ಮಾನವ ಸಂಬಂಧಗಳ ನಿರ್ವಹಣೆ ಇದು ಅತ್ಯಂತ ಕಷ್ಟಕರ ಹಾಗೂ ನಿರಂತರ ಪ್ರಕ್ರಿಯೆಯಾಗಿದೆ. ಏಕೆಂದರೆ ಆಧುನಿಕತೆಯ ಬದುಕಿನಲ್ಲಿ ಸಂಬಂಧಗಳು ವಿಮುಖ ಗೊಳ್ಳುವ ಕಾಲಘಟ್ಟದಲ್ಲಿ ಇಂದು ನಾವಿದ್ದೇವೆ. ಜಾಗತೀಕರಣದ ನಾಗಾಲೋಟಕ್ಕೆ ಸಿಲುಕಿ ಸಂಬಂಧಗಳು ಮೌಲ್ಯವನ್ನು ಕಳೆದುಕೊಳ್ಳುತ್ತಿದೆ ಎನ್ನುವ ಆತಂಕ ನಮ್ಮೆಲ್ಲರನ್ನು ಕಾಡತೊಡಗಿದೆ. ಭಾರತೀಯ ಸಂಸ್ಕೃತಿಯಲ್ಲಿನ ಮಾನವ ಸಂಬಂಧಗಳ ಮೌಲ್ಯತೆಗೆ ಮತ್ತು ಪಾವಿತ್ರ್ಯತೆಗೆ ಇದ್ದ ಬೆಲೆ ಇವತ್ತು ಪಾಶ್ಚಾತೀಕರಣ ಜೀವನ ಶೈಲಿಯಿಂದಾಗಿ ಪ್ರವಾಹದ ಹರಿದು ಹೋಗುತ್ತಿರುವ ಕೊಳಕು ನೀರಿನಂತಾಗಿದೆ. ವಾಸ್ತವವಾಗಿ ಇಂದಿನ ದಿನಗಳಲ್ಲಿ ನೆನಪಿಗೆ […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಬಲವಂತದ ಬರವಣಿಗೆ ಸರಿಯಲ್ಲ – ನರೇಂದ್ರ ಎಸ್. ಗಂಗೊಳ್ಳಿ : ಪೂರ್ಣಪ್ರಜ್ಞ ಕಾಲೇಜಿನಲ್ಲಿ ಬದುಕಿಗೆ ಬರಹ ಆನ್ ಲೈನ್ ಉಪನ್ಯಾಸ ಕಾರ್ಯಕ್ರಮ
ಬಲವಂತದ ಬರವಣಿಗೆ ಸರಿಯಲ್ಲ. ಸೃಜನಶೀಲತೆಯಿಂದ ಬರಹಗಳು ಹುಟ್ಟಬೇಕು. ಹೆಚ್ಚಿನ ಓದು, ವಿಚಾರ ಮಂಥನ, ಚರ್ಚೆ ಇತ್ಯಾದಿ ಉತ್ತಮ ಬರಹಗಾರರನ್ನು ರೂಪಿಸುವಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತವೆ. ಆಸಕ್ತಿಯ ಕ್ಷೇತ್ರ ಯಾವುದೇ ಇದ್ದರೂ ಓದುವಿಕೆ ನಿರಂತರವಾಗಿರಲಿ ಎಂದು ಅವರು ಹೇಳಿದರು.
