ಮಂಗಳೂರು(ಡಿ.26): ಹೃದಯಸ್ಪರ್ಶಿ ಧಾರಾವಾಹಿಗಳ ಮೂಲಕ ಕನ್ನಡ ಪ್ರೇಕ್ಷಕನ ಮನಸೂರೆಗೊಂಡಿರುವ ಕಲರ್ಸ್ ಕನ್ನಡ ವಾಹಿನಿಯು ಮತ್ತೊಂದು ಹೊಸ ದೈನಿಕ ಧಾರಾವಾಹಿ ಆರಂಭಿಸುತ್ತಿದೆ. ಡಿ.23ರಿಂದ ಪ್ರತಿ ರಾತ್ರಿ 8:30ಕ್ಕೆ ಪ್ರಸಾರಗೊಳ್ಳಲಿರುವ ಈ ಹೊಸ ಧಾರಾವಾಹಿ’ನೂರು ಜನ್ಮಕೂ’ ವಿಭಿನ್ನವಾದ ರೋಚಕ ಕತೆಯನ್ನು ಹೊಂದಿದೆ. ಮೊದಲ ನೋಟಕ್ಕೆ’ನೂರು ಜನ್ಮಕೂ’ ಒಂದು ಉತ್ಕಟ ಪ್ರೇಮಕತೆ. ಪ್ರತಿಷ್ಠಿತ ಕದಂಬ ವಂಶದ ಉತ್ತರಾಧಿಕಾರಿ ಚಿರಂಜೀವಿ ಹಾಗೂ ಮೈತ್ರಿ ಎಂಬ ಸಾಧಾರಣ ಕುಟುಂಬದ ಹುಡುಗಿಯ ನಡುವಿನ ಪ್ರೇಮದ ಕಥೆಯಿದು. ಚಿರಂಜೀವಿ ಅತಿಮಾನುಷ […]
Category: ಸುದ್ದಿ ಸಮಾಚಾರ
ಸುದ್ದಿ ಸಮಾಚಾರ
ಬ್ಯಾರೀಸ್ ಪಿ.ಯು ಕಾಲೇಜಿನಲ್ಲಿ ಪ್ರೇರಣೆ, ಜ್ಞಾಪಕಶಕ್ತಿ ಮತ್ತು ಅಧ್ಯಯನ ಕೌಶಲ್ಯಗಳ ಕುರಿತು ಕಾರ್ಯಾಗಾರ
ಕೋಡಿ(ಡಿ.24): ಇಲ್ಲಿನ ಬ್ಯಾರೀಸ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪ್ರೇರಣೆ, ಜ್ಞಾಪಕಶಕ್ತಿ ಮತ್ತು ಅಧ್ಯಯನ ಕೌಶಲ್ಯಗಳ ಕುರಿತು ಕಾರ್ಯಾಗಾರ ಡಿಸೆಂಬರ್ 23 ರಂದು ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಸಿಗ್ಮಾ, ಬೆಂಗಳೂರು ಇದರ ಸಿ.ಇ.ಒ ಮತ್ತು ಸಂಸ್ಥಾಪಕರಾದ ಶ್ರೀ. ಅಮೀನ್ .ಇ ಮುದಸ್ಸರ್, ಆಗಮಿಸಿದ್ದರು. ದ್ವಿತೀಯ ಪಿಯುಸಿ ತರಗತಿಗಳಿಗೆ ಬಹುವಿಧದ ಜ್ಞಾಪಕಶಕ್ತಿಯ ತಂತ್ರಗಳನ್ನು ಮತ್ತು ವಿದ್ಯಾರ್ಥಿಗಳ ವ್ಯಕ್ತಿತ್ವ ಅಭಿವೃದ್ಧಿಗೆ ಪೂರಕವಾದ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ನಡೆಸಿದರು. ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಗಳು […]
ಕುಂದಾಪುರ ಯುವ ಬಂಟರ ಸಂಘ : 90 ರ ಸಂಭ್ರಮದ ಶ್ರೀ ಬಿ.ಅಪ್ಪಣ್ಣ ಹೆಗ್ಡೆ ಯವರಿಗೆ ಗೌರವಾರ್ಪಣೆ
