ಗಂಗೊಳ್ಳಿ (ಜು, 01): ರಾಷ್ಟ್ರೀಯ ವೈದ್ಯರ ದಿನಾಚರಣೆ ಪ್ರಯುಕ್ತ ರೋಟರಿ ಕ್ಲಬ್ ಗಂಗೊಳ್ಳಿ ಇದರ ಆಶ್ರಯದಲ್ಲಿ ವೈದ್ಯರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಮಿತಾ ರವರನ್ನು ವೈದ್ಯರ ದಿನಾಚರಣೆ ಪ್ರಯುಕ್ತ ಸನ್ಮಾನಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಗಂಗೊಳ್ಳಿ ಇದರ ಅಧ್ಯಕ್ಷ ರಾಜೇಶ್ ಶೇರೆಗಾರ್ ವಹಿಸಿದ್ದರು. ನಾರಾಯಣ ನಾಯ್ಕ, ರಮನಾಥ ನಾಯಕ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ರೋಟರಿ ಕ್ಲಬ್ ಗಂಗೊಳ್ಳಿ ಇದರ ಪದಾಧಿಕಾರಿಗಳು, ಗ್ರಾಮ ಪಂಚಾಯತ್ […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಇ ಸಿ ಆರ್ ಗ್ರೂಪ್ ಆಫ್ ಇನ್ಸ್ಟಿಟ್ಯೂಶನ್ಸ್ : ಕೋವಿಡ್ ಲಸಿಕಾ ಅಭಿಯಾನ
ಮಧುವನ (ಜು, 02) : ಇಲ್ಲಿನ ಇ ಸಿ ಆರ್ ಗ್ರೂಪ್ ಆಫ್ ಇನ್ಸ್ಟಿಟ್ಯೂಶನ್ಸ್ ನಲ್ಲಿ ಕಾಲೇಜು ಪ್ರಾರಂಭಕ್ಕೆ ಮುಂಚಿತವಾಗಿ ವಿದ್ಯಾರ್ಥಿಗಳಿಗೆ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ಕೋವಿಡ್ ಲಸಿಕಾಕರಣ ಹಮ್ಮಿಕೊಳ್ಳಲಾಗಿತ್ತು. ಜೂನ್ 30 ಬುಧವಾರದಂದು 100 ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ಲಸಿಕೆ ನೀಡಲಾಗಿದೆ ಎಂದು ಪ್ರಾಂಶುಪಾಲರಾದ ಶ್ರೀ ಆಕಾಶ್ ಸಾವಳ ಸಂಗ್ ತಿಳಿಸಿದರು. ಲಸಿಕೆ ನೀಡುವಲ್ಲಿ ಪ್ರಮುಖ ಪಾತ್ರವಹಿಸಿದ ಸೈಬರಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಯವರಿಗೆ ಪ್ರಾಂಶುಪಾಲರು […]
ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪಡು ಗೋಪಾಡಿ : ಶಾಲಾ ಪ್ರಾರಂಭೋತ್ಸವ
ಕೋಟೇಶ್ವರ (ಜು, 2): ಕುಂದಾಪುರ ತಾಲೂಕಿನ ಪಡು ಗೋಪಾಡಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜುಲೈ,1ರಂದು ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದ ಜೊತೆಗೆ ರಾಜ್ಯ ಸರಕಾರ ನಿಗದಿ ಪಡಿಸಿದ ಕರೋನದ ಮಾರ್ಗಸೂಚಿಯ ಬಗ್ಗೆ ಮಕ್ಕಳ ಪೋಷಕರಿಗೆ ತಿಳಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಗೋಪಾಡಿ ಪಂಚಾಯಿತಿನ ಪ್ರಥಮ ಪ್ರಜೆ ಶ್ರೀಮತಿ ಸರೋಜಾ ಪೂಜಾರಿ ಕಾರ್ಯಕ್ರಮ ಅಧ್ಯಕ್ಷತೆಯನ್ನುವಹಿಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀನಿವಾಸ್ ಶೆಟ್ಟಿ, ಸಹ ಶಿಕ್ಷಕಿ ಶ್ರೀಮತಿ ಮಾಲತಿ ನಾಯ್ಕ,ಎಸ್.ಡಿ.ಎಂ.ಸಿ ಅಧ್ಯಕ್ಷ ಸುರೇಂದ್ರ ಕಾಂಚನ್ ಸಂಗಮ್,ಪಂಚಾಯತ್ […]
ರಸ್ತೆ ಅಪಘಾತದಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಮೊಗವೀರರ ಚಿಕಿತ್ಸೆ ಯ ನೆರವಿಗೆ ಮನವಿ
ಕುಂದಾಪುರ (ಜು, 02): ಶ್ರೀ ಮಾರಣಕಟ್ಟೆ ಮೇಳದ ಕಲಾವಿದ ಸುಬ್ರಹ್ಮಣ್ಯ ಮೊಗವೀರ ಬಗ್ವಾಡಿಯವರು ಮಾರಣ ಕಟ್ಟೆ ಸಮೀಪದ ಹಾರ್ಮಣ್ ಬಳಿ ಜೂನ್, 30ರಂದು ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದು ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಕಡು ಬಡತನದಲ್ಲಿರುವ ಸುಬ್ರಹ್ಮಣ್ಯ ಮೊಗವೀರ ರವರು ತಾಯಿ, ತಮ್ಮ ಹಾಗೂ ಅಜ್ಜಿಯೊಂದಿಗೆ ಸಣ್ಣ ಗುಡಿಸಿಲಿನಲ್ಲಿ ಜೀವನ ಸಾಗಿಸುತ್ತಿದ್ದರು. ಕಲಾವಿದ ಸುಬ್ರಹ್ಮಣ್ಯರವರ ಚಿಕಿತ್ಸಾ ವೆಚ್ಚ ಬರಿಸಲಾಗದೆ ಕುಟುಂಬಕ್ಕೆ ದಿಕ್ಕು ತೋಚದಂತಾಗಿದೆ. ಮಾನವೀಯ ನೆಲೆಯಲ್ಲಿ ಕಲಾವಿದನ […]
ಸಂತ ಮೇರಿ ಮಹಾವಿದ್ಯಾಲಯ ಶಿರ್ವ : 10 ಸಾವಿರ ಮಾಸ್ಕ್ ವಿತರಣಾ ಅಭಿಯಾನ
ಶಿರ್ವ (ಜು, 02): ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದ ವಿವಿಧ ಘಟಕಗಳಾದ ಸ್ನಾತಕೋತ್ತರ ಅಧ್ಯಯನ ಕೇಂದ್ರ ,ಎಂಎಸ್ ಡಬ್ಲ್ಯೂ ,ಎಂಕಾಂ,ಎನ್ ಸಿಸಿ,ಎನ್ ಎಸ್ ಎಸ್ , ರೋವರ್ಸ-ರೇಂಜರ್ಸ್ ಹಾಗೂ ರಿಲಯನ್ಸ್ ಫೌಂಡೇಶನ್ ಜಂಟಿಯಾಗಿ 10 ಸಾವಿರ ಮಾಸ್ಕ್ ಗಳ ವಿತರಣೆ ಅಭಿಯಾನವನ್ನು ಆಯೋಜಿಸಲಾಗಿತ್ತು. ಶಿರ್ವ ಆರೋಗ್ಯ ಸಮುದಾಯ ಕೇಂದ್ರ, ಪೋಸ್ಟ್ ಆಫೀಸ್, ಆರಕ್ಷಕರ ಠಾಣೆ, ಆಶಾ ಓಲ್ಡ್ ಏಜ್ ಹೋಂ,ವಿವಿಧ ಧಾರ್ಮಿಕ ಕೇಂದ್ರಗಳು, ಶಿರ್ವ ಗ್ರಾಮ ಪೇಟೆ, ಕಾಲೇಜಿನ ಸಂತ […]
ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೆಕ್ಕೆ : ಶಾಲಾ ಪ್ರಾರಂಭೋತ್ಸವ
ಜಡ್ಕಲ್ (ಜು, 01): ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೆಕ್ಕೆ ಇದರ ಶಾಲಾ ಪ್ರಾರಂಭೋತ್ಸವ ಜುಲೈ,01 ರಂದು ನಡೆಯಿತು. ಜಡ್ಕಲ್ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಯುತ ನಾಗೇಶ್ ನಾಯ್ಕ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಶ್ರೀಮತಿ ರಾಧಾರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನುವಹಿಸಿದ್ದರು. ಮುಖ್ಯ ಅತಿಥಿಯಾಗಿ ಶಿಕ್ಷಣಾಭಿಮಾನಿ ರಾಮ ಶೆಟ್ಟಿ ಅತ್ತಿಕಾರ್, ಮುಖ್ಯ ಶಿಕ್ಷಕಿ ಶ್ರೀಮತಿ ದೇವಕಿ, ಸಹಶಿಕ್ಷಕಿ ಶ್ರೀಮತಿ ನೇತ್ರ ಹಾಗೂ ಶಾಲಾ ಮಕ್ಕಳ ಪೋಷಕರು […]
ನಾನು, ಕನ್ನಡಿ ಮತ್ತು ನೆರಳು
ಕನ್ನಡಿಯೊಂದೇ ತೋರಿಸುವುದಂತೆನನ್ನನ್ನು ನಾನಿದ್ದಂತೆಕಾಣಬೇಕಿತ್ತು ನನ್ನೊಳಗಿನ ನನ್ನನ್ನು ನಾನುಆಳೆತ್ತರದ ಕನ್ನಡಿಯೆದುರು ನಿಂತೆ ಏನಾಶ್ಚರ್ಯ !ಎಡಭಾಗ ಬಲಭಾಗವಾಗಿಬಲಭಾಗ ಎಡಭಾಗವಾಗಿನನ್ನ ವೈರುಧ್ಯಗಳ ದರ್ಶನ ಕನ್ನಡಿಯೊಳಗಿನ ನನ್ನ ಬಿಂಬದಕಣ್ಣಲ್ಲಿ ಕಣ್ಣಿಟ್ಟು ದಿಟ್ಟಿಸಿ ನೋಡಿದೆಕಣ್ಣುಗಳ ಮೂಲಕವೇ ನನ್ನೊಳಗಿಳಿದು ಕೇಳಿದೆಹೌದು, ಯಾರು ನಾನುಅಲುಗಾಡಿದ ತುಟಿ ಅತ್ತದ್ದೇ ನಕ್ಕದ್ದೇ ಅರ್ಥವಾಗಲಿಲ್ಲಕಣ್ಣುಗಳಾದರೂ ಹೇಳಿದ್ದೇನು? ಅದೂ ಅರ್ಥವಾಗಲಿಲ್ಲನನ್ನ ಪ್ರತಿಬಿಂಬಕ್ಕೂ ನನ್ನರಿವಾಗದೆ ನಿಟ್ಟುಸಿರು ಬಿಟ್ಟಿರಬೇಕು ಖಚಿತವಾಯ್ತು. ಇಲ್ಲ..ಕನ್ನಡಿ ತೋರಲಾರದು ಸತ್ಯಅರ್ಥವಾಗಿತ್ತು ನನಗೆಹಾಗೇ ಸುಮ್ಮನೆ ನಡೆದು ಹೋದೆಬಿಡಲಾರದೆ ನನ್ನನ್ನೇ ಹಿಂಬಾಲಿಸುತ್ತಿತ್ತು ನೆರಳುಅದನ್ನೇ ಕೇಳಿದೆ ‘ಹೌದು ನಾನು […]
ಯೋಗ ನಮ್ಮದೆನ್ನಲು ಹೆಮ್ಮೆ ಪಡಿ – ನರೇಂದ್ರ ಎಸ್ ಗಂಗೊಳ್ಳಿ
