ಉಡುಪಿ (ಮಾ. 10) ಉಡುಪಿ ಜಿಲ್ಲೆ, ಮಲ್ಪೆಯ ಬಾಪುತೋಟ ಪಡುಗುಡ್ಡೆ ಶ್ರೀ ಸರ್ವೇಶ್ವರ ದೇವಸ್ಥಾನದ 25 ನೇ ವರ್ಧಂತ್ಯುತ್ಸವ ಇದೇ ಮಾರ್ಚ್ 11 ರಿಂದ 13 ರ ವರೆಗೆ ನಡೆಯಲಿದೆ. ಮಾರ್ಚ್ 11 ರ ಗುರುವಾರ ಬೆಳಿಗ್ಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು ಮಧ್ಯಾಹ್ನ 12 ಗಂಟೆಗೆ ತುಲಾಭಾರ ಸೇವೆ, ಸಂಜೆ ರಂಗ ಪೂಜೆ ಹಾಗೂ ರಾತ್ರಿ ಸ್ಥಳೀಯ ಪುಟಾಣಿಗಳಿಂದ ಮನೋರಂಜನೆ ಕಾರ್ಯಕ್ರಮ ಮತ್ತು ಶ್ರೀ ಶಕ್ತಿ ಮಹಿಳಾ […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಬಜೆಟ್ – 2021 ರ ಕುರಿತು ಡಾ| ಶ್ರೀಪತಿ ಕಲ್ಲೂರಾಯರಿಂದ ವಿಶೇಷ ಉಪನ್ಯಾಸ
ಕುಂದಾಪುರ (ಮಾ. 9) : ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಇದರ ಅರ್ಥಶಾಸ್ತ್ರ ವಿಭಾಗದ ಆಶ್ರಯದಲ್ಲಿ “ಬಜೆಟ್ 2021 ಕುರಿತು ಚರ್ಚೆ” ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು. ಯುನಿಯನ್ ಬಜೆಟ್ 2021ರ ಪ್ರಮುಖ ಮುಖ್ಯಾಂಶಗಳಾದ ಆರೋಗ್ಯ ಮತ್ತು ಯೋಗಕ್ಷೇಮ, ಭೌತಿಕ ಮತ್ತು ಆರ್ಥಿಕ ಬಂಡವಾಳ ಮತ್ತು ಮೂಲ ಸೌಕರ್ಯ, ಮಹತ್ವಾಕಾಂಕ್ಷೆಯ ಭಾರತ ಕ್ಕೆ ಅಂತರ್ಗತ ಅಭಿವೃದ್ಧಿ, ಮಾನವ ಬಂಡವಾಳವನ್ನು ಉತ್ತೇಜಿಸುವ ,ನಾವೀನ್ಯತೆ ಮತ್ತು ಸಂಶೋಧನೆ […]
ಶ್ರೀ ಶಾರದಾ ಕಾಲೇಜು ಬಸ್ರೂರು : ಮಾರ್ಚ್ 12 ರಂದು ಶ್ರೀ ಶಾರದ ಕಾಲೇಜು ಬಸ್ರೂರಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ
ಶ್ರೀ ಶಾರದಾ ಕಾಲೇಜು ಬಸ್ರೂರಿನಲ್ಲಿ ಇದೇ ಮಾರ್ಚ್ 12 ರಂದು ಕರಾವಳಿ ಲೇಖಕಿಯರ – ವಾಚಕಿಯರ ಸಂಘ (ರಿ.) ಮತ್ತು ಶ್ರೀ ಶಾರದಾ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ “ಮಹಿಳೆ ಮತ್ತು ಪುರಾಣ : ಸೃಜನಾತ್ಮಕತೆ”ಎಂಬ ವಿಷಯದ ಕುರಿತು ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ಕಾಲೇಜಿನ ವೀರರಾಜೇಂದ್ರ ಹೆಗ್ಡೆ ಸಭಾಂಗಣದಲ್ಲಿ ನಡೆಯಲಿದೆ.
