ಹಳ್ಳಿಹೊಳೆ (ಆ, 2) : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೈಂದೂರು ಇದರ ಕೊಲ್ಲೂರು ವಲಯದ ಹಳ್ಳಿಹೊಳೆ ಒಕ್ಕೂಟದ ಸಂಘದ ಸದಸ್ಯರಿಗೆ ಸುಮಾರು 7.59 ಲಕ್ಷಕ್ಕೂ ಹೆಚ್ಚು ಲಾಭಾಂಶ ಮೊತ್ತವನ್ನು ಆಗಸ್ಟ್ 01ರಂದು ವಿತರಣೆ ಮಾಡಲಾಯಿತು. ಲಾಭಾಂಶ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷರಾದ ಶಂಕರ್ ನಾಯ್ಕ ರವರು ವಹಿಸಿದ್ದರು. ವಲಯದ ಮೇಲ್ವಿಚಾರಕರಾದ ಶ್ರೀ ರಾಮ. ಎನ್ ರವರು ಸದಸ್ಯರಿಗೆ ಮಾಹಿತಿ ನೀಡಿದರು. ಸೇವಾಪ್ರತಿನಿಧಿ ಕೃಷ್ಣ […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಮೀನುಗಾರರನ್ನು ಕರೋನ ಲಸಿಕೆಯ ಆದ್ಯತೆಯ ಪಟ್ಟಿಯಲ್ಲಿ ಸೇರಿಸಬೇಕು
ಕರೋನಾ ಲಾಕ್ಡೌನಿನ ಕಳೆದೆರಡು ಅವಧಿಯಲ್ಲಿ ಹೊಟ್ಟೆಗೆ ತಣ್ಣೀರು ಬಟ್ಟೆ ಕಟ್ಟಿಕೊಂಡು, ಸರಕಾರದ ಪ್ಯಾಕೇಜುಗಳು ಸರಿಯಾಗಿ ಸಿಗದೆ ಬದುಕು ಸಾಗಿಸಿದ ಮೀನುಗಾರರು ಮತ್ತೆ ಕಡಲಿಗೆ ಇಳಿಯಲು ಸಜ್ಜಾಗುತ್ತಿದ್ದಾರೆ. ಕರೋನಾ ಮೂರನೆ ಅಲೆಯ ಭಯದ ನಡುವೆ ಹೊಟ್ಟೆಪಾಡಿಗಾಗಿ ಅಗಸ್ಟ್ ತಿಂಗಳ ಎರಡನೇ ವಾರದಲ್ಲಿ ಸರ್ಕಾರದ ನಿಯಮದಂತೆ ಮೀನು ಹಿಡಿಯಲು ಹೊರಡುತ್ತಿರುವ ಬಹುತೇಕ ಮೀನುಗಾರರಿಗೆ ಕರೋನಾ ಲಸಿಕೆ ಇನ್ನೂ ಲಭ್ಯವಾಗಿಲ್ಲ. ಕರೋನಾ ಲಸಿಕಾಕರಣ ನಿಧಾನ ಗತಿಯಲ್ಲಿ ಸಾಗುತ್ತಿರುವುದರ ಜೊತೆಗೆ ಸರ್ಕಾರ ಮೀನುಗಾರರನ್ನು ಕರೋನ ಲಸಿಕೆಯ […]
ಗುರುಕುಲ ಸೇವಾ ರತ್ನ ಪ್ರಶಸ್ತಿಗೆ ಡಾ. ಪಿ. ಎಮ್. ಭೋಜೆ ಆಯ್ಕೆ
ಬೆಳಗಾವಿ (ಆ, 2) : ಜಿಲ್ಲೆಯ ಸದಗಾಲ ಗ್ರಾಮದ ಡಾ| ಪ್ರಕಾಶ ಎಮ್. ಭೋಜೆಯವರು ಒರ್ವಸೃಜನಶೀಲ ಶಿಕ್ಷಕರು, ಸಾಹಿತಿ, ಹಾಗೂ ಲೇಖಕರಾಗಿದ್ದಾರೆ. ಇವರು ತಮ್ಮ ಶಿಕ್ಷಣ ಜೊತೆಗೆ ಬಡ ಮಕ್ಕಳಿಗೆ ಉಚಿತ ಪಾಠ ಬೋಧನೆ ಮಾಡಿ ಜ್ಞಾನ ದಾಸೋಹಿಯಾಗಿ ಪ್ರೇರಣೆರಾಗಿದ್ದಾರೆ. ಇವರ ಶಿಕ್ಷಣ ಕ್ಷೇತ್ರ, ಸಾಹಿತ್ಯ ಕ್ಷೇತ್ರ, ಸಮಾಜ ಸೇವೆಯಲ್ಲಿನ ಗಣನೀಯ ಸೇವೆ ಹಾಗೂ ಸಕ್ರಿಯವಾಗಿ ತೊಡಗಿಸಿಕೊಂಡಿರುವುದನ್ನು ಗುರುತಿಸಿ ತುಮಕೂರಿನಲ್ಲಿ ನಡೆಯಲಿರುವ ಪ್ರಥಮ ರಾಜ್ಯ ಗುರುಕುಲ ಸಾಹಿತ್ಯ ಸಮ್ಮೇಳನದಲ್ಲಿ ಗುರುಕುಲ […]
