ಬೈಂದೂರು (ಆ,15): ಮೊಗವೀರ ಯುವ ಸಂಘಟನೆ( ರಿ) ಉಡುಪಿ ಜಿಲ್ಲೆ ಇದರ ಹೆಮ್ಮಾಡಿ ಘಟಕದ ವತಿಯಿಂದ ಕಾವೇರಿ ಮೊಗವೀರ್ತಿ ಯವರಿಗೆ ನೂತನ ಮನೆಯನ್ನು ನಿರ್ಮಿಸಿ ಕೊಡುವುದರ ಜೊತೆಗೆ ,ಮನೆಯ ಕೀಲಿ ಕೈ ಹಸ್ತಾಂತರ ಕಾರ್ಯಕ್ರಮ ಆಗಸ್ಟ್15 ರಂದು ಜರುಗಿತು. ಜಿಲ್ಲಾ ಸಂಘಟನೆ ಯ ಅಧ್ಯಕ್ಷರು ಶಿವರಾಮ್ ಕೋಟ, ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿಯ ಕುಂದಾಪುರ ಶಾಖಾ ಅಧ್ಯಕ್ಷರಾದ ಕೆ .ಕೆ ಕಾಂಚನ, ಸತೀಶ್ ನಾಯಕ್ ನಾಡ ಪಡುಕೋಣೆ, […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ರೋಟರಿ ಕ್ಲಬ್ ಕುಂದಾಪುರ: ಸಿಇಟಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಮಾಸ್ಕ್ ಮತ್ತು ಸ್ಯಾನಿಟೈಜರ್ ಕಿಟ್ ಹಸ್ತಾಂತರ
ಕುಂದಾಪುರ (ಆ,14): ಸಿಇಟಿ ಪರೀಕ್ಷೆಗೆ ಹಾಜರಾಗುವ ಸುಮಾರು 500 ವಿದ್ಯಾರ್ಥಿಗಳಿಗೆ ಮಾಸ್ಕ್ ಮತ್ತು ಸ್ಯಾನಿಟೈಜರ್ಗಳ ಕಿಟ್ ನ್ನು ರೋಟರಿ ಕ್ಲಬ್ ಕುಂದಾಪುರದ ವತಿಯಿಂದ ಕುಂದಾಪುರದ ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ರಾಮಕೃಷ್ಣಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ, ಕಾರ್ಯದರ್ಶಿ ಮತ್ತು ಹಿರಿಯ ಸದಸ್ಯರು ಉಪಸ್ಥಿತರಿದ್ದರು.
ವರಲಕ್ಷೀ ಚಾರಿಟೇಬಲ್ ಟ್ರಸ್ಟ್(ರಿ) ಉಪ್ಪುಂದ : ಸ್ವಾತಂತ್ಯ್ರೋತ್ಸವ ದಿನದಂದು ಶ್ರೀ ಗೋವಿಂದ ಬಾಬು ಪೂಜಾರಿಯವರಿಂದ ಬಡ ಕುಟುಂಬಕ್ಕೆ ಮನೆ ಹಸ್ತಾಂತರ
ತ್ರಾಸಿ (ಆ,15): ತ್ರಾಸಿ ಸಮೀಪದ ಕಂಚುಗೋಡು ಭಗತ್ ನಗರದ ಶ್ರೀಮತಿ ಪುಷ್ಪಾ ಉಲ್ಲಾಸ್ ದಂಪತಿಗೆ ಅಗಸ್ಟ್ 15 ರಂದು ನೂತನ ಮನೆಯನ್ನು ಉದ್ಯಮಿ ,ಕೊಡುಗೈದಾನಿ ಶ್ರೀ ಗೋವಿಂದ ಬಾಬು ಪೂಜಾರಿಯವರು ತಮ್ಮಕುಟಂಬದ ಸದಸ್ಯರು, ಅಭಿಮಾನಿಗಳು , ಸೇವಾ ಸಂಕಲ್ಪ ಸಂಸ್ಥೆಯ ಸದಸ್ಯರು ಹಾಗೂ ಊರ ಜನತೆಗಳ ಉಪಸ್ಥಿತಿಯಲ್ಲಿ ಶ್ರೀಮತಿ ಪುಷ್ಪಾ ಉಲ್ಲಾಸ್ ದಂಪತಿಗೆ ಮನೆಯ ಕೀ ನೀಡುವುದರ ಮೂಲಕ ಹಸ್ತಾಂತರಿಸಿದರು. ಹಲವು ಬಡ ಕುಟುಂಬಗಳಿಗೆ ಆಶ್ರಯದಾತರಾಗಿರುವ ಶ್ರೀ ಗೋವಿಂದ ಬಾಬು ಪೂಜಾರಿಯವರು ಮಾಧ್ಯಮ […]
ಶಿರ್ವ ಸಂತ ಮೇರಿ ಮಹಾವಿದ್ಯಾಲಯ: 75ನೇ ಸ್ವಾತಂತ್ರ್ಯ ಸಂಭ್ರಮದ “ಅಮೃತ ಮಹೋತ್ಸವ” ದಿನಾಚರಣೆ