ಡಾ|ಬಿ. ಬಿ. ಹೆಗ್ಡೆ ಕಾಲೇಜು : ರಾಷ್ಟ್ರೀಯ ವಿಜ್ಞಾನ ದಿನ – ತರಂಗ 2K21
ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿಜ್ಞಾನ ವೇದಿಕೆ ಆಶ್ರಯದಲ್ಲಿ ‘ರಾಷ್ಟ್ರೀಯ ವಿಜ್ಞಾನ ದಿನ – ತರಂಗ 2K21’ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ “ಮಹಿಳಾ ದಿನಾಚರಣೆ”
ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಮಹಿಳಾ ಸಬಲೀಕರಣ ಘಟಕದ ವತಿಯಿಂದ ಮಾರ್ಚ್ 8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಸಂಸ್ಥೆಯ ಆವರಣದಲ್ಲಿ ಅರ್ಥ ಪೂರ್ಣವಾಗಿ ಆಚರಿಸಲಾಯಿತು.
ಕುಂದಗನ್ನಡ ಅಧ್ಯಯನ ಪೀಠಕ್ಕೆ ಮಂಗಳೂರು ವಿವಿಯಲ್ಲಿ ನಿರ್ಣಯ
ಉಡುಪಿ (ಮಾ. 9) ತನ್ನದೆಯಾದ ಸಂಸ್ಕೃತಿಗಳ ಅಸ್ಮಿತೆ, ಜನಪದ ಹಾಡುಗಳು, ಭಾಷಾ ಸೊಗಡು ಹಾಗೂ ವಿಶೇಷ ಆಚರಣೆಯನ್ನು ಹೊಂದಿರುವ ಉಡುಪಿ ಜಿಲ್ಲೆಯ ಕುಂದಾಪುರ, ಬೈಂದೂರು, ಹೆಬ್ರಿ, ಬ್ರಹ್ಮಾವರ ಭಾಗದ ಜನರ ಆಡುಭಾಷೆಯಾಗಿರುವ ಕುಂದಗನ್ನಡದ ಅಧ್ಯಯನಕ್ಕೆ ಸಂಬಂಧಪಟ್ಟಂತೆ ಕುಂದಗನ್ನಡ ಭಾಷಾ ಅಧ್ಯಯನ ಪೀಠ ಸ್ಥಾಪನೆಗೆ ಮಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆಯಲ್ಲಿ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ. ಈ ಕುರಿತು ಮಂಗಳೂರು ವಿವಿಯ ಕುಲಸಚಿವರು ರಾಜ್ಯ ಉನ್ನತ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರವನ್ನು […]
ಮೂಡ್ಲಕಟ್ಟೆ ಎಂ. ಐ. ಟಿ. : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಾರ್ಚ್ 8 ರಂದು ಆಚರಿಸಲಾಯಿತು. ಕಾಲೇಜಿನ ಶಿಕ್ಷಕಿಯರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಡಾ| ಬಿ. ಬಿ. ಹೆಗ್ಡೆ ಕಾಲೇಜು : ವಿವಿಧ ವೇದಿಕೆಗಳ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
