ಕತ್ತಲು ಆಗಷ್ಟೇ ಕಳಚಿ, ಭೂಮಿ ಬೆಳಕಿಗೆ ಮೈಯೊಡ್ಡುವುದರಲ್ಲಿತ್ತು. ನೆರೆ ಮನೆಯ ಬಚ್ಚಲಿನ ಚಿಮುಣಿ ಚಟ ಚಟ ಸದ್ದಿನೊಂದಿಗೆ ಕರ್ರನೆಯ ಹೊಗೆಯನ್ನು ಸೂಸುತ್ತಾ, ಊರಿಗೆಲ್ಲ ಮಂಜಿನಂತ ಮಬ್ಬನ್ನು ಕವಿಯುವಂತೆ ಮಾಡಿತ್ತು. ವಾರವಿಡೀ ದುಡಿದು ದಣಿದ ಮಂದಿಗೆಲ್ಲ ಮೈಮುರಿಯಲೆಂದೆ ಅಂದು ಭಾನುವಾರ ಬೇರೆ!!! ಅವರೆಲ್ಲ ಮಗ್ಗಲು ಮಗಚಿ, ಮೈ ಮುರಿಯುವ ಹೊತ್ತು ದೂರವೇ ಇತ್ತು. ಮಂದಿ ಕಣ್ಣರಳಿಸುವ ಮುನ್ನವೆ ಅಲ್ಲೊಂದು ಜೀವ ಕಣ್ಮುಚ್ಚಿ , ಬದುಕಿನ ಓಟಕ್ಕೆ ವಿರಾಮವಿಟ್ಟಿತ್ತು. ಮುಂಜಾವಿನ ಮೌನಕ್ಕೆ ಸೆಡ್ಡು […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಸಮಾಜಸೇವಕ ಗೋವಿಂದ ಬಾಬು ಪೂಜಾರಿಯವರಿಂದ 350 ಕ್ಕೂ ಹೆಚ್ಚು ಮನೆಗಳಿಗೆ ಕುಡಿಯುವ ನೀರು ಸರಬರಾಜು
ಬೈಂದೂರು (ಮೇ, 13): ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ)ಉಪ್ಪುಂದ ಇದರ ಪ್ರವರ್ತಕರಾದ ಉದ್ಯಮಿ, ಕೊಡುಗೈದಾನಿ ಶ್ರೀ ಗೋವಿಂದ ಬಾಬು ಪೂಜಾರಿಯವರ ನೇತ್ರತ್ವದಲ್ಲಿ ಬೈಂದೂರು ತಾಲೂಕಿನ ಅಳವೆಕೋಡಿ, ತಾರಪತಿ, ಪಡುವರಿ ಹಾಗೂ ಉಪ್ಪುಂದ ವ್ಯಾಪ್ತಿಯ ಸುಮಾರು 350ಕ್ಕೂ ಹೆಚ್ಚಿನ ಮನೆಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ.ಬೇಸಿಗೆ ಸಂದರ್ಭದಲ್ಲಿ ಈ ಭಾಗದ ಜನತೆಗೆ ಕುಡಿಯುವ ನೀರಿನ ಸಮಸ್ಯೆ ಎರುರಾಗುತ್ತಿದ್ದು, ಕಳೆದ ವರ್ಷವೂ ಸಹ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ (ರಿ)ಉಪ್ಪುಂದದ ವತಿಯಿಂದ ಕುಡಿಯುವ ನೀರಿನ […]
ಪಡು ಗೋಪಾಡಿಯಲ್ಲಿ ವಿದ್ಯುತ್ ಕಡಿತ ಮೆಸ್ಕಾಂ ಸಿಬ್ಬಂದಿ ಜೊತೆ ಸೇರಿ ದುರಸ್ತಿ ಕಾರ್ಯದಲ್ಲಿ ಭಾಗಿಯಾದ ಗ್ರಾಮಸ್ಥರು
