ಕುಂದಾಪುರ (ಆ, 5) : ಕುಂದಗನ್ನಡ ನಾಡು-ನುಡಿ, ಸಂಸ್ಕೃತಿಯ ಕುರಿತಾಗಿ ಯುವಜನತೆಯಲ್ಲಿ ಜಾಗೃತಿ ಮೂಡಿಸುವ ಹಿನ್ನೆಲೆಯಲ್ಲಿ ಕುಂದಗನ್ನಡ ಭಾಗದ ಜನತೆ ಆಚರಿಸುವ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯನ್ನು ಕುಂದಾಪುರದ ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಗಸ್ಟ್ 09 ರಂದು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕುಂದಾಪ್ರ ಕನ್ನಡದ ರಾಯಭಾರಿ, ಸಾಂಸ್ಕೃತಿಕ ಚಿಂತಕ ಹಾಗೂ ಶಿಕ್ಷಕರಾದ ಶ್ರೀ ಮನು ಹಂದಾಡಿಯವರು ಆಗಮಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ತ್ರಾಸಿ ಡಾನ್ ಬಾಸ್ಕೋ ಸ್ಕೂಲ್ ಎಸೆಸೆಲ್ಸಿಯಲ್ಲಿ ಶೇಕಡ 100 ಫಲಿತಾಂಶ
ಕುಂದಾಪುರ (ಆ, 5) : ಸಿ ಬಿ ಎಸ್ ಇ ಪಠ್ಯಕ್ರಮದ 10ನೇ ತರಗತಿ ಫಲಿತಾಂಶ ಪ್ರಕಟವಾಗಿದ್ದು, ತ್ರಾಸಿ ಡಾನ್ ಬಾಸ್ಕೋ ಸ್ಕೂಲ್ ನ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶಾಲೆಗೆ 100 ಶೇಕಡ ಫಲಿತಾಂಶ ಬಂದಿರುತ್ತದೆ. ಐದು ವರ್ಷಗಳಿಂದ ಸತತ ಈ ದಾಖಲೆಯನ್ನು ಶಾಲೆ ಮಾಡುತ್ತಾ ಬಂದಿದೆ. ಈ ಬಾರಿ 29 ವಿದ್ಯಾರ್ಥಿಗಳಲ್ಲಿ 6 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದು, ವಿ.ನಿತ್ಯಶ್ರೀ ಶೇ 94.2 ಅಂಕಗಳಿಸಿ ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. […]
ಸಾಹಸಿ – ಮಿಡಿಯುವ ಹೃದಯಗಳ ಜೀವ ರಕ್ಷಕ – ಆಪತ್ಭಾಂಧವ ಶ್ರೀ ಈಶ್ವರ ಮಲ್ಪೆ
ಯಾವುದೇ ಪ್ರತಿಫಲ ಬಯಸದೆ ನಿಸ್ವಾರ್ಥತೆಯಿಂದ ಇನ್ನೊಬ್ಬರಿಗೆ ಸಹಾಯ ಮಾಡುವ ಮನಸ್ಸುಗಳು ಅತೀ ವಿರಳ. ಜನಸೇವೆಯೇ ಜನಾರ್ದನ ಸೇವೆ ಎಂಬ ಮಾತಿನಂತೆ ಸಮಾಜಸೇವೆಯನ್ನು ದೇವರ ಪೂಜೆಯಷ್ಟೇ ಪವಿತ್ರವಾದ ಕಾರ್ಯ ಎಂದು ಭಾವಿಸಿ ಸಮಾಜ ಸೇವೆಯಯನ್ನು ನಿಸ್ವಾರ್ಥತೆಯಿಂದ ಆತ್ಮ ಸಂತ್ರಪ್ತಿಗಾಗಿ ಮಾಡುವ ಹಲವಾರು ಜನಗಳ ಮಧ್ಯೆ ನಾವಿಂದು ನಿಮಗೆ ಒರ್ವ ನಿಸ್ವಾರ್ಥ ಸಮಾಜ ಸೇವಕನನ್ನು ಕುಂದವಾಹಿನಿ ಅಂತರ್ಜಾಲ ಸುದ್ದಿತಾಣದ ಮೂಲಕ ಪರಿಚಯಿಸಲು ಸಂತೋಷ ಪಡುತ್ತಿದ್ದೇವೆ.ಸಾಹಸಿ ,ಜೀವರಕ್ಷಕ ,ಜನಸೇವೆಯ ಮನೋಭಾವದ ಈಜು ಪ್ರವೀಣ ,ಆಪತ್ಭಾಂಧವ […]
ಕರಾವಳಿಯ ಮೂವರಿಗೆ ಮಂತ್ರಿ ಸ್ಥಾನ : ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಸುನಿಲ್ ಕುಮಾರ್, ಶ್ರೀ ಅಂಗಾರ ಸಚಿವ ಸಂಪುಟಕ್ಕೆ !