ನ್ಯಾಯದ ಹಸಿವು
ಹಸಿದ ಹೊಟ್ಟೆ ಮಾತ್ರ ಆಹಾರವನ್ನು ಹುಡುಕುತ್ತದೆ. ಹಸಿವಿಲ್ಲದವನಿಗೆ ಆಹಾರವು ಅಗತ್ಯ ಅನಿಸುವುದಿಲ್ಲ. ಈ ಸಮಾಜದ ಪರಿಸ್ಥಿತಿ ಕೂಡ ಹಾಗೇ ಆಗಿದೆ. ಇಲ್ಲಿ ಶೋಷಿತರು ,ಬಡವರು, ಅವಕಾಶ ವಂಚಿತ ಸಮುದಾಯಗಳು ಸಾಮಾಜಿಕವಾಗಿ ನ್ಯಾಯದಿಂದ ವಂಚಿತರಾಗಿದ್ದಾರೆ. ಇವರಿಗೆ ನ್ಯಾಯವೆಂಬ ಹಸಿವಿದೆ..ಆದರೆ….! ಹಸಿದವನಿಗೆ ಮಾತ್ರ ತಿಳಿಯುವುದು ಅನ್ನದ ಮಹತ್ವ. ಅನ್ಯಾಯಕ್ಕೊಳಗಾದವನಿಗೆ ತಿಳಿಯುವುದು ನ್ಯಾಯದ ಮಹತ್ವ .ಹಸಿವಿಲ್ಲದ ವ್ಯಕ್ತಿ ಹೇಗೆ ಆಹಾರವನ್ನು ಹುಡುಕುವುದಿಲ್ಲವೊ ಹಾಗೆ ಸಮಾಜದ ಎಲ್ಲಾ ಕ್ಷೇತ್ರದಲ್ಲಿ ಪ್ರಬಲ ಹೊಂದಿರುವ ವ್ಯಕ್ತಿ ಅನ್ಯಾಯದ ಕುರಿತು […]
ಬಂಧನದೊಳಗೆ
ಮೋಹವೋ, ವ್ಯಾಮೋಹವೋ … ಸೆಳತಕೆ ಒಳಗಾಗಿ ಬಂದಿಯಾಗುತಿದ್ದೇವೆ….ಯಾರಿಗೂ ತಿಳಿಯದೆ, ತಿಳಿದು ಗೊತ್ತಾಗದೆ ಹೊಟ್ಟೆಯ ಚೀಲ ತುಂಬಿಸಲು…ಜೀವದ ಹಂಗು ತೊರೆದು ಎರಡು ಅಲೆಗಳಿಗೆ ಎದೆ ಕೊಟ್ಟುಈಜಿದ್ದು ಗೊತ್ತಾಗಲೇ ಇಲ್ಲಾ ! ಬದುಕಿನ ದೋಣಿ ಮುಳುಗಿದ್ದು ಗೊತ್ತಾಗುವ ಮುನ್ನವೇ… ಆಸೆ ಭಾಸೆಗಳ ಆಡುವು ಇಟ್ಟಿದ್ದು ನಿನ್ನ ಒಳ ಮನಸಿಗು ಗೊತ್ತಾಗಲಿ …!!! ನೀರಿನ ಸೆಳತದಲ್ಲಿ ಸಿಕ್ಕಿ ಈಗಷ್ಟೇ ದಡಕ್ಕೆ ಬರುತ್ತಿರುವ ದೋಣಿಗೆಮಹತ್ವದ ಸೂಚನೆಯಂತೆ ಏಳುತಿದೆಯಂತೆ ಮೂರನೇ ಅಲೆ ಈ ಅಲೆಗಳಿಗೆ ಬೆಲೆ ಕೊಟ್ಟು […]
ಒಲಿಂಪಿಕ್ಸ್ : ಪಿವಿ ಸಿಂಧು ಗೆ ಕಂಚಿನ ಪದಕ
ಬೆಂಗಳೂರು (ಆ, 1) : ಟೋಕಿಯೊ ಒಲಿಂಪಿಕ್ಸ್ನ ಮಹಿಳೆಯರ ಬ್ಯಾಡ್ಮಿಂಟನ್ ಸಿಂಗಲ್ಸ್ ಪಂದ್ಯದಲ್ಲಿ ಭಾರತದ ಸ್ಟಾರ್ ಆಟಗಾರ್ತಿ ಪಿ.ವಿ. ಸಿಂಧು ಕಂಚಿನ ಪದಕವನ್ನು ಪಡೆದಿದ್ದಾರೆ. ಚೀನಾದ ಹೀ ಬಿಂಗ್ ಜಿಯಾವೊ ರ ವಿರುದ್ಧ 21-13, 21-15 ನೇರ ಗೇಮ್ ಗಳ ಅಂತರದಲ್ಲಿ ಪಿ. ವಿ. ಸಿಂಧು ಗೆಲುವನ್ನು ಸಾಧಿಸಿದ್ದಾರೆ.