ಕೋಟೇಶ್ವರ (ಮೇ, 17): ಕುಂದಾಪುರ ತಾಲೂಕಿನ ಗೋಪಾಡಿ ಗ್ರಾಮದ ಪಡು ಗೋಪಾಡಿಯಲ್ಲಿ ಸತತ ಎರಡು ದಿನಗಳಿಂದ ವಿದ್ಯುತ್ ಕಡಿತ ಉಂಟಾಗಿದ್ದು ಗ್ರಾಮಸ್ಥರಿಗೆ ದಿನನಿತ್ಯದ ಕಾರ್ಯಚಟುವಟಿಕೆಗೆ ತೊಂದರೆಯಾಗಿತ್ತು. ಇದನ್ನು ಗಮನಿಸಿದ ಗ್ರಾಮ ಪಂಚಾಯತ್ ಸದಸ್ಯ ಪ್ರಕಾಶ್ ಕಾಂಚನ್ ನೇತೃತ್ವದ ತಂಡ ಮೆಸ್ಕಾಂ ಸಿಬ್ಬಂದಿ ಜೊತೆ ಸೇರಿ ದುರಸ್ತಿ ಕಾರ್ಯದಲ್ಲಿ ಪಾಲ್ಗೊಂಡರು. ಈ ತಂಡ ಇಡೀ ದಿನ ವಿದ್ಯುತ್ ಕಂಬಗಳ ಸುತ್ತ ಬೆಳೆದಿರುವ ಮರ-ಗಿಡಗಳ ಗೆಲ್ಲುಗಳನ್ನು ಕತ್ತರಿಸಿ ಮೆಸ್ಕಾಂ ಸಿಬ್ಬಂದಿಗಳಿಗೆ ಸಹಕರಿಸಿ ಗ್ರಾಮಸ್ಥರಿಂದ […]
ತೆರೆಯೊಂದಿಗೆ ಲೀನವಾದ ನೆನಪು
ಇಪ್ಪತ್ತು ವರ್ಷಗಳ ಹಿಂದೆ ನಾನು SSLC ಯಲ್ಲಿ ಇರುವಾಗ ನನ್ನ ಹಿರಿಯಣ್ಣ ಒಂದು ಸಣ್ಣ ದೋಣಿ ತಂದಿದ್ರು. ನಾನು, ಅಣ್ಣ ಮತ್ತು ನನ್ನ ಗೆಳೆಯ ಹರೀಶ ಸೇರಿ ದಿನಾಲೂ ಮೀನುಗಾರಿಕೆಗೆ ಹೋಗುತ್ತಿದ್ದೆವು. ಬೆಳಿಗ್ಗೆ ಮೂರಕ್ಕೆ ಹೊರಟು ಒಂಬತ್ತು ಗಂಟೆಗೆ ವಾಪಸಾಗುತ್ತಿದ್ದೆವು. ನನಗೆ ಹತ್ತು ಗಂಟೆಗೆ ಶಾಲೆಗೆ ಮುಟ್ಟಬೇಕಿದ್ದ ಕಾರಣ, ಬೇಗ ಬರುತ್ತಿದ್ದೆವು. ಶಾಲೆಗೆ ರಜೆ ಇರುವ ದಿನ ಮಧ್ಯಾಹ್ನದವರೆಗೆ ಫಿಶಿಂಗ್. ಕೆಲವು ದಿನ ಸಂಜೆ ಹೋದರೆ, ರಾತ್ರಿ ವಾಪಸ್ಸು ಬರುತ್ತಿದ್ದೆವು. […]
ದಡವಿಲ್ಲದ ದೋಣಿಗಳು
ಇನ್ನೂ ಅರ್ಧಗಂಟೆ ಅಂದಿದ್ದರೆ ಆದಷ್ಟು ದೋಣಿಗಳು ಹೇಳಹೆಸರಿಲ್ಲದಂತೆ ಸಮುದ್ರದ ಒಡಲು ಸೇರುತ್ತಿದ್ದವು. “ತೀರ” ಅನ್ನುವಂತಿದ್ದ ಕಡಲ ದಂಡೆ ರಕ್ಕಸ ಅಲೆಗಳಿಗೆ ರಕ್ಷಣೆಯಿಲ್ಲದೆ ತಾವಾಗೇ ಸೋಲನ್ನಪ್ಪಿದ್ದವು. ಕೊರೆತಕ್ಕೆ ಸವೆಯುತ್ತಿದ್ದ ಮರಳನ್ನು ಹಿಡಿದಿಡಲಾಗದೆ ಕರಾವಳಿಗುಂಟ ಮರಗಿಡಗಳು ನೀರುಪಾಲಾದವು. ಕೋಟಾದ ಮಣೂರು ಪಡುಕರೆಯಲ್ಲಿ ಕಂಡುಬಂದ ದೃಶ್ಯಗಳಿವು. ಕರಾವಳಿಯುದ್ದಕ್ಕೂ ಇಂದು ಇದೇ ಗೋಳು. ಹರೀಶ್ ಕಾಂಚನ್, ಮುದ್ದುರಾಧ