ಶಿರ್ವ(ಆ,15): ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಆಗಸ್ಟ್ 15 ರಂದು 75ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಣೆಯನ್ನು ಕೋವಿಡ್ 19 ಮಾರ್ಗಸೂಚಿಯಂತೆ ಆಚರಿಸಲಾಯಿತು. ಕಾಲೇಜಿನ ಆಡಳಿತಾತ್ಮಕ ಸಹಾಯಕ ಸಿಬ್ಬಂದಿ ಶ್ರೀರಂಗ ರವರು ಧ್ವಜಾರೋಹಣವನ್ನು ನೆರವೇರಿಸಿದ್ದರು. ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸರವರು ,ಮಾತನಾಡಿ ದೇಶದ ಬುನಾದಿಯಾದ ಯುವಜನರು ಹಲವಾರು ಕ್ಷೇತ್ರಗಳಲ್ಲಿ ಸರ್ವತೋಮುಖವಾಗಿ ಪ್ರಗತಿ ಸಾಧಿಸಲು ಕಠಿಣ ಪರಿಶ್ರಮ,ಸರಿಯಾದ ಮಾರ್ಗದರ್ಶನವನ್ನು ಪಡೆದುಕೊಂಡು ನವಸಮಾಜ ನಿರ್ಮಾಣ ಜೊತೆಗೆ ದೇಶಾಭಿವೃದ್ಧಿಗಾಗಿ ತಮ್ಮ ಕೈಲಾದ […]
ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ:75 ನೇ ಸ್ವಾತ್ರಂತ್ರ್ಯ ದಿನಾಚರಣೆ
ಉಡುಪಿ (ಆ,15): ರಾಜ್ಯೋತ್ಸವ ಪುರಸ್ಕ್ರತ ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಇದರ ಜಿಲ್ಲಾ ಕಚೇರಿಯಲ್ಲಿ 75 ನೇ ಸ್ವಾತ್ರಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು. ಧ್ವಜಾರೋಹಣವನ್ನು ಸಂಘಟನೆಯ ಜಿಲ್ಲಾಧ್ಯಕ್ಷರಾದ ಶ್ರೀ ಶಿವರಾಮ ಕೋಟ ನೆರವೇರಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಸುವರ್ಣ ಹಿರಿಯಡ್ಕ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮಲ್ಪೆ : ಬೋಟ್ ದುರಂತ ತಪ್ಪಿಸಿದ ಈಶ್ವರ್ ಮಲ್ಪೆ ತಂಡ
ಮಲ್ಪೆ (ಆ, 14) : ಮಲ್ಪೆ ಬಂದರಿನಲ್ಲಿ ಲಂಗರು ಹಾಕಿದ್ದ ಎರಡು ಬೋಟುಗಳ ಹಗ್ಗ ತುಂಡಾಗಿ ನೀರಿನ ರಭಸಕ್ಕೆ ಸೈಂಟ್ ಮೇರಿಸ್ ಐಲ್ಯಾಂಡ್ ಕಲ್ಲಿನ ಬಳಿ ಬೋಟ್ ಗಳು ಸಮುದ್ರ ಪಾಲಾಗುವ ಸ್ಥಿತಿಯಲ್ಲಿದ್ದುದ್ದನ್ನು ಗಮನಿಸಿದ ಗಾಳ ಹಾಕುವವರು ಫೋನ್ ಕರೆಯ ಮುಖಾಂತರ ಆಪತ್ಭಾಂಧವ ಈಶ್ವರ್ ಮಲ್ಪೆರವರಿಗೆ ತಿಳಿಸಿದ್ದಾರೆ. ವಿಷಯ ತಿಳಿದ ಕೂಡಲೇ ಈಶ್ವರ್ ಮಲ್ಪೆ ಮತ್ತು ಜಮೀರ್ ಕಲ್ಮಾಡಿ ಸಮುದ್ರದಲ್ಲಿನ ಕಲ್ಲಿನ ಬಳಿ ತೆರಳಿ ಸಮುದ್ರ ಪಾಲಾಗುತ್ತಿದ್ದ ಎರಡು ಬೋಟುಗಳನ್ನು […]
ಎಸ್ಎಸ್ಎಲ್ಸಿ ಫಲಿತಾಂಶ : ಶೇಕಡಾ 98.24 ಅಂಕ ಪಡೆದ ಸುಚಿತ್ ಚಂದ್ರ
ಕುಂದಾಪುರ (ಆ, 13) : ಮುಂಬೈ ಪದ್ಮ ಕಮಲ ಕೇಟರರ್ಸ ಮಾಲಿಕರಾದ ಕಂಡ್ಲೂರು ಚಂದ್ರ ಮೊಗವೀರ ಹಾಗೂ ಶಿಕ್ಷಕಿ ಸುಜಾತ ಚಂದ್ರರ ಪುತ್ರ ಸುಚಿತ್ ಚಂದ್ರ ಕುಂದಾಪುರದ ವಿ.ಕೆ. ಆರ್. ಆಂಗ್ಲ ಮಾದ್ಶಮ ಶಾಲೆಯ ವಿದ್ಯಾರ್ಥಿಯಾಗಿದ್ದು ಈ ವರ್ಷ ನಡೆದ ಎಸ್ .ಎಸ್ .ಎಲ್.ಸಿ. ಪರೀಕ್ಷೆಯಲ್ಲಿ ಶೇಕಡಾ 98.24 ಅಂಕ ಪಡೆದಿರುತ್ತಾರೆ. ಶೈಕ್ಚಣಿಕ ಸಾಧನೆಯ ಜೊತೆಗೆ ಇತ ಕ್ರಿಕೆಟ್, ಕ್ವೀಜ್, ಚೆಸ್ ನಲ್ಲಿ ಆಸಕ್ತಿ ಹೊಂದಿದ್ದಾನೆ .
