ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಶಿಕ್ಷ ಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಷನ್ ( ಸ್ಪೇಸ್ ) ಇದರ ವಿದ್ಯಾರ್ಥಿಗಳು ಕಂಪನಿ ಸೆಕ್ರೆಟರಿ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದು, ಸಂಸ್ಥೆಯ ವತಿಯಿಂದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಎರಡು ದಿನದ Ethical Hacking ಕಾರ್ಯಾಗಾರ
ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಎರಡು ದಿನದ Ethical Hacking ಕಾರ್ಯಾಗಾರ 21 ಜನವರಿಯಿಂದ 22 ಜನವರಿಯವರೆಗೆ ನಡೆಯಿತು.
ಯುವಾ ಬ್ರಿಗೇಡ್ ಕುಂದಾಪುರ : ಜೈ ಹಿಂದ್ ರನ್ ಮ್ಯಾರಥಾನ್
ಯುವಾ ಬ್ರಿಗೇಡ್ ಕುಂದಾಪುರ ಹಾಗೂ ಸಹೋದರಿ ನಿವೇದಿತಾ ಪ್ರತಿಷ್ಠಾನ ಇವರ ವತಿಯಿಂದ ನೇತಾಜಿ ಸುಭಾಷ್ ಚಂದ್ರ ಬೋಸರ 125ನೇ ಜನ್ಮ ದಿನದ ಅಂಗವಾಗಿ ಕುಂದಾಪುರ ಗಾಂಧಿ ಮೈದಾನದಲ್ಲಿ ಜನವರಿ 23 ರ ಶನಿವಾರ ಜಯ್ ಹಿಂದ್ ರನ್ ಮ್ಯಾರಥಾನ್ ನಡೆಯಿತು.
ಸೋಡಿಗದ್ದೆ ಶ್ರೀ ಮಹಾಸತಿ ಅಮ್ಮನವರ ದೇವಾಲಯ ವಾರ್ಷಿಕ ಜಾತ್ರಾ ಮಹೋತ್ಸವ
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಪ್ರಸಿದ್ಧ ದೇವಾಲಯವಾದ ಸೋಡಿಗದ್ದೆ ಶ್ರೀ ಮಹಾಸತಿ ಅಮ್ಮನವರ ಜಾತ್ರೆ ಇದೇ ಜನವರಿ 23 ರಿಂದ 25 ರವರೆಗೆ ನಡೆಯಲಿದೆ.
ಯುವಾಬ್ರಿಗೇಡ್ ಕುಂದಾಪುರ : ನಾಳೆ ಜೈ ಹಿಂದ್ ರನ್ ಮ್ಯಾರಥಾನ್
ರಾಷ್ಟ್ರ ಕಂಡ ಮಹಾನ್ ನಾಯಕ ,ಸ್ವತಂತ್ರ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ 125ನೇ ಜಯಂತಿಯ ಪ್ರಯುಕ್ತ ಯುವ ಬ್ರಿಗೇಡ್ ಕರ್ನಾಟಕ ಜನವರಿ 23 ರಂದು ರಾಜ್ಯದಾದ್ಯಂತ ಜೈಹಿಂದ್ ರನ್ ಮ್ಯಾರಥಾನ್
ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ: ಜನೌಷಧಿ ಕುರಿತು ಅರಿವು ಕಾರ್ಯಕ್ರಮ
ಕುಂದಾಪುರ, ಜನವರಿ 16: ದುಬಾರಿ ಔಷಧಿ ಯಾವಾಗಲೂ ಗುಣಮಟ್ಟದ ಔಷಧಿಯಾಗಿರಬೇಕೆಂದಿಲ್ಲ, ಜನೌಷಧಿ ಕೇಂದ್ರದಲ್ಲಿ ಶೇಕಡಾ 50-90ರಷ್ಟು ಕಡಿಮೆ ದರದಲ್ಲಿ ದೊರೆಯುವ ಔಷಧಿಗಳು ಬೇರೆ ಕಡೆ ದೊರೆಯುವ ಔಷಧಿಗಳಿಗಿಂತ ಗುಣಮಟ್ಟದ್ದಾಗಿರುತ್ತದೆ” ಎಂದು ಇಂಡಿಯನ್ ರೆಡ್ಕ್ರಾಸ್ ಕುಂದಾಪುರ ಘಟಕದ ಅಧ್ಯಕ್ಷರಾದ ಜಯಕರ ಶೆಟ್ಟಿಯವರುಹೇಳಿದರು . ಅವರು ಕಾಲೇಜಿನಲ್ಲಿ ಜನವರಿ 16ರಂದು ಆಯೋಸಿದ್ದ ಜನೌಷಧಿ ಅರಿವು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು, ಯುವ ರೆಡ್ಕ್ರಾಸ್ […]
ಗುಡ್ಡಮ್ಮಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ – ಷಷ್ಠಿ ಉತ್ಸವ
ಉಡುಪಿ ಜಿಲ್ಲೆಯ ಪ್ರಮುಖ ನಾಗಾರಾಧನೆಯ ಕ್ಷೇತ್ರವಾದ ಕುಂದಾಪುರದ ಸೇನಾಪುರ ಗ್ರಾಮದಲ್ಲಿರುವ ಶ್ರೀ ಸುಬ್ರಹ್ಮಣ್ಯ ದೇಗುಲದಲ್ಲಿ ಜನವರಿ 19 ಹಾಗೂ 20 ರಂದು ಷಷ್ಠಿ ಉತ್ಸವ ನಡೆಯಿತು.