ತೌಖ್ತೆ ಚಂಡಮಾರುತದ ತೀವ್ರತೆಯಿಂದ ಕಡಲ್ಕೊರೆತಕ್ಕೆ ಒಳಗಾದ ಪ್ರದೇಶಕ್ಕೆ ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ ಭೇಟಿ
ಬೈಂದೂರು (ಮೇ, 15) : ತೌಖ್ತೆ ಚಂಡಮಾರುತದ ತೀವ್ರತೆಯಿಂದ ಕಡಲ್ಕೊರೆತಕ್ಕೆ ಒಳಗಾದ ಬೈಂದೂರು ಕ್ಷೇತ್ರದ ಕಡಲ ತೀರದ ಭಾಗಗಳಿಗೆ ಶಾಸಕರಾದ ಬಿ.ಎಂ.ಸುಕುಮಾರ್ ಶೆಟ್ಟಿ ಭೇಟಿ ನೀಡಿದರು. ಚಂಡ ಮಾರುತದಿಂದಾಗಿ ಸಂಭವಿಸಿದ ಹಾನಿಗಳ ಕುರಿತು ಪರಿಶೀಲನೆ ನಡೆಸಿ ಮುಖ್ಯಮಂತ್ರಿಗಳು ಮತ್ತು ಸಂಸದ ಬಿ.ವೈ ರಾಘವೇಂದ್ರರ ಗಮನಕ್ಕೆ ತಂದು ಸಂತ್ರಸ್ತರಿಗೆ ಪರಿಹಾರ ಒದಗಿಸುವ ಭರವಸೆ ನೀಡಿದರು.
ಜೆಸಿಐ ಕುಂದಾಪುರ ಸಿಟಿ : 17 ನೇ ದಿನದ ಲಾಕ್ ಡೌನ್ ಊಟ ವಿತರಣೆ
ಕುಂದಾಪುರ (ಮೇ,15) :ಜೆಸಿಐ ಕುಂದಾಪುರ ಸಿಟಿ ಘಟಕ ಸತತ 17 ನೇ ದಿನದ ಲಾಕ್ ಡೌನ್ ಸಂದರ್ಭದಲ್ಲಿ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಇವರ ಸಹಭಾಗಿತ್ವದಲ್ಲಿ ಡಾ|ಉಮೇಶ್ ಪುತ್ರನ್ ರವರ ಪ್ರಾಯೋಜತ್ವ ದಲ್ಲಿ ಕುಂದಾಪುರ ಪರಿಸರದ ಕೂಲಿಕಾರ್ಮಿಕರಿಗೆ ಆಸ್ಪತ್ರೆಯ ರೋಗಿಗಳಿಗೆ, ಲಾರಿ ಚಾಲಕರು ಸೇರಿದಂತೆ ಸುಮಾರು 220 ಕ್ಕಿಂತಲೂ ಹೆಚ್ಚು ಜನ ಹಸಿದವರಿಗೆ ಊಟ ವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಜೆಸಿಐ ಕುಂದಾಪುರ ಸಿಟಿಯ ಅಧ್ಯಕ್ಷ ವಿಜಯ ಭಂಡಾರಿ […]
ತೌಖ್ತೇ ಚಂಡಮಾರುತ ಅಬ್ಬರ – ಗೋಪಾಡಿ ಕಡಲತೀರದ ನಿವಾಸಿಗಳಲ್ಲಿ ಹೆಚ್ಚಿದ ಆತಂಕ
ಕುಂದಾಪುರ (ಮೇ. 