ಸಾಯಿನಾಥ್ ಶೇಟ್ ರ ನಿಸ್ವಾರ್ಥ ಸೇವೆಗೆ ನಮ್ಮದೊಂದು ಸಲಾಂ
ಕರೋನಾ ಲಾಕ್ಡೌನ್ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿದವರು ಹಲವರು. ಅದರಲ್ಲೂ ನಿರಾಶ್ರಿತರು, ಕಡು ಬಡವರು, ವಲಸೆ ಕಾರ್ಮಿಕರು, ಭಿಕ್ಷುಕರು ಹೊಟ್ಟೆ ತುಂಬಿಸಿಕೊಳ್ಳಲು ಆಹಾರಕ್ಕಾಗಿ ಹಾಹಾಕಾರ ಪಟ್ಟಿದ್ದು ಅಷ್ಟಿಷ್ಟಲ್ಲ. ಈ ವಿಷಯವನ್ನು ಗಮನಿಸಿದ ಹಲವಾರು ಸಂಘ-ಸಂಸ್ಥೆಗಳು, ಕೊಡುಗೈದಾನಿಗಳು ಸಂಕಷ್ಟದಲ್ಲಿ ಸಿಲುಕಿರುವ ಜನರಿಗೆ ತಮ್ಮದೇ ಆದ ರೀತಿಯಲ್ಲಿ ಸೇವೆಯನ್ನು ನೀಡಿರುತ್ತಾರೆ. ಆದರೆ ಇಲ್ಲೊಬ್ಬ ವ್ಯಕ್ತಿ ತನ್ನ ಸ್ಕೂಟರ್ ಏರಿ ಸಂಕಷ್ಟಕ್ಕೆ ಸಿಲುಕಿದವರಿರುವ ಸ್ಥಳಕ್ಕೆ ಭೇಟಿ ನೀಡಿ ಆಹಾರ ಪೊಟ್ಟಣಗಳನ್ನು ವಿತರಿಸಿ ಅದೆಷ್ಟೋ ಬಡಜನರ ಹಸಿವನ್ನು […]
ಅಪಘಾತಕ್ಕೆ ಒಳಗಾಗಿ ಸಂಕಷ್ಟದಲ್ಲಿರುವ ಕಲಾವಿದನ ನೆರವಿಗಾಗಿ “ಅಮ್ಮ ವೇದಿಕೆ” – ಮನೆ ನಿರ್ಮಿಸಿ ಕೊಡುವ ಸಂಕಲ್ಪ
ಬಗ್ವಾಡಿ (ಜು, 4) : ಬೈಕ್ ಅಪಘಾತದಲ್ಲಿ ಗಾಯ ಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ವೆಚ್ಚ ಬರಿಸಲಾಗದೆ ಸಂಕಷ್ಟಕ್ಕೆ ಸಿಲುಕಿದ್ದ ಮಾರಣಕಟ್ಟೆ ಮೇಳದ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಮೊಗವೀರನಿಗೆ ಸಹ್ರದಯಿ, ಸಮಾನ ಮನಸ್ಕರ ತಂಡವೊಂದು ಸಹಾಯ ಮಾಡಲು ಮುಂದಾಗಿದೆ. ಸದ್ಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿರುವ ಕಲಾವಿದನಿಗೆ ಸುಸಜ್ಜಿತವಾದ ಮನೆಯೊಂದನ್ನು ನಿರ್ಮಿಸಿ ಕೊಡಲು “ಅಮ್ಮ ವೇದಿಕೆ” ಯೊಂದು ಸಜ್ಜಾಗಿದೆ. ಆರ್ಥಿಕವಾಗಿ ಬಡತನದಲ್ಲಿರುವ ಈ ಕಲಾವಿದನ ಜೊತೆ ಅಜ್ಜಿ, ಅಮ್ಮ ಹಾಗೂ ಸಹೋದರ […]
ತಲ್ಲೂರಿನ ಬಡ ಕುಟಂಬ ಗಿರಿಜಾ ಮೊಗವೀರರ ಮನೆ ನಿರ್ಮಾಣಕ್ಕೆ ಸಹಾಯಹಸ್ತ ಚಾಚಿದ ಕೊಡುಗೈದಾನಿ ಶ್ರೀ ಗೋವಿಂದ ಬಾಬು ಪೂಜಾರಿ
ಕುಂದಾಪುರ (ಜು, 04): ಕುಂದಾಪುರ ತಾಲೂಕಿನ ತಲ್ಲೂರು ಗ್ರಾಮದ ಗಿರಿಜಾ ಮೊಗವೀರ ರ ಬಡ ಕುಟಂಬದ ಮನೆ ನಿರ್ಮಾಣಕ್ಕೆ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ( ರಿ) ಉಪ್ಪುಂದ ಇದರ ಅಧ್ಯಕ್ಷರಾದ ಕೊಡುಗೈದಾನಿ ಶ್ರೀ ಗೋವಿಂದ ಬಾಬು ಪೂಜಾರಿಯವರು ಸಹಾಯಹಸ್ತ ಚಾಚಿದ್ದಾರೆ. ಗಿರಿಜಾರವರ ಮನೆಯ ಮೇಲ್ಛಾವಣಿಯ ಕಾಮಗಾರಿ ವೆಚ್ಚವನ್ನ ಭರಿಸುವುದಾಗಿ ಶ್ರೀ ಗೋವಿಂದ ಬಾಬು ಪೂಜಾರಿ ತಿಳಿಸಿದ್ದಾರೆ. ಸ್ವತಃ ತಾವೇ ಗಿರಿಜಾ ರವರ ಮನೆಗೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿ […]