ಕುಂದಾಪುರ (ಡಿ. 23): ಕುಂದಾಪುರ ತಾಲೂಕು ಯುವ ಬಂಟರ ಸಂಘದಿಂದ 90 ರ ಸಂಭ್ರಮದಲ್ಲಿರುವ ನಾಡಿನ ಗಣ್ಯಮಾನ್ಯರಾದ ಶ್ರೀ ಬಸ್ರೂರು ಅಪ್ಪಣ್ಣ ಹೆಗ್ಡೆ ಯವರನ್ನು ಅವರ ಸ್ವಗ್ರಹದಲ್ಲಿ ಸಂಘದ ಗೌರವಾಧ್ಯಕ್ಷರಾದ ಶ್ರೀಮತಿ ವತ್ಸಲ ದಯಾನಂದ ಶೆಟ್ಟಿ ,ಸಂಘದ ಪೋಷಕರಾದ ವಿಜಯ ಶೆಟ್ಟಿ ಸಟ್ಟಾಡಿ ಮತ್ತು ಸಂಘದ ಸ್ಥಾಪಕಾಧ್ಯಕ್ಷರು ಮತ್ತು ದಶಮ ಸಂಭ್ರಮದ ಅಧ್ಯಕ್ಷರಾದ ಡಾ.ಅಂಪಾರು ನಿತ್ಯಾನಂದ ಶೆಟ್ಟಿ ಯವರು ಸನ್ಮಾನಿಸಿ ಗೌರವಿಸಿದರು. ಸಂಘದ ಅಧ್ಯಕ್ಷರಾದ ಶ್ರೀ ನಿತೀಶ್ ಶೆಟ್ಟಿ ಬಸ್ರೂರು […]
ಡಿ.25 ರಂದು ಕೆಂಚನೂರಿನಲ್ಲಿ ಪ್ರೇಮ ಪಂಜರ ಯಕ್ಷಗಾನ
ಕೆಂಚನೂರು( ಡಿ.24): ಶ್ರೀ ಕ್ಷೇತ್ರ ಮೆಕ್ಕೆಕಟ್ಟು, ಶಿರಿಯಾರ ಇವರ ಶ್ರೀ ನಂದಿಕೇಶ್ವರ ಪ್ರಸಾದಿತ ಯಕ್ಷಗಾನ ಮಂಡಳಿ ವತಿಯಿಂದ ಡಿಸೆಂಬರ್ 25 ರಂದು ಕುಂದಾಪುರ ತಾಲೂಕಿನ ಕೆಂಚನೂರಿನಲ್ಲಿ ಅಂಬಿಕಾ ಪೂಜಾರಿ ಕಥಾ ಸಾಂಗತ್ಯದ ಬೇಳೂರು ವಿಷ್ಣುಮೂರ್ತಿ ನಾಯಕ್ ಪದ್ಯ ಸಾಹಿತ್ಯ ದ ಪ್ರೇಮ ಪಂಜರ ಯಕ್ಷಗಾನ ಅಂದು ರಾತ್ರಿ 9 ರಿಂದ ಪ್ರದರ್ಶನಗೊಳ್ಳಲಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜು ಕೋಡಿ: ನ್ಯಾಕ್ ಮಾನ್ಯತೆ ಮತ್ತು ಒಳನೋಟಗಳು ಕಾರ್ಯಾಗಾರ
ಕುಂದಾಪುರ:(ಡಿ,19) : ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜು ಕೋಡಿ ಕುಂದಾಪುರದಲ್ಲಿ “ಎಚ್ಇಐಗಳಲ್ಲಿ ಗುಣಮಟ್ಟದ ಸಂಸ್ಕೃತಿಯನ್ನು ಉತ್ತೇಜಿಸುವುದು, ನ್ಯಾಕ್ ಮಾನ್ಯತೆ ಮತ್ತು ಒಳನೋಟಗಳು” ಎಂಬ ವಿಷಯದ ಮೇಲೆ ಶಿಕ್ಷಕ ಅಭಿವೃದ್ಧಿ ಕಾರ್ಯಕ್ರಮ (ಎಫ್ಡಿಪಿ) ಡಿಸೆಂಬರ್ ,19 ರಂದು ನಡೆಯಿತು. ಸಹಾಯಕ ಪ್ರಾಧ್ಯಾಪಕ ಮತ್ತು ಮಾಜಿ ಐಕ್ಯೂಎಸಿ ಸಂಚಾಲಕರಾದ ಶ್ರೀ. ಹಾರ್ದಿಕ್ ಪಿ. ಚೌಹಾಣ್, ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ, ನ್ಯಾಕ್ ಅಕ್ರೆಡಿಟೇಶನ್ ಪ್ರಕ್ರಿಯೆ ಮತ್ತು ಎಚ್ಇಐಗಳಲ್ಲಿ ಗುಣಮಟ್ಟವನ್ನು ಕಾಪಾಡುವ ಉತ್ತಮ ಮಾರ್ಗಗಳ ಬಗ್ಗೆ […]