ಹೆಮ್ಮಾಡಿ : ಒತ್ತಡ ನಿವಾರಣೆ – ಆರೋಗ್ಯ ಜೀವನಶೈಲಿ ಕಾರ್ಯಾಗಾರ
ಹೆಮ್ಮಾಡಿ (ಜು, 31) : ಆಧುನಿಕತೆಯ ಒತ್ತಡದ ಬದುಕಿನಿಂದಾಗಿ ಮನುಷ್ಯನ ಆರೋಗ್ಯದ ಮೇಲೆ ಬಹಳಷ್ಟು ನಕಾರಾತ್ಮಕ ಪ್ರಭಾವಗಳು ಹೆಚ್ಚಾಗುತ್ತಿದ್ದು ಅದರಿಂದ ಹೊರ ಬರಲು ನಾವು ವೈಜ್ಞಾನಿಕ ಮಾರ್ಗಗಳನ್ನು ಅನುಸರಿಸಬೇಕು. ಆ ನಿಟ್ಟಿನಲ್ಲಿ ಅಂತರಾಷ್ಟ್ರೀಯ ಸೇವಾ ಸಂಸ್ಥೆಯಾಗಿರುವ ನಮ್ಮ ಲಯನ್ಸ್ ಸಂಸ್ಥೆ ಇಂದು ಗ್ರಾಮೀಣ ಭಾಗದ ಮಹಿಳೆಯರಿಗೆ ಆರೋಗ್ಯವನ್ನು ಕಾಪಾಡಲು ಕಾರ್ಯಗಾರವನ್ನು ಹಮ್ಮಿಕೊಂಡಿದೆ ಎಂದು ಕುಂದಾಪುರ ಲಯನ್ಸ್ ಅಧ್ಯಕ್ಷರಾದ ಶ್ರೀ ರಾಧಾಕೃಷ್ಣ ನಾಯಕ್ ಕುಂದಾಪುರ ಹೇಳಿದರು. ಅವರು ಲಯನ್ಸ್ ಕ್ಲಬ್ ಕುಂದಾಪುರ, […]
ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರೋತ್ಸಾಹ ಧನ ವಿತರಣೆ
ನಾವುಂದ ( ಜು, 31) : ಪ್ರತಿ ವರುಷ ಕಾಲೇಜಿಗೆ ಪ್ರಥಮ ಸ್ಥಾನವನ್ನು ಪಡೆದ ವಿದ್ಯಾರ್ಥಿಗೆ ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನ 1995-96ನೇ ಸಾಲಿನ ವಿದ್ಯಾರ್ಥಿಗಳ ವತಿಯಿಂದ ನೀಡಲ್ಪಡುವ ಹತ್ತು ಸಾವಿರ ರೂಪಾಯಿಗಳ ಪ್ರೋತ್ಸಾಹ ಧನವನ್ನು ಇತ್ತೀಚೆಗೆ ವಿತರಿಸಲಾಯಿತು. ಈ ವರುಷ ಕಾಲೇಜಿಗೆ ಪ್ರಥಮ ಸ್ಥಾನವನ್ನು ಪಡೆದ ವಿಭಾಗದ ವಿದ್ಯಾರ್ಥಿ ಚವೀಶ್ ಜೈನ್ ಅವರಿಗೆ ಈ ಪ್ರೋತ್ಸಾಹಧನವನ್ನು ನೀಡಲಾಯಿತು. ಆನ್ಲೈನ್ ಮೂಲಕ ನಡೆದ ಈ ಕಾರ್ಯಕ್ರಮದಲ್ಲಿ 1995-96ನೇ ಸಾಲಿನ […]