ಜೈ ಕುಂದಾಪ್ರ ಸೇವಾ ಟ್ರಸ್ಟ್ (ರಿ.) ಕುಂದಾಪುರ : 34ನೇ ಯೋಜನೆ – ಕಲಿಕೆಗೆ ಆಸರೆ
ಕುಂದಾಪುರ (ಜು, 02): ದ್ವಿತೀಯ ಪಿ.ಯು.ಸಿ ವ್ಯಾಸಂಗ ಮುಗಿಸಿದ ನಂತರ 2021-2022 ನೇ ಸಾಲಿನಲ್ಲಿ ವೃತ್ತಿಪರ ಶಿಕ್ಷಣ (ನರ್ಸಿಂಗ್, ಪ್ಯಾರಾ ಮೆಡಿಕಲ್, ಫುಡ್ ಟೆಕ್ನಿಷಿಯನ್, ಹೋಟೆಲ್ ಮ್ಯಾನೇಜ್ಮೆಂಟ್ ಇತ್ಯಾದಿ) ಕೋರ್ಸ್ ನ್ನು ಆಯ್ಕೆ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೆ ಜೈ ಕುಂದಾಪ್ರ ಸೇವಾ ಟ್ರಸ್ಟ್ (ರಿ) ಕುಂದಾಪುರದ ವತಿಯಿಂದ “ವಿದ್ಯಾರ್ಥಿವೇತನ” ಹಾಗೂ ಸಹಾಯಧನವನ್ನು ನೀಡುವ ಕಲಿಕೆಗೆ ಆಸರೆ ಎನ್ನುವ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಈ ಯೋಜನೆಯ ಸದುಪಯೋಗ ಪಡೆದು ಕೊಳ್ಳ ಬೇಕೆಂದು […]
ಕಲೆಗೆ ನೆಲೆ ಸಿಗಲಿ, ಕಲಾವಿದರಿಗೆ ಬೆಲೆ ಸಿಗಲಿ ಕಲೆಯಲ್ಲೇ ಉಸಿರಾಡ ಬಯಸುವರಿಗೆ ಅವಕಾಶ ದೊರಕಲಿ
ಪ್ರತಿಯೊಬ್ಬ ಮನುಷ್ಯನಲ್ಲಿ ಒಂದಲ್ಲ ಒಂದು ಪ್ರತಿಭೆ ಇದ್ದೆ ಇರುತ್ತೆ. ಕೆಲವರದ್ದು ಸುಪ್ತವಾಗಿರುತ್ತೆ, ಇನ್ನೂ ಕೆಲವರದ್ದು ಹುಟ್ಟುವಾಗಲೇ ರಕ್ತಗತವಾಗಿರುತ್ತದೆ. ಇನ್ನು ಕೆಲವು ಪ್ರತಿಭೆಗಳು ಯಾರ ಕಣ್ಣಿಗೂ ಕಾಣದೆ ಸುಪ್ತವಾಗಿಯೇ ಇದ್ದು ಎಲ್ಲೋ ಅಡಗಿ ಮರೆಯಾಗಿ ಹೋಗುತ್ತದೆ. ಮತ್ತೆ ಕೆಲವರದ್ದು ಕಲೆ ಪರಿಚಯಸುವವರ ಕಣ್ಣಿಗೆ ಬಿದ್ದು ಅದಕ್ಕೊಂದು ರೂಪ ಬಂದು ಅದು ಜಗಕ್ಕೆ ತೋರ್ಪಡಿಸುವಂತಗುತ್ತದೆ.ಕಲೆಯೇ ಉಸಿರು, ಜೀವಾಳ ಎಂದು ಬದುಕಿನೂದ್ದಕ್ಕೂ ಕಲಾ ಕ್ಷೇತ್ರದಲ್ಲಿ ಬದುಕನ್ನು ರೂಪಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಯುವ ಪ್ರತಿಭೆ ಎಂಬ ಗಿಡಕ್ಕೆ […]
ರೋಟರಿ ಕ್ಲಬ್ ಕುಂದಾಪುರ : ರಾಷ್ಟ್ರೀಯ ವೈದ್ಯರ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮ
ರಾಷ್ಟ್ರೀಯ ವೈದ್ಯರ ದಿನಾಚರಣೆಯ ಪ್ರಯುಕ್ತ ರೋಟರಿ ಕ್ಲಬ್ ಕುಂದಾಪುರ ಇವರ ವತಿಯಿಂದ ಕುಂದಾಪುರ ಪರಿಸರದ ಹಿರಿಯ ವೈದ್ಯರು ಹಾಗೂ ಸೀನಿಯರ್ ರೋಟರಿಯನ್ಗಳಾದ ಡಾ| ಮಲ್ಲಿ, ಡಾ| ಕಮಲ್, ಡಾ| ರಾಜೀವ್ ಶೆಟ್ಟಿ, ಡಾ| ರಾಜರಾಮ್ ಶೆಟ್ಟಿ,, ಡಾ| ಹರಿಪ್ರಸಾದ್ ಶೆಟ್ಟಿ,
ಡಾ| ಎಮ್.ಎನ್. ಅಡಿಗ ಹಾಗೂ ಡಾ. ರಾಜೇಂದ್ರ ಶೆಟ್ಟಿ ಯವರನ್ನು ಸನ್ಮಾನಿಸಲಾಯಿತು.