15) : ತೌಖ್ತೇ ಚಂಡಮಾರುತ ಅಬ್ಬರ ಕರಾವಳಿ ಭಾಗದ ಕಡಲ ತೀರದಲ್ಲಿ ಅಪಾರ ಹಾನಿಯನ್ನು ಉಂಟುಮಾಡಿದ್ದು,ಕುಂದಾಪುರ ತಾಲೂಕಿನ ಗೋಪಾಡಿ ಗ್ರಾಮದ ಕಡಲ ತೀರದ ನಿವಾಸಿಗಳಲ್ಲಿ ಆತಂಕ ಸೃಷ್ಟಿಸಿದೆ.. ದಿನದಿಂದ ದಿನಕ್ಕೆ ಸಮುದ್ರದ ಅಲೆಯ ಅಬ್ಬರ ಹೆಚ್ಚಾಗುತ್ತಿದ್ದು ಕಡಲತೀರದ ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸುವ ಚಿಂತನೆ ನಡೆಯುತ್ತಿದೆ. ಮೇ 15ರ ಸಂಜೆ ಗೋಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸರೋಜ ಪೂಜಾರಿ ಹಾಗೂ ಸದಸ್ಯ ಪ್ರಭಾಕರ್ ಯಾನೆ ಪ್ರಕಾಶ್ […]
ಜೆಸಿಐ ಕುಂದಾಪುರ ಸಿಟಿ : 16 ನೇ ದಿನದ ಲಾಕ್ ಡೌನ್ ಉಚಿತ ಮಧ್ಯಾಹ್ನ ಊಟ ವಿತರಣೆ
ಕುಂದಾಪುರ (ಮೇ, 14) : ಜೆಸಿಐ ಕುಂದಾಪುರ ಸಿಟಿ ಘಟಕದ ಸತತ 16 ನೇ ದಿನದ ಲಾಕ್ ಡೌನ್ ಮಿಡ್ ಡೇ ಮಿಲ್ಸ್ ಮೇ13 ರಂದು ರೋಟರಿ ಕ್ಲಬ್ ಕುಂದಾಪುರ ದಕ್ಷಿಣ ಹಾಗು ಮಿಲ್ಲತ್ ಫೌಂಡೇಶನ್ ಕುಂದಾಪುರ ತಾಲೂಕು ಇವರ ಸಹಕಾರ ದೊಂದಿಗೆ ನಡೆಯಿತು. ಕುಂದಾಪುರ ಪರಿಸರದಲ್ಲಿ ಲಾರಿ ಚಾಲಕರಿಗೆ, ಕೂಲಿಕಾರ್ಮಿಕರಿಗೆ ,ಆಸ್ಪತ್ರೆ ರೋಗಿ ಗಳಿಗೆ,ಭಿಕ್ಷುಕರಿಗೆಹಾಗೂ ವೃದ್ದರಿಗೆ ಸುಮಾರು 280 ಕ್ಕಿಂತಲೂ ಹೆಚ್ಚು ಹಸಿದವರಿಗೆ ಊಟ ವನ್ನು ನೀಡಲಾಯಿತು. ಈ […]
ಬಾಳ ಸಾರಥಿ
ಅಂದು ಆ ಶಾಲೆಯಲ್ಲೊಂದು ಸಂಭ್ರಮದ ವಾತಾವರಣ. ಎಲ್ಲರೂ ಸಡಗರದಿಂದ ಸಮಾರಂಭಕ್ಕಾಗಿ ತಯಾರಿ ನಡೆಸುವ ತರಾತುರಿಯಲ್ಲಿದ್ದರು. ಎಲ್ಲವೂ ಸಜ್ಜಾಗುವ ವೇಳೆಯಲ್ಲಿ ಗಣ್ಯರೂ ಆಗಮಿಸಲಾರಂಭಿಸಿದ್ದರು. ಕೆಲ ಕ್ಷಣದಲ್ಲೇ ಸಮಾರಂಭದ ಕೇಂದ್ರ ಬಿಂದುವಾದ “ದಿಶಾ ತ್ರಿವೇಣಿ” ತನ್ನ ಜೀವನದ ಅವಿಭಾಜ್ಯ ಅಂಗವಾದ ತಾಯಿಯೊಂದಿಗೆ ಸಮಾರಂಭದ ಸ್ಥಳಕ್ಕೆ ಆಗಮಿಸಿ ತನ್ನೆಲ್ಲಾ ಗುರುವೃಂದರನ್ನು ಮಾತನಾಡಿಸಿ ಆಶೀರ್ವಾದ ಪಡೆದಿದ್ದಳು. ಕೊಂಚ ಸಮಯದಲ್ಲೇ ಸಮಾರಂಭ ಆರಂಭವಾಗಿತ್ತು. ವೇದಿಕೆಯ ಮೇಲೆ ಗಣ್ಯಾತೀಗಣ್ಯರ ನಡುವೆ ತನ್ನ ಮಗಳನ್ನು ಕಂಡ ತ್ರಿವೇಣಿಯವರ ಕಣ್ಣಲ್ಲಿ ಆನಂದಬಾಷ್ಪ. […]










