ಕುಂದಾಪುರ (ಮೇ. 15) : ತೌಖ್ತೇ ಚಂಡಮಾರುತ ಅಬ್ಬರ ಕರಾವಳಿ ಭಾಗದ ಕಡಲ ತೀರದಲ್ಲಿ ಅಪಾರ ಹಾನಿಯನ್ನು ಉಂಟುಮಾಡಿದ್ದು,ಕುಂದಾಪುರ ತಾಲೂಕಿನ ಗೋಪಾಡಿ ಗ್ರಾಮದ ಕಡಲ ತೀರದ ನಿವಾಸಿಗಳಲ್ಲಿ ಆತಂಕ ಸೃಷ್ಟಿಸಿದೆ.. ದಿನದಿಂದ ದಿನಕ್ಕೆ ಸಮುದ್ರದ ಅಲೆಯ ಅಬ್ಬರ ಹೆಚ್ಚಾಗುತ್ತಿದ್ದು ಕಡಲತೀರದ ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸುವ ಚಿಂತನೆ ನಡೆಯುತ್ತಿದೆ. ಮೇ 15ರ ಸಂಜೆ ಗೋಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸರೋಜ ಪೂಜಾರಿ ಹಾಗೂ ಸದಸ್ಯ ಪ್ರಭಾಕರ್ ಯಾನೆ ಪ್ರಕಾಶ್ […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಜೆಸಿಐ ಕುಂದಾಪುರ ಸಿಟಿ : 16 ನೇ ದಿನದ ಲಾಕ್ ಡೌನ್ ಉಚಿತ ಮಧ್ಯಾಹ್ನ ಊಟ ವಿತರಣೆ
ಕುಂದಾಪುರ (ಮೇ, 14) : ಜೆಸಿಐ ಕುಂದಾಪುರ ಸಿಟಿ ಘಟಕದ ಸತತ 16 ನೇ ದಿನದ ಲಾಕ್ ಡೌನ್ ಮಿಡ್ ಡೇ ಮಿಲ್ಸ್ ಮೇ13 ರಂದು ರೋಟರಿ ಕ್ಲಬ್ ಕುಂದಾಪುರ ದಕ್ಷಿಣ ಹಾಗು ಮಿಲ್ಲತ್ ಫೌಂಡೇಶನ್ ಕುಂದಾಪುರ ತಾಲೂಕು ಇವರ ಸಹಕಾರ ದೊಂದಿಗೆ ನಡೆಯಿತು. ಕುಂದಾಪುರ ಪರಿಸರದಲ್ಲಿ ಲಾರಿ ಚಾಲಕರಿಗೆ, ಕೂಲಿಕಾರ್ಮಿಕರಿಗೆ ,ಆಸ್ಪತ್ರೆ ರೋಗಿ ಗಳಿಗೆ,ಭಿಕ್ಷುಕರಿಗೆಹಾಗೂ ವೃದ್ದರಿಗೆ ಸುಮಾರು 280 ಕ್ಕಿಂತಲೂ ಹೆಚ್ಚು ಹಸಿದವರಿಗೆ ಊಟ ವನ್ನು ನೀಡಲಾಯಿತು. ಈ […]
ಬಾಳ ಸಾರಥಿ
ಅಂದು ಆ ಶಾಲೆಯಲ್ಲೊಂದು ಸಂಭ್ರಮದ ವಾತಾವರಣ. ಎಲ್ಲರೂ ಸಡಗರದಿಂದ ಸಮಾರಂಭಕ್ಕಾಗಿ ತಯಾರಿ ನಡೆಸುವ ತರಾತುರಿಯಲ್ಲಿದ್ದರು. ಎಲ್ಲವೂ ಸಜ್ಜಾಗುವ ವೇಳೆಯಲ್ಲಿ ಗಣ್ಯರೂ ಆಗಮಿಸಲಾರಂಭಿಸಿದ್ದರು. ಕೆಲ ಕ್ಷಣದಲ್ಲೇ ಸಮಾರಂಭದ ಕೇಂದ್ರ ಬಿಂದುವಾದ “ದಿಶಾ ತ್ರಿವೇಣಿ” ತನ್ನ ಜೀವನದ ಅವಿಭಾಜ್ಯ ಅಂಗವಾದ ತಾಯಿಯೊಂದಿಗೆ ಸಮಾರಂಭದ ಸ್ಥಳಕ್ಕೆ ಆಗಮಿಸಿ ತನ್ನೆಲ್ಲಾ ಗುರುವೃಂದರನ್ನು ಮಾತನಾಡಿಸಿ ಆಶೀರ್ವಾದ ಪಡೆದಿದ್ದಳು. ಕೊಂಚ ಸಮಯದಲ್ಲೇ ಸಮಾರಂಭ ಆರಂಭವಾಗಿತ್ತು. ವೇದಿಕೆಯ ಮೇಲೆ ಗಣ್ಯಾತೀಗಣ್ಯರ ನಡುವೆ ತನ್ನ ಮಗಳನ್ನು ಕಂಡ ತ್ರಿವೇಣಿಯವರ ಕಣ್ಣಲ್ಲಿ ಆನಂದಬಾಷ್ಪ. […]
ಮೊದಲು ನೀ ಬದಲಾಗು
ವಾಸ್ತವದ ಪರಿಸ್ಥಿತಿಯನ್ನು ಒಮ್ಮೆ ಗಮನಿಸಿದಾಗ ನನಗೆ ನೆನಪಿಗೆ ಬರುವುದು “ಮಾಡಿದ್ದುಣ್ಣೋ ಮಹಾರಾಯ” ಎಂಬ ಮಾತು. ನಮ್ಮ ದೇಶದಲ್ಲಿ ಪರಿಸರ ಕಾಳಜಿ ಬಗ್ಗೆ ಮಕ್ಕಳಿಗೆ ಒಂದನೇ ತರಗತಿಯಿಂದಲೇ ಬೋಧಿಸುವ ನಮ್ಮ ಶಿಕ್ಷಣ ವ್ಯವಸ್ಥೆ ಭಾಗಶಃ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗಿದೆಯೆನೋ ಎಂದೆನಿಸುತ್ತಿದೆ. ಎತ್ತ ನೋಡಿದರೂ ಹಸಿರು ಗಿಡಮರಗಳನ್ನು ಕಿತ್ತೆಸೆದು, ಜಲಮಾಲಿನ್ಯ, ವಾಯುಮಾಲಿನ್ಯ ಮಾಡಿ ಮನುಷ್ಯ ಅಹಂಕಾರದಲ್ಲಿ ಮೆರೆದ!. ಹಾಗಾಗಿ ಅದೇ ಪ್ರಕ್ರತಿ ಇಂದು ಮುನಿಸಿಕೊಂಡು ನಾವು ಆಕ್ಸಿಜನ್ ಗಾಗಿ ಪರದಾಡುವ ಸ್ಥಿತಿಯನ್ನು ತಂದೊಡ್ಡಿದೆ. […]
ಮರಣ ಬಲೆ
ಕರಾವಳಿಯ ಸಾಂಪ್ರದಾಯಿಕ ಮೀನುಗಾರಿಕೆಯಲ್ಲಿ “ಮರಣ ಬಲೆ” ಕೂಡಾ ಒಂದು. ಹೆಸರೇ ಅರ್ಥೈಸುವಂತೆ ಅಜಾಗರೂಕತೆ, ಮರಣ-ಮಸಣಕ್ಕೊಯ್ಯುವಂತದ್ದು. ಅಲೆಗಳಬ್ಬರ ಹೆಚ್ಚಿದ್ದಾಗ ಮಾತ್ರ ಬಲೆ ನೀರಿನಾಳಕ್ಕೆ ಇಳಿಯುತ್ತದೆ. ಬಲೆ ಹೊತ್ತು ಅಲೆ ದಾಟಿ ಕೈ ಸಡಿಲಿಸುವಲ್ಲಿ ಮೀನುಗಾರ ನಿಪುಣನಾಗಿರಲೇ ಬೇಕು. ಹೆಚ್ಚಾಗಿ ಆಳ ಸಮುದ್ರದ ಮೀನುಗಾರಿಕೆಗೆ ಮಳೆಗಾಲದ ರಜೆಯಿತ್ತಾಗ ಈ ‘ಮರಣಬಲೆ’ ಯನ್ನು ಅಣಿಗೊಳಿಸಲಾಗುತ್ತದೆ. ಮುಳ್ಳು ಬಿಡಿಸ ಬಲ್ಲವಗೆ ಯಾವ ಮೀನಾದರೇನು? ಅಲೆಗೆ ಎದೆಯೊಡ್ಡುವವಗೆ ಯಾವ ಬಲೆಯಾದರೇನು? ವೀರ ಕಳೆ ಮೊಗದಲ್ಲಿದ್ದರಷ್ಟೇ ಸಾಕು… ಅದೋ […]
ಕುಂದಾಪುರ ಲಸಿಕೆ ಕೇಂದ್ರಕ್ಕೆ ಡಿವೈಎಸ್ಪಿ ಕೆ. ಶ್ರೀಕಾಂತ್ ಭೇಟಿ
ಕುಂದಾಪುರ (ಮೇ. 13) : ಕುಂದಾಪುರದ ಬೋರ್ಡ್ ಹೈಸ್ಕೂಲ್ನ ರೋಟರಿ ಲಕ್ಷ್ಮೀ ನರಸಿಂಹ ಕಲಾಮಂದಿರದಲ್ಲಿ ಕಲಾಕ್ಷೇತ್ರ, ಸೇವಾ ಭಾರತಿ, ಬಿಜೆಪಿ ಹಾಗೂ ಕಾಂಗ್ರೆಸ್ ಸ್ವಯಂ ಸೇವಕರ ಸಹಯೋಗದೊಂದಿಗೆ ಕರೋನಾ ಲಸಿಕೆ ನೀಡುವಿಕೆ ಹಲವು ದಿನಗಳಿಂದ ನಡೆಯುತ್ತಿದ್ದು ,ಗುರುವಾರದಂದು 18 ವರ್ಷಚ ಮೇಲ್ಪಟ್ಟು ನೋಂದಣಿ ಮಾಡಿಸಿಕೊಂಡು ಮೊಬೈಲ್ಗೆ ಸಂದೇಶ ಬಂದ 150 ಮಂದಿಗೆ ಕೊವಿಶೀಲ್ಡ್ ಲಸಿಕೆ ನೀಡಲಾಯಿತು. ಲಸಿಕೆ ನೀಡುತ್ತಿರುವ ಸ್ಥಳಕ್ಕೆ ಕುಂದಾಪುರದ ಡಿವೈಎಸ್ಪಿ ಕೆ. ಶ್ರೀಕಾಂತ್ ಭೇಟಿ ನೀಡಿ ವ್ಯವಸ್ಥೆಯ […]
ಬೈಂದೂರು ಶಾಸಕರ ಗೃಹ ಕಛೇರಿಗೆ ನೂತನ ತಹಶೀಲ್ದಾರ್ ಭೇಟಿ
ಬೈಂದೂರು (ಮೇ,13): ಬೈಂದೂರು ತಾಲೂಕಿನ ನೂತನ ತಹಶೀಲ್ದಾರರಾಗಿ ಅಧಿಕಾರ ಸ್ವೀಕರಿಸಿರುವ ಶೋಭಾಲಕ್ಷ್ಮೀ ಹೆಚ್. ಎಸ್ ರವರು ಬೈಂದೂರು ಶಾಸಕ ಬಿಎಂ ಸುಕುಮಾರ್ ಶೆಟ್ಟಿ ಯವರ ಗೃಹಕಛೇರಿಗೆ ಮೇ 13ರಂದು ಭೇಟಿ ನೀಡಿದರು. ನೂತನ ತಹಶೀಲ್ದಾರರಾಗಿ ಅಧಿಕಾರ ಸ್ವೀಕರಿಸಿರುವ ಶೋಭಾ ಲಕ್ಷ್ಮಿ ಹೆಚ್ ರವರನ್ನು ಶಾಸಕರು ಶುಭ ಹಾರೈಸಿ ತಾಲೂಕಿನ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಕೋವಿಡ್ ನಿರ್ವಹಣೆ ಹಾಗೂ ಜಿಲ್ಲೆಯ ಅತ್ಯಂತ ಗ್ರಾಮೀಣ ಭಾಗವಾಗಿರುವ ಬೈಂದೂರು ಕ್ಷೇತ್ರದ ಜನತೆಯ ಆಡಳಿತಾತ್ಮಕ […]
“ನೆಲೆ ಕಾಣದ ಬಂಡಿ”