ಬೆಂಗಳೂರು ( ಆ,4) : ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ಸಚಿವ ಸಂಪುಟಕ್ಕೆ ಕರಾವಳಿಯ ಮೂವರು ಆಯ್ಕೆಯಾಗಿದ್ದು, ಹಾಲಾಡಿ ಶ್ರೀನಿವಾಸ್ ಶೆಟ್ಟಿ ಸಚಿವ ಸ್ಥಾನದ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಈ ಹಿಂದೆ ಮಂತ್ರಿಯಾಗಿದ್ದ ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ, ಮೊದಲ ಬಾರಿಗೆ ಕಾರ್ಕಳ ಶಾಸಕ ಸುನಿಲ್ ಕುಮಾರ್ ಹಾಗೂ ಸುಳ್ಯದ ಶಾಸಕ, ಮಾಜಿ ಸಚಿವ ಶ್ರೀ ಅಂಗಾರ ರವರಿಗೆ ಸಚಿವ ಸ್ಥಾನ ಪಕ್ಕಾ ಆಗಿದೆ. ಹಾಲಾಡಿ ಶ್ರೀನಿವಾಸ […]
ರೋಟರಿ ಕ್ಲಬ್ ಕುಂದಾಪುರ : ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ
ಕುಂದಾಪುರ (ಆ, 03) : ರೋಟರಿ ಕ್ಲಬ್ ಕುಂದಾಪುರದ ವತಿಯಿಂದ ಜಿಲ್ಲಾ ಪ್ರಶಸ್ತಿ ವಿಜೇತ ಶಿಕ್ಷಕ Rtn. ಸಾಲಗದ್ದೆ ಶಶಿಧರ ಶೆಟ್ಟಿ ಪ್ರಾಯೋಜಕತ್ವದಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಯಳೂರು, ತೋಪ್ಲು ಹಾಗೂ ಹಕ್ಲಾಡಿ ಶಾಲಾ ಮಕ್ಕಳಿಗೆ ಅಗಸ್ಟ್ 2 ರಂದು ನೋಟ್ ಬುಕ್ ಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷರಾದ Rtn. ಶಶಿಧರ ಹೆಗ್ಡೆಯವರು ವಹಿಸಿಕೊಂಡು ಶುಭಹಾರೈಸಿ ಮಾತನಾಡಿದರು. ಜಿಲ್ಲಾ ಪ್ರಶಸ್ತಿ ವಿಜೇತ, ಶಿಕ್ಷಕ […]
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜು : ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಕಾರ್ಯಕ್ರಮ
ಕೊಲ್ಲೂರು (ಆ, 03) : ಇಲ್ಲಿನ ಶ್ರೀಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಆಗಸ್ಟ್,03ರಂದು ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕುವೆಂಪು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗದ ವಿಶ್ರಾಂತ ಮುಖ್ಯಸ್ಥರಾದ ಪ್ರೊ ಡಾ. ಜೆ. ಎಸ್. ಸದಾನಂದ ರವರು ಭೇಟಿ ನೀಡಿ, ಹೊಸ ಶಿಕ್ಷಣ ನೀತಿ ಯ ಬಗ್ಗೆ ಮಾಹಿತಿಯನ್ನು ನೀಡಿದರು. ನಂತರ ಪ್ರೊ. ಡಾ. ಜೆ ಎಸ್ ಸದಾನಂದ ರವರನ್ನು ಕಾಲೇಜಿನ ಪರವಾಗಿ ಸನ್ಮಾನಿಸಲಾಯಿತು. […]
ಕರೋನಾ ಹಿನ್ನೆಲೆ- ಮಂಗಳೂರು ವಿ.ವಿ ಎಲ್ಲಾ ಪದವಿ ಪರೀಕ್ಷೆಗಳ ರದ್ದು – ತರಗತಿಗಳು ಮುಂದೂಡಿಕೆ: ದ.ಕ. ಜಿಲ್ಲಾಧಿಕಾರಿ ಆದೇಶ
ಕರೋನಾ ಲಾಕ್ಡೌನ್ ಕಾರಣದಿಂದಾಗಿ ಬಾಕಿಯಾದ ಮಂಗಳೂರು ವಿ. ವಿ. 1, 3, 5 ಸೆಮಿಸ್ಟರ್ ನ ಪರೀಕ್ಷೆಗಳು ಅಗಸ್ಟ್ 2 ರಂದು ಪ್ರಾರಂಭಗೊಂಡಿದ್ದು, ಈಗ ಮತ್ತೆ ಕರೋನಾ ಮೂರನೇ ಅಲೆಯ ಆತಂಕದಿಂದಾಗಿ ಮುಂದೂಡಲಾಗಿದೆ.
