ವಂಡ್ಸೆ (ಜೂ, 13): ಕೊಡ್ಲಾಡಿ -ಮಾರ್ಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2021-22ನೇ ಶೈಕ್ಷಣಿಕ ವರ್ಷದ ದಾಖಲಾತಿ ಪ್ರಕ್ರಿಯೆ ಜೂನ್, 15 ರಿಂದ ಆರಂಭವಾಗಲಿದೆ. ಜುಲೈ ,1 ರಿಂದ ಬೋಧನಾ ಹಾಗೂ ಕಲಿಕಾ ಪ್ರಕ್ರಿಯೆಗಳು ಆರಂಭವಾಗಲಿದ್ದು ಇದಕ್ಕೆ ಸಂಬಂಧಪಟ್ಟಂತೆ ಪೂರ್ವ ಸಿದ್ಧತೆಗಳನ್ನು ಶಿಕ್ಷಣ ಇಲಾಖೆಯ ಮಾರ್ಗಸೂಚಿಯಂತೆ ಕೈಗೊಳ್ಳಲಾಗುತ್ತಿದೆ. Covid-19ನ ಪ್ರಸ್ತುತ ಪರಿಸ್ಥಿತಿಯನ್ನು ಅವಲೋಕಿಸಿದಾಗ ಬಹುತೇಕ ಸೆಪ್ಟಂಬರ್ ವರೆಗೆ ಆಫ್ಲೈನ್ (ವಿದ್ಯಾರ್ಥಿಗೆ ನೇರ ಬೋಧನೆ) ತರಗತಿಗಳನ್ನು ನಡೆಸುವುದು ಕಷ್ಟ ಸಾಧ್ಯವಾಗಿರುತ್ತದೆ. ಆದ್ದರಿಂದ […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಗಂಗೊಳ್ಳಿ: ಬೈಂದೂರು ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ ಭೇಟಿ – ಕರೋನಾ ನಿಯಂತ್ರಣ ಕ್ರಮಗಳ ಕುರಿತು ಪರಿಶೀಲನೆ
ಗಂಗೊಳ್ಳಿ (ಜೂ, 12): ಬೈಂದೂರು ಶಾಸಕ ಶ್ರೀ. ಬಿ.ಎಂ.ಸುಕುಮಾರ್ ಶೆಟ್ಟಿ ಗಂಗೊಳ್ಳಿ ಗ್ರಾಮಕ್ಕೆ ಗ ಭೇಟಿ ನೀಡಿ ಕೋವಿಡ್ ನಿಯಂತ್ರಣಕ್ಕೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೈಗೊಳ್ಳಲಾದ ಕ್ರಮಗಳನ್ನು ಪರಿಶೀಲಿಸಿ ಮಾಹಿತಿಯನ್ನು ಪಡೆದುಕೊಂಡರು. ಕೋವಿಡ್ ನಿಯಂತ್ರಣಕ್ಕೆ 50 ಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ಇರುವ ಗಂಗೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರದೇಶವನ್ನು ಜೂ.10 ರಿಂದ ಸಂಪೂರ್ಣ ಲಾಕ್ಡೌನ್ ಮಾಡಲಾಗಿದ್ದು, ಉತ್ತಮ ರೀತಿಯಲ್ಲಿ ಲಾಕ್ಡೌನ್ ವ್ಯವಸ್ಥೆ ಮಾಡಿರುವುದಕ್ಕೆ ಶಾಸಕರು ಮೆಚ್ಚುಗೆ ವ್ಯಕ್ತಪಡಿಸಿದರು. ಕರೋನಾ […]
ಜೆಸಿಐ ಕುಂದಾಪುರ ಸಿಟಿ : 46 ನೇ ದಿನದ ಅನ್ನದಾಸೋಹ ಕಾರ್ಯಕ್ರಮ
ಕುಂದಾಪುರ (ಜೂ, 12): ಕೋವಿಡ್ 19 ಲಾಕ್ ಡೌನ್ ಸಂದರ್ಭದಲ್ಲಿ ಸತತ 46 ದಿನಗಳಿಂದ ಕುಂದಾಪುರ ಪರಿಸರದಲ್ಲಿನ ಸುಮಾರು 230 ಕ್ಕಿಂತಲೂ ಹೆಚ್ಚು ವೃದ್ದರಿಗೆ, ಕೂಲಿ ಕಾರ್ಮಿಕರಿಗೆ, ವಿವಿಧ ಕಚೇರಿಗಳಲ್ಲಿ ಕೆಲಸ ಮಾಡುವರಿಗೆ, ಆಸ್ಪತ್ರೆಯಲ್ಲಿನ ರೋಗಿಗಳಿಗೆ ಜೆಸಿಐ ಕುಂದಾಪುರ ಸಿಟಿ ವತಿಯಿಂದ ಊಟದ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಜೂನ್ 12 ರಂದು ನಡೆದ 46 ನೇ ದಿನದ ಅನ್ನದಾಸೋಹ ಕಾರ್ಯಕ್ರಮದಲ್ಲಿ ಜೆಸಿಐ ಕುಂದಾಪುರ ಸಿಟಿ ಯ ಅಧ್ಯಕ್ಷ ವಿಜಯ ಭಂಡಾರಿ, ಸ್ಥಾಪಕಾಧ್ಯಕ್ಷ […]
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಪದವಿ ಆಸೆ ಪೂರೈಸುವ ಆಶಯದಿಂದ ರೂಪು ತಳೆದ ಸಂಸ್ಥೆ ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ.
ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಪ್ರತಿಷ್ಠಿತ ಪದವಿ ಕಾಲೇಜುಗಳಲ್ಲಿ ವಿಶೇಷ ಸಾಲಿನಲ್ಲಿ ಗುರುತಿಸಿಕೊಂಡ ಸಂಸ್ಥೆ ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ. ‘ಸಮಾಜದ ಕಟ್ಟಕಡೆಯ ಮಗು ವಿದ್ಯಾವಂತನಾಗಬೇಕು’ ಎಂಬುದು ಕಾಲೇಜಿನ ಅಧ್ಯಕ್ಷರು ಮತ್ತು ಬೈಂದೂರು ಶಾಸಕರಾದ ಶ್ರೀ. ಬಿ. ಎಂ. ಸುಕುಮಾರ ಶೆಟ್ಟಿಯವರ ಧ್ಯೇಯ. ಅಧ್ಯಕ್ಷರ ಧ್ಯೇಯ ವಾಕ್ಯವನ್ನು ಸಾರ್ಥಕಗೊಳಿಸುವ ಪಯಣದೊಂದಿಗೆ ಸಂಸ್ಥೆಯು 2021-22ರ ಸಾಲಿನ ಪ್ರವೇಶ ಪ್ರಕ್ರಿಯೆಯನ್ನು ಆರಂಭಗೊಳಿಸಿದೆ. 130 ವಿದ್ಯಾರ್ಥಿಗಳೊಂದಿಗೆ ಹನ್ನೊಂದು ವರ್ಷಗಳ ಹಿಂದೆ […]
ಚಿತ್ರದುರ್ಗ ರೆಡ್ ಕ್ರಾಸ್ : ಕೋವಿಡ್ ಲಸಿಕಾ ಅಭಿಯಾನ
ಚಿತ್ರದುರ್ಗ (ಜೂ, 11) : ಕರೋನ ಮಹಾಮಾರಿ ಎರಡನೇ ಅಲೆ ತಡೆಗಟ್ಟುವ ಸಲುವಾಗಿ ಚಿತ್ರದುರ್ಗ ರೆಡ್ ಕ್ರಾಸ್ ಸಂಸ್ಥೆಯ ವತಿಯಿಂದ ಜಿಲ್ಲೆ ಯಲ್ಲಿ ಕೋವಿಡ್ ಲಸಿಕಾ ಅಭಿಯಾನಕ್ಕೆ ಹೆಚ್ಚು ಒತ್ತು ನೀಡಲಾಗಿತ್ತಿದ್ದು, ನಗರದಲ್ಲಿ ವ್ಯಾಕ್ಸಿನ್ ಸಹಾಯವಾಣಿ Vaccine Helpline 24*7 ನ್ನು ನಿರ್ದೇಶಕರಾದ ಶ್ರೀ ಯು ಸಿ ಗಿರೀಶ್ ನೇತೃತ್ವದಲ್ಲಿ ಲಸಿಕೆ ನೀಡುವ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದೆ. ಸಾರ್ವಜನಿಕರಿಗೆ ಕೋವಿಡ್ -19 ಲಸಿಕಾ ಅಭಿಯಾನದ ಬಗ್ಗೆ ಜಾಗೃತಿ ಮೂಡಿಸುತ್ತಾ, ಲಸಿಕಾ […]
ಯುವಾ ಬ್ರಿಗೇಡ್ ಕುಂದಾಪುರ : ಖಾಸಗಿ ಶಾಲಾ ಶಿಕ್ಷಕರಿಗೆ ರೇಷನ್ ಕಿಟ್ ವಿತರಣೆ