ಜಾಡಿ : ಶ್ರೀ ಮಾಸ್ತಿ ಸೂಲದ ಹೈಗುಳಿ ಮತ್ತು ಪರಿವಾರ ದೈವಗಳ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಮನವಿ
ಹೆಮ್ಮಾಡಿ (ಡಿ. 22): ಕುಂದಾಪುರ ತಾಲೂಕಿನ ದೇಲ್ಕುಂದ ಗ್ರಾಮದ ಇತಿಹಾಸ ಪ್ರಸಿದ್ದ ಜಾಡಿ ಕೋಟಿಮನೆ ಶ್ರೀಮಾಸ್ತಿ ಸೂಲದ ಹೈಗುಳಿ ಮತ್ತು ಪರಿವಾರ ದೈವಗಳ ದೈವಸ್ಥಾನ ಬಹಳ ವರ್ಷಗಳಿಂದ ಅಜೀರ್ಣ ವ್ಯವಸ್ಥೆಯಲ್ಲಿದ್ದು, ಕಟ್ಟಡ ಸಂಪೂರ್ಣ ಶಿತಿಲಗೊಂಡಿದೆ. ಆ ನಿಟ್ಟಿನಲ್ಲಿ ಊರ ಹಿರಿಯರು ಹಾಗೂ ದೈವವನ್ನು ನಂಬಿರುವ ಕುಟುಂಬಸ್ಥರು ಮತ್ತು ದಾನಿಗಳ ಸಹಕಾರದಿಂದ ಪುನರ್ನಿರ್ಮಾಣ ಮಾಡಿಸಲು ತೀರ್ಮಾನಿಸಿದ್ದು, ದೇವಸ್ಥಾನ ನಿರ್ಮಾಣಕ್ಕೆ ಅಂದಾಜು ಮೊತ್ತ 15,00,000/- ಬೇಕಾಗಿರುತ್ತದೆ. ಸದ್ಭಕ್ತರು ದೇಗುಲದಜೀರ್ಣೋದ್ಧಾರಕ್ಕೆ ಕೈಜೋಡಿಸಬೇಕೆಂದು ದೇಗುಲದ ಆಡಳಿತ […]
ಗಂಗೊಳ್ಳಿ : ಸರಸ್ವತಿ ವಿದ್ಯಾಲಯದಲ್ಲಿ ಎಸ್. ವಿ. ಪಿ. ಎಲ್ ಕ್ರಿಕೆಟ್ ಪಂದ್ಯಾಟ
ಗಂಗೊಳ್ಳಿ (ಡಿ .19) : ಗ್ರಾಮೀಣ ಮಟ್ಟದಲ್ಲಿ ಹಮ್ಮಿಕೊಳ್ಳುವ ಪಂದ್ಯಾಟಗಳು ವಿದ್ಯಾರ್ಥಿಗಳನ್ನು ಉನ್ನತ ಸಾಧನೆಗಳನ್ನು ಮಾಡುವಲ್ಲಿ ಬಹಳ ದೊಡ್ಡ ಪ್ರೇರಣೆಯನ್ನು ನೀಡುತ್ತವೆ. ವಿದ್ಯಾರ್ಥಿಗಳು ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಗಂಗೊಳ್ಳಿಯ ಉದ್ಯಮಿ ವಿಠಲ ಶೆಣೈ ಅವರು ಅಭಿಪ್ರಾಯ ಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆದ ಎಸ್ ವಿ ಪಿ ಎಲ್ ಕ್ರಿಕೆಟ್ ಟೂರ್ನಿಯ ಉದ್ಘಾಟನ ಸಮಾರಂಭದಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ […]
ಯುವ ಬಂಟರ ಸಂಘದ ವತಿಯಿಂದ ಆರ್ಥಿಕ ನೆರವು ವಿತರಣೆ