ಕುಂದಾಪುರ (ಮಾ. 9) : ವಿಧ್ಯಾರ್ಥಿಗಳು ಸಮಾಜದ ಆಗು-ಹೋಗುಗಳ ಕುರಿತು ಸೂಕ್ಷ್ಮವಾಗಿ ಗಮನಿಸುವುದರ ಜತೆಗೆ ವಿಧ್ಯಾರ್ಥಿ ದೆಸೆಯಲ್ಲಿ ಜೀವನ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ಕಾಲೇಜಿನ ವಿವಿಧ ವೇದಿಕೆಗಳ ಕ್ರಿಯಾಚಟುವಟಿಕೆಗಳಲ್ಲಿ ತಮ್ಮನ್ನು ಸೃಜನಶೀಲವಾಗಿ ತೊಡಗಿಸಿಕೊಂಡು, ವಿಧ್ಯಾರ್ಥಿಗಳು ನೈತಿಕ ಮೌಲ್ಯಗಳನ್ನು ರೂಢಿಸಿಕೊಂಡು ಸತ್ವಜೆಗಳಾಗಬೇಕೆಂದು ಕೊಲ್ಲೂರು ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಅರುಣ್ ಪ್ರಕಾಶ್ ಶೆಟ್ಟಿ ಹೇಳಿದರು. ಅವರು ಕಾಲೇಜಿನ ವಿವಿಧ ವೇದಿಕೆಗಳ ವಾರ್ಷಿಕ ಚಟುವಟಿಕೆಗಳನ್ನು ಮಾರ್ಚ್ 05 ರಂದು ಉದ್ಘಾಟಿಸಿ […]
ಇಂದುಧರ ದೇವಸ್ಥಾನ ಗಂಗೊಳ್ಳಿ : ಅಮೃತ ಮಹೋತ್ಸವ ಹಾಗೂ ನೂತನ ಸಭಾಭವನ ಉದ್ಘಾಟನೆ
ಗಂಗೊಳ್ಳಿ (ಮಾ.8): ಗಂಗೊಳ್ಳಿಯಲ್ಲಿ ಕಳೆದ 75 ವರ್ಷಗಳಿಂದ ಧರ್ಮ ಜಾಗ್ರತಿ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಿ ಜನರಲ್ಲಿ ಧಾರ್ಮಿಕ ಪ್ರಜ್ಞೆ ಬೆಳೆಸುತ್ತಿರುವ ಗಂಗೊಳ್ಳಿಯ ಶ್ರೀ ಇಂದುಧರ ದೇವಸ್ಥಾನ ಕುಂದಾಪುರ ಪರಿಸರದ ಪ್ರಮುಖ ಭಕ್ತಿ ಕೇಂದ್ರಗಳಲ್ಲಿ ಒಂದಾಗಿದೆ. ಸರಕಾರದ ಹಾಗೂಇತರ ಅನುದಾನವನ್ನು ಬಳಸಿಕೊಂಡು ವ್ಯವಸ್ಥಿತವಾದ ಸಭಾಭವನವನ್ನು ನಿರ್ಮಿಸಿರುವುದು ಶ್ಲಾಘನೀಯ ಎಂದು ಬೈಂದೂರಿನ ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ಹೇಳಿದರು. ಅವರು ಮಾರ್ಚ್ 7 ರ ರವಿವಾರ ಶ್ರೀ ಇಂದುಧರ ದೇವಸ್ಥಾನ […]
ಡಾ| ಬಿ. ಬಿ. ಹೆಗ್ಡೆ ಕಾಲೇಜು: ವಿಶ್ವ ಮಹಿಳಾ ದಿನಾಚರಣೆ – ಸಾಧಕ ಮಹಿಳೆಯರಿಗೆ ಸನ್ಮಾನ
ಕುಂದಾಪುರ (ಮಾ. 8) ವಿಶ್ವ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಕಾಲೇಜಿನ ಮಹಿಳಾ ಸಬಲೀಕರಣ ಘಟಕ ಹಾಗೂ ಜೇಸಿರೇಟ್ ವಿಂಗ್ ಆಫ್ ಜೆಸಿಐ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರನ್ನು ಸನ್ಮಾನಿಸಲಾಯಿತು. ಡಾ.ಶ್ರಾವ್ಯ (ಸಮಾಜಸೇವೆ), ಮಮತಾ ಆರ್. ಶೆಟ್ಟಿ,ಹದ್ದೂರು(ಕ್ರಷಿ) ಲಿರಾ ಜೂಲಿಯೆಟ್ (ವ್ಯವಹಾರಿಕ), ಡಾ.ಸರೋಜಿನಿ (ಶಿಕ್ಷಣ) ಕಾಲೇಜಿನ ವಿದ್ಯಾರ್ಥಿನಿಯರಾದ ನಿವೇದಿತ (ಕ್ರೀಡೆ) ಶುಭಲಕ್ಷ್ಮಿ (ಶಿಕ್ಷಣ) ಇವರನ್ನು ಸನ್ಮಾನಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. […]