ಶ್ರೀ ಕೃಷ್ಣನ ದರ್ಶನ ಪಡೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಉಡುಪಿ (ಆ, 13) : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಪ್ರವಾಸದಲ್ಲಿರುವ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಉಡುಪಿಯ ಶ್ರೀ ಕೃಷ್ಣನ ದರ್ಶನ ಪಡೆದರು. ನಂತರ ಪರ್ಯಾಯ ಶ್ರೀಗಳ ಜೊತೆ ಸಮಾಲೋಚನೆ ನಡೆಸಿ ಶ್ರೀಗಳ ಆಶೀರ್ವಾದ ಪಡೆದರು. ಪರ್ಯಾಯ ಮಠಾಧೀಶರು ಮುಖ್ಯಮಂತ್ರಿಗಳಿಗೆ ಮಠದ ವತಿಯಿಂದ ಗೌರವ ಸಮರ್ಪಿಸಿದರು.
ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ವತಿಯಿಂದ ಬಡ ಮಹಿಳೆ ಕಾವೇರಿ ಮೊಗವೀರ್ತಿಯವರಿಗೆ ಮನೆ ನಿರ್ಮಾಣ
ಹೆಮ್ಮಾಡಿ (ಆ, 13) : ಮೊಗವೀರ ಯುವ ಸಂಘಟನೆ(ರಿ) ಉಡುಪಿ ಜಿಲ್ಲೆ ಇದರ ಹೆಮ್ಮಾಡಿ ಘಟಕದ ವತಿಯಿಂದ ಬೈಂದೂರು ತಾಲೂಕಿನ ನಾಡ ಗ್ರಾಮದ ಬಡ ಒಂಟಿ ಮಹಿಳೆ ಹೊರ್ನಿ ಮನೆ ಕಾವೇರಿ ಮೊಗವೀರ್ತಿಯವರಿಗೆ ನೂತನ ಮನೆ “ಅಮ್ಮ” ನಿರ್ಮಾಣ ಮಾಡಿ ಆಗಸ್ಟ್,15 ರ ಭಾನುವಾರ ಬೆಳಿಗ್ಗೆ 10 ಗಂಟೆಗೆ ಸತ್ಯನಾರಾಯಣ ಪೂಜೆಯೊಂದಿಗೆ ನೂತನ ಗ್ರಹದ ಕೀಲಿ ಕೈ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮಾನವೀಯ ನೆಲೆಯ ಈ ಕಾರ್ಯಕ್ರಮಕ್ಕೆ ತಾವೆಲ್ಲರೂ ಆಗಮಿಸಿ […]
ಅಗಸ್ಟ್ 15 ರ ಸ್ವಾತಂತ್ರ ದಿನದಂದು ಬಡ ಕುಟುಂಬಕ್ಕೆ ನೂತನ ಮನೆ ಹಸ್ತಾಂತರಿಸಲಿರುವ ಗೋವಿಂದ ಬಾಬು ಪೂಜಾರಿ
ತ್ರಾಸಿ (ಆ, 12) : ಶ್ರೀ ಗೋವಿಂದ ಬಾಬು ಪೂಜಾರಿಯವರು ಶ್ರೀ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ (ರಿ) ನ ಮೂಲಕ ಅನೇಕ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದರ ಜೊತೆಗೆ ಬಡ ವರ್ಗದ ಜನರಿಗೆ ಕಷ್ಟ ಕಾಲದ ಆಪತ್ಬಾಂಧವನಾಗಿದ್ದಾರೆ. ಆಶ್ರಯ ಇಲ್ಲದಿರುವ ಕಡು ಬಡವರಿಗೆ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಈಗಾಗಲೇ ಮೂರು ಮನೆಗಳನ್ನು ಹಸ್ತಾಂತರಿಸಿದ್ದು , ಇದೀಗ ನಾಲ್ಕನೇ ಮನೆ ಹಸ್ತಾಂತರಕ್ಕೆ ಸಿದ್ದಗೊಳ್ಳುತ್ತಿದೆ. ತ್ರಾಸಿ ಸಮೀಪದ ಕಂಚುಗೋಡು ಭಗತ್ ನಗರದ ಶ್ರೀಮತಿ […]