ಕುಂದಾಪುರ.(ಡಿ.19: ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಕುಂದಾಪುರ ತಾಲೂಕಿನ ಹಳ್ಳಾಡಿ ಗ್ರಾಮದ ಜಯರಾಮ ಶೆಟ್ಟಿ, ಮುದೂರಿನ ಶಿವರಾಮ ಶೆಟ್ಟಿ, ಚಿತ್ತೂರಿನ ಪ್ರತೀಕ್ಷ ಶೆಟ್ಟಿ, ಹೊಂಬಾಡಿಯ ಶ್ರೀಮತಿ ಶಿಲ್ಪ ಶೆಟ್ಟಿ, ವಾಲ್ತೂರಿನ ಗೋವಿಂದ, ಸಿದ್ದಾಪುರದ ಶ್ರೀಶಾಂತರವರಿಗೆ ಆರೋಗ್ಯ ಭಾಗ್ಯ ಯೋಜನೆಯಡಿ 80000 ರೂಪಾಯಿ ಆರ್ಥಿಕ ನೆರವನ್ನು ಸಂಘದ ವತಿಯಿಂದ ಗೌರವಾಧ್ಯಕ್ಷರಾದ ಶ್ರೀಮತಿ ವತ್ಸಲಾ ದಯಾನಂದ ಶೆಟ್ಟಿ ಸಂಘದ ಆಡಳಿತ ಕಚೇರಿಯಲ್ಲಿ ಡಿಸೆಂಬರ್ 19 ರಂದು ವಿತರಿಸಿದರು. ಶ್ರೀ ನಿತೀಶ್ […]
ಹೆಮ್ಮಾಡಿ: ವೆಲಾಸಿಟಿ ಅಕಾಡೆಮಿ ಇಂಡಿಯಾ ವತಿಯಿಂದ ಶ್ರೀ ಗಣೇಶ ಮೊಗವೀರರಿಗೆ ಸನ್ಮಾನ
ಹೆಮ್ಮಾಡಿ( ಡಿ.19): ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಇದರ ಪ್ರಾಂಶುಪಾಲರು ಹಾಗೂ ವಿಯೆಟ್ನಾಂ ಅಂತರಾಷ್ಟ್ರೀಯ ಬೆಸ್ಟ್ ಐಕಾನ್ ಅವಾರ್ಡ್ ಪ್ರಶಸ್ತಿ ಪುರಸ್ಕೃತರಾದ ಶ್ರೀ ಗಣೇಶ ಮೊಗವೀರರನ್ನು ವೆಲಾಸಿಟಿ ಅಕಾಡೆಮಿ ಇಂಡಿಯಾ ಕರಾಟೆ ತರಭೇತಿ ಸಂಸ್ಥೆಯ ಮುಖ್ಯಸ್ಥರಾದ ಅಕ್ಷಯ್ ಹೆಮ್ಮಾಡಿಯವರು ತಮ್ಮ ಸಂಸ್ಥೆಯ ವತಿಯಿಂದ ಡಿಸೆಂಬರ್ 15 ರಂದು ಹೆಮ್ಮಾಡಿಯ ಮತ್ಸ್ಯ ಜ್ಯೋತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯೋಗೀಶ್ ಗುಡ್ರಿ ವಹಿಸಿಕೊಂಡರು. ಕಾರ್ಯಕ್ರಮದ […]
ಹೆಮ್ಮಾಡಿ: ವೆಲಾಸಿಟಿ ಅಕಾಡೆಮಿ ಇಂಡಿಯಾ ವತಿಯಿಂದ ಶ್ರೀ ಉದಯ್ ಕುಮಾರ್ ಹಟ್ಟಿಯಂಗಡಿಯವರಿಗೆ ಸನ್ಮಾನ
ಹೆಮ್ಮಾಡಿ( ಡಿ.19): ಹೆಮ್ಮಾಡಿ ಮೀನುಗಾರರ ಸಹಕಾರಿ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಸಹಕಾರ ರತ್ನ ರಾಜ್ಯ ಪ್ರಶಸ್ತಿ ಪುರಸ್ಕ್ರತ ಶ್ರೀ ಉದಯ್ ಕುಮಾರ್ ಹಟ್ಟಿಯಂಗಡಿಯವರನ್ನು ವೆಲಾಸಿಟಿ ಅಕಾಡೆಮಿ ಇಂಡಿಯಾ ಕರಾಟೆ ತರಭೇತಿ ಸಂಸ್ಥೆಯ ಮುಖ್ಯಸ್ಥರಾದ ಅಕ್ಷಯ ಹೆಮ್ಮಾಡಿಯವರು ತಮ್ಮ ಸಂಸ್ಥೆಯ ವತಿಯಿಂದ ಡಿಸೆಂಬರ್ 15 ರಂದು ಹೆಮ್ಮಾಡಿಯ ಮತ್ಸ್ಯ ಜ್ಯೋತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯೋಗೀಶ್ ಗುಡ್ರಿ […]