ಬೈಕ್ ಅಪಘಾತದಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿಕ್ಷಕ ಜಿ. ಎಸ್. ಶಿವಕುಮಾರ್ ರವರ ಚಿಕಿತ್ಸೆಯ ನೆರವಿಗೆ ಮನವಿ
ಮಂಗಳೂರು (ಜು, 03) : ಮಂಗಳೂರಿನ ಶ್ರೀನಿವಾಸ ಕಾಲೇಜಿನಲ್ಲಿ ಶಿಕ್ಷಕರಾಗಿ ಕೆಲಸ ನಿರ್ವಹಿಸುತ್ತಿರುವ ಸುರುಳಿಕುಮೇರಿ ನಿವಾಸಿ, ಪ್ರಸ್ತುತ ಪುತ್ತೂರಿನಲ್ಲಿ ವಾಸವಾಗಿರುವ ಜಿ.ಎಸ್. ಶಿವಕುಮಾರ್ ಅವರು ಕಳೆದ ಜೂನ್, 25 ರಂದು ಪುತ್ತೂರಿನ ಸಂಪ್ಯ ಬಳಿ ಬೈಕ್ ಅಪಘಾತದಿಂದಾಗಿ ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ತೀವ್ರ ನಿಗಾ ವಿಭಾಗದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದಾರೆ. ಅವರ ಮಕ್ಕಳು ಇನ್ನೂ ಚಿಕ್ಕವರಾಗಿದ್ದು, ಪತ್ನಿ ಗೃಹಿಣಿಯಾಗಿದ್ದಾರೆ. ಅವರ ಚಿಕಿತ್ಸೆಗೆ ಬಹುದೊಡ್ಡ ಮೊತ್ತದ ಅವಶ್ಯಕತೆಯಿದ್ದು. ದಿನಕ್ಕೆ 40-50 ಸಾವಿರ ರೂ […]
ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಮೊಗವೀರ ಬಗ್ವಾಡಿಯವರ ಚಿಕಿತ್ಸೆಗೆ ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಸ್ಥಾನದ ವತಿಯಿಂದ ನೆರವು
ಹೆಮ್ಮಾಡಿ (ಜು, 3): ಬೈಕ್ ಅಪಘಾತಕ್ಕೀಡಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಮೊಗವೀರರ ಚಿಕಿತ್ಸೆಗೆ ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಸ್ಥಾನದ ವತಿಯಿಂದ ಹತ್ತು ಸಾವಿರ ರೂಪಾಯಿಯ ಸಹಾಯ ಧನವನ್ನು ಮೊಗವೀರ ಮಹಾಜನ ಸೇವಾ ಸಂಘ (ರಿ) ಬಗ್ವಾಡಿ ಹೋಬಳಿ ಅಧ್ಯಕ್ಷರಾದ ಕೆ. ಕೆ. ಕಾಂಚನ್ ರವರು ಅವರ ಸಂಬಂಧಿಕರಿಗೆ ಹಸ್ತಾಂತರಿಸಿದರು. ಈ ಸಂಧರ್ಭದಲ್ಲಿ ಸಂಘದ ಕಾರ್ಯದರ್ಶಿ ಸುರೇಶ್ ವಿಠಲವಾಡಿ ಉಪಸ್ಥಿತರಿದ್ದರು.