ಶಿರ್ವ ಸಂತ ಮೇರಿ ಮಹಾವಿದ್ಯಾಲಯ : ಆಡಳಿತ ಸಿಬ್ಬಂದಿ ಶ್ರೀಮತಿ ಅಲ್ವಿರಾ ಕ್ಲೇರೆನ್ಸ್ ಫೆರ್ನಾಂಡಿಸ್ ರವರಿಗೆ ಬೀಳ್ಕೊಡುಗೆ
ಶಿರ್ವ( ಜು, 31) : ಒಂದು ಸಂಸ್ಥೆಯ ಸರ್ವತೋಮುಖ ಬೆಳವಣಿಗೆಯಲ್ಲಿ ಪ್ರತಿಯೊಬ್ಬರ ಸೇವೆಯು ಅತ್ಯಂತ ಅಮೂಲ್ಯ ಹಾಗೂ ಉಪಯುಕ್ತವಾದುದು. ವರ್ಗವಾರು ಕರ್ತವ್ಯವೆನ್ನವುದು ಜವಾಬ್ದಾರಿಯ ಹಿನ್ನೆಲೆಯಲ್ಲಿ ಇದ್ದರೂ ಕೂಡ ಪ್ರತಿಯೊಬ್ಬರ ಸೇವೆಯೂ ಪರಿಗಣಿತ ಹಾಗೂ ಶ್ರೇಷ್ಠ ವಾದುದು ಎಂದು ಸಂತ ಮೇರಿ ಸಮೂಹ ಸಂಸ್ಥೆಗಳ ಸಂಚಾಲಕರಾದ ಅತಿ ವಂದನೀಯ ಧರ್ಮಗುರುಗಳಾದ ಡೆನಿಸ್ ಡೇಸಾ ಸಂತ ಮೇರಿ ಹೇಳಿದರು. ಅವರು ಶಿರ್ವ ಸಂತ ಮೇರಿ ಮಹಾವಿದ್ಯಾಲಯದ ಆಡಳಿತ ಸಿಬ್ಬಂದಿ ಶ್ರೀಮತಿ ಅಲ್ವಿರಾ ಕ್ಲೇರೆನ್ಸ್ […]
ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಕುರ್ಕಾಲು ಗ್ರಾಮದ ಮಹಿಳೆ ಸರಸ್ವತಿಯ ಉಳಿಸಲು ನೆರವಿಗೆ ಮನವಿ
ಉಡುಪಿ (ಜು, 30): ಕುರ್ಕಾಲು ಗ್ರಾಮದ ಕುಂಜಾರುಗಿರಿ ನಿವಾಸಿ ಶಂಕರ್ ರವರ ಧರ್ಮಪತ್ನಿ ಶ್ರೀಮತಿ ಸರಸ್ವತಿ (ವಯಸ್ಸು, 25)ಯವರು 2 ವರ್ಷದಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು, ಇವರಿಗೆ ವಾರಕ್ಕೆ ಮೂರು ಬಾರಿ ಡಯಾಲಿಸಿಸ್ ಮಾಡಬೇಕಾಗಿದೆ. ಸದ್ಯ ಈಗಿರುವ ಪರಿಸ್ಥಿತಿಯಲ್ಲಿ ಡಯಾಲಿಸಿಸ್ ಮಾಡಲು ಕಷ್ಟವಾಗಿದೆ. ಮನೆ ಕೆಲಸ ಮಾಡಿಕೊಂಡು ಬದುಕು ಸಾಗಿಸುತ್ತಿರುವ ಸರಸ್ವತಿಯವರಿಗೆ ಒಂದು ಹೆಣ್ಣು ಮಗುವಿದೆ. ಪತಿ ಶಂಕರ್ ನಿತ್ಯ ಕಲ್ಲು ಕೆಲಸ ಮಾಡಿಕೊಂಡು ಜೀವನ ಮಾಡುತ್ತಿದ್ದಾರೆ. ಸರಸ್ವತಿಯವರ ಪರಿಸ್ಥಿತಿ […]










