಂಗೇರರನ್ನು ಲೋಕೇಶ್ ಅಂಕದಕಟ್ಟೆ ಮತ್ತು ತಂಡ ಬೆಂಗಳೂರಿನ ಏರ್ಪೋರ್ಟ್ನಲ್ಲಿ ಬರಮಾಡಿಕೊಂಡರು.
ಬಿಜೆಪಿ ಯುವಮೋರ್ಚಾ ಕುಂದಾಪುರ ಮಂಡಲ : ಯುವ ತಿರಂಗಾ ಯಾತ್ರಾ ಸೈಕಲ್ ಜಾಥಾ
ಕುಂದಾಪುರ (ಆ, 16) : ದೇಶದ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಬಿಜೆಪಿ ಯುವಮೋರ್ಚಾ ಕುಂದಾಪುರ ಮಂಡಲ ವತಿಯಿಂದ ಆಗಸ್ಟ್15 ರಂದು ಯುವ ತಿರಂಗಾ ಯಾತ್ರಾ ಸೈಕಲ್ ಜಾಥಾ ನಡೆಯಿತು. ಕುಂದಾಪುರ ಶಾಸ್ತ್ರೀ ವೃತ್ತದಿಂದ ಹೊರಟು ಹೆದ್ದಾರಿ ಮಾರ್ಗವಾಗಿ ಕೋಟೇಶ್ವರ ಪೇಟೆಯ ಮೂಲಕ ತಿರುವು ಪಡೆದು ಕುಂದಾಪುರ ಪೇಟೆಯಯತ್ತ ಸಾಗಿದ ಜಾಥಾ ನಂತರ ಶಾಸ್ತ್ರೀ ವೃತ್ತದಲ್ಲಿ ಪೂರ್ಣಗೊಳಿಸಲಾಯಿತು. ಸೈಕಲ್ ಜಾಥಕ್ಕೆ ಮಂಡಲ ಅಧ್ಯಕ್ಷರಾದ ಶಂಕರ ಅಂಕದಕಟ್ಟೆ ಚಾಲನೆ ನೀಡಿದರು. […]
ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ ಮಹಿಳಾ ಮೋರ್ಚಾ : ಯೋಧರಿಗೆ ಸನ್ಮಾನ
ಕುಂದಾಪುರ (ಆ, 16) : ದೇಶದ 75ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ನಮ್ಮ ಮಾತ್ರಭೂಮಿಯ ರಕ್ಷಣೆಗಾಗಿ ಹೋರಾಡಿದ ಯೋಧರನ್ನು ಗೌರವಿಸುವ ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ ಮಹಿಳಾ ಮೋರ್ಚಾದ ನೇತ್ರತ್ವದಲ್ಲಿ ಆಗಸ್ಟ್ 15 ರಂದು ಯೋಧರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ನಿವೃತ್ತ ಯೋಧರಾದ ಶ್ರೀವಿಶ್ವನಾಥ ಹಂದೆ ಕುಂಭಾಶಿ ಹಾಗೂ ಕೋಟ ಪಡುಕರೆಯ ಯೋಧ ಶ್ರೀ ಲೋಹಿತ್ ಪೂಜಾರಿ ಯವರನ್ನು ಅತ್ಯಂತ ಗೌರವ ಪೂರ್ವಕವಾಗಿ ಅವರ […]
ಬಡಾಬಾಳು : ಅಟಲ್ ಜೀ ಬಸ್ ತಂಗುದಾಣ ಉದ್ಘಾಸಿದ ಶಾಸಕ ಬಿ. ಎಮ್. ಸುಕುಮಾರ ಶೆಟ್ಟಿ
ಸಿದ್ದಾಪುರ (ಆ, 17) : ಸಿದ್ದಾಪುರ ಗ್ರಾಮ ಪಂಚಾಯತ್ ಬಡಾಬಾಳುವಿನಲ್ಲಿ ದೇಶದ ಮಾಜಿ ಪ್ರಧಾನಿ, ಧೀಮಂತ ನಾಯಕ, ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿಯವರ ಹೆಸರಿನಲ್ಲಿ ಅಟಲ್ ಜೀ ಬಸ್ ತಂಗುದಾಣ ವನ್ನು ಬೈಂದೂರು ಶಾಸಕ ಬಿ.ಎಮ್.ಸುಕುಮಾರ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗೆಳೆಯರ ಬಳಗ ಬಡಾಬಾಳು ಇದರ ಸದಸ್ಯರು, ಬಿಜೆಪಿ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಕುಂದಾಪುರದ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ 75 ನೇ ಸ್ವಾತಂತ್ರ್ಯೋತ್ಸವ
ಕುಂದಾಪುರ (ಆ, 16) : ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ 75 ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಕಾಲೇಜಿನ ಸಂಸ್ಥಾಪಕರು, ಬೈಂದೂರಿನ ಶಾಸಕರಾದ ಶ್ರೀ. ಬಿ. ಎಂ. ಸುಕುಮಾರ ಶೆಟ್ಟಿಯವರು ಧ್ವಜಾರೋಹಣಗೈದರು. ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರಾದ ಹುಂತ್ರಿಕೆ ಸುಧಾಕರ ಶೆಟ್ಟಿ, ಪ್ರಾಂಶುಪಾಲರಾದ ಪ್ರೋ. ಕೆ. ಉಮೇಶ್ ಶೆಟ್ಟಿ, ಉಪಪ್ರಾಂಶುಪಾಲರಾದ ಕೋವಾಡಿ ಚೇತನ್ ಶೆಟ್ಟಿ, ಎನ್ಸಿಸಿ ಅಧಿಕಾರಿ ಶಿವರಾಜ್ ಸಿ. ನಾವುಂದ ಹಾಗೂ ಸಂಸ್ಥೆಯ ಬೋಧಕ ಮತ್ತು […]
ಡಾನ್ ಬಾಸ್ಕೋ ಸ್ಕೂಲ್, ತ್ರಾಸಿ : ಸಂಭ್ರಮದ 75 ನೇ ಸ್ವಾತಂತ್ರ್ಯೋತ್ಸವ
ತ್ರಾಸಿ (ಆ, 16) : ಇಲ್ಲಿನ ಡಾನ್ ಬಾಸ್ಕೋ ಸೀನಿಯರ್ ಸೆಕೆಂಡರಿ ಸ್ಕೂಲ್ ನಲ್ಲಿ ದೇಶದ 75 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶಾಲಾ ಆವರಣದಲ್ಲಿ ಬಹಳ ಅದ್ಧೂರಿಯಾಗಿ ಆಚರಿಸಲಾಯಿತು. ಗ್ಲೋಬ್ ಇಂಟರ್ಲಾಕ್ಸ್ ನಾಡಾದ ಮಾಲೀಕರು ಮತ್ತು ಪೋಷಕರಾದ ಸಂತೋಷ ಡಿ’ಸೋಜಾಧ್ವಜಾರೋಹಣ ಗೈದರು. ಧ್ವಜಾರೋಹಣ ಸಮಾರಂಭದಲ್ಲಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ, ಕೋವಿಡ್ ಸಂತ್ರಸ್ತರು ಮತ್ತು ಯೋಧರನ್ನು ಸ್ಮರಿಸಲಾಯಿತು. ಸ್ವಾತಂತ್ರ್ಯ ದಿನದ ಸಂದೇಶಗಳನ್ನು ಹಿಂದಿ, ಕನ್ನಡ ಮತ್ತು ಇಂಗ್ಲೀಷ್ 3 ಭಾಷೆಗಳಲ್ಲಿ ಕ್ರಮವಾಗಿ […]