ಬಹಳ ವರ್ಷದ ಹಿಂದೆ ಆ ಪುಟ್ಟ ಹಳ್ಳಿಯ ಎಲ್ಲ ಮನೆಯಲ್ಲೂ ಬಡತನವು ತಾಂಡವ ನರ್ತನ ವಾಡುತ್ತಿತ್ತು. ವಸಂತಗಳು ಕಳೆಯುತ್ತಾ ಹೋದಂತೆ ಆ ಹಳ್ಳಿಯಲ್ಲಿ ಹಲವಾರು ಸುಧಾರಣೆ ಕಾಣ ತೊಡಗಿದವು. ಇದರ ಪರಿಣಾಮ ಊರಿನ ಜನತೆ ಬೇರೆ ಬೇರೆ ಊರುಗಳಿಗೆ ತೆರಳಿ ಸ್ವಂತ ಉದ್ಯಮ ಪ್ರಾರಂಭಿಸಿ ತಕ್ಕಮಟ್ಟಿಗೆ ಬದುಕನ್ನು ಸುಧಾರಿಸಿಕೊಂಡಿದ್ದರು. ಸಾಲ ಕಡ ಮಾಡಿ ಅಕ್ಕ ತಂಗಿಯರ ಮದುವೆ ಮತ್ತು ಮನೆ ಕಟ್ಟಿಕೊಂಡು ಮಾಡಿದ ಸಾಲ ತೀರಿಸಿ ಎಲ್ಲವೂ ಒಂದು ಹಂತಕ್ಕೆ […]
ಗಂಗೊಳ್ಳಿ ಪೊಲೀಸ್ ಠಾಣೆಯ ನೂತನ ಉಪನಿರೀಕ್ಷಕರಾಗಿ ನಂಜಾ ನಾಯ್ಕ್ ಎನ್. ಅಧಿಕಾರ ಸ್ವೀಕಾರ
ಗಂಗೊಳ್ಳಿ (ಮೇ, 12) : ಗಂಗೊಳ್ಳಿ ಪೊಲೀಸ್ ಠಾಣೆಯ ನೂತನ ಉಪನಿರೀಕ್ಷಕರಾಗಿ ನಂಜಾ ನಾಯ್ಕ್ ಎನ್. ಮೇ 11ರಂದು ಅಧಿಕಾರ ಸ್ವೀಕರಿಸಿದ್ದಾರೆ. ಗಂಗೊಳ್ಳಿ ಠಾಣೆಯಲ್ಲಿ ಉಪನಿರೀಕ್ಷಕರಾಗಿ ಸೇವೆ ಸಲ್ಲಿಸಿದ್ದ ಭೀಮಾಶಂಕರ್ ಎಸ್. ರವರು ವರ್ಗಾವಣೆಗೊಂಡ ಬಳಿಕ ಖಾಲಿಯಿದ್ದ ಪೊಲೀಸ್ ಉಪನಿರೀಕ್ಷಕ ಹುದ್ದೆಗೆ ನಂಜಾ ನಾಯ್ಕ ಎನ್. ನಿಯುಕ್ತಿಗೊಂಡಿರುತ್ತಾರೆ. ನೂತನ ಉಪನಿರೀಕ್ಷಕರಾದ ನಂಜಾ ನಾಯ್ಕ ಎನ್. ಅವರಿಗೆ ಪ್ರಭಾರ ಎಸ್. ಐ. ಪ್ರಕಾಶ್ ಸಾಲಿಯಾನ್ ಅಧಿಕಾರ ಹಸ್ತಾಂತರಿಸಿ ಶುಭ ಹಾರೈಸಿದರು.
ಹೋಟೆಲ್ ಕಾರ್ಮಿಕರ ಗೋಳು ಕೇಳುವವರು ಯಾರು?
ಹೋಟೆಲ್ ಕಾರ್ಮಿಕರೆಂದರೆ ಅಸಂಘಟಿತ ವಲಯದಲ್ಲಿ ಕೆಲಸ ನಿರ್ವಹಿಸುತ್ತಿರುವ ಬಹು ಸಂಖ್ಯಾತರಲ್ಲಿ ಪ್ರಮುಖವಾದ ಬಡ ಮತ್ತು ಮಧ್ಯಮ ವರ್ಗದವರ ಒಂದು ಸಮುದಾಯ. ಸಣ್ಣ ಪುಟ್ಟ ಹೋಟೆಲ್ ಕ್ಯಾಂಟೀನ್ ಬೇಕರಿ ಇತ್ಯಾದಿ ವ್ಯಾಪಾರ ಮಾಡಿಕೊಂಡು ತಮ್ಮ ದಿನನಿತ್ಯಕ್ಕೆ ಬೇಕಾಗುವಷ್ಟು ಸಂಪಾದನೆ ಮಾಡಿಕೊಂಡು, ತಮ್ಮ ಸಂಸಾರ ,ತಂದೆ ತಾಯಿಯನ್ನು ಸಾಕಿಕೊಂಡು ಇರುವುದರಲ್ಲಿ ತೃಪ್ತಿಪಟ್ಟುಕೊಂಡು ಅತೀ ಸುಖದಲ್ಲಿ ಇಲ್ಲದಿದ್ದರೂ ಸಹ ತಕ್ಕ ಮಟ್ಟಿನ ಸಂತೋಷ ಜೀವನ ಸಾಗಿಸುತ್ತ ಬದುಕಿನ ದಿನ ದುಡುತ್ತಿರುವ ಈ ವರ್ಗ ಇಂದು […]