ಮುಂಬೈ ವೆಡ್ಡಿಂಗ್ ಅಸೋಸಿಯೇಷನ್ ವತಿಯಿಂದ ರಾಜ್ ಸಾಹೇಬ್ ಠಾಕ್ರೆ ಭೇಟಿ
ಮಂಬೈ (ಆ, 03) : ಕೊರೊನಾ ಲಾಕ್ದೌನ್ ನಿಂದಾಗಿ ಮುಂಬೈಯಲ್ಲಿ ಕೇಟರಿಂಗ್ ಮತ್ತು ಡೆಕೋರೇಷನ್ ಉದ್ಯಮಕ್ಕೆ ಬಹಳಷ್ಟು ಪೆಟ್ಟು ಬಿದ್ದಿದೆ. ಈ ಸಮಸ್ಯೆಯನ್ನು ಪರಿಹರಿಸುವ ಸಲುವಾಗಿ ನವಿ ಮುಂಬೈ ವೆಡ್ಡಿಂಗ್ ಅಸೋಷಿಯೇಷನ್ (ರಿ.) ಕಳೆದ ಕೆಲವು ತಿಂಗಳುಗಳಿಂದ ಬಹಳ ಶ್ರಮ ಪಡುತ್ತಿದೆ. ಹಲವಾರು ಜನಪ್ರತಿನಿಧಿಗಳ ಬಳಿ ತೆರಳಿ ನೆನೆಗುದಿಗೆ ಬಿದ್ದಿರುವ ಈ ಉದ್ಯಮವನ್ನು ಮತ್ತು ಈ ಉದ್ಯಮದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸಿ ಕೇಟರಿಂಗ್ ಉದ್ಯಮವನ್ನು ಉಳಿಸಿ ಕೊಡಬೇಕಾಗಿ […]
ಗುರುಕುಲ ಚಾಣಕ್ಯ ಪ್ರಶಸ್ತಿಗೆ ಬಿ. ಎಸ್. ಬಾಗೇವಾಡಿಮಠ ಆಯ್ಕೆ
ರಾಣಿಬೇನ್ನೂರು (ಆ, 03) : ನಗರದ ಯುವ ಕವಿ ಸಾಹಿತಿ ಹಾಗೂ ಲೇಖಕರಾದ ಹಾವೇರಿ ಜಿಲ್ಲೆಯರಾಣಿಬೆನ್ನೂರಿನ ಬಸವರಾಜ .ಎಸ್ . ಬಾಗೇವಾಡಿಮಠ ರವರು ಸಾಹಿತ್ಯ, ಸಮಾಜ ಸೇವೆ, ಹಾಗೂ ಇವರ ಮಾನವೀಯ ಸೇವೆಗಳನ್ನು ಗುರುತಿಸಿ ಗುರು ಕುಲ ಚಾಣಕ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಗುರುಕುಲ ಕಲಾ ಪ್ರತಿಷ್ಠಾನ (ರಿ) ರಾಜ್ಯ ಘಟಕದ ಸಂಸ್ಥೆಯ ಅಧ್ಯಕ್ಷರಾದ ಹುಲಿಯೂರು ದುರ್ಗ ಲಕ್ಷ್ಮೀ ನಾರಾಯಣ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗಂಗೊಳ್ಳಿ : ಬಿಲ್ಲವ ಹಿತರಕ್ಷಣಾ ವೇದಿಕೆಯ ಪ್ರಥಮ ಸಭೆ
ಗಂಗೊಳ್ಳಿ (ಆ, 3) : ಒಂದು ಸಮುದಾಯದ ಹಿತರಕ್ಷಣೆಗಾಗಿ ಸಂಬಂಧಪಟ್ಟ ಎಲ್ಲರೂ ಒಮ್ಮನಸ್ಸಿನಿಂದ ಕೆಲಸವನ್ನು ಮಾಡಬೇಕು. ಸಮಗ್ರ ಪರಿಶ್ರಮದಿಂದಲೇ ಸಮುದಾಯದ ಹಿತ ರಕ್ಷಣೆ ಸಾಧ್ಯ ಎಂದು ಬಿಲ್ಲವ ಸಮುದಾಯದ ಹಿರಿಯರಾದ ಮುತ್ತ ಕುಂದರ್ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಪಂಜುರ್ಲಿ ದೈವಸ್ಥಾನದ ವಠಾರದಲ್ಲಿ ನಡೆದ ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿಯ ಪ್ರಥಮ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಶ್ರೀನಿವಾಸ ಜತ್ತನ್ ಮಾತನಾಡಿ, ಸಂಸ್ಥೆಗಳು ಸಮುದಾಯದ ಕೆಳವರ್ಗದ ಜನರನ್ನು ಕೂಡ […]