ಕುಂದಾಪುರ (ಜು, 01) : ಯೋಗ ಎನ್ನುವುದು ಇಡೀ ವಿಶ್ವಕ್ಕೆ ಭಾರತ ನೀಡಿದ ಅದ್ಭುತವಾದ ಕೊಡುಗೆ. ಅದನ್ನು ನಮ್ಮದೆಂದು ಹೇಳಲು ಹೆಮ್ಮೆ ಪಡಬೇಕು ಮತ್ತು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ ಹೇಳಿದರು. ಅವರು ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಕಾಪುವಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸ್ವಯಂ ಸೇವಾ ಯೋಜನೆ, ಯೂತ್ ರೆಡ್ ಕ್ರಾಸ್, ರೇಂಜರ್ಸ್, […]
ನಟ ರಕ್ಷಿತ್ ಶೆಟ್ಟಿ ವಿರುದ್ಧ ಅವಹೇಳನ : ಖಾಸಗಿ ಸುದ್ದಿ ವಾಹಿನಿ ವಿರುದ್ಧ ದೂರು ದಾಖಲು
ಕುಂದಾಪುರ (ಜು,01): ನಿನ್ನೆಯ ಸಿನಿ ಅಡ್ಡಾ ಕಾರ್ಯಕ್ರಮದಲ್ಲಿ ರಕ್ಷಿತ್ ಶೆಟ್ಟಿ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿ ನಿಂದಿಸಿದಕ್ಕಾಗಿ ಆಕ್ರೋಶ ಬುಗಿಲೆದ್ದಿದೆ. ಪಬ್ಲಿಕ್ ಟಿವಿಯ ಕಾರ್ಯಕ್ರಮ ಇದಾಗಿದ್ದು, ವಾಹಿನಿಯ ವಿರುದ್ಧ ಶಂಕರನಾರಾಯಣ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ಸಲ್ಲಿಸಿದ ಭರತ್ ತಲ್ಲಂಜೆ ರಕ್ಷಿತ್ ಶೆಟ್ಟಿಯವರ ಅಭಿಮಾನಿ ಆಗಿದ್ದು, ಈ ಕಾರ್ಯಕ್ರಮದಲ್ಲಿ ಉದ್ದೇಶಪೂರ್ವಕವಾಗಿ ರಕ್ಷಿತ್ ಶೆಟ್ಟಿಯವರನ್ನು ತೇಜೋವಧೆ ಮಾಡಿದ್ದಾರೆ ಎಂದು ದೂರು ನೀಡಿದ್ದಾರೆ. ಈ ಕೂಡಲೇ ನಿರೂಪಕರನ್ನು ಬಂಧಿಸಬೇಕು ಮತ್ತು ಅವರ […]
ಗುಜ್ಜಾಡಿ : ಅಪಘಾತದಲ್ಲಿ ಕೊನೆಯುಸಿರೇಳೆದ ಗೋವಿಗೆ ಹಿಂ.ಜಾ.ವೇ ವತಿಯಿಂದ ಧಾರ್ಮಿಕ ವಿಧಿ ವಿಧಾನದೊಂದಿಗೆ ಅಂತ್ಯ ಸಂಸ್ಕಾರ
ಗಂಗೊಳ್ಳಿ (ಜೂ, 29) : ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮದ ಮುಖ್ಯರಸ್ತೆಯ ಸಮೀಪದಲ್ಲಿ ರಸ್ತೆ ಅಪಘಾತದಿಂದಾಗಿ ಕೊನೆಯುಸಿರೇಳೆದ ಗೋವಿಗೆ ಗಂಗೊಳ್ಳಿಯ ಹಿಂದು ಜಾಗರಣ ವೇದಿಕೆ ಯ ಕಾರ್ಯಕರ್ತರು ಸ್ಥಳೀಯರ ಸಹಕಾರದಿಂದ ಜೂನ್ 29 ರಂದು ಗುಜ್ಜಾಡಿಯಲ್ಲಿ ಧಾರ್ಮಿಕ ವಿಧಿ ವಿಧಾನದೊಂದಿಗೆ ಅಂತ್ಯ ಸಂಸ್ಕಾರವನ್ನು ನೆರವೇರಿಸಿದರು. ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರ ಈ ಕಾರ್ಯಕ್ಕೆ ಸ್ಥಳೀಯರು ಶ್ಲಾಘಿಸಿದ್ದಾರೆ.