ನಾಡೋಜ ಡಾ. ಜಿ ಶಂಕರ್ ಬ್ರಹತ್ ಆರೋಗ್ಯ ಯೋಜನೆಗೆ ಚಾಲನೆ
ಸಮಾಜದ ಎಲ್ಲಾ ವರ್ಗದವರಿಗೂ ಜಾತಿ, ಮತ, ಧರ್ಮ ಭೇಧಭಾವವಿಲ್ಲದೆ ಆರೋಗ್ಯ ಭದ್ರತೆ ನೀಡುವ ಸಲುವಾಗಿ ಪ್ರಾರಂಭಿಸಿದ ಡಾ. ಜಿ. ಶಂಕರ್ ರವರ ಮಹತ್ವಾಕಾಂಕ್ಷೆಯ ಯೋಜನೆಯಾದ ಜಿ. ಶಂಕರ್ ಆರೋಗ್ಯ ಸುರಕ್ಷಾ ವಿಮಾ ಯೋಜನೆಯನ್ನು ಜನವರಿ 19 ರಂದು ಮಾಹೆ ಮಣಿಪಾಲದ ಸಹ ಕುಲಾಧಿಪತಿಗಳಾದ ಡಾ. ಎಚ್ಎಸ್ ಬಲ್ಲಾಳ್ ರವರು ಹೆಲ್ತ್ ಕಾರ್ಡ್ ಬಿಡುಗಡೆ ಮಾಡುವುದರ ಮೂಲಕ ಯೋಜನೆಗೆ ಚಾಲನೆ ನೀಡಿದರು. ಜಿ ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ) ಅಂಬಲಪಾಡಿ, ಉಡುಪಿಯ ಪ್ರವರ್ತಕರು, […]
ಮೂಡ್ಲಕಟ್ಟೆ ಎಂ ಐ ಟಿ: ಸನ್ಮಾನ ಕಾರ್ಯಕ್ರಮ
ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ವತಿಯಿಂದ ಭಗವದ್ಗೀತೆ ಕಂಠಪಾಠ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಕುಂದಾಪುರ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿನಿ ಯುಕ್ತಾ ಹೊಳ್ಳ ಅವರನ್ನು ಸನ್ಮಾನಿಸಲಾಯಿತು. ಇವರು ಬಸ್ರೂರು ಶಂಕರನಾರಾಯಣ ಹೊಳ್ಳ ಮತ್ತು ಲೇಖ ಹೊಳ್ಳ ರವರ ಪುತ್ರಿ.ಕಾರ್ಯಕ್ರಮದ ಅಂಗವಾಗಿ ಕಾಲೇಜಿನ ಹಳೆ ವಿದ್ಯಾರ್ಥಿಯಾದ ಶ್ರೀ ಕಾರ್ತಿಕ್ ಇವರಿಂದ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಚಂದ್ರರಾವ್ ಮದಾನೆ ಮತ್ತು ಉಪ ಪ್ರಾಂಶುಪಾಲ […]
ಮೊಗವೀರ ಯುವ ಸಂಘಟನೆಗೆ ಶ್ರೀ ಕ್ರಷ್ಣಾನುಗ್ರಹ ಪ್ರಶಸ್ತಿ
ಉಡುಪಿ ಪರ್ಯಾಯ 2020-21 ಅದಮಾರು ಮಠದ ಶ್ರೀ ಶ್ರೀ ಈಶಪ್ರೀಯತೀರ್ಥ ಶ್ರೀಪಾದರು ಕೊಡಮಾಡಿದ ಶ್ರೀ ಕ್ರಷ್ಣಾನುಗ್ರಹ ಪ್ರಶಸ್ತಿಯನ್ನು ಜನವರಿ 17, 2021 ರಂದು ಉಡುಪಿ ಶ್ರೀ ಕ್ರಷ್ಣ ಮಠದ ರಾಜಾಂಗಣದಲ್ಲಿ ಮೊಗವೀರ ಯುವ ಸಂಘಟನೆಯ ಜಿಲ್ಲಾಧ್ಯಕ್ಷ ಕೆ. ಎಮ್ ಶಿವರಾಮ್ ಕೋಟ ರವರು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನೆಯ ಗೌರವ ಸಲಹೆಗಾರರಾದ ವಿಠ್ಠಲ ಕರ್ಕೇರಾ ಮತ್ತು ಕೋಟೇಶ್ವರ ಘಟಕಾಧ್ಯಕ್ಷ ರವೀಶ್ ಎಸ್. ಕೊರವಡಿ ಉಪಸ್ಥಿತರಿದ್ದರು. ಇಡೀ ಜಗತ್ತೇ ಕೊರೋನಾ […]