ಕುಂದಾಪುರ (ಜೂ, 10): ರಾಜ್ಯದೆಲ್ಲೆಡೆ ಯುವಾಬ್ರಿಗೇಡ್ ವತಿಯಿಂದ “ಗುರು ಗೌರವ” ಎನ್ನುವ ಶೀರ್ಷಿಕೆಯಡಿಯಲ್ಲಿ ವೇತನವಿಲ್ಲದ, ಸಂಕಷ್ಟದಲ್ಲಿರುವ ಖಾಸಗಿ ಶಾಲಾ ಶಿಕ್ಷಕರಿಗೆ ರೇಷನ್ ಕಿಟ್ ಹಂಚುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಇಲ್ಲಿಯ ತನಕ ಸುಮಾರು 13000 ಕಿಟ್ ಗಳನ್ನ ವಿತರಿಸಲಾಗಿದೆ. ಹಾಗೆಯೇ ಯುವಾಬ್ರಿಗೇಡ್ ಕುಂದಾಪುರ ತಂಡದಿಂದ ಕುಂದಾಪುರ ಮತ್ತು ಬೈಂದೂರು ತಾಲೂಕಿನಲ್ಲಿ ಕರೋನಾ ಕಾರಣದಿಂದ ಶಾಲೆಗಳು ನಡೆಯದೆ, ಅನೇಕ ಖಾಸಗಿ ಶಿಕ್ಷಕರು ಸಂಬಳ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದವರನ್ನು ಗುರುತಿಸಿ , ಸರಿ ಸುಮಾರು […]
ಜೈ ಕುಂದಾಪ್ರ ಸೇವಾ ಟ್ರಸ್ಟ್ (ರಿ) ಕುಂದಾಪುರ : ದಾನಿಗಳ ಸಹಕಾರದಿಂದ ಆಶ್ರಮದ ಮಕ್ಕಳಿಗೆ ದಿನಬಳಕೆಯ ಸಾಮಾಗ್ರಿ ಹಾಗೂ ತಿಂಡಿ ತಿನಿಸುಗಳ ಹಸ್ತಾಂತರ
ಕುಂದಾಪುರ (ಜೂ, 10): ಬ್ರಹ್ಮಾವರದ ಅಪ್ಪ -ಅಮ್ಮ ಅನಾಥಾಶ್ರಮ ಹಾಗೂ ಮಣಿಪಾಲ ಹೊಸ ಬೆಳಕು ಆಶ್ರಮಕ್ಕೆ ಕೊಡುಗೈ ದಾನಿಗಳು ಹಾಗೂ ಸಮಾಜ ಸೇವಕರಾದ ಶ್ರೀಕಾಂತ್ ಶೆಣೈ ಕೋಟ ಹಾಗೂ ಕರಾವಳಿಯ ಪ್ರಸಿದ್ಧ ಮೊಬೈಲ್ ಮಳಿಗೆಯಾದ ಶ್ರೀ ಶಾಸ್ತ ಮೊಬೈಲ್ ಕೋಟ ಇದರ ಮಾಲಿಕರಾದ ಆದಿತ್ಯ ಕೋಟ ಇವರು ನೀಡಿದ ಸರಿಸುಮಾರು 18ಸಾವಿರ ದಿಂದ 20ಸಾವಿರ ಮೌಲ್ಯದ ದಿನಬಳಕೆಯ ಸಾಮಾಗ್ರಿ ಮತ್ತು ತಿಂಡಿ ತಿನಿಸುಗಳನ್ನು ಜೈ ಕುಂದಾಪ್ರ ಸೇವಾ ಟ್ರಸ್ಟ್ ರಿ. […]
ದೈವದ ಚಾಕ್ರಿ ವರ್ಗಕ್ಕೆ ಕೋವಿಡ್ ಪರಿಹಾರ ಘೋಷಿಸಲು ಮಹೇಶ್ ಪೂಜಾರಿ ಹೂಡೆ ಆಗ್ರಹ
ಉಡುಪಿ (ಜೂ, 10): ಪರಶುರಾಮ ಸೃಷ್ಟಿಯ ತುಳುನಾಡಿನ ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ದೈವಸ್ಥಾನಗಳು ಹಲವಾರು ಇದೆ. ಆಯಾಯ ಗ್ರಾಮಗಳ ದೈವ ಸ್ಥಾನದಲ್ಲಿ ದೈವ ಚಾಕ್ರಿ ಮಾಡುವ ವರ್ಗಗಳು ಹಲವು ವರ್ಷಗಳಿಂದ ದೈವಾರಾಧನೆಯಲ್ಲೆ ಬದುಕನ್ನು ಕಟ್ಟಿಕೊಂಡಿದ್ದಾರೆ. ಆದರೆಈ ಕರೋನಾ ಮಹಾಮಾರಿಯಿಂದಾದ ದೀರ್ಘಾವಧಿಯ ಲಾಕ್ಡೌನ್ನಿಂದಾಗಿ ಧಾರ್ಮಿಕ ಕ್ಷೇತ್ರಗಳ ಉತ್ಸವ, ಜಾತ್ರೆ, ವಾರ್ಷಿಕೋತ್ಸವಗಳನ್ನು ಕೋವಿಡ್ ಮುನ್ನೆಚ್ಚರಿಕೆಯ ಕಾರಣದಿಂದಾಗಿ ಸರ್ಕಾರ ರದ್ದು ಮಾಡಿದೆ. ಆದರೆ ಇದು ದೈವ ಚಾಕ್ರಿ ಸದಸ್ಯರ ಬದುಕಿನ ಮೇಲೆ ನೇರ […]
ಕಮಲಶಿಲೆ ದೇವಳದ ಸೆಕ್ಯೂರಿಟಿ – ಗಾನ ಪ್ರತಿಭೆ – ಮಂಜುನಾಥ್ ಮೊಗವೀರ
ಪ್ರತಿಭೆ ಅನ್ನೋದು ಯಾರ ಸೊತ್ತೂ ಅಲ್ಲ. ಪ್ರತಿಭೆಗೆ ಬಡವ-ಬಲ್ಲಿದ, ಹೆಣ್ಣು-ಗಂಡು ,ಜಾತಿ-ಧರ್ಮದ ತಾರತಮ್ಯ ಇಲ್ಲ. ಪ್ರತಿಯೊಂದು ಪ್ರತಿಭೆ ಅರಳಲು- ಬೆಳೆಯಲು ಬೇಕಾಗಿರುವುದು ಸ್ವ ಆಸಕ್ತಿ, ಛಲ, ಕಾಯಕ, ಪ್ರೀತಿ ಹಾಗೂ ಬೆಂಬಲ. ಗಿಡವೊಂದು ಬಲಿತು ಹೆಮ್ಮರವಾಗಿ ಬೆಳೆಯ ಬೇಕಾದರೆ ಅದಕ್ಕೆ ಪ್ರಕೃತಿಯ ಪಂಚಭೂತಗಳು ಎಷ್ಟು ಮುಖ್ಯವೋ, ಒಬ್ಬ ಪ್ರತಿಭಾವಂತನ ಪ್ರತಿಭೆ ಬಾಹ್ಯ ಪ್ರಪಂಚಕ್ಕೆ ಪಸರಿಸಲು ಸಹೃದಯದವರು ಕೂಡ ಅಷ್ಟೇ ಮುಖ್ಯವಾಗುತ್ತಾರೆ. ಅದೆಷ್ಟೋ ಪ್ರತಿಭೆ ಗಳಿಗೆ ಸೂಕ್ತ ವೇದಿಕೆ ಸಿಗದೇ, ಬೇಲಿಯೊಳಗಿನ […]
ಕರೋನಾ ಕಂಟಕ – ಬದುಕಿನ ತಲ್ಲಣ
ಕಣ್ಣಿಗೆ ಕಾಣದ ಒಂದು ಸಣ್ಣ ವೈರಾಣು ಇಡೀ ಪ್ರಪಂಚದ ಮೂಲೆಮೂಲೆಗಳಲ್ಲಿ ಸಂಚರಿಸಿ ಜನರನ್ನು ಭಯದ ವಾತಾವರಣದಲ್ಲಿ ಬದುಕುವಂತೆ ಮಾಡಿದೆ. ಕೆಲವೆ ಕೆಲವೇ ದಿನಗಳಲ್ಲಿ ಕರೋನ ಎನ್ನುವ ಹೆಮ್ಮಾರಿ ಹಲವಾರು ಸಾವು ನೋವುಗಳಿಗೆ ಕಾರಣವಾಯಿತು. ಸದ್ಯದ ಪರಿಸ್ಥಿತಿಯಲ್ಲಿ ತನ್ನ ಕಬಂಧಬಾಹುವನ್ನು ಭಾರತದಾದ್ಯಂತ ಅವರಿಸುವುದರ ಜೊತೆಗೆ ರಾಜ್ಯದ ಮೂಲೆ ಮೂಲೆಗೆ ಸಂಚಾರ ಮುಂದುವರಿಸಿ ಹಲವಾರು ಜನರ ಜೀವನದ ದಾರಿಯನ್ನು ಮುಚ್ಚಿದೆ. ಈ ಕರೋನ ಎನ್ನುವ ರೋಗದಿಂದಾಗಿ ನಮ್ಮ ಬದುಕು ಕಬ್ಬಿಣದ ಕಡಲೆಯಂತೆಯಾಗಿದೆ. ದುಡಿದು […]










